ಕೆಲಸಕ್ಕೆ ಹೋಗಬೇಕಲ್ಲ ಎಂದು ಕೈ ಬೆರಳುಗಳನ್ನೇ ಕತ್ತರಿಸಿಕೊಂಡ ಯುವಕ

Date:

ತನ್ನ ಸಂಬಂಧಿಯ ಒಡೆತನದಲ್ಲಿದ್ದ ವಜ್ರ ವ್ಯಾಪಾರ ಸಂಸ್ಥೆಯಲ್ಲಿ ಕೆಲಸಕ್ಕೆ ಹೋಗುವುದರಿಂದ ತಪ್ಪಿಸಿಕೊಳ್ಳಲು ಯುವಕನೊಬ್ಬ ತನ್ನದೇ ಕೈನ ನಾಲ್ಕು ಬೆರಳುಗಳನ್ನು ಕತ್ತರಿಸಿಕೊಂಡಿರುವ ಘಟನೆ ಗುಜರಾತ್‌ನಲ್ಲಿ ನಡೆದಿದೆ.

ಗುಜರಾತ್‌ನ ಸೂರತ್‌ ಜಿಲ್ಲೆಯ ವರಾಚಾ ಮಿನಿ ಬಜಾರ್‌ನ ನಿವಾಸಿ ಮಯೂರ್ ತಾರಾಪರಾ ಎಂಬಾತ ತನ್ನದೇ ಬೆರಳುಗಳನ್ನು ಕತ್ತರಿಸಿಕೊಂಡಿದ್ದಾನೆ, ಆತ ತನ್ನ ಸಂಬಂಧಿ ʼಅನಭ್ ಜೆಮ್ಸ್ʼ ಸಂಸ್ಥೆಯಲ್ಲಿ ಕಂಪ್ಯೂಟರ್ ಆಪರೇಟರ್ ಆಗಿ ಕೆಲಸ ಮಾಡುತ್ತಿದ್ದನೆಂದು ತಿಳಿದುಬಂದಿದೆ.

ಅನಭ್ ಜೆಮ್ಸ್‌ ಸಂಸ್ಥೆಯಲ್ಲಿ ಕೆಲಸ ಮಾಡಲು ಮಯೂರ್‌ ಇಷ್ಟವಿರಲಿಲ್ಲ. ಸಂಬಂಧಿಯೇ ಆಗಿದ್ದರಿಂದ ಕೆಲಸ ಬಿಡುತ್ತೇನೆಂದು ಹೇಳಲು ಸಾಧ್ಯವಾಗಿರಲಿಲ್ಲ. ಹೀಗಾಗಿ, ಬೆರಳುಗಳೇ ಇಲ್ಲವೆಂದರೆ ಅವರ ಕೆಲಸದಿಂದ ಬಿಡಿಸುತ್ತಾರೆಂದು ಯೋಜಿಸಿದ್ದ ಮಯೂರ್ ತನ್ನ ಎಡಗೈನ ನಾಲ್ಕು ಬೆರಳುಗಳನ್ನು ಕತ್ತರಿಸಿಕೊಂಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...