ತಡವಾಗಿ ತಲುಪಿದ ವಿಮಾನ; ಒಲಿಂಪಿಕ್ ಅರ್ಹತಾ ಪಂದ್ಯದಿಂದ ಹೊರಗುಳಿದ ಕುಸ್ತಿಪಟು ದೀಪಕ್ ಪೂನಿಯಾ ಮತ್ತು ಸುಜೀತ್ ಕಲ್ಕಲ್‌

Date:

ಟೋಕಿಯೊ ಒಲಿಂಪಿಕ್ಸ್‌ನಲ್ಲಿ ಕಡೆ ಕ್ಷಣದಲ್ಲಿ ಪದಕ ಕಳೆದುಕೊಂಡ ಕುಪ್ತಿಪಟು ದೀಪಕ್ ಪೂನಿಯಾ ಮತ್ತು ಮತ್ತೊಬ್ಬ ಕುಸ್ತಿಪಟು ಸುಜೀತ್ ಕಲ್ಕಲ್ ಅವರು ಏಷ್ಯನ್ ಒಲಿಂಪಿಕ್ ಅರ್ಹತಾ ಪಂದ್ಯಗಳಲ್ಲಿ ಭಾಗವಹಿಸುವ ಅವಕಾಶ ಕಳೆದುಕೊಂಡಿದ್ದಾರೆ. ಅರ್ಹತಾ ಪಂದ್ಯಗಳು ನಡೆಯುತ್ತಿರುವ ಕಿರ್ಗಿಸ್ತಾನ್ ರಾಜಧಾನಿ ಬಿಶ್ಕೆಕ್‌ಗೆ ಅವರು ಸರಿಯಾದ ಸಮಯಕ್ಕೆ ತಲುಪದ ಕಾರಣ ಕ್ರೀಡಾ ಆಯೋಜಕರು ಅವರಿಗೆ ಅವಕಾಶ ನೀಡಿಲ್ಲ ಎಂದು ವರದಿಯಾಘಿದೆ.

ಅವರಿಬ್ಬರೂ ಮಂಗಳವಾರದಿಂದ ದುಬೈ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದರು. ದುಬೈನಲ್ಲಿ ಭಾರೀ ಮಳೆಯಾಗುತ್ತಿರುವ ಕಾರಣ, ಎಲ್ಲ ವಿಮಾನ ಸಂಚಾರವನ್ನು ರದ್ದುಗೊಳಿಸಲಾಗಿತ್ತು. ಅವರು ಶುಕ್ರವಾರ ಬೆಳಗ್ಗೆ 8 ಗಂಟೆಗೆ ಬಿಷ್ಕೆಕ್‌ ತಲುಪಿದ್ದಾರೆ. ಆದರೆ, ಈ ವೇಳೆಗಾಗಲೇ ಅವರು ತಮ್ಮ ದೇಹದ ತೂಕವನ್ನು ದಾಖಲಿಸಬೇಕಿತ್ತು ಮತ್ತು ಕ್ರೀಡಾ ಮಾನದಂಡಗಳನ್ನು ಪೂರೈಸಬೇಕಿತ್ತು.

ತಡವಾಗಿ ಬಂದ ಪೂನಿಯಾ ಮತ್ತು ಕಲ್ಕಲ್ ಅವರಿಗೆ ಸಂಘಟಕರು ಅವಕಾಶ ನೀಡಲು ನಿರಾಕರಿಸಿದ್ದಾರೆ. ತಾವು ಎದುರಿಸಿದ ಸಮಸ್ಯೆಗಳ ಬಗ್ಗೆ ವಿವರಿಸಿದರೂ, ಸಂಘಟಕರು ಅವಕಾಶ ನೀಡಿಲ್ಲ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗ ಸಧ್ಯಕ್ಕೆ, ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆಯಲು ಮುಂದಿನ ತಿಂಗಳು ನಡೆಯಲಿರುವ ವಿಶ್ವ ಕ್ವಾಲಿಫೈಯರ್ಸ್‌ ಕ್ರಿಡಾಕೂಟವು ಪುನಿಯಾ ಮತ್ತು ಕಲ್ಕಲ್ ಕಡೆಯ ಅವಕಾಶವಾಗಿದೆ.

ಭಾರೀ ಮಳೆಯಿಂದಾಗಿ, ಕುಸ್ತಿಪಟುಗಳು ತಮ್ಮ ತರಬೇತುದಾರ ಕಮಲ್ ಮಾಲಿಕೋವ್ ಮತ್ತು ಫಿಸಿಯೋ ಶುಭಂ ಗುಪ್ತಾ ಅವರೊಂದಿಗೆ ಮಂಗಳವಾರದಿಂದ ದುಬೈ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಸಿಲುಕಿಕೊಂಡಿದ್ದರು. ವಿಮಾನ ನಿಲ್ದಾಣದ ಮಹಡಿಯಲ್ಲಿ ಮಲಗಿದ್ದ ಅವರಿಗೆ ಸರಿಯಾಗಿ ಊಟ ಸಿಗದ ಕಾರಣ ಅವರ ಯೋಗಕ್ಷೇಮದ ಚಿಂತೆ ಕಾಡುತ್ತಿದೆ ಎಂದು ಕಲ್ಕಲ್‌ ಅವರ ತಂದೆ ದಯಾನಂದ ಗುರುವಾರ ಹೇಳಿದ್ದರು.

ಶನಿವಾರ ನಡೆಯುವ ಅರ್ಹತಾ ಪಂದ್ಯದಲ್ಲಿ ಭಾಗವಹಿಸಲು ವಿನೇಶ್ ಫೋಗಟ್ ಸೇರಿದಂತೆ ಇತರ ಭಾರತೀಯ ಕುಸ್ತಿಪಟುಗಳು ದೆಹಲಿಯಿಂದ ನೇರವಾಗಿ ಬಿಷ್ಕೆಕ್‌ಗೆ ತೆರಳಿದರೆ, ಪುನಿಯಾ ಮತ್ತು ಕಲ್ಕಲ್ ಏಪ್ರಿಲ್ 2 ರಿಂದ 15 ರವರೆಗೆ ರಷ್ಯಾದ ಡಾಗೆಸ್ತಾನ್‌ನಲ್ಲಿ ತರಬೇತಿ ಪಡೆಯುತ್ತಿದ್ದರು. ಹೀಗಾಗಿ, ಅವರಿಬ್ಬರು ಏಪ್ರಿಲ್ 16 ರಂದು, ಮಕಚ್ಕಲಾದಿಂದ ದುಬೈ ಮೂಲಕ ಬಿಷ್ಕೆಕ್‌ಗೆ ಪ್ರಯಾಣ ಆರಂಭಿಸಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...