ಸಂಘರ್ಷಭರಿತ ಜಗತ್ತಿನಲ್ಲಿ ಯೋಗ ಶಾಂತಿಯ ದಿಕ್ಕನ್ನು ನೀಡುತ್ತದೆ: ಪ್ರಧಾನಿ ನರೇಂದ್ರ ಮೋದಿ

Date:

ಸಂಘರ್ಷಭರಿತ ಜಗತ್ತಿನಲ್ಲಿ ಯೋಗವು ಶಾಂತಿಯನ್ನು ಖಚಿತಪಡಿಸುತ್ತದೆ ಮತ್ತು ಇದು ವಿರಾಮ ಬಟನ್ ಆಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ವಿಶಾಖಪಟ್ಟಣಂನಲ್ಲಿ ನಡೆಯುತ್ತಿರುವ 11ನೇ ಅಂತರರಾಷ್ಟ್ರೀಯ ಯೋಗ ದಿನಾಚರಣೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, “ಈ ಯೋಗ ದಿನವು ಮಾನವೀಯತೆಗಾಗಿ ಯೋಗ 2.0 ದ ಆರಂಭವನ್ನು ಗುರುತಿಸಲಿ. ಆಗ ಆಂತರಿಕ ಶಾಂತಿ ಜಾಗತಿಕ ನೀತಿಯಾಗುತ್ತದೆ” ಎಂದು ತಿಳಿಸಿದರು.

“ಯೋಗವು ಎಲ್ಲೆಗಳು, ಹಿನ್ನೆಲೆಗಳು, ವಯಸ್ಸು ಅಥವಾ ಸಾಮರ್ಥ್ಯಗಳನ್ನು ಮೀರಿ ಎಲ್ಲರಿಗೂ ಆಗಿದೆ. ಇದು ಜಗತ್ತನ್ನು ಒಂದುಗೂಡಿಸಿದೆ. ಕೋಟ್ಯಂತರ ಜನರು ಯೋಗವನ್ನು ಅಳವಡಿಸಿಕೊಂಡಿದ್ದಾರೆ. ಇದು ನಮ್ಮನ್ನು ಪರಸ್ಪರ ಸಂಬಂಧಕ್ಕೆ ಜಾಗೃತಗೊಳಿಸುತ್ತದೆ. ಉತ್ತಮ ಆರೋಗ್ಯಕ್ಕೆ ಯೋಗ ಅಗತ್ಯವಾಗಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ದುರದೃಷ್ಟವಶಾತ್ ಇಂದು ಇಡೀ ಜಗತ್ತು ಕೆಲವು ಪ್ರದೇಶಗಳಲ್ಲಿ ಸ್ವಲ್ಪ ಉದ್ವಿಗ್ನತೆ, ಅಶಾಂತಿ ಮತ್ತು ಅಸ್ಥಿರತೆಯನ್ನು ಎದುರಿಸುತ್ತಿದೆ. ಅಂತಹ ಸಮಯದಲ್ಲಿ, ಯೋಗವು ನಮಗೆ ಶಾಂತಿಯ ದಿಕ್ಕನ್ನು ನೀಡುತ್ತದೆ. ನಮ್ಮ ದಿವ್ಯಾಂಗ ಸ್ನೇಹಿತರು ಬ್ರೈಲ್‌ನಲ್ಲಿ ಯೋಗ ಶಾಸ್ತ್ರಗಳನ್ನು ಅಧ್ಯಯನ ಮಾಡುವುದನ್ನು ನೋಡಿದಾಗ ನನಗೆ ಹೆಮ್ಮೆ ಅನಿಸುತ್ತದೆ. ವಿಜ್ಞಾನಿಗಳು ಬಾಹ್ಯಾಕಾಶದಲ್ಲಿ ಯೋಗವನ್ನು ಅಭ್ಯಾಸ ಮಾಡುತ್ತಾರೆ. ಯುವ ಸ್ನೇಹಿತರು ಹಳ್ಳಿಗಳಲ್ಲಿ ಯೋಗ ಆಚರಿಸುತ್ತಾರೆ” ಎಂದು ಹೇಳಿದರು.

“ಭಾರತವು ಜೂನ್ 21 ಅನ್ನು ಅಂತರರಾಷ್ಟ್ರೀಯ ಯೋಗ ದಿನವೆಂದು ಗುರುತಿಸಲು ಯುಎನ್‌ಜಿಎಯಲ್ಲಿ ನಿರ್ಣಯವನ್ನು ಮಂಡಿಸಿದ ದಿನ ಮತ್ತು ಬಹಳ ಕಡಿಮೆ ಸಮಯದಲ್ಲಿ, ವಿಶ್ವದ 175 ದೇಶಗಳು ನಮ್ಮ ಭಾರತ ದೇಶದೊಂದಿಗೆ ನಿಂತವು. ಇಂದಿನ ಜಗತ್ತಿನಲ್ಲಿ ಈ ಏಕತೆ ಮತ್ತು ಬೆಂಬಲವು ಸಾಮಾನ್ಯ ಘಟನೆಯಲ್ಲ” ಎಂದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...