ಹಿಂದೂ ಧರ್ಮ ಪ್ರಚಾರಕ ಪ್ರೇಮಾನಂದರಿಗೆ ತನ್ನ ಕಿಡ್ನಿ ದಾನ ಮಾಡಲು ಮುಂದಾದ ಮುಸ್ಲಿಂ ಯುವಕ

Date:

ಮಧ್ಯಪ್ರದೇಶದ ನರ್ಮದಾಪುರಂ ಜಿಲ್ಲೆಯ 26 ವರ್ಷದ ಮುಸ್ಲಿಂ ಯುವಕನೊಬ್ಬ ತನ್ನ ಒಂದು ಕಿಡ್ನಿಯನ್ನು (ಮೂತ್ರಪಿಂಡ) ಹಿಂದೂ ಧರ್ಮಪ್ರಚಾರಕ ಪ್ರೇಮಾನಂದ ಗೋವಿಂದ ಶರಣ್ ‘ಪ್ರೇಮಾನಂದ ಜಿ ಮಹಾರಾಜ್’ ಅವರಿಗೆ ದಾನ ಮಾಡಲು ಮುಂದಾಗಿದ್ದಾನೆ. ಹಾಗೆಯೇ ಇದನ್ನು ಕೋಮು ಸಾಮರಸ್ಯಕ್ಕೆ ನೀಡುವ ಕೊಡುಗೆ ಎಂದು ಕರೆದಿದ್ದಾನೆ.

ಪ್ರೇಮಾನಂದ ಗೋವಿಂದ ಶರಣ್ ಅವರು ಸುಮಾರು ಎರಡು ದಶಕಗಳಿಂದ ಮೂತ್ರಪಿಂಡ ಕಾಯಿಲೆಯಿಂದ ಬಳಲುತ್ತಿದ್ದಾರೆ. ಸುಮಾರು 18–19 ವರ್ಷಗಳ ಹಿಂದೆ ಎರಡೂ ಮೂತ್ರಪಿಂಡಗಳು ವಿಫಲವಾದ ಕಾರಣ, ಅವರು ನಿಯಮಿತ ಡಯಾಲಿಸಿಸ್ ಮೂಲಕ ಬದುಕುಳಿದಿದ್ದಾರೆ. ಅವರ ಜೀವನ ಮತ್ತು ಸಂದೇಶದಿಂದ ಪ್ರೇರಿತರಾಗಿರುವುದಾಗಿ ಹೇಳಿಕೊಂಡಿರುವ ಇತಾರ್ಸಿಯ ಆನ್‌ಲೈನ್ ಮತ್ತು ಕಾನೂನು ಸಲಹೆಗಾರ ಆರಿಫ್ ಖಾನ್ ಚಿಶ್ತಿ ಅವರು ಆಗಸ್ಟ್ 20ರಂದು ಪ್ರೇಮಾನಂದರಿಗೆ ತಮ್ಮ ಕಿಡ್ನಿ ನೀಡುವುದಾಗಿ ಜಿಲ್ಲಾಧಿಕಾರಿ ಮತ್ತು ಪ್ರೇಮಾನಂದ ಅವರಿಗೆ ಪತ್ರ ಬರೆದಿದ್ದಾರೆ.

ಇದನ್ನು ಓದಿದ್ದೀರಾ? ತನ್ನ ಸಹೋದರನಿಗೆ ಕಿಡ್ನಿ ದಾನ ಮಾಡಿದ್ದಕ್ಕೆ ಪತ್ನಿಗೆ ಫೋನಲ್ಲೇ ತ್ರಿವಳಿ ತಲಾಖ್ ನೀಡಿದ ಪತಿ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಖ್ವಾಜಾ ಮೊಯಿನುದ್ದೀನ್ ಚಿಶ್ತಿ ಅಜ್ಮೇರಿ ಮತ್ತು ಅಮೀರ್ ಖುಸ್ರೋ ಬಗ್ಗೆ ಮಹಾರಾಜ್ ಜಿ ತುಂಬಾ ಗೌರವದಿಂದ ಮಾತನಾಡಿದ ರೀಲ್ ಅನ್ನು ನಾನು ನೋಡಿದೆ. ಸುಲಭವಾಗಿ ದ್ವೇಷ ಹರಡುವ ಸಮಯದಲ್ಲಿ ಅವರು ಸಹೋದರತ್ವಕ್ಕಾಗಿ ಕೆಲಸ ಮಾಡುತ್ತಿದ್ದಾರೆ ಎಂದು ನನಗೆ ಅನಿಸಿತು. ಆ ಮನೋಭಾವವನ್ನು ಜೀವಂತವಾಗಿಡಲು ಅವರ ದೀರ್ಘಾಯುಷ್ಯ ಅತ್ಯಗತ್ಯ” ಎಂದು ಚಿಶ್ತಿ ಅಭಿಪ್ರಾಯಿಸಿದ್ದಾರೆ.

ಸೂಫಿ ಸಂಪ್ರದಾಯವನ್ನು ಪಾಲಿಸುವ ಚಿಶ್ತಿ, ಮೊದಲು ತಮ್ಮ ಪತ್ನಿಯೊಂದಿಗೆ ಕಿಡ್ನಿ ದಾನದ ಬಗ್ಗೆ ಮಾತನಾಡಿರುವುದಾಗಿಯೂ ಹೇಳಿದ್ದಾರೆ. “ನಾನು 2023ರಲ್ಲಿ ನನ್ನ ತಾಯಿಯನ್ನು ಕಳೆದುಕೊಂಡೆ, ಅದರಿಂದಾಗಿ ನಾನು ಬಹುತೇಕ ನಿರ್ಜೀವ ಎನಿಸಿತು. ನಾನು ಒಂದು ವರ್ಷದ ಹಿಂದೆಯೇ ಮದುವೆಯಾಗಿದ್ದು, ನನ್ನ ಸಂಗಾತಿಯ ಬಳಿ ಹಿಂದೂ ಧಾರ್ಮಿಕ ಬೋಧಕರ ದೀರ್ಘಾಯುಷ್ಯ ಮತ್ತು ಯೋಗಕ್ಷೇಮಕ್ಕಾಗಿ ಕಿಡ್ನಿ ದಾನ ಮಾಡುವ ಬಗ್ಗೆ ಮಾತನಾಡಿದೆ. ದೇಶದಲ್ಲಿ ಸಮುದಾಯ ಸೌಹಾರ್ದತೆ ಮತ್ತು ಏಕತೆಯನ್ನು ಉತ್ತೇಜಿಸುವಲ್ಲಿ ಕೆಲಸ ಮಾಡುತ್ತಿರುವ ಆಧ್ಯಾತ್ಮಿಕ ಗುರುವಿನ ಜೀವನಕ್ಕಿಂತ ನನ್ನ ಜೀವನ ದೊಡ್ಡದಲ್ಲ” ಎಂದು ಹೇಳಿದ್ದಾರೆ.

ಆರಿಫ್ ಖಾನ್ ಚಿಶ್ತಿಯ ಈ ನಿರ್ಧಾರಕ್ಕೆ ಸಾಮಾಜಿಕ ಜಾಲತಾಣದಲ್ಲಿ ಮೆಚ್ಚುಗೆ ವ್ಯಕ್ತವಾಗಿದೆ. ಇದು ನಿಜವಾದ ಭಾರತ ಎಂದು ನೆಟ್ಟಿಗರು ಹೇಳಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...