ಪುನಃ ಅಪಾಯದ ಮಟ್ಟ ಮೀರಿದ ಯಮುನಾ; ದೆಹಲಿಯಲ್ಲಿ ಮತ್ತೊಮ್ಮೆ ಪ್ರವಾಹದ ಭೀತಿ

Date:

ದೆಹಲಿಯ ಯಮುನಾ ನದಿಯ ನೀರಿನ ಮಟ್ಟವು ಭಾನುವಾರ(ಜುಲೈ 23) ಮತ್ತೆ ಅಪಾಯದ ಮಟ್ಟವನ್ನು ಮೀರಿದೆ.

ಉತ್ತರಾಖಂಡ ಮತ್ತು ಹಿಮಾಚಲ ಪ್ರದೇಶದ ಕೆಲವು ಭಾಗಗಳಲ್ಲಿ ಭಾರೀ ಮಳೆ ಸುರಿಯುತ್ತಿರುವ ಕಾರಣ ಹತ್ನಿಕುಂಡ್ ಬ್ಯಾರೇಜ್‌ನಿಂದ ನದಿಗೆ ಭಾರಿ ಪ್ರಮಾಣದಲ್ಲಿ ನೀರು ಬಿಡುಗಡೆ ಮಾಡಿದ ಪರಿಣಾಮ ನದಿಯ ಅಪಾಯದ ಮಟ್ಟ ಮೀರಿದೆ.

ಯಮುನಾ ನದಿಯ ನೀರಿನ ಮಟ್ಟದಲ್ಲಿ ಮತ್ತಷ್ಟು ಹೆಚ್ಚಳದಿಂದ ರಾಜಧಾನಿಯ ಪ್ರವಾಹ ಪೀಡಿತ ತಗ್ಗು ಪ್ರದೇಶಗಳಲ್ಲಿ ಪರಿಹಾರ ಮತ್ತು ಪುನರ್ವಸತಿ ಕಾರ್ಯಗಳ ಮೇಲೆ ಪರಿಣಾಮ ಬೀರುವ ಸಾಧ್ಯತೆಯಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಹತ್ನಿಕುಂಡ್ ಬ್ಯಾರೇಜ್‌ನಿಂದ ನದಿಗೆ 2 ಲಕ್ಷ ಕ್ಯೂಸೆಕ್‌ಗೂ ಹೆಚ್ಚು ನೀರನ್ನು ಹರಿಸುವುದರಿಂದ ದೆಹಲಿ ಸರ್ಕಾರವು ಕಟ್ಟೆಚ್ಚರ ವಹಿಸಿದೆ. ನೀರಿನ ಮಟ್ಟ 206.7 ಮೀಟರ್‌ಗೆ ಏರಿದರೆ ಯಮುನಾ ನದಿ ತೀರದ ಕೆಲವು ಭಾಗಗಳು ಜಲಾವೃತವಾಗಬಹುದು ಎಂದು ಕಂದಾಯ ಸಚಿವ ಅತಿಶಿ ತಿಳಿಸಿದ್ದಾರೆ.

ಜುಲೈ 13 ರಂದು ಸಾರ್ವಕಾಲಿಕ ಗರಿಷ್ಠ ಮಟ್ಟವಾದ 208.66 ಮೀಟರ್ ತಲುಪಿದ ನಂತರ ಕಳೆದ ಕೆಲವು ದಿನಗಳಿಂದ ನದಿಯ ನೀರಿನ ಮಟ್ಟವು 205.33 ಮೀಟರ್‌ಗಳ ಅಪಾಯದ ಮಟ್ಟದಲ್ಲಿದೆ.

ಶನಿವಾರ(ಜುಲೈ 22) ರಾತ್ರಿ 10 ಗಂಟೆಗೆ 205.02 ಮೀಟರ್ ಇದ್ದ ನೀರಿನ ಮಟ್ಟ ಭಾನುವಾರ(ಜುಲೈ 23) ಬೆಳಗ್ಗೆ 9 ಗಂಟೆಗೆ 205.96 ಮೀಟರ್‌ಗೆ ಏರಿದೆ ಎಂದು ಕೇಂದ್ರ ಜಲ ಆಯೋಗದ(ಸಿಡಬ್ಲ್ಯುಸಿ) ಅಂಕಿಅಂಶಗಳು ತೋರಿಸಿವೆ. ನಾಳೆಯೊಳಗೆ ನದಿಯ ನೀರಿನ ಮಟ್ಟ 206.7 ಮೀಟರ್‌ಗಿಂತಲೂ ಹೆಚ್ಚು ತಲುಪುವ ನಿರೀಕ್ಷೆಯಿದೆ.

ಈ ಸುದ್ದಿ ಓದಿದ್ದೀರಾ? ದೆಹಲಿ | 20 ಸಾವಿರ ಕಾರು ಮಾಲೀಕರ ಪ್ರತಿ ಕಾರಿನ ಮೇಲೆ 100ಕ್ಕೂ ಹೆಚ್ಚು ಉಲ್ಲಂಘನೆ ಪ್ರಕರಣಗಳು

ಭಾರತೀಯ ಹವಾಮಾನ ಇಲಾಖೆಯು ಜುಲೈ 25 ರವರೆಗೆ ಹಿಮಾಚಲ ಪ್ರದೇಶ ಮತ್ತು ಉತ್ತರಾಖಂಡದ ಕೆಲವು ಭಾಗಗಳಲ್ಲಿ ಭಾರೀ ಮಳೆಯಾಗುವ ಮುನ್ಸೂಚನೆ ನೀಡಿದೆ.

ಸಿಡಬ್ಲ್ಯುಸಿ ಅಂಕಿಅಂಶಗಳ ಪ್ರಕಾರ, ಯಮುನಾ ನಗರದಲ್ಲಿರುವ ಹತ್ನಿಕುಂಡ್ ಬ್ಯಾರೇಜ್‌ನಲ್ಲಿ ಶನಿವಾರ ಬೆಳಿಗ್ಗೆ 9 ಗಂಟೆಗೆ ಹರಿವಿನ ಪ್ರಮಾಣ 1 ಲಕ್ಷದ ಗಡಿ ದಾಟಿದೆ ಮತ್ತು ಬೆಳಿಗ್ಗೆ 10 ರಿಂದ ಸಂಜೆ 5 ರ ನಡುವೆ 2 ಲಕ್ಷದಿಂದ 2.5 ಲಕ್ಷ ಕ್ಯೂಸೆಕ್‌ಗಳ ನಡುವೆ ತೂಗಾಡುತ್ತಿದೆ.

ಜುಲೈ 13 ರಂದು ಯಮುನಾ ನದಿಯ ನೀರಿನ ಮಟ್ಟವು ಸೆಪ್ಟೆಂಬರ್ 1978ರ 207.49 ಮೀಟರ್‌ಗಳ ಹಿಂದಿನ ದಾಖಲೆಯನ್ನು ಮೀರಿ 208.66 ಮೀಟರ್‌ಗಳಿಗೆ ಏರಿಕೆಯಾಗಿದೆ. ಪ್ರವಾಹದಿಂದಾಗಿ 27 ಸಾವಿರಕ್ಕೂ ಹೆಚ್ಚು ಜನರನ್ನು ತಮ್ಮ ಮನೆಗಳಿಂದ ಸ್ಥಳಾಂತರಿಸಲಾಗಿದೆ. ರಾಷ್ಟ್ರ ರಾಜಧಾನಿಯಲ್ಲಿ ಜನಜೀವನ ಅಸ್ತವ್ಯಸ್ತದ ಜೊತೆಗೆ ಕೋಟ್ಯಂತರ ರೂ. ಆಸ್ತಿಪಾಸ್ತಿ ನಷ್ಟವಾಗಿದೆ.

ಮನುಷ್ಯನ ದುರಾಸೆಯ ಅತಿಕ್ರಮಣವೇ ರಾಜಧಾನಿಯ ಹಲವು ನಗರಗಳು ಪ್ರವಾಹದಿಂದ ಸಂಕಷ್ಟಕ್ಕೊಳಗಾಗಲು ಕಾರಣ ಎಂದು ತಜ್ಞರು ಅಭಿಪ್ರಾಯಪಡುತ್ತಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...