‘ಯುರೋಪಿಯನ್ ಎಸ್ಸೇ ಪ್ರೈಜ್’ ಪ್ರಶಸ್ತಿಗೆ ಭಾಜನರಾದ ಅರುಂಧತಿ ರಾಯ್

Date:

ಬೂಕರ್ ಪ್ರಶಸ್ತಿ ವಿಜೇತರಾದ ಖ್ಯಾತ ಲೇಖಕಿ ಹಾಗೂ ಸಾಮಾಜಿಕ ಕಾರ್ಯಕರ್ತೆ ಅರುಂಧತಿ ರಾಯ್ ಅವರಿಗೆ ಜೀವಮಾನ ಶ್ರೇಷ್ಠ ಸಾಧನೆಗಾಗಿ 45ನೇ ‘ಯುರೋಪಿಯನ್ ಎಸ್ಸೇ ಪ್ರೈಜ್’ ನೀಡಲಾಗುತ್ತದೆ ಎಂದು ಚಾಲ್ಸ್ ವೈಲನ್ ಫೌಂಡೇಷನ್ ಪ್ರಕಟಿಸಿದೆ.

‘ಆಜಾದಿ’(2021) ಎಂಬ ಶೀರ್ಷಿಕೆಯ ಪ್ರಬಂಧಗಳ ಸಂಕಲನದ ಪ್ರೆಂಚ್‌ ಅನುವಾದಕ್ಕಾಗಿ ಅರುಂಧತಿ ರಾಯ್ ಅವರಿಗೆ ಈ ಪ್ರಶಸ್ತಿ ನೀಡಲಾಗುವುದು ಎಂದು ಫೌಂಡೇಷನ್‌ ತಿಳಿಸಿದೆ.

“ಆಜಾದಿ” ಸಂಕಲನದಲ್ಲಿ ರಾಯ್‌ ಅವರು ‘ಬೆಳೆಯುತ್ತಿರುವ ನಿರಂಕುಶವಾದ’ದ ಜಗತ್ತಿನಲ್ಲಿ ಸ್ವಾತಂತ್ರ್ಯದ ಅರ್ಥವನ್ನು ಪ್ರತಿಬಿಂಬಿಸಿದ್ದಾರೆ. ಅಲ್ಲದೆ ಈ ಪ್ರಬಂಧಗಳು ಪ್ರಸ್ತುತ ಕಾಲದಲ್ಲಿ ಕಾಲ್ಪನಿಕ ಮತ್ತು ಪರ್ಯಾಯ ಕಲ್ಪನೆಗಳ ಪಾತ್ರದ ಕುರಿತ ಹಲವು ಚಿಂತನೆಗಳನ್ನು ಒಳಗೊಂಡಿವೆ. ಫ್ಯಾಸಿಸಂ ಮತ್ತು ಅದರ ರಚನೆಯ ವಿಶ್ಲೇಷಣೆ. ಇದು ಹೇಗೆ ನಮ್ಮ ಜೀವನವನ್ನು ಹೆಚ್ಚು ಆಕ್ರಮಿಸುತ್ತಿರುವ ಸಮಸ್ಯೆ ಎಂಬುದು ಸೇರಿದಂತೆ ಹಲವು ಮಹತ್ವದ ವಿಷಯಗಳನ್ನು ಒಳಗೊಂಡಿದೆ” ಎಂದು ಫೌಂಡೇಷನ್‌ ಪ್ರಕಟಣೆಯಲ್ಲಿ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಕರ್ನಾಟಕದ ಹಾಲು ಕಳಪೆ ಗುಣಮಟ್ಟದ್ದು ಎಂದು ವಿವಾದ ಸೃಷ್ಟಿಸಿದ ಕೇರಳ ಸಚಿವೆ

ದೇಶದ ಪ್ರಸಿದ್ಧ ಲೇಖಕಿಯಾಗಿರುವ ಅರುಂಧತಿ ರಾಯ್ ಅವರ “ದಿ ಗಾಡ್ ಆಫ್ ಸ್ಮಾಲ್ ಥಿಂಗ್ಸ್”, “ದಿ ಮಿನಿಸ್ಟ್ರಿ ಆಫ್ ಅಟ್ಮೋಸ್ಟ್ ಹ್ಯಾಪಿನೆಸ್” ಮತ್ತು “ಮೈ ಸೆಡಿಟಿಯಸ್ ಹಾರ್ಟ್” ಸೇರಿದಂತೆ ಹಲವು ಕೃತಿಗಳು ರಾಷ್ಟ್ರೀಯ ಮತ್ತು ಅಂತರರಾಷ್ಟ್ರೀಯ ಮೆಚ್ಚುಗೆಯನ್ನು ಗಳಿಸಿವೆ.

ಸ್ವಿಟ್ಜರ್ಲೆಂಡ್‌ನ ಲುಸಾನ್ ನಗರದಲ್ಲಿ ಸೆಪ್ಟೆಂಬರ್ 12ರಂದು ನಡೆಯುವ ಸಮಾರಂಭದಲ್ಲಿ ಅಂದಾಜು ₹ 18 ಲಕ್ಷ ಮೊತ್ತದೊಂದಿಗೆ ಪ್ರಶಸ್ತಿಯನ್ನು ರಾಯ್ ಅವರು ಸ್ವೀಕರಿಸಲಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...