ಬಕ್ರೀದ್ ಹಬ್ಬ | ಹಜ್ಜ್‌ಗೆ ತೆರಳುವ ಮುಸಲ್ಮಾನ ‘ಹಾಜಿ’ಯಾಗುತ್ತಾನೆ; ಹಾಜಿ ಹೇಗಿರಬೇಕು?

Date:

ಜೂನ್ 17ರ ಸೋಮವಾರ ಮುಸ್ಲಿಮರ ಪವಿತ್ರ ಹಬ್ಬಗಳಲ್ಲಿ ಒಂದಾದ ಈದುಲ್ ಅಝ್‌ಹಾ ಆಚರಣೆ ನಡೆಯಲಿದೆ. ಸಾಮಾನ್ಯ ಭಾಷೆಯಲ್ಲಿ ಹೇಳುವುದಾದರೆ ಬಕ್ರೀದ್. ಬಕ್ರೀದ್ ಸಂದರ್ಭದಲ್ಲಿ ಮುಸ್ಲಿಮರ ಕಡ್ಡಾಯ ಕರ್ಮಗಳಲ್ಲಿ ಒಂದಾಗಿರುವ ಹಜ್ಜ್‌ ಯಾತ್ರೆ(ಮೆಕ್ಕಾ ತೀರ್ಥಯಾತ್ರೆ) ಕೂಡ ನಡೆಯುವುದಿದೆ. ಇದಕ್ಕೆ ತೆರಳುವವರನ್ನು ‘ಹಾಜಿ’ಗಳು ಎನ್ನುತ್ತಾರೆ. ಈ ಹಾಜಿಗಳ ಬಗ್ಗೆ ಪತ್ರಕರ್ತರಾದ ಏ ಕೆ ಕುಕ್ಕಿಲ ಬರೆದಿದ್ದಾರೆ.

ಹಾಜಿ ಯಾರು? ಈ ಪ್ರಶ್ನೆಗೆ ಉತ್ತರ ಸುಲಭ ಇದೆ. ಯಾರು ಹಜ್ಜ್ ನಿರ್ವಹಣೆಗಾಗಿ ಮಕ್ಕಾದಲ್ಲಿ ಸೇರುತ್ತಾರೋ ಅವರೇ ಹಾಜಿಗಳು. ಆದರೆ, ಹಾಜಿ ಎಂದರೆ ಇಷ್ಟು ಮಾತ್ರವೇ? ಹೀಗೆ ಒಂದು ವಾಕ್ಯದಲ್ಲಿ ಹೇಳಿ ಮುಗಿಸಬಹುದಾದ ಒಂದು ಪರಿಕಲ್ಪನೆಯೇ ಹಾಜಿ? ಓರ್ವ ವ್ಯಕ್ತಿ ಇರುವುದೆಲ್ಲವನ್ನೂ ಬಿಟ್ಟು ಯಾಕೆ ಹಜ್ಜ್‌ಗೆ ಯಾಕೆ ಹೋಗಬೇಕು?

ಭಾರತದಿಂದ ಮಕ್ಕಾಕ್ಕೆ ಬಹಳ ದೂರವೇನೂ ಇಲ್ಲ. ವಿಮಾನದಲ್ಲಿ ಕುಳಿತು ಒಂದು ಪುಟ್ಟ ನಿದ್ರೆ ಮಾಡಿ ಎಚ್ಚರಗೊಳ್ಳುವಷ್ಟೇ ದೂರ. ಆದರೆ ಈ ಸಣ್ಣ ಪ್ರಯಾಣಕ್ಕೆ ಓರ್ವ ಹಾಜಿ ಮಾಡಿಕೊಳ್ಳುವ ತಯಾರಿಗಳು ಏನೇನು? ವರ್ಷಗಳ ಮೊದಲೇ ಇಂಥದ್ದೊಂದು ಪ್ರಯಾಣದ ಕನಸು ಕಾಣುತ್ತಾರೆ. ಅರ್ಜಿ ಹಾಕುವ ಪ್ರಕ್ರಿಯೆಯೂ ಆರಂಭಗೊಳ್ಳುತ್ತದೆ. ಒಮ್ಮೆ ಅರ್ಜಿ ಸ್ವೀಕೃತವಾಗಿ ಹಜ್ಜ್ ನಿರ್ವಹಿಸುವವರ ಪಟ್ಟಿಯಲ್ಲಿ ತನ್ನ ಹೆಸರೂ ಬರಲಿ ಎಂದು ಆಶೆಯಿಂದ ಕಾಯುತ್ತಾರೆ. ಒಮ್ಮೆ ಹೆಸರು ಪಟ್ಟಿಯಲ್ಲಿ ಕಾಣಿಸಿಕೊಂಡಿತೆಂದರೆ ಅತೀವ ಖುಷಿ ಪಡುತ್ತಾರೆ. ಆಗಿನಿಂದಲೇ ಅವರ ಮಕ್ಕಾ ಯಾತ್ರೆ ಮಾನಸಿಕವಾಗಿ ಆರಂಭಗೊಳ್ಳುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಾನು ಯಾರೊಂದಿಗೆಲ್ಲ ಒರಟಾಗಿ ನಡಕೊಂಡಿದ್ದೇನೆ, ಯಾರಲ್ಲಿ ಸಾಲ ಮಾಡಿದ್ದೇನೆ, ಯಾರ ಮನಸ್ಸನ್ನು ನೋಯಿಸಿದ್ದೇನೆ…ಎಂದೆಲ್ಲಾ ಅವಲೋಕನ ನಡೆಯತೊಡಗುತ್ತದೆ. ಅಂಥವರನ್ನು ಖುದ್ದಾಗಿ ಕಂಡೋ ಇತರ ಸೌಲಭ್ಯಗಳ ಮೂಲಕವೋ ಸಂಪರ್ಕಿಸಿ, ಕ್ಷಮಿಸುವಂತೆ ಮನವಿ ಮಾಡಿಕೊಳ್ಳುತ್ತಾರೆ.

ಹಜ್ಜ್‌ಗಾಗಿ ತೆರಳುವ ದಿನಾಂಕ ಹತ್ತಿರ ಬರುತ್ತಿರುವಂತೆಯೇ ಮನಸ್ಸು ಭಾರವಾಗತೊಡಗುತ್ತದೆ. ಸಾಲದಿಂದ ಮುಕ್ತವಾಗುವುದು ಮತ್ತು ತನ್ನ ಅನುಪಸ್ಥಿತಿಯಲ್ಲಿ ಮನೆ ನಿರ್ವಹಣೆಗಾಗಿ ಬೇಕಾದ ಏರ್ಪಾಡು ಮಾಡುವುದೂ ನಡೆಯುತ್ತದೆ. ಹಜ್ಜ್ ತರಬೇತಿ ಕಾರ್ಯಾಗಾರಗಳಲ್ಲಿ ಭಾಗವಹಿಸುತ್ತಾರೆ. ಆ ಮೂಲಕ ತನ್ನ ಈ ಇಡೀ ಪ್ರಕ್ರಿಯೆಯಲ್ಲಿ ಸಣ್ಣ ದೋಷವೂ ಉಂಟಾಗಬಾರದೆಂಬ ಎಚ್ಚರಿಕೆ ವಹಿಸತೊಡಗುತ್ತಾರೆ. ಇವೆಲ್ಲ ಹಜ್ಜ್‌ಗೆ ತೆರಳುವುದಕ್ಕಿಂತ ಮೊದಲಿನ ಸಿದ್ಧತೆಗಳಾದರೆ, ತೆರಳಿದ ಬಳಿಕವಂತೂ ವ್ಯಕ್ತಿ ಸಂಪೂರ್ಣ ಬದಲಾಗುತ್ತಾರೆ. ಎಲ್ಲಿಯವರೆಗೆಂದರೆ, ತಾನು ಆವರೆಗೆ ಇಷ್ಟಪಟ್ಟು ಧರಿಸುತ್ತಿದ್ದ ಬಟ್ಟೆಗಳಿಂದಲೇ ಮುಕ್ತವಾಗುವಷ್ಟು.

HAJI 4

ಹೊಲಿಗೆ ಇಲ್ಲದ ಎರಡು ತುಂಡು ಬಿಳಿ ಬಟ್ಟೆಯ ಹೊರತು ಪುರುಷನ ಮೈಮೇಲೆ ಇನ್ನಾವುದೂ ಇರುವುದಿಲ್ಲ. ಒಂದು ರೀತಿಯಲ್ಲಿ, ಐಡೆಂಟಿಟಿ ಇಲ್ಲದ ವ್ಯಕ್ತಿ. ಎರಡು ತುಂಡು ಬಟ್ಟೆ ಧರಿಸಿದ ಲಕ್ಷಾಂತರ ಜನರ ನಡುವೆ ಆತ ಒಂದು ಬಿಂದು ಮಾತ್ರ. ಸೌದಿಯ ರಾಜಕುಮಾರನಾದರೂ, ಇರಾನಿನ ಖೊಮೇನಿ ಆದರೂ ಅಥವಾ ದೆಹಲಿ ಶಾಹಿ ಇಮಾಮೇ ಆದರೂ ಎಲ್ಲರೂ ಒಂದು ಬಿಂದು ಮಾತ್ರ.

ನಿಜವಾಗಿ, ಹಜ್ಜ್ ನಿರ್ವಹಣೆಗಾಗಿ ಭಾರತದಿಂದ ಮಕ್ಕಾಕ್ಕೆ ತೆರಳುವ ವ್ಯಕ್ತಿ ಈ ಪ್ರಯಾಣಕ್ಕಿಂತ ಮೊದಲು ಇದಕ್ಕಿಂತ ಸಾವಿರ ಕಿಲೋಮೀಟರ್ ದೂರದ ರಾಷ್ಟ್ರಕ್ಕೆ ಪ್ರಯಾಣಿಸಿರಬಹುದು. ಆದರೆ, ಮಕ್ಕಾ ಪ್ರಯಾಣಕ್ಕಾಗಿ ಮಾಡಿದ ಸಿದ್ಧತೆಯ ಒಂದು ಶೇಕಡಾ ಸಿದ್ಧತೆಯನ್ನೂ ಅದಕ್ಕೆ ಮಾಡಿರುವುದು ಕಡಿಮೆ. ಆದ್ದರಿಂದಲೇ, ಹಾಜಿ ಯಾರು ಅನ್ನುವ ಪ್ರಶ್ನೆ ಮುಖ್ಯವಾಗುತ್ತದೆ.

ಹಾಜಿ ಎಂಬುದು ಒಂದು ವಾಕ್ಯದಲ್ಲಿ ಮುಗಿಸುವ ವಿಷಯವಲ್ಲ. ಅದೊಂದು ಮಾದರಿ ಅಥವಾ ಮಾಡೆಲ್. ಹಜ್ಜ್ ನಿರ್ವಹಿಸುವ ವ್ಯಕ್ತಿಯ ಎಲ್ಲ ಪಾಪಗಳನ್ನೂ ಅಲ್ಲಾಹನು ಕ್ಷಮಿಸುತ್ತಾನೆ ಮತ್ತು ಆಗಷ್ಟೇ ಭೂಮಿಗೆ ಬಂದ ಶಿಶುವಿನಿಷ್ಟೇ ಅವರು ಶುಭ್ರವಾಗಿರುತ್ತಾರೆ ಎಂದು ಪ್ರವಾದಿ ಮುಹಮ್ಮದ್ ಅವರು ಹೇಳಿದ್ದಾರೆ. ಆದ್ದರಿಂದ ಹಜ್ಜ್ ನಿರ್ವಹಣೆಗಾಗಿ ತೆರಳುವ ಹಾಜಿ ಮತ್ತು ಹಜ್ಜ್ ನಿರ್ವಹಿಸಿ ಮರಳುವ ಹಾಜಿ- ಇಬ್ಬರೂ ಒಂದೇ ಅಲ್ಲ.

HAJI 2

ತೆರಳುವ ಹಾಜಿ ತನ್ನ ಐಡೆಂಟಿಟಿಯಿಂದ ಕಳಚಿಕೊಂಡಿರುವುದಿಲ್ಲ. ಆದರೆ, ಮರಳುವ ಹಾಜಿಗೆ ಐಡೆಂಟಿಟಿಯನ್ನೇ ಕಳಚಿಕೊಂಡ ಮತ್ತು ಆ ಕ್ಷಣದ ರೋಮಾಂಚನ, ಭಾವುಕತೆ, ಒಂಟಿತನ ಮತ್ತು ಆಧ್ಯಾತ್ಮಿಕತೆಯ ಪರಾಕಾಷ್ಟೆಯ ಅನುಭವವಾಗಿರುತ್ತದೆ. ಅಲ್ಲದೇ, ಹೀಗೆ ತೆರಳುವುದು ಒಂದು ಬಾರಿ ಮಾತ್ರ ಕಡ್ಡಾಯ ಎಂಬುದೂ ಬಹಳ ಮುಖ್ಯ.

ಹಾಗಂತ, ಹಜ್ಜ್‌ನಿಂದ ಮರಳಿದ ಬಳಿಕವೂ ಮತ್ತೊಂದು ಹಜ್ಜ್ ನಿರ್ವಹಿಸುವುದಕ್ಕೆ ಬೇಕಾಗುವಷ್ಟು ಅವರಲ್ಲಿ ಹಣ ಇರಬಹುದು, ಆರೋಗ್ಯವೂ ಇರಬಹುದು. ಆದರೂ ಮತ್ತೊಂದು ಬಾರಿ ಹೋಗಿ ವಿನೀತವಾಗುವುದು ಅವರ ಮೇಲೆ ಕಡ್ಡಾಯವಲ್ಲ. ಅಂದರೆ, ಹಾಜಿಯ ಚಟುವಟಿಕೆಯ ಕೇಂದ್ರ ಮಕ್ಕಾ ಅಲ್ಲ ಎಂದೇ ಇದರರ್ಥ.

HAJI 3

ಹಜ್ಜ್ ನಿರ್ವಹಿಸಿ ಸಕಲ ಆಧ್ಯಾತ್ಮಿಕ ಚೈತನ್ಯವನ್ನೂ ಪಡೆದು ಮರಳಿದ ಬಳಿಕ ಹಾಜಿ ತಾನಿರುವ ಪ್ರದೇಶವನ್ನು ಮಕ್ಕಾ ಮಾಡಬೇಕು ಅಥವಾ ಶಾಂತಿಯ ಕೇಂದ್ರ ಮಾಡಬೇಕು. ಲಕ್ಷಾಂತರ ಹೆಣ್ಣು ಮತ್ತು ಗಂಡು ಒಂದೇ ಕಡೆ ಸೇರಿಯೂ ಯಾವ ಕೆಡುಕೂ ನಡೆಯದ, ಕಳ್ಳತನ, ಮೋಸ, ಅನ್ಯಾಯ, ಹತ್ಯೆಗಳಂತಹ ಸರ್ವ ಕೆಡುಕುಗಳಿಂದಲೂ ಮುಕ್ತವಾದ ಆ ಮಕ್ಕಾದ ವಾತಾವರಣವನ್ನು ತನ್ನೂರಲ್ಲೂ ‘ಹಾಜಿ’ ಸಾಧ್ಯವಾಗಿಸಬೇಕು. ಅದಕ್ಕಾಗಿ ಮುಂದಿನ ಜೀವನದಲ್ಲಿ ಸರ್ವಸಾಧ್ಯ ಪ್ರಯತ್ನ ನಡೆಸಬೇಕು. ಇವರೇ ಹಾಜಿ.

(ಲೇಖಕರು ಸನ್ಮಾರ್ಗ ವಾರಪತ್ರಿಕೆಯ ಸಂಪಾದಕರು)

 

kukkila
ಏ ಕೆ ಕುಕ್ಕಿಲ
+ posts

ಪತ್ರಕರ್ತ

ಪೋಸ್ಟ್ ಹಂಚಿಕೊಳ್ಳಿ:

ಏ ಕೆ ಕುಕ್ಕಿಲ
ಏ ಕೆ ಕುಕ್ಕಿಲ
ಪತ್ರಕರ್ತ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...