ಈ ಸಮಯದಲ್ಲಿ ರಾಜ್ಯ ಸ್ಥಾನಮಾನದ ಬಗ್ಗೆ ಮಾತನಾಡುವುದಿಲ್ಲ: ಒಮರ್ ಅಬ್ದುಲ್ಲಾ

Date:

26 ಜನರನ್ನು ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ರಾಜಕೀಯಗೊಳಿಸುವುದನ್ನು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಳ್ಳಿಹಾಕಿದರು.

ಅಮಾಯಕ ನಾಗರಿಕರ ಮೃತ ದೇಹಗಳ ಮೇಲೆ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯದ ಸ್ಥಾನಮಾನವನ್ನು ಬೇಡುವುದಿಲ್ಲ ಎಂದು ಹೇಳಿದರು.

ಪಹಲ್ಗಾಮ್ ಭಯೋತ್ಪಾದಕ ದಾಳಿಯ ಬಗ್ಗೆ ವಿಧಾನಸಭೆಯಲ್ಲಿ ತೀವ್ರ ದುಃಖ ವ್ಯಕ್ತಪಡಿಸಿದ ಒಮರ್ ಅಬ್ದುಲ್ಲಾ ಅವರು “ರಾಜ್ಯ ಸ್ಥಾನಮಾನ ಸ್ಥಾಪನೆ ಪ್ರಮುಖ ಉದ್ದೇಶವಾದರೂ ಮತ್ತೊಂದು ಬಾರಿಗೆ ಈ ಬೇಡಿಕೆಯನ್ನು ವ್ಯಕ್ತಪಡಿಸುತ್ತೇನೆ. ಶವಗಳ ಮೇಲೆ ರಾಜ್ಯದ ಸ್ಥಾನಮಾನ ನೀಡಿ ಎಂದು ಒತ್ತಾಯಿಸುವುದಿಲ್ಲ. ಕೇಂದ್ರದಿಂದ ರಾಜ್ಯದ ಸ್ಥಾನಮಾನವನ್ನು ಒತ್ತಾಯಿಸಲು ನಾನು ಇಂದಿನ ಪರಿಸ್ಥಿತಿಯನ್ನು ಬಳಸಿಕೊಳ್ಳುವುದಿಲ್ಲ. ನಾವು ಅದನ್ನು ಇನ್ನೊಂದು ಸಂದರ್ಭದಲ್ಲಿ ಒತ್ತಾಯಿಸುತ್ತೇವೆ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಜನರು ಸರ್ಕಾರವನ್ನು ಬೆಂಬಲಿಸಿದಾಗ ಉಗ್ರವಾದ ಮತ್ತು ಭಯೋತ್ಪಾದನೆ ಕೊನೆಗೊಳ್ಳುತ್ತದೆ. ನಾವು ಬಂದೂಕುಗಳನ್ನು ಬಳಸಿ ಉಗ್ರವಾದವನ್ನು ನಿಯಂತ್ರಿಸಬಹುದು, ಆದರೆ ಜನರು ನಮ್ಮನ್ನು ಬೆಂಬಲಿಸಿದಾಗ ಮಾತ್ರ ಅದು ಕೊನೆಗೊಳ್ಳುತ್ತದೆ. ಈಗ ಜನರು ಆ ಹಂತವನ್ನು ತಲುಪುತ್ತಿದ್ದಾರೆಂದು ತೋರುತ್ತದೆ” ಎಂದು ಒಮರ್ ಅಬ್ದುಲ್ಲಾ ಹೇಳಿದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಹ್ಯ ಭಯೋತ್ಪಾದನೆಗೆ ಆಂತರಿಕ ಮುಸ್ಲಿಂ ವಿರೋಧ ಉತ್ತರವಲ್ಲ

“ನಾನು ಕಾನೂನು ಮತ್ತು ಸುವ್ಯವಸ್ಥೆಯ ಉಸ್ತುವಾರಿ ಹೊಂದಿಲ್ಲದಿದ್ದರೂ, ಕಾಶ್ಮೀರಕ್ಕೆ ಭೇಟಿ ನೀಡಲು ಪ್ರವಾಸಿಗರನ್ನು ಆಹ್ವಾನಿಸಿದೆ. ಅವರ ಆತಿಥೇಯನಾಗಿ, ಅವರನ್ನು ನೋಡಿಕೊಳ್ಳುವುದು ಮತ್ತು ಅವರ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳುವುದು ನನ್ನ ಕರ್ತವ್ಯವಾಗಿತ್ತು. ಆದರೆ ಈಗ ಪ್ರವಾಸಿಗರಿಗೆ ವಿಷಾದಿಸಲು ನನಗೆ ಪದಗಳಿಲ್ಲ” ಎಂದು ಹೇಳಿದರು.

ಸಂತ್ರಸ್ತರ ನೋವಿಗೆ ದುಃಖ ವ್ಯಕ್ತಪಡಿಸಿದ ಜಮ್ಮು ಕಾಶ್ಮೀರ ಮುಖ್ಯಮಂತ್ರಿ, “ಕೆಲವೇ ದಿನಗಳ ಹಿಂದೆ ವಿವಾಹವಾದ ನೌಕಾಪಡೆಯ ಅಧಿಕಾರಿಯ ಪತ್ನಿಗೆ ನಾನು ಏನು ಹೇಳಬೇಕು? ಅವರಿಗೆ ಸಾಂತ್ವನ ಹೇಳಲು ನನ್ನಲ್ಲಿ ಪದಗಳಿಲ್ಲ. ಮೃತಪಟ್ಟ ಅನೇಕ ಕುಟುಂಬ ಸದಸ್ಯರು ಮಾಡಿದ ಅಪರಾಧವೇನು ಎಂದು ನನ್ನನ್ನು ಆನೇಕರು ಕೇಳಿದರು? ಆದರೆ ನನ್ನಲ್ಲಿ ಉತ್ತರವಿರಲಿಲ್ಲ” ಎಂದು ಹೇಳಿದರು.

ಕಾಶ್ಮೀರಿ ವಿದ್ಯಾರ್ಥಿಗಳ ಸುರಕ್ಷತೆಯನ್ನು ಖಚಿತಪಡಿಸಿಕೊಳ್ಳಲು ತ್ವರಿತ ಕ್ರಮ ಕೈಗೊಂಡಿದ್ದಕ್ಕಾಗಿ ಒಮರ್ ಅಬ್ದುಲ್ಲಾ ಅವರು ದೇಶಾದ್ಯಂತವಿರುವ ಎಲ್ಲ ರಾಜ್ಯ ಸರ್ಕಾರಗಳಿಗೆ ಧನ್ಯವಾದ ಅರ್ಪಿಸಿದರು. “ತಕ್ಷಣದ ಕ್ರಮಗಳನ್ನು ಕೈಗೊಂಡು ಅಹಿತಕರ ಘಟನೆಗಳನ್ನು ತಡೆಗಟ್ಟಿದ ಎಲ್ಲ ರಾಜ್ಯ ಸರ್ಕಾರಗಳಿಗೆ ನಾನು ಧನ್ಯವಾದ ಹೇಳಲು ಬಯಸುತ್ತೇನೆ” ಎಂದು ಹೇಳಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...