‘ಭಾರತಕ್ಕಾಗಿ ಆಡುವುದಿಲ್ಲ – ಐಪಿಎಲ್‌ನಲ್ಲಿ ಮಾತ್ರ ಆಡುತ್ತೀರಿ’; ಹಾರ್ದಿಕ್ ಪಾಂಡ್ಯ ವಿರುದ್ಧ ಮಾಜಿ ಕ್ರಿಕೆಟಿಗ ಅಸಮಾಧಾನ

Date:

ಇಂಡಿಯನ್ ಪ್ರೀಮಿಯರ್ ಲೀಗ್ (ಐಪಿಎಲ್) ಕೆಲವೇ ವಾರಗಳಲ್ಲಿ ಆರಂಭವಾಗಲಿದೆ. ಈ ವರ್ಷದ ಐಪಿಎಲ್‌ನಲ್ಲಿ ಕುತೂಹಲಕಾರಿಯಾಗಿ ಮುಂಬೈ ಇಂಡಿಯನ್ಸ್‌ ತಂಡದಲ್ಲಿ ಆಟಗಾರರನ್ನು ಬದಲಿಸಲಾಗಿದೆ. ಐದು ಬಾರಿಯ ಚಾಂಪಿಯನ್ ಹಾರ್ದಿಕ್ ಪಾಂಡ್ಯ ಅವರು ಮುಂಬೈ ತಂಡದ ನಾಯಕತ್ವ ಪಡೆದಿದ್ದಾರೆ. ತಂಡದ ಹಿಂದಿನ ನಾಯಕ ರೋಹಿತ್ ಶರ್ಮಾ ಬ್ಯಾಟರ್ ಆಗಿ ಕಾಣಿಸಿಕೊಂಡಿದ್ದಾರೆ. ಹಾರ್ದಿಕ್ ಪಾಂಡ್ಯ ತನ್ನ ಹಳೆಯ ಫ್ರಾಂಚೈಸಿಯನ್ನು ಯಶಸ್ಸಿನೊಂದಿಗೆ ಮುನ್ನಡೆಸಬಹುದೇ ಎಂಬ ಚರ್ಚೆಗಳು ಕೂಡ ನಡೆಯುತ್ತಿವೆ.

ಭಾರತೀಯ ಕ್ರಿಕೆಟ್ ತಂಡದ ಮಾಜಿ ಆಟಗಾರ ಪ್ರವೀಣ್ ಕುಮಾರ್ ಅವರು ಮಾತನಾಡಿರುವ ವಿಡಿಯೋ ಕೂಡ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ವಿಡಿಯೋದಲ್ಲಿ, “ಎಂಐ ಅವಸರದ ನಿರ್ಧಾರ ತೆಗೆದುಕೊಂಡಿದೆಯೇ? ಅಥವಾ ಹಾರ್ದಿಕ್ ಪಾಂಡ್ಯ ಅವರನ್ನು ನಾಯಕನನ್ನಾಗಿ ಮಾಡುವ ನಿರ್ಧಾರ ಸರಿಯಾಗಿದೆಯೇ?” ಮುಂಬೈ ಇಂಡಿಯನ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಆಡಿರುವ ಪ್ರವೀಣ್ ಕುಮಾರ್ ಅವರನ್ನು ಕೇಳಲಾಗಿದೆ.

ಪ್ರಶ್ನೆಗೆ ಉತ್ತರಿಸಿರುವ ಪ್ರವೀಣ್‌, ”ಐಪಿಎಲ್‌ಗೆ ಎರಡು ತಿಂಗಳ ಮೊದಲು ನೀವು ಗಾಯಗೊಂಡಿದ್ದೀರಿ. ನೀವು ದೇಶಕ್ಕಾಗಿ ಆಡುವುದಿಲ್ಲ. ನೀವು ನಿಮ್ಮ ರಾಜ್ಯಕ್ಕಾಗಿ ದೇಸಿ ಕ್ರಿಕೆಟ್‌ನಲ್ಲಿಯೂ ಆಡುವುದಿಲ್ಲ. ಆದರೆ, ನೇರವಾಗಿ ಐಪಿಎಲ್‌ನಲ್ಲಿ ಆಡುತ್ತೀರಿ. ಇದು ಹೇಗೆ? ಈಗ ಜನರು ಐಪಿಎಲ್‌ಗೆ ಮಾತ್ರ ಪ್ರಾಮುಖ್ಯತೆ ನೀಡುತ್ತಾರೆ. ಹಣ ಸಂಪಾದಿಸುವುದು ಸರಿ, ನಿಮ್ಮನ್ನು ತಡೆಯುವವರು ಯಾರು? ಅದರಲ್ಲಿ ತಪ್ಪೇನಿಲ್ಲ. ಆದರೆ, ನೀವು ರಾಜ್ಯ ಮತ್ತು ದೇಶಕ್ಕಾಗಿ ಆಡಬೇಕು” ಎಂದು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

 

“ಹಾರ್ದಿಕ್ ಪಾಂಡ್ಯ ಅವರು ಐಪಿಎಲ್‌ಗೆ ಮಾತ್ರ ಯಾವ ರೀತಿ ಫಿಟ್ ಆಗಿದ್ದಾರೆ. ಆದರೆ, ಭಾರತ ತಂಡಕ್ಕೆ ಹೇಗೆ ಫಿಟ್ ಆಗಿಲ್ಲ ಎಂಬ ಕುರಿತು ಮಾತನಾಡಿದ್ದಾರೆ. ಎಂಐ ತಂಡದಲ್ಲಿ ರೋಹಿತ್ ಶರ್ಮಾ ಇನ್ನೂ 3-4 ವರ್ಷಗಳ ನಾಯಕತ್ವ ವಹಿಸಬಹುದಿತ್ತು” ಎಂದು ಮಾಜಿ ಕ್ರಿಕೆಟಿಗ ಪ್ರವೀಣ್ ಕುಮಾರ್ ಅವರು ಭಾವಿಸುತ್ತಾರೆ.

ಐಪಿಎಲ್‌ಗಿಂತ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಆದ್ಯತೆ ನೀಡುವಂತೆ ಮತ್ತು ಅವರ ವೃತ್ತಿಜೀವನದಲ್ಲಿ ಎರಡೂ ವಿಷಯಗಳನ್ನು ಸಮವಾಗಿ ನೋಡುವಂತೆ ಅವರು ಸಲಹೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

18 ಸಾವಿರ ಕೋಟಿ ರೂ. ದಾಟಿದ ದೇಶದ ಕ್ರೀಡಾ ಅರ್ಥವ್ಯವಸ್ಥೆ; ಕ್ರಿಕೆಟ್ ದರ್ಬಾರಿನಲ್ಲಿ ಸೊರಗಿದ ಇತರ ಆಟಗಳು

ಐಪಿಎಲ್‌ನಲ್ಲಿ ಕೇವಲ ಬೆಂಚ್ ಕಾಯುವ ಸಾಮಾನ್ಯ ಕ್ರಿಕೆಟ್ ಆಟಗಾರನೊಬ್ಬ ಕೋಟ್ಯಾಧಿಪತಿಯಾಗಿ ಐಷಾರಾಮಿ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...