27ನೇ ವಯಸ್ಸಿಗೆ ಬದುಕು ಮುಗಿಸಿದ ‘ಆ್ಯಂಗ್ರಿ ರಾಂಟ್‌ಮ್ಯಾನ್’ ಖ್ಯಾತಿಯ ಯೂಟ್ಯೂಬರ್  ಅಬ್ರದೀಪ್ ಸಾಹ!

Date:

ಸೋಷಿಯಲ್ ಮೀಡಿಯಾದಲ್ಲಿ ‘ಆ್ಯಂಗ್ರಿ ರಾಂಟ್‌ಮ್ಯಾನ್’ ಎಂದೇ ಜನಪ್ರಿಯವಾಗಿದ್ದ ಹಿಂದಿ ಯೂಟ್ಯೂಬರ್ ಅಬ್ರದೀಪ್ ಸಹಾ ಅವರು 27ನೇ ವಯಸ್ಸಿಗೆ ಬದುಕಿಗೆ ವಿದಾಯ ಹೇಳಿದ್ದಾರೆ. ಅವರ ಹಠಾತ್ ಸಾವು ಸಾಮಾಜಿಕ ಮಾಧ್ಯಮದ ಬಳಕೆದಾರರನ್ನು ಆಘಾತಕ್ಕೀಡು ಮಾಡಿದೆ.

ಅಬ್ರದೀಪ್ ಸಹಾ ಅವರು ಇತ್ತೀಚೆಗೆ ಹೃದಯಕ್ಕೆ ಸಂಬಂಧಿಸಿದಂತೆ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಆದರೆ ಶಸ್ತ್ರಚಿಕಿತ್ಸೆ ನಂತರ ಅವರ ಆರೋಗ್ಯ ಸ್ಥಿತಿ ಸಂಪೂರ್ಣ ಹದಗೆಟ್ಟಿತ್ತು. ಈ ಬಗ್ಗೆ ಅವರ ತಂದೆ ಈ ಬಗ್ಗೆ ಮಾಹಿತಿ ನೀಡಿದ್ದು, ಅವರು ಇನ್ನೂ ಐಸಿಯುನಲ್ಲಿದ್ದಾರೆ ಮತ್ತು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿಸಿದ್ದರು.

ಕಳೆದ ಎರಡು ದಿನಗಳಿಂದ ಅವರ ಆರೋಗ್ಯ ಸ್ಥಿತಿ ಸಂಪೂರ್ಣ ಹದಗೆಟ್ಟಿದ ಪರಿಣಾಮ ಐಸಿಯುನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಬಹು ಅಂಗಾಂಗ ವೈಫಲ್ಯಕ್ಕೊಳಗಾಗಿ ಏ.16ರ ತಡರಾತ್ರಿ ಬೆಂಗಳೂರಿನ ಖಾಸಗಿ ಆಸ್ಪತ್ರೆಯೊಂದರಲ್ಲಿ ಕೊನೆಯುಸಿರೆಳೆದಿದ್ದಾರೆ ಎಂದು ತಿಳಿದುಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಗಸ್ಟ್ 18, 2017ರಂದು  ‘ಆಂಗ್ರಿ ರಾಂಟ್‌ಮ್ಯಾನ್'(ANGRY RANTMAN) ಯೂಟ್ಯೂಬ್ ಚಾನೆಲ್ ಆರಂಭಿಸಿದ್ದ ಅಬ್ರದೀಪ್, “2018ರ ಡಿಸೆಂಬರ್ ತಿಂಗಳಿನಲ್ಲಿ ಬಿಡುಗಡೆಯಾದ ಕನ್ನಡದ ಕೆಜಿಎಫ್‌ ಸಿನಿಮಾವನ್ನು ವಿಚಿತ್ರವಾಗಿ ವಿಮರ್ಶೆ ಮಾಡುವ ಮೂಲಕ ಅಬ್ರದೀಪ್ ಸಾಹ ಭಾರೀ ಹೆಸರು ಮಾಡಿದ್ದರು.

ಕೆಜಿಎಫ್ ಸಿನಿಮಾವನ್ನು ಹೊಗಳಿದ್ದ ಅಬ್ರದೀಪ್, ಬಾಲಿವುಡ್ ಸಿನಿಮಾರಂಗವನ್ನು ತರಾಟೆಗೆ ತೆಗೆದುಕೊಂಡಿದ್ದರು. ಸಿನಿಮಾ ಹೇಗೆ ಮಾಡಬೇಕು ಎಂದು ದಕ್ಷಿಣ ಭಾರತೀಯ ಚಿತ್ರರಂಗ ನೋಡಿ ಕಲಿಯಿರಿ ಎಂದು ಹೇಳಿದ್ದರು. ಅಲ್ಲದೇ, ತಂದನಿ ತಾನೋ ತಾನಿ ತಂದಾನೋ ಟೋನ್ ಅನ್ನು ತನ್ನದೇ ವಿಚಿತ್ರ ಶೈಲಿಯಲ್ಲಿ ಬಳಸಿಕೊಂಡಿದ್ದರಿಂದ ಸೋಷಿಯಲ್ ಮೀಡಿಯಾಗಳಲ್ಲಿ ಸಾಕಷ್ಟು ಸುದ್ದಿಗೊಳಗಾಗಿದ್ದರು. ಯಶ್ ಅವರನ್ನು ಹೊಗಳುವ ಮೂಲಕ ಕನ್ನಡಿಗರ ಮನಸ್ಸು ಕೂಡ ಗೆದ್ದಿದ್ದರು.

ಅವರ ವಿಡಿಯೋ ವ್ಯಾಪಕ ವೈರಲ್ ಆಗಿತ್ತು, ಮಾಧ್ಯಮಗಳಲ್ಲಿ ಕೂಡ ಅವರ ಬಗ್ಗೆ ವರದಿಗಳು ಬಂದಿದ್ದವು. ಅದಾದ ಬಳಿಕ ಅವರನ್ನು ‘ಆಂಗ್ರಿ ರಾಂಟ್‌ಮ್ಯಾನ್’ ಎಂದೇ ಎಲ್ಲರೂ ಕರೆಯಲು ಆರಂಭಿಸಿದರು. ಚಲನಚಿತ್ರಗಳ ಕುರಿತಂತೆ ವಿಭಿನ್ನವಾಗಿ ವಿಶ್ಲೇಷಣೆ ಮಾಡುತ್ತಿದ್ದ ಆಂಗ್ರಿ ರಾಂಟ್‌ಮಾನ್ ಯೂಟ್ಯೂಬ್ ಚಾನೆಲ್‌ನಲ್ಲಿ 4.80 ಲಕ್ಷ ಚಂದಾದಾರರನ್ನು ಹೊಂದಿದ್ದಾರೆ. ಸಿನಿಮಾ ಬಗ್ಗೆ ವಿಮರ್ಶೆಗಳನ್ನು ಮಾಡುತ್ತಲೇ ಅವರು ಜನಪ್ರಿಯತೆ ಹೆಚ್ಚಿಸಿಕೊಂಡಿದ್ದರು.

ಕೇವಲ ಸಿನಿಮಾ ಮಾತ್ರವಲ್ಲದೇ ಫುಟ್ಬಾಲ್, ಕ್ರಿಕೆಟ್ ಪಂದ್ಯಗಳು, ಹಾಲಿವುಡ್ ಸಿನಮಾಗಳು ಸೇರಿದಂತೆ ಹಲವಾರು ರಂಗಗಳ ಬಗ್ಗೆ ವಿಶ್ಲೇಷಿಸುವುದು ಅವರ ಹವ್ಯಾಸವಾಗಿತ್ತು. ಅದನ್ನೇ ಅವರು ವಿಡಿಯೋ ಮಾಡಿ ತಮ್ಮ ಆ್ಯಂಗ್ರಿ ರ‍್ಯಾಂಟ್ ಮ್ಯಾನ್ ಯೂಟ್ಯೂಬ್ ಚಾನೆಲ್ ನಲ್ಲಿ ಅಬ್ರದೀಪ್ ಹಂಚಿಕೊಳ್ಳುತ್ತಿದ್ದರು.

ಜನಪ್ರಿಯ ಯೂಟ್ಯೂಬರ್ ಸಾವಿನ ಸುದ್ದಿ ತಿಳಿದ ತಕ್ಷಣ, ಸಾಮಾಜಿಕ ಮಾಧ್ಯಮ ಬಳಕೆದಾರರು ದಿಗ್ಭ್ರಾಂತರಾಗಿದ್ದಾರೆ. ಎಕ್ಸ್‌ನಲ್ಲಿ ಅವರಿಗೆ ಸಾವಿರಾರು ಮಂದಿ ಶ್ರದ್ಧಾಂಜಲಿ ಸಲ್ಲಿಸಿದ್ದು, ಸಾವಿನ ಸುದ್ದಿಗೆ ಶಾಕ್‌ನಿಂದ ಪ್ರತಿಕ್ರಿಯೆ ನೀಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...