ಗುರುಗ್ರಾಮ | ‘ನಿಮಗಿರುವುದು ಕೇವಲ 2 ದಿನ’; ಮುಸ್ಲಿಮರ ಏರಿಯಾದಲ್ಲಿ ಬೆದರಿಕೆಯ ಪೋಸ್ಟರ್‌ಗಳು

Date:

ಹರಿಯಾಣದ ಗುರುಗ್ರಾಮದ ‘ಮೆಗಾ ಸಿಟಿ’ಯ ಸೆಕ್ಟರ್ 69A ರಲ್ಲಿನ ಮುಸ್ಲಿಂ ಸಮುದಾಯ ವಾಸಿಸುವ ಹಾಗೂ ಕೆಲಸ ಮಾಡುವ ಕೊಳಗೇರಿ ಪ್ರದೇಶಗಳಲ್ಲಿ ಬೆದರಿಕೆ ಒಡ್ಡುವ ಪೋಸ್ಟರ್‌ಗಳನ್ನು ಅಂಟಿಸಲಾಗಿದ್ದು, ಸ್ಥಳೀಯ ನಿವಾಸಿಗಳು ಆತಂಕಕ್ಕೀಡಾಗಿದ್ದಾರೆ.

“ಸ್ಲಂ ನಿವಾಸಿಗಳೇ… ನೀವು ಬೇಗ ಮನೆಗಳನ್ನು ಖಾಲಿ ಮಾಡಿ ಹೊರಡಬೇಕು. ಇಲ್ಲದಿದ್ದರೆ ನೀವು ಕೆಟ್ಟ ಪರಿಣಾಮಗಳನ್ನು ಎದುರಿಸಬೇಕಾಗುತ್ತದೆ. ನೀವು ಹೊರಟು ನಿಮ್ಮ ಜೀವವನ್ನು ಉಳಿಸಿಕೊಳ್ಳಿ. ನಿಮಗೆ 2 ದಿನಗಳು ಮಾತ್ರ ಬಾಕಿಯಿವೆ” ಎನ್ನುವ ಪೋಸ್ಟರ್‌ಗಳು 69A ನಲ್ಲಿನ ಕೊಳಗೇರಿ ಪ್ರದೇಶದಲ್ಲಿ ಅಂಟಿಸಲಾಗಿದೆ.

ನಿರ್ದಿಷ್ಟವಾಗಿ ಮುಸ್ಲಿಂ ಸಮುದಾಯವನ್ನು ಗುರಿಯಾಗಿಸಿಕೊಂಡು ಪೋಸ್ಟರ್‌ಗಳು ಅಂಟಿಸಲಾಗಿದೆ. ಇದು ನೆರೆಯ ನುಹ್ ಜಿಲ್ಲೆಯಲ್ಲಿ ಕೋಮು ಘರ್ಷಣೆ ಉಂಟಾದ ಕೆಲವು ದಿನಗಳ ನಂತರದಲ್ಲಿ ಪೋಸ್ಟರ್‌ಗಳು ಕಂಡುಬಂದಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸ್ಥಳೀಯ ಪೊಲೀಸರು ಪೋಸ್ಟರ್‌ಗಳನ್ನು ತೆರವುಗೊಳಿಸಿ ಪ್ರಕರಣ ದಾಖಲಿಸಿದ್ದಾರೆ. ಆದರೆ ಸಮುದಾಯದಲ್ಲಿ ಭಯ ಮಾತ್ರ ಕಡಿಮೆಯಾಗಿಲ್ಲ. “ನಾವು ಪೋಸ್ಟರ್‌ಗಳನ್ನು ತೆಗೆದುಹಾಕಿದ್ದೇವೆ ಮತ್ತು ಈ ಬಗ್ಗೆ ತನಿಖೆಯನ್ನು ಪ್ರಾರಂಭಿಸಿದ್ದೇವೆ. ಇದುವರೆಗೆ ಯಾರನ್ನೂ ಬಂಧಿಸಿಲ್ಲ ಮತ್ತು ಹೊಣೆಗಾರರನ್ನು ಗುರುತಿಸಲು ಸಾಧ್ಯವಾಗಿಲ್ಲ” ಎಂದು ಸಹಾಯಕ ಪೊಲೀಸ್ ಆಯುಕ್ತ ಮನೋಜ್ ಕುಮಾರ್ ಸುದ್ದಿ ಮಾಧ್ಯಮಗಳಿಗೆ ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಕೇಜ್ರಿವಾಲ್‌ ಪ್ರಧಾನಿ ಅಭ್ಯರ್ಥಿ: ಮುಂಬೈ ‘ಇಂಡಿಯಾ’ ಸಭೆಗೂ ಮುನ್ನ ಎಎಪಿ ನಾಯಕರ ಇಂಗಿತ

‘ಮೆಗಾ ಸಿಟಿ’ಯ ಸೆಕ್ಟರ್ 69A ಕೊಳಗೇರಿಯಲ್ಲಿ, ಬಹುಮಹಡಿ ಅಪಾರ್ಟ್ಮೆಂಟ್ ಸಂಕೀರ್ಣಗಳಲ್ಲಿ ಮನೆಯ ಸಹಾಯಕರಾಗಿ ಕೆಲಸ ಮಾಡುವವರು ಹಾಗೂ ಕೂಲಿಕಾರರು ವಾಸ ಮಾಡುತ್ತಿದ್ದಾರೆ. ಪೋಸ್ಟರ್‌ಗಳು ಈ ಪ್ರದೇಶದಲ್ಲಿ ಕಾಣಿಸಿಕೊಂಡ ನಂತರ ಪ್ರದೇಶದಲ್ಲಿ ವಾಸಿಸುವ ಜನರು ಭಯಭೀತಿಯಿಂದ ದಿನದೂಡುವಂತಾಗಿದೆ.   

“ಹಲವು ವರ್ಷಗಳಿಂದ ಇಲ್ಲಿ ವಾಸಿಸುತ್ತಿದ್ದೇವೆ. ನಾವು ನಮ್ಮ ಮಕ್ಕಳ ಬಗ್ಗೆ ಹೆಚ್ಚು ಭಯವಾಗಿದೆ. ನನ್ನ ಪತಿ ಮತ್ತು ನಾನು ಕೆಲಸಕ್ಕೆ ಹೋದಾಗ ಮಕ್ಕಳು ಇಲ್ಲಿ ಒಬ್ಬರೇ ಇರುತ್ತಾರೆ. ನಾವು ಗಲಭೆಯ ನಂತರ ಹಳ್ಳಿಗೆ ಹೋಗಿದ್ದೆವು. ಆದರೆ ಈಗ ಈ ಪೋಸ್ಟರ್‌ಗಳು ಕಾಣಿಸಿಕೊಂಡಿವೆ” ಎಂದು ಮಹಿಳೆಯೊಬ್ಬರು ಮಾಧ್ಯಮಗಳಿಗೆ ತಮ್ಮ ಆತಂಕದ ಬಗ್ಗೆ ತಿಳಿಸಿದ್ದಾರೆ.

ಕಳೆದ ಜುಲೈನಲ್ಲಿ ನುಹ್‌ನಲ್ಲಿ ನಡೆದ ಹಿಂಸಾಚಾರದ ನಂತರ ಈ ಪ್ರದೇಶದಲ್ಲಿ ಆರು ಜನರು ಸಾವನ್ನಪ್ಪಿದರು. ಈ ಪ್ರದೇಶವು ಗುರುಗ್ರಾಮ್‌ ನಗರದ ಅಂಚಿನಲ್ಲಿದೆ. ಕೋಮು ಹಿಂಸಾಚಾರ ಉಂಟಾದ ನಂತರ ಅನೇಕ ಕುಟುಂಬಗಳು ಪ್ರದೇಶವನ್ನು ತೊರೆದಿವೆ. ಇಲ್ಲಿಯೇ ಉಳಿದುಕೊಂಡಿರುವವರಿಗೆ ಈಗ ಆತಂಕ ಹೆಚ್ಚಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...