ನೀವು ದೇಶವನ್ನು ಮಾರಿದ್ದೀರಿ: ಕೇಂದ್ರದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

Date:

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆಯ ಉಲ್ಲೇಖದ ವಿಚಾರವಾಗಿ ಸಂಸತ್ತಿನಲ್ಲಿ ವಾರಗಳ ಕಾಲ ಗದ್ದಲ ನಡೆದ ಬಳಿಕ, ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಬುಧವಾರ ಮತ್ತೆ ಲೋಕಸಭೆಯಲ್ಲಿ ಮಾತನಾಡಿ, ಭಾರತ–ಅಮೆರಿಕ ವ್ಯಾಪಾರ ಒಪ್ಪಂದದ ಕುರಿತು ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದರು. ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ನೇರ ಸಂದೇಶ ನೀಡಿದ ಅವರು, “ನಮ್ಮೊಂದಿಗೆ ಸೇವಕರಂತೆ ಅಲ್ಲ, ಸಮಾನರಂತೆ ಮಾತನಾಡಿ” ಎಂದು ಸಂದೇಶ ನೀಡಿದರು.

ಬಜೆಟ್ ಅಧಿವೇಶನದ ವೇಳೆ ಲೋಕಸಭೆಯಲ್ಲಿ ಮಾತನಾಡಿದ ರಾಹುಲ್ ಗಾಂಧಿ, ಅಮೆರಿಕನ್ ಡಾಲರ್ ಅನ್ನು ರಕ್ಷಿಸುವ ಕೀಲಿಯೇ ಭಾರತೀಯ ದತ್ತಾಂಶ ಎಂದು ಹೇಳಿ ಭಾರತ–ಅಮೆರಿಕ ವ್ಯಾಪಾರ ಒಪ್ಪಂದದ ವಿಚಾರವನ್ನು ಪ್ರಸ್ತಾಪಿಸಿದರು.

ಕೇಂದ್ರ ಸರ್ಕಾರದ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ ರಾಹುಲ್ ಗಾಂಧಿ, “ನೀವು ಭಾರತವನ್ನು ಮಾರಿದ್ದೀರಿ. ತಾಯಿ ಭಾರತ ಮಾತೆಯನ್ನು ಮಾರಿದ್ದೀರಿ. ಭಾರತವನ್ನು ಮಾರಲು ನಿಮಗೆ ನಾಚಿಕೆ ಇಲ್ಲವೇ?” ಎಂದು ಪ್ರಶ್ನಿಸಿದರು. ಪ್ರಧಾನಿ ನರೇಂದ್ರ ಮೋದಿ ಸಾಮಾನ್ಯ ಸಂದರ್ಭಗಳಲ್ಲಿ ಭಾರತವನ್ನು ಮಾರುವುದಿಲ್ಲ, ಆದರೆ ಈಗ ಅವರನ್ನು ಉಸಿರುಗಟ್ಟಿಸಲಾಗುತ್ತಿದೆ ಎಂದು ಆರೋಪಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದಕ್ಕೆ ತಕ್ಷಣ ಕೇಂದ್ರದಿಂದ ಆಕ್ಷೇಪ ವ್ಯಕ್ತವಾಯಿತು. ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು, ಭಾರತ ಹಾಗೂ ಪ್ರಧಾನಿ ಮೋದಿ ಕುರಿತು ರಾಹುಲ್ ಗಾಂಧಿಯವರ ಹೇಳಿಕೆಗಳನ್ನು ಬಲವಾಗಿ ವಿರೋಧಿಸಿದರು. “ಭಾರತವನ್ನು ಮುಟ್ಟುವ ಅಥವಾ ಮಾರುವ ವ್ಯಕ್ತಿ ಈ ವಿಶ್ವದಲ್ಲಿ ಹುಟ್ಟಿಲ್ಲ. ದೇಶವು ಪ್ರಧಾನಿ ಮೋದಿಗಿಂತ ಉತ್ತಮ ಪ್ರಧಾನಿಯನ್ನು ನೋಡಿಲ್ಲ” ಎಂದು ಪ್ರತಿಕ್ರಿಯಿಸಿದರು.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಖುದ್ದು ರಾಜಧರ್ಮ ಪಾಲಿಸಲಿಲ್ಲ ಮೋದಿಯವರು, ಹಿಮಂತರಿಗೆ ಹೇಗೆ  ಉಪದೇಶ ನೀಡಬಲ್ಲರು ಪಾಪ?

“ಒಂದು ವಿಷಯವನ್ನು ಸ್ಪಷ್ಟಪಡಿಸಬೇಕು. ಯುಎಸ್ ಮತ್ತು ಚೀನಾ ನಡುವಿನ ಸ್ಪರ್ಧೆಯಲ್ಲಿ ಅತ್ಯಂತ ಅಮೂಲ್ಯ ಆಸ್ತಿ ಭಾರತೀಯ ದತ್ತಾಂಶ. ಅಮೆರಿಕ ಸೂಪರ್ ಪವರ್ ಆಗಿ ಉಳಿಯಲು ಹಾಗೂ ತನ್ನ ಡಾಲರ್ ಅನ್ನು ರಕ್ಷಿಸಿಕೊಳ್ಳಲು ಬಯಸಿದರೆ, ಅದಕ್ಕೆ ಕೀಲಿಯೇ ಭಾರತೀಯ ದತ್ತಾಂಶ” ಎಂದು ಅವರು ಒತ್ತಿ ಹೇಳಿದರು.

ವಿರೋಧ ಪಕ್ಷವಾದ ‘ಇಂಡಿಯಾ’ ಮೈತ್ರಿಕೂಟ ಟ್ರಂಪ್ ಅವರೊಂದಿಗೆ ಮಾತುಕತೆ ನಡೆಸುತ್ತಿದ್ದರೆ, ಮೊದಲು ಹೇಳುವುದೇ “ಈ ಸಮೀಕರಣದಲ್ಲಿ ಅತ್ಯಂತ ಮುಖ್ಯವಾದುದು ಭಾರತೀಯ ದತ್ತಾಂಶ” ಎಂಬುದಾಗಿರುತ್ತಿತ್ತು ಎಂದು ಅವರು ವಿವರಿಸಿದರು. “ನೀವು ನಿಮ್ಮ ಡಾಲರ್ ಅನ್ನು ರಕ್ಷಿಸಿಕೊಳ್ಳಲು ಬಯಸುತ್ತೀರಿ. ನಾವು ನಿಮ್ಮ ಸ್ನೇಹಿತರು, ನಿಮ್ಮನ್ನು ಗೌರವಿಸುತ್ತೇವೆ. ನಿಮ್ಮ ಡಾಲರ್ ಅನ್ನು ರಕ್ಷಿಸಲು ಸಹಾಯ ಮಾಡಲು ಸಿದ್ಧ. ಆದರೆ ಅದನ್ನು ರಕ್ಷಿಸಬಲ್ಲ ದೊಡ್ಡ ಆಸ್ತಿ ಭಾರತೀಯ ಜನರ ಬಳಿ ಇದೆ ಎಂಬುದನ್ನು ನೆನಪಿಡಿ” ಎಂದು ಟ್ರಂಪ್ ಗೆ ನೀಡಿದ ಸಂದೇಶವನ್ನು ಅವರು ವಿವರಿಸಿದರು.

ಅಮೆರಿಕವು ಭಾರತೀಯ ದತ್ತಾಂಶವನ್ನು ಪ್ರವೇಶಿಸಲು ಬಯಸಿದರೆ, “ದಯವಿಟ್ಟು ನೀವು ನಮ್ಮೊಂದಿಗೆ ಸಮಾನವಾಗಿ ಮಾತನಾಡಬೇಕು. ನಾವು ನಿಮ್ಮ ಸೇವಕರು ಎಂಬಂತೆ ಮಾತನಾಡಬಾರದು. ಭಾರತದ ಇಂಧನ ಭದ್ರತೆ ಸಂಪೂರ್ಣವಾಗಿ ದೇಶದ್ದೇ ಆಗಿದ್ದು, ಯಾವುದೇ ಪರಿಸ್ಥಿತಿಯಲ್ಲೂ ಅದನ್ನು ಭಾರತ ರಕ್ಷಿಸಲಿದೆ ಎಂದು ಅಮೆರಿಕ ಅಧ್ಯಕ್ಷರು ಅರಿತುಕೊಳ್ಳಬೇಕು ” ಎಂದು ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸ್ಪಷ್ಟ ಸಂದೇಶ ರವಾನಿಸಿದರು.

ಭಾರತ ಮತ್ತು ಅಮೆರಿಕ ಕಳೆದ ವಾರ ಮಧ್ಯಂತರ ವ್ಯಾಪಾರ ಒಪ್ಪಂದಕ್ಕೆ ಬಂದ ಬಳಿಕ ಈ ಟೀಕೆಗಳು ಕೇಳಿಬಂದವು. ಟ್ರಂಪ್ ಭಾರತೀಯ ಸರಕುಗಳ ಮೇಲಿನ ಸುಂಕವನ್ನು 50%ರಿಂದ 18%ಕ್ಕೆ ಇಳಿಸಿರುವುದಾಗಿ ಹೇಳಿದ್ದರೆ, ಭಾರತ ರಷ್ಯಾದ ತೈಲ ಖರೀದಿಯನ್ನು ನಿಲ್ಲಿಸುವುದಾಗಿ ಪ್ರತಿಜ್ಞೆ ಮಾಡಿದೆ ಎಂಬ ಹೇಳಿಕೆಯನ್ನು ಪ್ರಧಾನಿ ನರೇಂದ್ರ ಮೋದಿ ಅಥವಾ ಅವರ ಸಚಿವರು ದೃಢಪಡಿಸಿಲ್ಲ. ಈಗ ನಾವು ಯಾರಿಂದ ತೈಲ ಖರೀದಿಸಬೇಕು ಎಂಬುದನ್ನು ಅಮೆರಿಕ ನಿರ್ಧರಿಸುತ್ತದೆ, ನಮ್ಮ ಪ್ರಧಾನಿಯಲ್ಲ ಎಂದು ರಾಹುಲ್ ಗಾಂಧಿ ವ್ಯಂಗ್ಯವಾಡಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...