ನೀವು ಗಾಂಧಿಯನ್ನು ತಡೆಯಲು ಸಾಧ್ಯವಿಲ್ಲ: ರಾಹುಲ್ ಗಾಂಧಿ ಭಾಷಣ ಹೊಗಳಿದ ‘ಸಾಮ್ನಾ’ ಪತ್ರಿಕೆ

Date:

ಲೋಕಸಭೆಯಲ್ಲಿ ಜುಲೈ 1ರಂದು ರಾಹುಲ್‌ ಗಾಂಧಿ ಮಾಡಿದ ಭಾಷಣವನ್ನು ಉದ್ಧವ್‌ ಠಾಕ್ರೆ ಬಣದ ಶಿವಸೇನೆಯ ಮುಖವಾಣಿ ‘ಸಾಮ್ನಾ’ ಹೊಗಳಿದ್ದು, ನೀವು ಗಾಂಧಿಯನ್ನು ತಡೆಯಲು ಸಾಧ್ಯವಿಲ್ಲ ಎಂದು ತಿಳಿಸಿದೆ.

ರಾಹುಲ್‌ ಗಾಂಧಿ ಅವರ ಭಾಷಣದಂತೆ ಮುಂದಿನ ದಿನಗಳಲ್ಲಿ ಸರ್ವಾಧಿಕಾರಿಗಳು ಪತನಗೊಳ್ಳಲಿದ್ದಾರೆ. ಕಳೆದ 10 ವರ್ಷಗಳಲ್ಲಿ ಪ್ರಧಾನಿ ನರೇಂದ್ರ ಮೋದಿ, ಗೃಹ ಸಚಿವ ಅಮಿತ್‌ ಶಾ ಹಾಗೂ ಬಿಜೆಪಿಯ ನಾಯಕರು ಇಂತಹ ಸನ್ನಿವೇಷವನ್ನು ಎದುರಿಸಿಲ್ಲ. ರಾಹುಲ್‌ ಗಾಂಧಿ ಅವರು ಮೋದಿಯ ದೈವತ್ವದ ಸಿಂಧೂರವನ್ನು ಕಳಚಿದ್ದಾರೆ. ಇದಕ್ಕಾಗಿ ವಿಪಕ್ಷದ ನಾಯಕನನ್ನು ಎಷ್ಟು ಅಭಿನಂದಿಸಿದರೂ ಸಾಲದು ಎಂದು ಸಾಮ್ನಾ ಮುಖವಾಣಿಯಲ್ಲಿ ತಿಳಿಸಲಾಗಿದೆ.

ಸಂಸತ್ತಿನಲ್ಲಿ ರಾಹುಲ್‌ ಗಾಂಧಿ ಹೇಳಿದಂತೆ ಬಿಜೆಪಿಯು ಹಿಂದುತ್ವದ ಏಕಸ್ವಾಮ್ಯವನ್ನು ಹೊಂದಿಲ್ಲ. ಈ ಮಾತು ಕಳೆದ 10 ವರ್ಷಗಳಲ್ಲಿಯೇ ಸಂಸತ್ತಿನಲ್ಲಿ ಬಿರುಗಾಳಿ ಎಬ್ಬಿಸಿದೆ. ಅಮಿತ್‌ ಶಾ ಕೂಡ ಲೋಕಸಭೆ ಸ್ಪೀಕರ್ ಅವರಿಂದ ರಕ್ಷಣೆ ಕೇಳಿದ್ದಾರೆ ಎಂದು ಸಾಮ್ನಾದಲ್ಲಿ ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗಾಯ ನೆಕ್ಕಿಕೊಳ್ಳುತ್ತಿರುವ ಮೋದಿ ಎಚ್ಚರಿಕೆ- ಹೊಸ ದಮನ ದಾಳಿ ದಸ್ತಗಿರಿಗಳ ಮುನ್ಸೂಚನೆ

ಚುನಾವಣೆಗಳಿಗಾಗಿ ಹಿಂದುತ್ವದ ಹೆಸರಿನಲ್ಲಿ ಕೆಲವರು ಗಲಭೆಗಳನ್ನು ಸೃಷ್ಟಿಸಿ ಕೋಮುವಾದದ ವಿಷಬೀಜವನ್ನು ಬಿತ್ತಿದರು. ನಿಜವಾದ ಹಿಂದುತ್ವ ಶಾಂತಿ, ಸ್ವಾತಂತ್ರ್ಯ, ಸತ್ಯವನ್ನು ನಿರ್ಬಯವಾಗಿ ಬೆಂಬಲಿಸುತ್ತದೆ. ಇದರಿಂದ ಕೋಪಗೊಂಡ ಮೋದಿ ವಿರೋಧ ಪಕ್ಷದ ನಾಯಕನ ಮೇಲೆ ‘ಹಿಂದುತ್ವಕ್ಕೆ ಅವಮಾನ’ ಎಂದು ಆರೋಪಿಸಿದರು.

ಇಲ್ಲಿಯವರೆಗೂ ಮೋದಿ – ಅಮಿತ್‌ ಶಾ ಅವರು ಬಹುಮತದ ಮೂಲಕ ತಮ್ಮ ಪಾದವನ್ನು ಸಂಸತ್ತಿನ ಕೆಳಗಿಡಲು ಪ್ರಯತ್ನಿಸಿದ್ದರು. ಆದರೀಗ ರಾಹುಲ್‌ ಗಾಂಧಿ ನೇತೃತ್ವದ ಬಿಲಿಷ್ಠ ವಿಪಕ್ಷ ಸಂಸತ್ತಿನಲ್ಲಿ ಹೊರಹೊಮ್ಮಿದೆ. ಇಂತಹ ಕಡಿವಾಣವಿಲ್ಲದ ಜನರನ್ನು ನಿಯಂತ್ರಿಸಲಾಗಿದೆ. ಬಿಜೆಪಿಯವರು ಹಿಂದುತ್ವ ಹಾಗೂ ಧರ್ಮದ ಹೆಸರಿನಲ್ಲಿ ಕಳೆದ 10 ವರ್ಷಗಳಿಂದ ಚುನಾವಣೆಯನ್ನು ಎದುರಿಸುತ್ತಿದ್ದರು. ಆದರೆ ಅವರಿಗೆ ಈಗ ಕನ್ನಡಿಯಲ್ಲಿ ನಿಜವಾದ ಮುಖವನ್ನು ತೋರಿಸಲಾಗಿದೆ ಎಂದು ಸಾಮ್ನಾದಲ್ಲಿ ಬಿಜೆಪಿ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಲಾಗಿದೆ.

ನಾನು ದೇವರಿಂದ ನೇರವಾಗಿ ಸೃಷ್ಟಿಯಾದವನು ಎಂದು ಹೇಳಿದ ಮೋದಿಯವರು ಸಂಸತ್ತಿನಲ್ಲಿ ಅಪಹಾಸ್ಯಕ್ಕೊಳಗಾದರು. ಬಿಜೆಪಿ ನಾಯಕರ ಬಂಡವಾಳವನ್ನು ರಾಹುಲ್‌ ಗಾಂಧಿ ಬಿಚ್ಚಿಟ್ಟಿದ್ದಾರೆ. ಇದಾದ ನಂತರ ಮೋದಿ-ಶಾ ಅವರು ಸ್ಪೀಕರ್‌ ರಕ್ಷಣೆ ಕೇಳಿದ್ದಾರೆ. ಈ ಸಂದೇಶವು ಇ.ಡಿ. ಸಿಬಿಐ ಹಾಗೂ ಇತರೆ ಸಂಸ್ಥೆಗಳಿಗೆ ತಲುಪಿರುತ್ತದೆ ಎಂದು ಸಾಮ್ನಾದಲ್ಲಿ ಹೇಳಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...