ಅಕ್ಕಿ ಪೂರೈಕೆ ನಿರಾಕರಣೆ: ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗೆ ಕಲ್ಲು ಹಾಕಿದ ಕೇಂದ್ರ ಸರಕಾರ

Date:

ಕೇಂದ್ರ ಸರಕಾರ ರಾಜ್ಯಗಳಿಗೆ ಅಕ್ಕಿ ಪೂರೈಸಲು ನಿರಾಕರಿಸಿ, ಮುಕ್ತ ಮಾರುಕಟ್ಟೆಯಲ್ಲಿ ಆಹಾರ ಮಾರಾಟ ಮಾಡಲು ಹೊರಟಿದೆ. ಮುಕ್ತ ಮಾರುಕಟ್ಟೆಯಲ್ಲಿ ಆಹಾರದ ಬೆಲೆ ಏರಿಕೆ ತಡೆಯಲು ಈ ಪೂರೈಕೆ ಅವಶ್ಯ ಎಂದು ಸರಕಾರ ಸಮರ್ಥನೆಗಿಳಿದಿದೆ...

ಭಾರತೀಯ ಆಹಾರ ನಿಗಮದ ಹೇಳಿಕೆ ಪ್ರಕಾರ ಎಪ್ರಿಲ್ 1, 2023ಕ್ಕೆ 113 ಲಕ್ಷ ಟನ್ ಗೋಧಿ ಮತ್ತು 236 ಲಕ್ಷ ಟನ್ ಅಕ್ಕಿ ಸಂಗ್ರಹವಿದೆ. ಇದು ಸರಕಾರದ ವಿವಿಧ ಯೋಜನೆಗಳಿಗೆ ಪೂರೈಸಿಯೂ ಮಿಗತೆ ಪ್ರಮಾಣದಲ್ಲಿದೆ ಎಂದು FCI ಹೇಳಿದೆ. ಹಾಗೆಯೇ ಸರಕಾರದ ಅಂದಾಜು ಪ್ರಕಾರ ಈ ವರ್ಷ 325 ಮಿಲಿಯನ್ ಟನ್ ನಷ್ಟು ಆಹಾರ ಉತ್ಪಾದನೆಯ ಗುರಿ ಹೊಂದಿದ್ದು ಇದು ಕಳೆದ ವರ್ಷಕ್ಕಿಂತ 3% ಜಾಸ್ತಿ.

2022-23ನೇ ಸಾಲಿನಲ್ಲಿ ಅಂದರೆ 2023ರ ಮೇ ವರೆಗೆ ಅಕ್ಕಿಯ ಉತ್ಪಾದನೆ 1308 ಲಕ್ಷ ಟನ್ ಆಗಿದ್ದು, ಇದರಲ್ಲಿ ಸರಕಾರವೇ 626 ಲಕ್ಷ ಟನ್ ಕೊಂಡುಕೊಂಡು ದಾಸ್ತಾನು ಮಾಡುವ ಗುರಿ ಹೊಂದಿದೆ. ಈ ಬಾಬ್ತು ಸರಕಾರ 1,59,659 ಕೋಟಿ ರೂ. ರೈತರಿಗೆ ಪಾವತಿಸಿದೆ.

ಅಂದರೆ ಭಾರತೀಯ ಆಹಾರ ನಿಗಮದಲ್ಲಿ ರಾಜ್ಯಗಳ ಬೇಡಿಕೆ ಪೂರೈಸುವಷ್ಟು ಅಕ್ಕಿಯ ಸಂಗ್ರಹ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಾಜ್ಯ ಸರಕಾರಗಳು ಹೆಚ್ಚುವರಿಯಾಗಿ ಕೊಳ್ಳುವುದಾದರೆ ನಿಗಮವು ತನಗಾದ ನೈಜ ವೆಚ್ಚವನ್ನೇ ಭರಿಸುವಷ್ಟು ದರ ನಿಗದಿ ಮಾಡುತ್ತದೆ. ಇದೇ ಲೆಕ್ಕಾಚಾರದಲ್ಲೇ ರೂ. 36 ಎಂದು ಕರ್ನಾಟಕ ಸರಕಾರಕ್ಕೆ ನಿಗದಿ ಮಾಡಿದ್ದು, ಸರಕಾರಗಳಿಗೆ ಪೂರೈಸುವುದೆಂದರೆ ಬೆಲೆ ಏರಿಕೆ ಆಘಾತದಿಂದ ಬಡವರನ್ನು ರಕ್ಷಿಸಿ ಆಹಾರದ ಹಾಹಾಕಾರವನ್ನು ತಡೆಯುವುದು ಎಂದರ್ಥ.

ಆದರೆ ಕೇಂದ್ರ ಸರಕಾರ ರಾಜ್ಯಗಳಿಗೆ ಪೂರೈಸಲು ನಿರಾಕರಿಸಿ, ಮುಕ್ತ ಮಾರುಕಟ್ಟೆಯಲ್ಲಿ ಆಹಾರ ಮಾರಾಟ ಮಾಡಲು ಹೊರಟಿದೆ. ಮುಕ್ತ ಮಾರುಕಟ್ಟೆಯಲ್ಲಿ ಆಹಾರದ ಬೆಲೆ ಏರಿಕೆ ತಡೆಯಲು ಈ ಪೂರೈಕೆ ಅವಶ್ಯ ಎಂದು ಸರಕಾರದ ಸಮರ್ಥನೆ.

ಹೀಗೆ ಮುಕ್ತ ಮಾರುಕಟ್ಟೆಯಲ್ಲಿ ಮಾರಾಟವಾದ ಅಕ್ಕಿ ಗ್ರಾಹಕರಿಗೆ ಕಡಿಮೆ ದರಕ್ಕೆ ದೊರಕಿದ ಉದಾಹರಣೆ ಇಲ್ಲ!

ಇದರರ್ಥ ಇಷ್ಟೇ: ಕೇಂದ್ರ ಸರಕಾರ ದ್ವೇಷದ ರಾಜಕಾರಣ ಮಾಡುತ್ತಾ ಕರ್ನಾಟಕದ ಮಹತ್ವಾಕಾಂಕ್ಷಿ ಯೋಜನೆಗೆ ಕಲ್ಲು ಹಾಕಲು ಯತ್ನಿಸುತ್ತಿದೆ.

ರಾಜ್ಯಗಳು ಸಾಕಷ್ಟು ಪ್ರಮಾಣದಲ್ಲಿ ಆಹಾರವನ್ನು ಕಾಪು ದಾಸ್ತಾನು ಮಾಡುವ ವ್ಯವಸ್ಥೆ ನಮ್ಮಲ್ಲಿ ಕಡಿಮೆ. ಕರ್ನಾಟಕ ಈ ಕೆಲಸ ಮಾಡಬೇಕಿತ್ತು. ಆದರೆ ಭಾಜಪ ಸರಕಾರ ಈ ಕಾಪು ದಾಸ್ತಾನು ಇಟ್ಟಿಲ್ಲ. ಅಷ್ಟೇ ಏಕೆ, ಪಡಿತರದಲ್ಲಿ ನೀಡುವ ಅಕ್ಕಿಯ ಪ್ರಮಾಣವನ್ನೂ ಕಡಿತಗೊಳಿಸಿದೆ.

ಈಗ ಬಿಜೆಪಿಯ ಸಂಸದರು ಅನ್ನಕ್ಕೆ ಕಲ್ಲು ಹಾಕುವ ಈ ವಿಕೃತಿಯನ್ನು ಸಮರ್ಥಿಸಿ ಕೇಕೆ ಹಾಕಿ ಕುಣಿಯುತ್ತಿದ್ದಾರೆ. ಜನಾಗ್ರಹದ ಸುನಾಮಿ ಎರಗುವ ಕಿಂಚಿತ್ತು ಪರಿವೆಯೂ ಇಲ್ಲದ ಈ ಪಕ್ಷದ ಆತ್ಮಹತ್ಯಾಕಾರಿ ನಿಲುವು
ಮಾತ್ರ ಅಚ್ಚರಿ ತರುತ್ತಿದೆ.

WhatsApp Image 2023 06 15 at 12.25.34
ಕೆ.ಪಿ. ಸುರೇಶ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...