ಬಜೆಟ್‌ ವಿಶ್ಲೇಷಣೆ | ಒಕ್ಕೂಟ ಆಯವ್ಯಯದಲ್ಲಿ ಶಿಕ್ಷಣದ ಮೂಲಭೂತ ಹಕ್ಕಿನ ಪ್ರಸ್ತಾವನೆಯೇ ಇಲ್ಲ !

Date:

ಬಜೆಟ್‌ನ ಆದ್ಯತೆಯ ಪಟ್ಟಿಯಲ್ಲಿ ಶಿಕ್ಷಣ ಕ್ಷೇತ್ರದ ಪ್ರಸ್ತಾಪವೇ ಇಲ್ಲ. ಬಲಿಷ್ಠ ಶಿಕ್ಷಣ ವ್ಯವಸ್ಥೆಯನ್ನು ಕಟ್ಟಿಕೊಳ್ಳದೆ ಬಲಿಷ್ಠ ಭಾರತ ಹಾಗು ಸರ್ವತೋಮುಖ ಅಭಿವೃದ್ಧಿ ಕಂಡುಕೊಳ್ಳಲು ಹೇಗೆ ಸಾಧ್ಯವೆಂಬುದು ಆಶ್ಚರ್ಯಕರ ಸಂಗತಿ

 

ಮಂಗಳವಾರ ಕೇಂದ್ರದ ಹಣಕಾಸು ಸಚಿವರು ಆಯವ್ಯಯ ಮಂಡಿಸುತ್ತಾ, “ಜನರು ನಮ್ಮ ಸರ್ಕಾರಕ್ಕೆ ದೇಶವನ್ನು ಬಲಿಷ್ಠ ಮತ್ತು ಸರ್ವತೋಮುಖ ಅಭಿವೃದ್ಧಿಯತ್ತ ಕೊಂಡೊಯ್ಯಲು ಒಂದು ಅನನ್ಯ ಅವಕಾಶವನ್ನು ನೀಡಿದ್ದಾರೆ. ಮಧ್ಯಂತರ ಬಜೆಟ್‌ನಲ್ಲಿ ನಾವು ಭರವಸೆ ನೀಡಿದ್ದೇವೆ. ನಮ್ಮ ವಿಕಸಿತ ಭಾರತದಲ್ಲಿ ವಿವರವಾದ ಮಾರ್ಗಸೂಚಿಯನ್ನು ಪ್ರಸ್ತುತಪಡಿಸಿತ್ತಿದ್ದೇವೆ” ಎಂದು ಹೇಳುತ್ತಾ  ಬಜೆಟ್‌ನಲ್ಲಿ 9 ಆದ್ಯತೆಗಳನ್ನು ಪ್ರಸ್ತಾಪಿಸಿದ್ದಾರೆ.

ದುರದೃಷ್ಟವೆಂದರೆ, ಈ ಪಟ್ಟಿಯಲ್ಲಿ ಶಿಕ್ಷಣ ಕ್ಷೇತ್ರದ ಪ್ರಸ್ತಾಪವೇ ಇಲ್ಲ. ಬಲಿಷ್ಠ ಶಿಕ್ಷಣ ವ್ಯವಸ್ಥೆಯನ್ನು ಕಟ್ಟಿಕೊಳ್ಳದೇ ಬಲಿಷ್ಠ ಭಾರತ ಹಾಗು ಸರ್ವತೋಮುಖ ಅಭಿವೃದ್ಧಿ ಕಂಡುಕೊಳ್ಳಲು ಹೇಗೆ ಸಾಧ್ಯವೆಂಬುದು ಆಶ್ಚರ್ಯಕರ ಸಂಗತಿ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

2024-25ನೇ ಆರ್ಥಿಕ ವರ್ಷದ ಆಯವ್ಯಯದ ಗಾತ್ರ 48,20,512 ಕೋಟಿ. ರಾಷ್ಟ್ರೀಯ ಶಿಕ್ಷಣ ನೀತಿಯ ಬಗ್ಗೆ ಬಡಾಯಿ ಕೊಚ್ಚಿಕೊಳ್ಳುವ ಒಕ್ಕೂಟ ಸರ್ಕಾರವು, ರಾಷ್ಟ್ರೀಯ ಮಹತ್ವದ ಮತ್ತು ಸಂವಿಧಾನಬದ್ಧ ಮೂಲಭೂತ ಶಿಕ್ಷಣದ ಹಕ್ಕನ್ನು ರಾಷ್ಟ್ರ ಮಟ್ಟದಲ್ಲಿ ಜಾರಿಗೊಳಿಸಲು ಸಮಗ್ರ ಶಿಕ್ಷಣ ಅಭಿಯಾನದ ಅಡಿಯಲ್ಲಿ ಮೀಸಲಿಟ್ಟಿರುವ ಹಣ ಕೇವಲ 37500 ಕೋಟಿ. ಕಳೆದ ಆಯವ್ಯಯಕ್ಕೆ ಹೋಲಿಸಿದರೆ ಹೆಚ್ಚಾದ ಹಣ ಕೇವಲ 46.53 ಕೋಟಿ. ಶೇಕಡಾವಾರು ಲೆಕ್ಕದಲ್ಲಿ ಒಟ್ಟು ಆಯವ್ಯಯದಲ್ಲಿ ಶಿಕ್ಷಣ ಹಕ್ಕು ಕಾಯಿದೆ ಜಾರಿಗೆ ಸಿಕ್ಕಿರುವ ಹಣ ಕೇವಲ ಶೇಕಡ 0.78. ಕಳೆದ ಆಯವ್ಯಯಕ್ಕಿಂತ ಈ ಆಯವ್ಯಯದಲ್ಲಿ ಹೆಚ್ಚಾದದ್ದು ಶೇಕಡ 0.12.

ಸಮಗ್ರ ಶಿಕ್ಷಾ ಅಭಿಯಾನಕ್ಕೆ ಒಕ್ಕೂಟ ಸರ್ಕಾರ ನೀಡಿರುವ ಹಣಕಾಸನ್ನು ಸೂಕ್ಷ್ಮವಾಗಿ ಗಮನಿಸಿದರೆ, ಈ ಮಹತ್ವದ ಒಕ್ಕೂಟ ಪ್ರಾಯೋಜಿತ ಯೋಜನೆಯನ್ನು ಅನುಷ್ಠಾನಗೊಳಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳು ದೊಡ್ಡ ಮಟ್ಟದ ಆರ್ಥಿಕ ಬಿಕ್ಕಟ್ಟನ್ನು ಎದುರಿಸಬೇಕಾಗುತ್ತದೆ ಎಂಬುದು ಸ್ಪಷ್ಟವಾಗಿದೆ. ಮೇಲೆ ತಿಳಿಸಿದಂತೆ, ಪ್ರಮುಖ ಕಾರ್ಯಕ್ರಮಗಳಲ್ಲಿ ಒಂದಾದ ಸಮಗ್ರ ಶಿಕ್ಷಾ ಅಭಿಯಾನಕ್ಕೆ 2023-24ರ ಬಜೆಟ್ ಅಂದಾಜಿನಲ್ಲಿ 37453.47 ಕೋಟಿಯನ್ನು ನೀಡಲಾಗಿತ್ತು. 2024-25ನೇ ಸಾಲಿನಲ್ಲಿ ಸಮಗ್ರ ಶಿಕ್ಷಾ ಅಭಿಯಾನಕ್ಕೆ 37,500 ಕೋಟಿಯನ್ನು ಒದಗಿಸಲಾಗಿದೆ. ಈ ಮಹತ್ವದ ರಾಷ್ಟ್ರೀಯ ಯೋಜನೆಗೆ ಹೆಚ್ಚಳವಾಗಿದ್ದು ಕೇವಲ 46.57 ಕೋಟಿ!

ಆದರೆ, ಪಿಎಮ್‌ ಸ್ಕೂಲ್ಸ್ ಫಾರ್ ರೈಸಿಂಗ್ ಇಂಡಿಯಾ (PM SHRI) 2050 ಕೋಟಿಯನ್ನು ಹೆಚ್ಚಿಸಲಾಗಿದೆ . ಕುತೂಹಲದ ಅಂಶವೆಂದರೆ, ಪ್ರಧಾನ ಮಂತ್ರಿ ಕೇಂದ್ರಿತ ಒಕ್ಕೂಟ ಯೋಜನೆಗಳಿಗೆ ಒದಗಿಸಿರುವ ಹಣವನ್ನು ದೇಶದ ಎಲ್ಲಾ ಮಕ್ಕಳಿಗೆ ಸಿಗಲೇಬೇಕಾದ ಶಿಕ್ಷಣದ ಮೂಲಭೂತ ಹಕ್ಕನ್ನು ಜಾರಿಗೊಳಿಸುವ ಸಮಗ್ರ ಶಿಕ್ಷಣ ಅಭಿಯಾನಕ್ಕೆ ಒದಗಿಸಿರುವ ಮೊತ್ತಕ್ಕೆ ಹೋಲಿಸಿ ನೋಡಿದರೆ ಅತೀ ಕಡಿಮೆ. ಇದು ನ್ಯಾಯಸಮ್ಮತ ಹಕ್ಕನ್ನು ದುರ್ಬಲಗೊಳಿಸಿ ಕ್ರಮೇಣವಾಗಿ ಸಾಂವಿಧಾನಿಕ ಹಕ್ಕನ್ನು ಕಸಿಯುವ ಸ್ಪಷ್ಟ ಸೂಚನೆಯಾಗಿದೆ. ಮತ್ತೊಂದೆಡೆ, ಪ್ರಧಾನ ಮಂತ್ರಿಯವರ ವೈಯಕ್ತಿಕ ವರ್ಚಸ್ಸನ್ನು ಹೆಚ್ಚಿಸುವ ಯೋಜನೆಗಳು ಬಜೆಟ್‌ನಲ್ಲಿ ಹೆಚ್ಚಿನ ಹೆಚ್ಚಳವನ್ನು ಪಡೆದಿವೆ.

ನಮಗೆ ತಿಳಿದಿರುವಂತೆ, ಭಾರತದಲ್ಲಿ ಶಿಕ್ಷಣ ಸಮವರ್ತಿ ಪಟ್ಟಿಯಲ್ಲಿದ್ದು ಕೇಂದ್ರ ಮತ್ತು ರಾಜ್ಯ ಸರ್ಕಾರಗಳೆರಡೂ ಶಿಕ್ಷಣದ ಜವಾಬ್ದಾರಿಯನ್ನು ಹೊಂದಿವೆ. ರಾಜ್ಯ ಸರ್ಕಾರಗಳು ಶಾಲೆ ಮತ್ತು ಉನ್ನತ ಶಿಕ್ಷಣ ಸಂಸ್ಥೆಗಳನ್ನು ನಿರ್ವಹಿಸುತ್ತವೆ. ಉದಾಹರಣೆಗೆ ಪ್ರಸಕ್ತ ಬಜೆಟ್‌ನಲ್ಲಿ ಕೇಂದ್ರ ಸರ್ಕಾರವು ಸಮಗ್ರ ಶಿಕ್ಷಾ ಅಭಿಯಾನಕ್ಕೆ 37,500 ಕೋಟಿಗಳನ್ನು ಒದಗಿಸಿದೆ. ಈ ಮೊತ್ತವನ್ನು 28 ರಾಜ್ಯಗಳು ಮತ್ತು 8 ಕೇಂದ್ರಾಡಳಿತ ಪ್ರದೇಶಗಳಿಗೆ ವಿತರಿಸಲಾಗುವುದು. ಈ ಅತ್ಯಲ್ಪ ಹಣದಿಂದ ಶಿಕ್ಷಣದ ಮೂಲಭೂತ ಹಕ್ಕನ್ನು ಜಾರಿಗೊಳಿಸಲು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ದುಃಸ್ಥಿತಿಯನ್ನು ಯಾರು ಬೇಕಾದರೂ ಊಹಿಸಬಹುದು.

ಜೊತೆಗೆ, ಸಮಗ್ರ ಶಿಕ್ಷಣ ಅಭಿಯಾನದ ಕೆಳಗೆ ಈ ಹಣವನ್ನು ಪಡೆಯಲು ರಾಜ್ಯ ಸರ್ಕಾರಗಳು PM-SHRI ಯೋಜನೆಯಲ್ಲಿ ತಮ್ಮ ಭಾಗವಹಿಸುವಿಕೆಯನ್ನು ದೃಢೀಕರಿಸಲು ಶಿಕ್ಷಣ ಸಚಿವಾಲಯದೊಂದಿಗಿನ ಒಪ್ಪಂದ ಪತ್ರಕ್ಕೆ ಸಹಿ ಹಾಕಬೇಕು. ಈ ಮೂಲಕ ರಾಜ್ಯಗಳು PM-SHRI ಯೋಜನೆಯಲ್ಲಿ ತಮ್ಮ ಭಾಗವಹಿಸುವಿಕೆಯನ್ನು ದೃಢೀಕರಿಸಬೇಕು. ಇಲ್ಲವಾದಲ್ಲಿ, ಸಮಗ್ರ ಶಿಕ್ಷಣ ಅಭಿಯಾನದ ಕೆಳಗೆ ರಾಜ್ಯಗಳಿಗೆ ದೊರೆಯುವ ಅತ್ಯಲ್ಪ ಹಣವನ್ನು ಕೂಡ ನಿರಾಕರಿಸಲಾಗುತ್ತದೆ. ಉದಾಹರಣೆಗೆ, ಇತ್ತೀಚೆಗೆ ಇಂತಹ ಒಪ್ಪಂದ ಪತ್ರಕ್ಕೆ ಸಹಿ ಮಾಡಲು ನಿರಾಕರಿಸಿದ ಪಶ್ಚಿಮ ಬಂಗಾಳ, ದೆಹಲಿ ಮತ್ತು ಪಂಜಾಬ್ ರಾಜ್ಯಗಳಿಗೆ ಸಮಗ್ರ ಶಿಕ್ಷಣ ಅಭಿಯಾನದ ಅಡಿಯಲ್ಲಿ ನೀಡಬೇಕಾದ ಮೂರನೇ ಮತ್ತು ನಾಲ್ಕನೇ ಕಂತುಗಳನ್ನು ಸ್ಥಗಿತಗೊಳಿಸಲಾಗಿದೆ. ನಮ್ಮ ಒಕ್ಕೂಟ ವ್ಯವಸ್ಥೆ ಯಾವ ಕಡೆ ಸಾಗುತ್ತಿದೆ ಎಂಬುದಕ್ಕೆ ಇದು ಸ್ಪಷ್ಟ ಉದಾಹರಣೆ.

ಒಟ್ಟಾರೆ, ಒಕ್ಕೂಟ ಸರ್ಕಾರದ ಈ ಆಯವ್ಯಯವು, ರಾಜ್ಯ ಸರ್ಕಾರಗಳು ಮಕ್ಕಳ ಅಭಿವೃದ್ಧಿ ಹಕ್ಕುಗಳನ್ನು ಜಾರಿಗೆ ತರಲು ಸಾಧ್ಯವಾಗದ ರೀತಿಯಲ್ಲಿ ರಾಜ್ಯಗಳನ್ನು ಆರ್ಥಿಕವಾಗಿ ದುರ್ಬಲಗೊಳಿಸಿ ಒಕ್ಕೂಟ ವ್ಯವಸ್ಥೆಯನ್ನು ದುರ್ಬಲಗೊಳಿಸುತ್ತದೆ. ಶಿಕ್ಷಣವು ಸಮವರ್ತಿ ಪಟ್ಟಿಯಲ್ಲಿದ್ದರೂ, ಒಕ್ಕೂಟ ಸರ್ಕಾರವು ಅದರ ಆರ್ಥಿಕ ಜವಾಬ್ದಾರಿಯಿಂದ ನುಣುಚಿಕೊಳ್ಳುತ್ತಿದೆ. ಒಟ್ಟಾರೆ, ಸಾಂವಿಧಾನಿಕ ಹಕ್ಕುಗಳನ್ನು ಜಾರಿಗೊಳಿಸುವಲ್ಲಿ ರಾಜ್ಯ ಸರ್ಕಾರಗಳನ್ನು ಅಸಹಾಯಕ ಸ್ಥಿತಿಗೆ ತಳ್ಳುತ್ತಿದೆ.

WhatsApp Image 2025 11 17 at 4.11.05 PM
ನಿರಂಜನಾರಾಧ್ಯ ವಿ ಪಿ
+ posts

ಅಭಿವೃದ್ಧಿ ಶಿಕ್ಷಣ ತಜ್ಞ

ಪೋಸ್ಟ್ ಹಂಚಿಕೊಳ್ಳಿ:

ನಿರಂಜನಾರಾಧ್ಯ ವಿ ಪಿ
ನಿರಂಜನಾರಾಧ್ಯ ವಿ ಪಿ
ಅಭಿವೃದ್ಧಿ ಶಿಕ್ಷಣ ತಜ್ಞ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...