ಔರಂಗಜೇಬ ನೆಪ ಮಾತ್ರ ; ಈದ್ ಮಿಲಾದ್‌ಗೆ ಟಾರ್ಗೆಟ್‌ಗೆಂದೇ ಈ ದ್ವಾರ ಹಾಕಲಾಗಿತ್ತಾ? ಇಲ್ಲಿದೆ ವಿವರ

Date:

ಶಿವಮೊಗ್ಗ ಬಸ್ ನಿಲ್ದಾಣದ ಎದುರು ʼಜ್ಞಾನವ್ಯಾಪಿ ಶಿವನ ಮಹಾದ್ವಾರʼವನ್ನು ನಿರ್ಮಿಸಲಾಗಿದೆ. ಜ್ಞಾನವ್ಯಾಪಿ ಶಿವಲಿಂಗ ವಿವಾದ ಆಗಿರುವುದು ಉತ್ತರ ಪ್ರದೇಶದಲ್ಲಿ..! ಅದಕ್ಕೂ ಶಿವಮೊಗ್ಗಕ್ಕೂ ಏನು ಸಂಬಂಧ? ಜ್ಞಾನವ್ಯಾಪಿ ಮಸೀದಿಯನ್ನು ಗಣೇಶೋತ್ಸವ ಮೆರವಣಿಗೆಯಲ್ಲಿ ಯಾಕೆ ನೆನಪಿಸಬೇಕಿತ್ತು?

ಈದ್ ಮಿಲಾದ್‌ಗೂ ಔರಂಗಜೇಬನಿಗೂ ಏನು ಸಂಬಂಧ ? ಮುಸ್ಲಿಂ ಕೋಮುವಾದಿಗಳು ಯಾಕೆ ಇಂತಹ ಕಿಡಿಗೇಡಿತನ ಮಾಡಬೇಕಿತ್ತು? ಎಂದು ಬಲಪಂಥೀಯರು, ಎಡಪಂಥೀಯರು ಸೇರಿದಂತೆ ಇಡೀ ಸಮಾಜ ಪ್ರಶ್ನಿಸಿದ್ದಾಯ್ತು. ಇದೀಗ ಔರಂಗಜೇಬನಿಗೂ ಮೊದಲು ಶಿವಮೊಗ್ಗ ಈದ್ ಮಿಲಾದ್ ಹಾಳು ಮಾಡಲೆಂದೇ ಯಾರ್ಯಾರು ಬಂದಿದ್ದರು ಎಂಬ ಸತ್ಯಶೋಧನಾ ವರದಿಯೊಂದು ಬೇಕಾಗಿದೆ. ಪರ-ವಿರೋಧದ ಚರ್ಚೆಯನ್ನು ಬದಿಗಿಟ್ಟು ಪೊಲೀಸರು ಈ ನಿಟ್ಟಿನಲ್ಲೂ ತನಿಖೆ ಮಾಡಬೇಕಿದೆ.

ಈದ್ ಮಿಲಾದ್ ಗೂ ಮುನ್ನ ನಡೆದ ಶಿವಮೊಗ್ಗ ಗಣೇಶೋತ್ಸವಕ್ಕೂ ಶ್ರೀರಾಮನಿಗೂ ಏನು ಸಂಬಂಧ ? ಗಣೇಶ ಮೆರವಣಿಗೆಗೆಂದು ತೀರ್ಥಹಳ್ಳಿ ರಸ್ತೆಯಲ್ಲಿ ದೊಡ್ಡದಾದ ದ್ವಾರವೊಂದನ್ನು ನಿರ್ಮಿಸಲಾಗುತ್ತದೆ. ದ್ವಾರದ ಮಧ್ಯಭಾಗದಲ್ಲಿ ಶ್ರೀರಾಮ ಬಿಲ್ಲನ್ನು ಹಿಡಿದು ನಿಂತಿದ್ದಾನೆ. ಶ್ರೀರಾಮನ ಬಿಲ್ಲು ಮುಸ್ಲೀಮರೇ ಅತ್ಯಧಿಕವಾಗಿರುವ ಇಲ್ಯಾಸ್ ನಗರ ಎಂಬ ಊರನ್ನು ಗುರಿಯಾಗಿರಿಸಿದೆ. ಇದು ಯಾವ ಉದ್ದೇಶದಿಂದ ಮಾಡಲಾಗಿದೆ ? ಗಣೇಶೋತ್ಸವ ಮುಗಿದು ಈದ್ ಮಿಲಾದ್ ಮೆರವಣಿಗೆ ಮುಗಿದರೂ ಇನ್ನೂ ಆ ದ್ವಾರ ರಸ್ತೆಯಲ್ಲಿದೆ ಯಾಕೆ ?

ಶಿವಮೊಗ್ಗ ಬಸ್ ನಿಲ್ದಾಣದ ಎದುರು ಜ್ಞಾನವ್ಯಾಪಿ ಶಿವನ ಮಹಾದ್ವಾರವನ್ನು ನಿರ್ಮಿಸಲಾಗಿದೆ. ಜ್ಞಾನವ್ಯಾಪಿ ಶಿವಲಿಂಗ ವಿವಾದ ಆಗಿರುವುದು ಉತ್ತರ ಪ್ರದೇಶದಲ್ಲಿ..! ಅದಕ್ಕೂ ಶಿವಮೊಗ್ಗಕ್ಕೂ ಏನು ಸಂಬಂಧ ? ಜ್ಞಾನವ್ಯಾಪಿ ಮಸೀದಿಯನ್ನು ಗಣೇಶೋತ್ಸವ ಮೆರವಣಿಗೆಯಲ್ಲಿ ಯಾಕೆ ನೆನಪಿಸಬೇಕಿತ್ತು ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...
ಶಿವದ್ವಾರ

ಮುಸ್ಲಿಂ ಸಮುದಾಯ ಕ್ರಿಯೆಗೆ ಪ್ರತಿಕ್ರಿಯೆ ನೀಡಬಾರದು ಎಂಬುದು ನಿಜ. ಆದರೆ ಪ್ರತಿಕ್ರಿಯೆಗಾಗಿಯೇ ಕಾಲು ಕೆರೆಯುವುದು ತಪ್ಪಲ್ಲವೇ? ದ್ವಾರಗಳ ಪೈಪೋಟಿಯನ್ನು ಸೃಷ್ಟಿಸಿದವರ ಮೇಲೆ ಪೊಲೀಸರು ಕ್ರಮ ಕೈಗೊಳ್ಳಬೇಕಿತ್ತಲ್ಲವೇ ? ಗಣೇಶೋತ್ಸವ ಮುಗಿದರೂ, ಈದ್ ಮಿಲಾದ್ ಆರಂಭಗೊಂಡರೂ ಸಂಬಂಧವಿಲ್ಲದ ಈ ದ್ವಾರಗಳನ್ನು ಪೊಲೀಸರೇಕೆ ತೆರವುಗೊಳಿಸಲಿಲ್ಲ ? ಇವೆರಡೇ ದ್ವಾರಗಳಲ್ಲ, ಸಾವರ್ಕರ್ ಸಾಮ್ರಾಜ್ಯ ಸೇರಿದಂತೆ ಹತ್ತಾರು ಬ್ಯಾನರ್ ಗಳನ್ನು ಪೇಟೆಯಾದ್ಯಂತ ಹಾಕಲಾಗಿತ್ತು.

ಗಲಭೆ ಆರಂಭಗೊಂಡ ರಾಗಿಗುಡ್ಡ ಸೌಹಾರ್ದತೆಯ ಊರು. ಇಲ್ಲಿ ಗಣೇಶೋತ್ಸವ ಸೇರಿದಂತೆ ಎಲ್ಲಾ ಹಬ್ಬಗಳಲ್ಲೂ ಸೌಹಾರ್ದತೆ ಇರುತ್ತದೆ. ಆದರೆ ಮಿಲಾದ್ ಗೆ ಬಂಟಿಂಗ್ಸ್ ಹಾಕುವಾಗ ಮಹಿಳೆಯೊಬ್ಬರು ಉದ್ದೇಶಪೂರ್ವಕವಾಗಿ ತಗಾದೆ ತೆಗೆದ ಘಟನೆಯಿಂದ ಘರ್ಷಣೆ ಆರಂಭವಾಯಿತು. ಅದಾಗಲೇ ರಸ್ತೆಗಳಲ್ಲಿ ಗಣೇಶೋತ್ಸವ ಸಂಬಂಧ ಹಾಕಲಾಗಿದ್ದ ಪ್ರಚೋದನಕಾರಿ ದ್ವಾರಗಳಿಂದ ಕೆಲ ಮುಸ್ಲಿಂ ಯುವಕರು ಪ್ರಚೋದನೆಗೆ ಒಳಗಾಗಿರಬಹುದು.

ಇದನ್ನೂ ಓದಿ ಕೇಸರಿ-ಹಸಿರು ಗುಂಪುಗಳು; ಜಾತ್ಯತೀತ ಪರಂಪರೆಯ ನಡುವೆ ಸೀಳು ಮೂಡಿಸುವ ಸಮಾನಾಂತರ ಹಳಿಗಳು

ಗಣೇಶೋತ್ಸವದ ಮೆರವಣಿಗೆಗೆ ಸಂಬಂಧವೇ ಇಲ್ಲದ ಹೆಸರು, ಫೋಟೋಗಳ ಬ್ಯಾನರ್, ದ್ವಾರಗಳನ್ನು ಉದ್ದೇಶ ಪೂರ್ವಕವಾಗಿ ಸಂಘಟಿತವಾಗಿ ಹಾಕಲಾಗಿತ್ತು. ಸಂಘಟಿತ ಕೋಮುವಾದಕ್ಕೆ ಬರುವ ಕಿಡಿಗೇಡಿ ಪ್ರತಿಕ್ರಿಯೆಗೆ ಇಡೀ ಸಮುದಾಯವನ್ನು ಹೊಣೆ ಮಾಡುವುದು ತಪ್ಪಾಗುತ್ತದೆ. ಔರಂಗಜೇಬ್ ಸರಿಯೋ ತಪ್ಪೋ ಎಂಬ ಪ್ರಶ್ನೆಗೆ ಉತ್ತರ ಇದಲ್ಲ. ಆದರೆ, ಕೋಮುಗಲಭೆಗೆ ಮತ್ತು ಪ್ರತಿಕ್ರಿಯೆಗೆ ಕಾರಣವಾದ ಪ್ರಚೋದನೆಯ ಅಂಶಗಳನ್ನು ಹುಡುಕಿ ಬಯಲು ಮಾಡುವುದು ಈಗಿನ ಅಗತ್ಯ.

Naveen suringe
ನವೀನ್‌ ಸೂರಿಂಜೆ
+ posts

ಪತ್ರಕರ್ತ, ಲೇಖಕ

ಪೋಸ್ಟ್ ಹಂಚಿಕೊಳ್ಳಿ:

ನವೀನ್‌ ಸೂರಿಂಜೆ
ನವೀನ್‌ ಸೂರಿಂಜೆ
ಪತ್ರಕರ್ತ, ಲೇಖಕ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...