₹2,000 ಬೆಲೆಯ ನೋಟನ್ನೇ ನೀಡುತ್ತಿರುವ ಗ್ರಾಹಕರು: ಝೊಮ್ಯಾಟೋಗೆ ಹೊಸ ತಲೆಬಿಸಿ!

Date:

  • ಟ್ವೀಟ್ ಮಾಡಿ ಮಾಹಿತಿ ಹಂಚಿಕೊಂಡಿರುವ ಫುಡ್ ಡೆಲಿವರಿ ಸಂಸ್ಥೆ ಝೊಮ್ಯಾಟೊ
  • ಚಲಾವಣೆಗೆ ಬಂದ ಕೇವಲ ಎರಡೇ ವರ್ಷಗಳಲ್ಲಿ ನೋಟು ಹಿಂಪಡೆಯಲು ಆರ್‌ಬಿಐ ನಿರ್ಧಾರ

ಭಾರತೀಯ ರಿಸರ್ವ್ ಬ್ಯಾಂಕ್ ₹2,000 ರೂ. ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯಲು ನಿರ್ಧರಿಸಿದ ಬಳಿಕ, ಝೊಮ್ಯಾಟೋಗೆ ಹೊಸ ತಲೆಬಿಸಿ ಶುರುವಾಗಿದೆ.

‘ಕ್ಯಾಶ್‌ ಆನ್‌ ಡೆಲಿವರಿ’ ಆಯ್ಕೆ ಮಾಡುವ ಗ್ರಾಹಕರು, ಡೆಲಿವರಿಯ ವೇಳೆ ಗ್ರಾಹಕರು ₹2,000 ಮುಖಬೆಲೆಯ ನೋಟುಗಳನ್ನೇ ನೀಡುತ್ತಿರುವುದಾಗಿ ದೇಶದ ಫುಡ್ ಡೆಲಿವರಿ ಸಂಸ್ಥೆಯಾಗಿರುವ ಝೊಮ್ಯಾಟೊ ಮಾಹಿತಿ ಹಂಚಿಕೊಂಡಿದೆ.

ಈ ಬಗ್ಗೆ ಸೋಮವಾರ ಟ್ವೀಟ್ ಮಾಡಿರುವ ಕಂಪನಿ, “ಕಳೆದ ಶುಕ್ರವಾರದಿಂದ ‘ಕ್ಯಾಶ್‌ ಆನ್‌ ಡೆಲಿವರಿ’ ಆಯ್ಕೆ ಮಾಡುವ ಗ್ರಾಹಕರು, ಡೆಲಿವರಿಯ ವೇಳೆ ಶೇಕಡಾ 72%ರಷ್ಟು ಗ್ರಾಹಕರು ₹2,000 ಮುಖಬೆಲೆಯ ನೋಟುಗಳನ್ನೇ ನೀಡುತ್ತಿರುವುದಾಗಿ ಹೇಳಿಕೊಂಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

₹2,000 ಮುಖಬೆಲೆಯ ನೋಟುಗಳನ್ನು ಚಲಾವಣೆಯಿಂದ ಹಿಂಪಡೆಯುವುದಾಗಿ ಭಾರತೀಯ ರಿಸರ್ವ್‌ ಬ್ಯಾಂಕ್‌ (ಆರ್‌ಬಿಐ) ಶುಕ್ರವಾರ ಘೋಷಿಸಿತ್ತು. ಆ ಬಳಿಕ ಈ ರೀತಿಯ ಬೆಳವಣಿಗೆಯಾಗಿದೆ.

₹2,000 ಮುಖಬೆಲೆಯ ನೋಟುಗಳನ್ನು ಸಾರ್ವಜನಿಕರು ನೋಟುಗಳನ್ನು ಬ್ಯಾಂಕ್‌ಗಳಲ್ಲಿ ಠೇವಣಿ ಇಡಬಹುದು ಅಥವಾ ವಿನಿಮಯ ಮಾಡಿಕೊಳ್ಳಬಹುದು ಎಂದು ಆರ್‌ಬಿಐ ಇತ್ತೀಚೆಗೆ ಹೊರಡಿಸಿದ್ದ ಪ್ರಕಟಣೆಯಲ್ಲಿ ದೇಶದ ನಾಗರಿಕರಿಗೆ ತಿಳಿಸಿತ್ತು.

ಆರ್‌ಬಿಐನ ನಿರ್ಧಾರದಿಂದಾಗಿ ಗ್ರಾಹಕರು ಆನ್‌ಲೈನ್ ಪೇಮೆಂಟ್ ಬದಲಾಗಿ ಹೆಚ್ಚಾಗಿ, ‘ಕ್ಯಾಶ್‌ ಆನ್‌ ಡೆಲಿವರಿ’ಯನ್ನೇ ಆಯ್ಕೆ ಮಾಡಿಕೊಳ್ಳುತ್ತಿದ್ದಾರೆ. ಹಣ ನೀಡುವ ವೇಳೆ ತಮ್ಮಲ್ಲಿರುವ ₹2 ಸಾವಿರದ ನೋಟುಗಳನ್ನೇ ನೀಡುತ್ತಿದ್ದಾರೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ತೃತೀಯ ರಂಗಕ್ಕೆ ಶಕ್ತಿ ತುಂಬಲಿದೆಯೇ ಕರ್ನಾಟಕದ ಗೆಲುವು?

ಸೋಮವಾರ ಆರ್‌ಬಿಐ ಗವರ್ನರ್ ಶಕ್ತಿಕಾಂತ ದಾಸ್ ಅವರು ₹2,000 ನೋಟುಗಳಲ್ಲಿ ಹೆಚ್ಚಿನವು ಸೆಪ್ಟೆಂಬರ್ 30 ರ ಗಡುವಿನೊಳಗೆ ಹಿಂತಿರುಗುವ ನಿರೀಕ್ಷೆಯಿದೆ ಎಂದು ಹೇಳಿದರು. ತಕ್ಷಣವೇ ಜಾರಿಗೆ ಬರುವಂತೆ ₹ 2000 ಮುಖಬೆಲೆಯ ನೋಟುಗಳನ್ನು ನೀಡುವುದನ್ನು ನಿಲ್ಲಿಸುವಂತೆ ಬ್ಯಾಂಕ್‌ಗಳಿಗೆ ಸಲಹೆ ನೀಡಿದೆ .

ನವೆಂಬರ್ 2016 ರಲ್ಲಿ ಆರ್‌ಬಿಐ ಕಾಯಿದೆ, 1934 ರ ಸೆಕ್ಷನ್ 24 (1) ರ ಅಡಿಯಲ್ಲಿ ಹಳೆಯ ₹500 ಮತ್ತು ₹1000 ನೋಟುಗಳನ್ನು ಅಮಾನ್ಯಗೊಳಿಸಿತ್ತು. ಆ ಬಳಿಕ ಕೇಂದ್ರ ಸರ್ಕಾರವು ಹೊಸ ₹2000 ನೋಟನ್ನು ಪರಿಚಯಿಸಿತ್ತು. 2018-19ನೇ ಸಾಲಿನಲ್ಲಿ ₹2000 ನೋಟುಗಳ ಮುದ್ರಣವನ್ನು ಕೇಂದ್ರವು ಸ್ಥಗಿತಗೊಳಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...