ಸಂವಿಧಾನದ ಮೇಲಿನ ದಾಳಿಗೆ ಅವಕಾಶ ನೀಡಲ್ಲ: ರಾಹುಲ್ ಗಾಂಧಿ

Date:

ಭಾರತದ ಸಂವಿಧಾನ ಬಡವರ ‘ರಕ್ಷಣಾ ಗುರಾಣಿ’ ಎಂದು ಪ್ರತಿಪಾದಿಸಿರುವ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಅದರ ಮೇಲೆ ಯಾವುದೇ ದಾಳಿಗೆ ಅವಕಾಶ ನೀಡುವುದಿಲ್ಲ ಎಂದು ಪ್ರತಿಜ್ಞೆ ಮಾಡುವಂತೆ ದೇಶದ ಜನರನ್ನು ಒತ್ತಾಯಿಸಿದ್ದಾರೆ. ಜತೆಗೆ ಅಂತಹ ಯಾವುದೇ ದಾಳಿಯ ವಿರುದ್ಧ ಎದ್ದು ನಿಲ್ಲುವ ಮೊದಲಿಗ ನಾನೇ ಎಂದು ಹೇಳಿದ್ದಾರೆ.

ಸಂವಿಧಾನ ದಿನದಂದು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ‘ಭಾರತದ ಸಂವಿಧಾನ ಕೇವಲ ಒಂದು ಪುಸ್ತಕವಲ್ಲ. ಇದು ದೇಶದ ಪ್ರತಿಯೊಬ್ಬ ನಾಗರಿಕರಿಗೂ ನೀಡಿದ ಪವಿತ್ರ ವಾಗ್ದಾನವಾಗಿದೆ. ಯಾವುದೇ ಧರ್ಮ ಅಥವಾ ಜಾತಿಗೆ ಸೇರಿದವರಾಗಿರಲಿ, ಯಾವುದೇ ಪ್ರದೇಶದಿಂದ ಬಂದವರಾಗಿರಲಿ, ಯಾವುದೇ ಭಾಷೆಯನ್ನು ಮಾತನಾಡುವವರಾಗಿರಲಿ, ಬಡವರಾಗಿರಲಿ ಅಥವಾ ಶ್ರೀಮಂತರಾಗಿರಲಿ, ಎಲ್ಲರಿಗೂ ಸಮಾನತೆ, ಗೌರವ ಮತ್ತು ನ್ಯಾಯ ಸಿಗುತ್ತದೆ ಎಂಬ ಭರವಸೆ. ಅದನ್ನು ರಕ್ಷಿಸುವುದು ನಮ್ಮ ಕರ್ತವ್ಯ’ ಎಂದಿದ್ದಾರೆ.

ಸಂವಿಧಾನವು ಬಡವರು ಮತ್ತು ಸಮಾಜದ ಅಂಚಿನಲ್ಲಿರುವ ಪ್ರತಿಯೊಬ್ಬ ನಾಗರಿಕನ ರಕ್ಷಣಾ ಗುರಾಣಿ. ಅಲ್ಲದೇ ಅದು ಆ ಜನರ ಶಕ್ತಿ ಮತ್ತು ಧ್ವನಿಯಾಗಿದೆ ಎಂದೂ ಪೋಸ್ಟ್‌ನಲ್ಲಿ ಉಲ್ಲೇಖಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಕಾರ್ಪೊರೇಟ್ ಹಿತಕ್ಕಾಗಿ ಕಾರ್ಮಿಕರ ಹಕ್ಕುಗಳ ಹತ್ತಿಕ್ಕುತ್ತಿರುವ ಮೋದಿ

ಜಾತ್ಯತೀತತೆ, ಸಮಾಜವಾದ ರಕ್ಷಿಸುವ ಅಗತ್ಯವಿದೆ: ಖರ್ಗೆ

ಸಂವಿಧಾನದ ಮೂಲಭೂತ ತತ್ವಗಳಾದ ನ್ಯಾಯ, ಸಮಾನತೆ, ಸ್ವಾತಂತ್ರ್ಯ, ಸಹೋದರತ್ವ, ಜಾತ್ಯತೀತತೆ ಮತ್ತು ಸಮಾಜವಾದವನ್ನು ರಕ್ಷಿಸುವ ಅಗತ್ಯವಿದೆ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಹೇಳಿದ್ದಾರೆ.

‘ಸಂವಿಧಾನವು ವಕೀಲರಿಗೆ ಕೇವಲ ಒಂದು ದಾಖಲೆಯಲ್ಲ, ಬದಲಾಗಿ ಅದು ಜೀವನ ವಿಧಾನ’ ಎಂಬ ಡಾ. ಬಿ.ಆರ್‌ ಅಂಬೇಡ್ಕರ್ ಅವರ ಹೇಳಿಕೆಯನ್ನು ಉಲ್ಲೇಖಿಸಿ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್‌ ಮಾಡಿರುವ ಅವರು, ದೇಶದ ಏಕತೆ ಮತ್ತು ಸಮಗ್ರತೆಗಾಗಿ, ಪ್ರೀತಿ, ಸಹೋದರತ್ವ ಮತ್ತು ಸಾಮರಸ್ಯಕ್ಕಾಗಿ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ಮೌಲ್ಯಗಳನ್ನು ಕಾಪಾಡಿಕೊಳ್ಳಲು ನಾವು ಮತ್ತೊಮ್ಮೆ ಪ್ರತಿಜ್ಞೆ ಮಾಡೋಣ ಎಂದಿದ್ದಾರೆ.

ಸಂವಿಧಾನ ಕರಡು ಸಮಿತಿಯ ಅಧ್ಯಕ್ಷರಾಗಿದ್ದ ಡಾ. ಅಂಬೇಡ್ಕರ್‌ ಅವರು 1949ರ ನವೆಂಬರ್‌ 26ರಂದು ಸಂವಿಧಾನವನ್ನು ಅಂಗೀಕರಿಸುವ ನಿರ್ಣಯವನ್ನು ಮಂಡಿಸಿದ್ದರು. ಸಂವಿಧಾನವನ್ನು ಸಭೆಯು ಅಂಗೀಕರಿಸಿದ ಇದೇ ದಿನವನ್ನು ‘ಸಂವಿಧಾನ ದಿನ’ವನ್ನಾಗಿ ಆಚರಿಸಿಕೊಂಡು ಬರಲಾಗುತ್ತಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...