ಮೇಲ್ಜಾತಿಗಳ ವಿರುದ್ಧ ಪ್ರತಿರೋಧದ ಚಳವಳಿ ಕಟ್ಟಿದ್ದ ದಲಿತ ಹೋರಾಟಗಾರ ಅಯ್ಯನ್ ಕಾಳಿ

Date:

ದಲಿತ ಹೋರಾಟಗಾರ, ಮಹಾತ್ಮ ಅಯ್ಯನ್ ಕಾಳಿ(1863-1941) ಹುಟ್ಟಿ ಇಂದಿಗೆ 160 ವರ್ಷಗಳಾದವು.

ಊರಿನ ಮುಖ್ಯ ರಸ್ತೆಗಳಲ್ಲಿ ಅಸ್ಪೃಶ್ಯರು ಓಡಾಡುವುದು, ದಲಿತ ಹೆಣ್ಣು ಮಕ್ಕಳು ಮೈತುಂಬ ಬಟ್ಟೆ ತೊಡುವುದು, ದುಡಿಯುವ ಜನ ತಮ್ಮ ದುಡಿಮೆಗೆ ತಕ್ಕ‌ ಪ್ರತಿಫಲವನ್ನು ಕೇಳುವುದು ನಿಷಿದ್ಧವಾಗಿದ್ದ ಕಾಲದಲ್ಲಿ ಇಂತಹ ಅನ್ಯಾಯಗಳ ವಿರುದ್ಧ ಸಿಡಿದು ನಿಂತು, ಮೇಲ್ಜಾತಿಗಳ ವಿರುದ್ಧ ಪ್ರತಿರೋಧದ ಚಳವಳಿಯನ್ನು ಕಟ್ಟಿದವರು ಅಯ್ಯನ್ ಕಾಳಿ.

ಅಸ್ಪೃಶ್ಯರ ಹಕ್ಕುಗಳಿಗಾಗಿ ಬೀದಿಯಲ್ಲಿ ನಿಂತು ಬಡಿದಾಡಿದ ಈ ವೀರ, ದೇಶದಲ್ಲಿ ಕಮ್ಯುನಿಸ್ಟ್ ಚಳವಳಿ ಹುಟ್ಟುವುದಕ್ಕು ಎಷ್ಟೋ ವರ್ಷ ಮೊದಲೇ ಅಸ್ಪೃಶ್ಯರು ಸೇರಿದಂತೆ ಎಲ್ಲ ದುಡಿಯುವ ತಳ ಸಮುದಾಯಗಳನ್ನು ಒಗ್ಗೂಡಿಸಿ ವರ್ಣ ವ್ಯವಸ್ಥೆಯ ವಿರುದ್ಧ ವರ್ಗ ಹೋರಾಟವನ್ನು ರೂಪಿಸಿದ್ದ ಕ್ರಾಂತಿಕಾರಿ.‌

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಅಸ್ಪೃಶ್ಯರ ಹಕ್ಕುಗಳ ಹೋರಾಟಕ್ಕಾಗಿ 1907ರಲ್ಲಿಯೇ ‘ಸಾಧುಜನ ಪರಿಪಾಲನ ಸಂಘ’ ಸ್ಥಾಪಿಸಿ ಕೇರಳ ಮತ್ತು ತಮಿಳುನಾಡಿನಲ್ಲಿ ಇವರು ರೂಪಿಸಿದ್ದ ಹೋರಾಟಗಳು ಚಾರಿತ್ರಿಕವಾದವುಗಳು.

ಅಸ್ಪೃಶ್ಯರಿಗೆ ನಿಷೇಧಿಸಲ್ಪಟ್ಟಿದ್ದ ರಸ್ತೆಗಳಲ್ಲಿ ಧೈರ್ಯದಿಂದ ಎತ್ತಿನ ಗಾಡಿಯನ್ನು ಓಡಿಸಿ ಈ ನೆಲದಲ್ಲಿ ಘನತೆಯಿಂದ ಬದುಕುವುದು ನನ್ನ ಹಕ್ಕು ಎಂದು ಎದೆಯುಬ್ಬಿಸಿ ಸಾರಿದ ಧೀರ.

ಚರಿತ್ರೆಯಲ್ಲಿ ಮೇಲ್ಜಾತಿಯ ಸಮಾಜ ಸುಧಾರಕರ ಬಗ್ಗೆ ಸಾವಿರಾರು ಪುಟಗಳನ್ನು ಮೀಸಲಿಟ್ಟಿರುವ ಈ ದೇಶ ಅಯ್ಯನ್ ಕಾಳಿಯಂತಹ ನಾಯಕನನ್ನು ತುಂಬಾ ವರ್ಷಗಳ ಕಾಲ ವಿಸ್ಮೃತಿಗೆ ಸರಿಸಿತ್ತು.

ನಮ್ಮ ಚರಿತ್ರೆಯನ್ನು ನಾವೇ ಬರೆದುಕೊಳ್ಳಬೇಕಾದ ಈ ಕಾಲದಲ್ಲಿ ಈ ಧೀಮಂತ ಕ್ರಾಂತಿಕಾರಿಯನ್ನು ಗೌರವದಿಂದ ನೆನೆಯೋಣ‌.

?s=150&d=mp&r=g
ವಿ ಎಲ್ ನರಸಿಂಹಮೂರ್ತಿ
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...