ಹರಿಯಾಣ ವಿಧಾನಸಭೆ ಚುನಾವಣೆ | ರಾಹುಲ್ ಭೇಟಿಯಾದ ವಿನೇಶ್ ಫೋಗಟ್, ಬಜರಂಗ್ ಪುನಿಯಾ

Date:

ಹರಿಯಾಣ ವಿಧಾನಸಭೆ ಚುನಾವಣೆಯ ಕಾಂಗ್ರೆಸ್ ಟಿಕೆಟ್ ಕುಸ್ತಿಪಟು ವಿನೇಶ್ ಫೋಗಟ್ ಅವರಿಗೆ ಲಭ್ಯವಾಗಲಿದೆ ಎಂದು ಊಹಾಪೋಹಗಳ ನಡುವೆ ಕುಸ್ತಿಪಟುಗಳಾದ ವಿನೇಶ್ ಫೋಗಟ್ ಮತ್ತು ಬಜರಂಗ್ ಪುನಿಯಾ ಅವರು ಕಾಂಗ್ರೆಸ್ ಸಂಸದ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರನ್ನು ಬುಧವಾರ ಭೇಟಿಯಾಗಿದ್ದಾರೆ.

ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ನೂರು ಗ್ರಾಂ ತೂಕ ಹೆಚ್ಚಿದ ಕಾರಣ ಅನರ್ಹಗೊಂಡ ವಿನೇಶ್ ಫೋಗಟ್ ಪ್ಯಾರಿಸ್‌ನಿಂದ ಹಿಂದಿರುಗಿದ ಬಳಿಕ ಮಾಜಿ ಮುಖ್ಯಮಂತ್ರಿ ಭೂಪಿಂದರ್ ಸಿಂಗ್ ಹೂಡಾ ಅವರು ಭೇಟಿಯಾಗಿದ್ದರು. ಈ ಭೇಟಿಯ ಬಳಿಕ ಹೂಡಾ, “ಪಕ್ಷಕ್ಕೆ ಸೇರಲು ಬಯಸುವ ಪ್ರತಿಯೊಬ್ಬರನ್ನು ಕಾಂಗ್ರೆಸ್ ಸ್ವಾಗತಿಸುತ್ತದೆ” ಎಂಬ ಹೇಳಿಕೆಯನ್ನು ನೀಡಿ ವಿನೇಶ್ ಕಾಂಗ್ರೆಸ್ ಸೇರುವ ಸುಳಿವು ನೀಡಿದ್ದರು.

ಇದನ್ನು ಓದಿದ್ದೀರಾ? ಇಡೀ ದಿನದ ಕ್ಷಣ ಕ್ಷಣದ ಸುದ್ದಿಗಳು 04/09/2024

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಕ್ರೀಡಾಪಟು ಯಾವುದೇ ನಿರ್ದಿಷ್ಟ ಪಕ್ಷ ಅಥವಾ ರಾಜ್ಯಕ್ಕೆ ಸೇರಿದವರಾಗಿರುವುದಿಲ್ಲ. ಒಬ್ಬ ಕ್ರೀಡಾಪಟು ಇಡೀ ರಾಷ್ಟ್ರಕ್ಕೆ ಸೇರಿದವರು. ಅವರು (ವಿನೇಶ್ ಫೋಗಟ್) ಇಡೀ ರಾಷ್ಟ್ರಕ್ಕೆ ಸೇರಿದವರು. ಯಾವುದೇ ಪಕ್ಷಕ್ಕೆ ಸೇರಬೇಕೋ ಬೇಡವೋ ಎಂಬುದು ಅವರ ಆಯ್ಕೆ. ಕಾಂಗ್ರೆಸ್ ಪಕ್ಷಕ್ಕೆ ಯಾರೇ ಬಂದರೂ ಅವರನ್ನು ಸ್ವಾಗತಿಸುತ್ತೇವೆ. ಏನು ಮಾಡಬೇಕೆಂಬುದು ಅವರ ನಿರ್ಧಾರ” ಎಂದು ಹೂಡಾ ಹೇಳಿದ್ದರು.

ಇದನ್ನು ಓದಿದ್ದೀರಾ? ರೈತರ ಪ್ರತಿಭಟನೆಗೆ ಒಲಿಂಪಿಕ್ ಕುಸ್ತಿಪಟು ವಿನೇಶ್ ಫೋಗಟ್ ಬೆಂಬಲ

ವಿನೇಶ್ ಫೋಗಟ್ ಪ್ಯಾರಿಸ್‌ನಿಂದ ಭಾರತಕ್ಕೆ ಹಿಂದಿರುಗಿದಾಗಿನಿಂದಲೂ ಅವರೊಂದಿಗೆ ಹೆಚ್ಚಾಗಿ ಕಾಂಗ್ರೆಸ್ ನಾಯಕರು ಕಾಣಿಸಿಕೊಂಡಿದ್ದಾರೆ. ಲೈಂಗಿಕ ಕಿರುಕುಳದ ಆರೋಪದ ಮೇಲೆ ಈ ಹಿಂದಿನ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ ಮುಖ್ಯಸ್ಥ ಮತ್ತು ಬಿಜೆಪಿ ನಾಯಕ ಬ್ರಿಜ್‌ಭೂಷಣ್ ಶರಣ್ ಸಿಂಗ್ ವಿರುದ್ಧ ಹರಿಯಾಣದ ವಿನೇಶ್ ಮತ್ತು ಇತರ ಕುಸ್ತಿಪಟುಗಳು ನಡೆಸಿದ ಪ್ರತಿಭಟನೆಗೆ ದೀಪೇಂದರ್ ಹೂಡಾ ಕೂಡಾ ನಿರಂತರವಾಗಿ ಬೆಂಬಲ ನೀಡುತ್ತಾ ಬಂದಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...