ಮಾನನಷ್ಟ ಪ್ರಕರಣದಲ್ಲಿ ಯೂಟ್ಯೂಬರ್ ಧ್ರುವ್‌ ರಾಠಿಗೆ ದೆಹಲಿ ಕೋರ್ಟ್ ಸಮನ್ಸ್

Date:

ಬಿಜೆಪಿ ನಾಯಕನೊಬ್ಬರು ದಾಖಲಿಸಿರುವ ಮಾನನಷ್ಟ ಪ್ರಕರಣಕ್ಕೆ ಸಂಬಂಧಿಸಿದಂತೆ ಯೂಟ್ಯೂಬರ್‌ ಧ್ರುವ್‌ ರಾಠಿ ಅವರಿಗೆ ದೆಹಲಿ ಕೋರ್ಟ್ ಸಮನ್ಸ್ ನೀಡಿದೆ.

ಮುಂಬೈ ಬಿಜೆಪಿ ಘಟಕದ ವಕ್ತಾರರಾದ ಸುರೇಶ್ ಕರ್ಮಿಶಿ ನಕುವಾ ಅವರು ರಾಠಿ ಅವರ ಯೂಟ್ಯೂಬ್‌ ಚಾನಲ್‌ನ ಒಂದು ವಿಡಿಯೋ ‘ಹಿಂಸಾತ್ಮಕ ಹಾಗೂ ನಿಂದನೀಯ’ವಾಗಿದೆ ಎಂದು ದೂರು ದಾಖಲಿಸಿದ್ದಾರೆ.

ಜುಲೈ 19ರಂದು ಸಾಕೇತ್‌ ಕೋರ್ಟ್‌ನ ಜಿಲ್ಲಾ ನ್ಯಾಯಾಧೀಶರಾದ ಗುಂಜನ್‌ ಗುಪ್ತಾ ಅವರು ಸಮನ್ಸ್ ನೀಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸುರೇಶ್ ಕರ್ಮಿಶಿ ನಕುವಾ ಅವರ ಪ್ರಕರಣಕ್ಕೆ ಸಂಬಂಧಿಸಿದಂತೆ ಆಗಸ್ಟ್‌ 6 ರಂದು ನಡೆಯಲಿರುವ ನ್ಯಾಯಾಲಯದ ವಿಚಾರಣೆಯಲ್ಲಿ ಹಾಜರಾಗಬೇಕೆಂದು ಧ್ರುವ್‌ ರಾಠಿ ಅವರಿಗೆ ನೋಟಿಸ್‌ನಲ್ಲಿ ತಿಳಿಸಲಾಗಿದೆ.

ಈ ಸುದ್ದಿ ಓದಿದ್ದೀರಾ? ಪತ್ನಿ ಪಾಕಿಸ್ತಾನಿ, ದಾವೂದ್ ಬಂಗಲೆಯಲ್ಲಿ ವಾಸ ಎಂಬ ಆರೋಪಕ್ಕೆ ಧ್ರುವ್ ರಾಠಿ ತಕ್ಕ ಉತ್ತರ

ರಾಠಿ ಅವರು ತಮ್ಮ ವಿಡಿಯೋದಲ್ಲಿ ಸುಳ್ಳು ಹಾಗೂ ಆಧಾರರಹಿತ ಆರೋಪಗಳನ್ನು ಮಾಡಿದ್ದಾರೆ. ಇವರ ವಿಡಿಯೋಗಳು ಹಿಂಸಾತ್ಮಕ ಹಾಗೂ ನಿಂದನೀಯ ಟ್ರೋಲ್‌ಗಳಾಗಿವೆ ಎಂದು ನಕುವಾ ಆರೋಪಿಸಿದ್ದಾರೆ.

ರಾಠಿ ಮಾಡಿರುವ ಆರೋಪದ ವಿಡಿಯೋದಲ್ಲಿ ಯಾವುದೇ ಸ್ಪಷ್ಟ ಉದ್ದೇಶವಿಲ್ಲ.ತಮ್ಮ ಘನತೆಯನ್ನು ಹಾಳು ಮಾಡುವ ಉದ್ದೇಶ ಮಾತ್ರ ಹೊಂದಿದೆ ಎಂದು ನಕುವಾ ತಿಳಿಸಿದ್ದಾರೆ.

ತಮ್ಮ ವಿರುದ್ಧ ಮಾಡಲಾದ ವಿಡಿಯೋ ಕುತಂತ್ರದಿಂದ ದೂಷಿಸಿ ರಚಿಸಲಾದ ವಿಡಿಯೋವಾಗಿದೆ. ತಮ್ಮ ಘನತೆಯನ್ನು ಉದ್ದೇಶಪೂರ್ವಕವಾಗಿ ಹಾಳು ಮಾಡುವ ಸ್ಪಷ್ಟ ಉದ್ದೇಶವನ್ನು ಹೊಂದಿದೆ. ವಿಡಿಯೋ ಸೃಷ್ಟಿಸಿರುವವರು ಸಮಾಜದಲ್ಲಿ ತಾವು ಸಂಪಾದಿಸಿರುವ ಗೌರವವನ್ನು ಹಾಳು ಮಾಡುವುದಾಗಿದೆ. ಇದು ತಮ್ಮ ವೈಯುಕ್ತಿಕ ಹಾಗೂ ವೃತ್ತಿ ಬದುಕಿನ ಜೀವನದ ಮೇಲೆ ದೂರಗಾಮಿ ಹಾಗೂ ಗಂಭೀರ ಪರಿಣಾಮಗಳನ್ನು ಉಂಟುಮಾಡಲಿದೆ ಎಂದು ನಕುವಾ ಆರೋಪಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...