ಕ್ರಿಸ್‌ಮಸ್ ಹಬ್ಬ | ಸೌಹಾರ್ದತೆಯ ಸೋಗು ಹಾಕಿದ ಕೋಮುವಾದಿ ಮೋದಿ

Date:

ಭಾರತದಲ್ಲಿ ಕಳೆದ 10 ವರ್ಷಗಳ ಮೋದಿ ಆಡಳಿತದಲ್ಲಿ ಕೋಮುವಾದ, ಕೋಮುದ್ವೇಷವು ಹಲವು ಪಟ್ಟುಗಳಷ್ಟು ಹೆಚ್ಚಾಗಿದೆ. ಧಾರ್ಮಿಕ ದ್ವೇಷವು ಮಾನವ ದ್ವೇಷ, ಹಿಂಸಾಚಾರ, ಹತ್ಯೆ, ಅಸಹಿಷ್ಣುತೆಯ ಅತ್ಯಂತ ತುತ್ತ ತುದಿಯನ್ನು ತಲುಪಿದೆ. ಭಾರತದಲ್ಲಿ ಕೇವಲ ಮುಸ್ಲಿಮರು ಮಾತ್ರವೇ ಕೋಮುಹಿಂಸೆಗಳಿಗೆ ಬಲಿಯಾಗುತ್ತಿಲ್ಲ. ಕ್ರೈಸ್ತರೂ ಧಾರ್ಮಿಕ ದ್ವೇಷಕ್ಕೆ ಸಿಕ್ಕಿಕೊಂಡು ನಲುಗುತ್ತಿದ್ದಾರೆ. ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರ ವಿರುದ್ಧ ಹಿಂಸಾಚಾರ ಮತ್ತು ಕಿರುಕುಳಗಳು ಆತಂಕಕಾರಿಯಾಗಿ ಏರುತ್ತಿವೆ. ತಾನೊಬ್ಬ ಪ್ರಧಾನಿ ಎಂಬುದನ್ನೂ ಮರೆತಿರುವ ಮೋದಿ ಅವರು ಕಳೆದ ಲೋಕಸಭಾ ಚುನಾವಣೆಯಲ್ಲಿ ಅತ್ಯಂತ ತುಚ್ಛ ಭಾಷಣಗಳನ್ನು ಮಾಡಿದ್ದರು. ಅಲ್ಪಸಂಖ್ಯಾತರ ವಿರುದ್ಧ ಪ್ರಚೋದನಕಾರಿ, ದ್ವೇಷ ಪೂರಿತ ಹೇಳಿಕೆಗಳನ್ನು ನೀಡಿದ್ದರು. ಒಂದು ಮತದ ವಿರುದ್ಧ ಮತ್ತೊಂದು ಸಮುದಾಯದಲ್ಲಿ ಅಹಿಷ್ಣುತೆಯನ್ನು ಬಹಿರಂಗವಾಗಿಯೇ ಬಿತ್ತಿದ್ದರು.

ಈಗ, ಇದೇ ಮೋದಿ ಅವರು ಕ್ರಿಶ್ಚಿಯನ್ ಸಮುದಾಯ ಕ್ರಿಸ್‌ಮಸ್‌ ಹಬ್ಬದ ಸಂಭ್ರಮದಲ್ಲಿ ಭಾಗಿಯಾಗಿದ್ದಾರೆ. ದೆಹಲಿಯಲ್ಲಿ ಕ್ಯಾಥೋಲಿಕ್ ಬಿಷಪ್ಸ್ ಕಾನ್ಫರೆನ್ಸ್ ಆಫ್ ಇಂಡಿಯಾ (ಸಿಬಿಸಿಐ) ಆಯೋಜಿಸಿದ್ದ ಕ್ರಿಸ್‌ಮಸ್ ಹಬ್ಬದಲ್ಲಿ ಭಾಗಿಯಾಗಿದ್ದ ಮೋದಿ, ತಾನೊಬ್ಬ ಸಾಮರಸ್ಯವಾದಿ ಎಂಬಂತೆ ಪೋಸು ಕೊಟ್ಟಿದ್ದಾರೆ. ”ಸಮಾಜದಲ್ಲಿ ಹಿಂಸಾಚಾರವನ್ನು ಹರಡುವ ಯತ್ನಗಳು ನಡೆದಾಗ ನನಗೆ ನೋವಾಗುತ್ತದೆ. ಲಾರ್ಡ್ ಕ್ರಿಸ್ತನ ಬೋಧನೆಗಳಾದ ಪ್ರೀತಿ, ಸಾಮರಸ್ಯ, ಸಹೋದರತ್ವವನ್ನು ನಾವು ಅನುಸರಿಸಬೇಕು. ಈ ಮನೋಭಾವವನ್ನು ಬಲಪಡಿಸಲು ನಾವೆಲ್ಲರೂ ಕೆಲಸ ಮಾಡುವುದು ಮುಖ್ಯ” ಎಂದು ಮೋದಿ ಸಹಬಾಳ್ವೆಯ ಮಾತುಗಳನ್ನಾಡಿದ್ದಾರೆ.

image 34

ಆದರೆ, ಇದೇ ಮೋದಿ ಅವರ ಆಡಳಿತದಲ್ಲಿ, ಇದೇ ಬಿಜೆಪಿ ಸರ್ಕಾರಗಳ ಆಳ್ವಿಕೆಯಲ್ಲಿ, ಇದೇ ಹಿಂದುತ್ವವಾದಿಗಳು ಕ್ರಿಶ್ಚಿಯನ್ ಮಿಷನರಿಗಳು, ಚರ್ಚ್‌ಗಳ ಮೇಲೆ ದಾಳಿ ಹೆಚ್ಚಾಗಿದೆ. ಅಲ್ಪಸಂಖ್ಯಾತರ ವಿರೋಧಿ ಭಾವನೆಯನ್ನು ಪ್ರಚೋದಿಸುತ್ತಿರುವ ಹಿಂದುತ್ವ ರಾಷ್ಟ್ರೀಯತೆಯ ನಕಲಿ ಕಲ್ಪನೆಯು ಕ್ರಿಶ್ಚಿಯನ್ನರು ಮತ್ತು ಮುಸ್ಲಿಮರ ಮೇಲಿನ ಕಿರುಕುಳವನ್ನು ಹೆಚ್ಚಿಸಿದೆ. ಬಜರಂಗದಳ ಮತ್ತು ವಿಶ್ವ ಹಿಂದೂ ಪರಿಷತ್‌ನಂತಹ ಧಾರ್ಮಿಕ ಕೋಮುವಾದಿ ಸಂಘಟನೆಗಳು ನಿರಂತರವಾಗಿ ಕೋಮುದ್ವೇಷವನ್ನು ಪ್ರಚೋದಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇವಾಂಜೆಲಿಕಲ್ ಫೆಲೋಶಿಪ್ ಆಫ್ ಇಂಡಿಯಾ ಮತ್ತು ಯುನೈಟೆಡ್ ಕ್ರಿಶ್ಚಿಯನ್ ಫೋರಮ್ (ಯುಸಿಎಫ್)ನ ಅಂಕಿಅಂಶಗಳ ಪ್ರಕಾರ, 2014ರಲ್ಲಿ ಮೋದಿ ಸರ್ಕಾರ ಅಧಿಕಾರಕ್ಕೆ ಬಂದ ಬಳಿಕ ಕ್ರಿಶ್ಚಿಯನ್ನರ ಮೇಲಿನ ದಾಳಿಗಳು ಹೆಚ್ಚಾಗಿವೆ. ಮೋದಿ ಮೊದಲ ಬಾರಿಗೆ ಪ್ರಧಾನಿಯಾದ ವರ್ಷ 2014ರ ಜುಲೈನಿಂದ ಡಿಸೆಂಬರ್‌ವರೆಗೆ ಭಾರತದಲ್ಲಿ ಕ್ರಿಶ್ಚಿಯನ್ನರ ಮೇಲಿನ 127 ದಾಳಿ ಪ್ರಕರಣಗಳು ದಾಖಲಾಗಿವೆ. 2021ರಲ್ಲಿ, ಕ್ರಿಶ್ಚಿಯನ್ನರ ವಿರುದ್ಧ 327 ಹಿಂಸಾತ್ಮಕ ದೌರ್ಜನ್ಯಗಳು ನಡೆದಿವೆ. 2022ರಲ್ಲಿ, 115 ದೈಹಿಕ ಹಿಂಸೆ ಮತ್ತು 357 ಬೆದರಿಕೆ (ಒಟ್ಟು 486) ಪ್ರಕರಣಗಳು ದಾಖಲಾಗಿವೆ. ಗಂಭೀರ ವಿಚಾರವೆಂದರೆ, ಈ ವರ್ಷ, 2024ರ ಜನವರಿಯಿಂದ ನವೆಂಬರ್ ಅಂತ್ಯದವರೆಗೆ ಬರೋಬ್ಬರಿ 745 ದಾಳಿ ಪ್ರಕರಣಗಳು ದಾಖಲಾಗಿವೆ.

ಇವುಗಳಲ್ಲಿ, ಅನೇಕ ಘಟನೆಗಳಲ್ಲಿ ಚರ್ಚುಗಳು ಮತ್ತು ಕ್ರಿಶ್ಚಿಯನ್ ಸಂಸ್ಥೆಗಳನ್ನು ನಿರ್ದಿಷ್ಟವಾಗಿ ಗುರಿಯಾಗಿಸಿಕೊಂಡು ದಾಳಿ ಮಾಡಲಾಗಿದೆ. 2021ರಲ್ಲಿ, ದೇಶಾದ್ಯಂತ ಕನಿಷ್ಠ 15 ಚರ್ಚ್‌ಗಳನ್ನು ಧ್ವಂಸಗೊಳಿಸಲಾಗಿದೆ. 2022ರಲ್ಲಿ, ಹಿಂದುತ್ವ ಕೋಮುವಾದಿಗಳು ದೆಹಲಿಯ ಚರ್ಚ್‌ ಸೇರಿದಂತೆ ಹಲವಾರು ಚರ್ಚ್‌ಗಳ ಮೇಲೆ ಹಿಂಸಾತ್ಮಕ ದಾಳಿಗಳು ನಡೆದಿವೆ. 2023ರ ಮೇನಲ್ಲಿ ಮಣಿಪುರದಲ್ಲಿ ಜನಾಂಗೀಯ ಹಿಂಸಾಚಾರ ಭುಗಿಲೆದ್ದ ಬಳಿಕ, ಅದನ್ನೇ ನೆಪವಾಗಿಟ್ಟುಕೊಂಡು ಸುಮಾರು 200ಕ್ಕೂ ಹೆಚ್ಚು ಚರ್ಚ್‌ಗಳನ್ನು ಧ್ವಂಸಗೊಳಿಸಲಾಗಿದೆ ಎಂದು ವರದಿಯಾಗಿದೆ.

ಈ ವರದಿ ಓದಿದ್ದೀರಾ?: ಲೇಖಕಿ ಬಾನು ಮುಷ್ತಾಕ್ ಅವರಿಂದ ಸಚಿವೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಬಹಿರಂಗ ಪತ್ರ

ಇಷ್ಟೆಲ್ಲ ಹಿಂಸಾಚಾರ, ದೌರ್ಜನ್ಯಗಳು ನಡೆಯುತ್ತಿದ್ದರೂ ಮೋದಿ ನೇತೃತ್ವದ ಸರ್ಕಾರದ ಆಡಳಿತವು ಅಲ್ಪಸಂಖ್ಯಾತರ ಹಕ್ಕುಗಳನ್ನು ಕಾಪಾಡುವಲ್ಲಿ ವಿಫಲವಾಗಿದೆ. ಮಾತ್ರವಲ್ಲ, ಈ ದಾಳಿಗಳನ್ನು ಬಿಜೆಪಿಯೇ ಪ್ರಾಯೋಜಿಸಿದೆ ಎಂಬ ಆರೋಪಗಳೂ ಇವೆ. ಹಿಂದುತ್ವ ಕೋಮುವಾದಿ ಸಂಘಟನೆಗಳಿಗೆ ಬಿಜೆಪಿ ಸರ್ಕಾರವು ಮೌನ ಬೆಂಬಲ ನೀಡುತ್ತಿದೆ ಎಂದು ಹಲವರು ಆರೋಪಿಸಿದ್ದಾರೆ. ಅಲ್ಲದೆ, ಇತ್ತೀಚೆಗೆ, 13 ರಾಜ್ಯಗಳಲ್ಲಿ ಜಾರಿಗೆ ಬಂದ ‘ಮತಾಂತರ-ವಿರೋಧಿ ಕಾನೂನು’ಗಳನ್ನು ಅಸ್ತ್ರವನ್ನಾಗಿಸಿ, ದುರುಪಯೋಗ ಮಾಡಿಕೊಂಡು ಕ್ರಿಶ್ಚಿಯನ್ನರ ಮೇಲೆ ದಾಳಿಗಳು ಹೆಚ್ಚಾಗಿವೆ.

2021ರಲ್ಲಿ, ಯುನೈಟೆಡ್ ಸ್ಟೇಟ್ಸ್ ಕಮಿಷನ್ ಆನ್ ಇಂಟರ್ನ್ಯಾಷನಲ್ ರಿಲಿಜಿಯಸ್ ಫ್ರೀಡಮ್ (USCIRF) ಸಂಸ್ಥೆಯು ತನ್ನ ‘ನಿರ್ದಿಷ್ಟವಾಗಿ ಕಾಳಜಿ ವಹಿಸಬೇಕಾದ ದೇಶಗಳ ಪಟ್ಟಿ’ಯಲ್ಲಿ ಭಾರತವನ್ನು ಸೇರಿಸಿದೆ. ಭಾರತದಲ್ಲಿ ಧಾರ್ಮಿಕ ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ‘ವ್ಯವಸ್ಥಿತ ಮತ್ತು ಅತಿಶಯ’ದ ದಾಳಿ, ಹಿಂಸಾಚಾರಗಳ ಬಗ್ಗೆ ಕಳವಳ ವ್ಯಕ್ತಪಡಿಸಿದೆ.

ಹೀಗಾಗಿಯೇ, ಸೋಮವಾರ (ಡಿ.23) ಕ್ರಿಸ್‌ಮಸ್ ಹಬ್ಬದಲ್ಲಿ ಭಾಗಿಯಾಗಿದ್ದ ಮೋದಿ ಅವರಿಗೆ ಹಲವಾರು ಮುಖಂಡರು ಜಂಟಿಯಾಗಿ ಪತ್ರ ಬರೆದಿದ್ದಾರೆ. ಆ ಪತ್ರಕ್ಕೆ ತುಷಾರ್ ಗಾಂಧಿ, ಅನ್ನಿ ರಾಜಾ, ಫಾದರ್ ಸೆಡ್ರಿಕ್ ಪ್ರಕಾಶ್, ಜಾನ್ ದಯಾಳ್ ಹಾಗೂ ಶಬ್ನಮ್ ಹಶ್ಮಿ ಸೇರಿದಂತೆ 200ಕ್ಕೂ ಹೆಚ್ಚು ಮುಖಂಡರು ಸಹಿ ಹಾಕಿದ್ದಾರೆ. ಅಲ್ಪಸಂಖ್ಯಾತರ ಮೇಲೆ ನಡೆಯುತ್ತಿರುವ ಹಿಂಸೆಗಳ ಆತಂಕಕಾರಿ ಏರಿಕೆಯನ್ನು ತಡೆಯಲು ತುರ್ತು ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...