ದೇಶವಾಸಿಗಳು ʼಕ್ವಿಟ್ ಎನ್‍ಡಿಎʼ ಮತ್ತು ʼಸೇವ್ ಇಂಡಿಯಾʼ ಚಳವಳಿಗೆ ಸನ್ನದ್ಧರಾಗಬೇಕಿದೆ..

Date:

ಕೋಮುವಾದಿಗಳು ಮತ್ತು ಜಾತಿವಾದಿಗಳ ಅನೈತಿಕ ಮೈತ್ರಿ ಕರ್ನಾಟಕ ರಾಜ್ಯವನ್ನೂ ಒಳಗೊಂಡಂತೆ ಭಾರತದಲ್ಲಿ ಪ್ರಜಾಸತ್ತಾತ್ಮಕ ರಾಜಕೀಯ ಪ್ರಕ್ರಿಯೆಯನ್ನು ದುರ್ಬಲಗೊಳಿಸಿರುವ ಸಂಗತಿ ಪ್ರಜ್ಞಾವಂತರನ್ನು ಘಾಸಿಗೊಳಿಸಿವೆ.

 

ಭಾರತದಲ್ಲಿ 2600 ವರ್ಷಗಳ ಹಿಂದೆ ಮೇಲ್ಜಾತಿ ಪ್ರಭುತ್ವವನ್ನು ಅಹಿಂಸಾತ್ಮಕವಾಗಿ ರದ್ದುಗೊಳಿಸಿ ನೈಜ ಪ್ರಜಾಪ್ರಭುತ್ವವನ್ನು ಸ್ಥಾಪಿಸಿದ ಶ್ರೇಯಸ್ಸು ಜಗತ್ತಿನ ಮೊದಲ ಪ್ರಜಾಪ್ರಭುತ್ವವಾದಿ ಬುದ್ಧರಿಗೆ ಸಲ್ಲುತ್ತದೆ. ಇವರ ವಿಚಾರಧಾರೆಗಳಿಂದ ಪ್ರಭಾವಿತರಾದ ಯುರೋಪಿನ ಜನತೆ ಪ್ರಜಾಪ್ರಭುತ್ವ ಕ್ರಾಂತಿಯನ್ನು ರಾಜಪ್ರಭುತ್ವ ಮತ್ತು ಪುರೋಹಿತ ಪ್ರಭುತ್ವಗಳ ವಿರುದ್ಧ ಯಶಸ್ವಿಯಾಗಿ 17ನೇ ಶತಮಾನದಲ್ಲಿ ಜಾಗತಿಕ ಮಟ್ಟದಲ್ಲಿ ಮುನ್ನೆಡೆಸಿದ ಶ್ರೇಯಸ್ಸನ್ನು ಹೊಂದಿದ್ದಾರೆ. ಅಂದು ಜಾನ್ ಮಿಲ್ಟನ್ ‘ನಮ್ಮ ಪ್ರಭುಗಳಾಗಬೇಕೆಂಬುದು ನಿಮ್ಮ ಆಸೆಯಾಗಿದ್ದರೆ, ನಿಮ್ಮ ಗುಲಾಮರಾಗಿ ಬದುಕಬೇಕೆಂಬ ಆಸೆ ನಮಗೇಕೆ ಬೇಕು?’ ಎಂಬ ಐತಿಹಾಸಿಕ ಪ್ರಶ್ನೆಯನ್ನು ವ್ಯವಸ್ಥೆಯ ಮುಂದಿಟ್ಟು ಪ್ರಜಾಪ್ರಭುತ್ವಕ್ರಾಂತಿಗೆ ಮುನ್ನುಡಿ ಬರೆದರು.

ವಾಸ್ತವವಾಗಿ ಮೊದಲ ಮಹಾಯುದ್ಧ ಕಾಲದಲ್ಲಿ ಹಿಟ್ಲರ್ ಮತ್ತು ಬಳಗ ಜಗತ್ತಿನಲ್ಲಿ ಪೈಶಾಚಿಕ ಪ್ರಭುತ್ವವನ್ನು ಸ್ಥಾಪಿಸಿ ಸಾರ್ವಜನಿಕರನ್ನು ಬಲಾತ್ಕಾರದಿಂದ ಗುಲಾಮಗಿರಿಗೆ ದಬ್ಬಿದ ಬಗೆ ಜಗತ್ತಿನ ಕರಾಳ ಇತಿಹಾಸವಾಗಿ ದಾಖಲಾಗಿದೆ. ದ್ವಿತೀಯ ಮಹಾಯುದ್ಧವನ್ನು ಜ್ಞಾನಿಗಳು ‘ರಾಕ್ಷಸಿ ಪ್ರಭುತ್ವ ಮತ್ತು ಪ್ರಜಾಪ್ರಭುತ್ವಗಳ ನಡುವಣ ಯುದ್ಧದಲ್ಲಿ ಪ್ರಜಾಪ್ರಭುತ್ವದ ಗೆಲುವು’ ಎಂಬುದಾಗಿ ಅರ್ಥೈಸಿದ್ದಾರೆ. ತದನಂತರ ಜಗತ್ತಿನ ಬಹುತೇಕ ರಾಷ್ಟ್ರಗಳು ರಾಜಕೀಯವಾಗಿ ಸ್ವತಂತ್ರ ರಾಷ್ಟ್ರಗಳಾಗಿ ರೂಪುಗೊಂಡು ತಮ್ಮದೇ ಆದ ಸಂವಿಧಾನಗಳನ್ನು ರಚಿಸಿಕೊಂಡು ಪ್ರಜಾಪ್ರಭುತ್ವ ವ್ಯವಸ್ಥೆಯಡಿ ಶಾಂತಿ ಮತ್ತು ನೆಮ್ಮದಿಗಳಿಂದ ಬದುಕಲು ಸಾಧ್ಯವಾಯಿತು. ಭಾರತ ಕೂಡಾ ಬುದ್ಧ ಕೊಟ್ಟ ಸ್ವಾತಂತ್ರ್ಯ ಮತ್ತು ಪ್ರಜಾಪ್ರಭುತ್ವಗಳನ್ನು 1947ರಲ್ಲಿ ಗಳಿಸಲು ಸಾಧ್ಯವಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಭಾರತವು ಸರ್ವ ಸ್ವತಂತ್ರ ಸಾರ್ವಭೌಮ ರಾಷ್ಟ್ರವಾಗಿ ರೂಪುಗೊಳ್ಳಲು ಗಾಂಧಿ, ಪಟೇಲ್, ಸುಭಾಷ್ ಚಂದ್ರ ಬೋಸ್, ಅಂಬೇಡ್ಕರ್, ಲೋಹಿಯಾ ಮೊದಲಾದ ದಾರ್ಶನಿಕರು ಐತಿಹಾಸಿಕವಾಗಿ ಮಹತ್ವದ ಪಾತ್ರವಹಿಸಿದರು. ಅಂದು ಕಾಂಗ್ರೆಸ್ ಪಕ್ಷ ಬಹುತ್ವ, ಧರ್ಮನಿರಪೇಕ್ಷತೆ, ಸಾಮಾಜಿಕ ಪ್ರಜಾಸತ್ತೆ, ಆರ್ಥಿಕ ಪ್ರಜಾಸತ್ತೆ ಮತ್ತು ಬಹುಜನರ ಸಬಲೀಕರಣಗಳಿಗೆ ಬದ್ಧವಾದ ಆಳ್ವಿಕೆಗೆ ಭದ್ರ ಬುನಾದಿ ಹಾಕಿರುವುದು ಜನಮನ್ನಣೆ ಗಳಿಸಿದೆ. ನೆಹರೂಜಿ ಮತ್ತು ಇಂದಿರಾಜಿ ಕಲ್ಯಾಣ ರಾಷ್ಟ್ರ ನಿರ್ಮಾಣಕ್ಕೆ ನೀಡಿರುವ ಕೊಡುಗೆಯನ್ನು ಸಮಸ್ತ ಬಹುಜನರು ಕೃತಜ್ಞತೆಯಿಂದ ನೆನೆಯುತ್ತಾರೆ. ಭೂ ಸುಧಾರಣೆ, ಸಾರ್ವಜನಿಕ ಉದ್ದಿಮೆಗಳ ಅಭಿವೃದ್ಧಿ, ಮೂಲ ಸೌಕರ್ಯಗಳ ವಿಸ್ತರಣೆ, ಕೃಷಿ ಕ್ರಾಂತಿ, ಕೈಗಾರಿಕಾಭಿವೃದ್ಧಿ, ಯುವಜನರಿಗೆ ಉದ್ಯೋಗಾವಕಾಶಗಳ ವಿಸ್ತರಣೆ ಮೊದಲಾ ಕಾರ್ಯಕ್ರಮಗಳಿಂದ ಬಡತನ ನಿರ್ಮೂಲನೆಗೆ ಕಾಂಗ್ರೆಸ್ ಪಕ್ಷ ನೀಡಿದ ಕೊಡುಗೆ ಅವಿಸ್ಮರಣೀಯ.

ಕಾಂಗ್ರೆಸ್ಸಿಗರು ಸಮಗ್ರವಾಗಿ ಬಡತನ ನಿರ್ಮೂಲನೆ ಮಾಡದಿದ್ದರೂ, ಬಡವರನ್ನು ನಿರ್ಮೂಲನೆ ಮಾಡುವ ಸಲುವಾಗಿ ತಮಗೆ ಸಿಕ್ಕ ರಾಜ್ಯಾಧಿಕಾರವನ್ನು ದುರುಪಯೋಗ ಪಡಿಸಿಕೊಳ್ಳಲಿಲ್ಲ ಎಂಬುದು ಅತ್ಯಂತ ಸಮಾಧಾನಕರ ಸಂಗತಿಯಾಗಿದೆ.

ಆರ್ಥಿಕ ಉದಾರೀಕರಣ ಮತ್ತು ಸಾಮಾಜಿಕ ನ್ಯಾಯಗಳ ನಡುವೆ ಸಮನ್ವಯ ಸಾಧಿಸಿ ಶ್ರೀಮಂತರು ಮತ್ತು ಬಡವರ ಅಭಿವೃದ್ಧಿಗಾಗಿ ಇಂದಿರಾ ಗಾಂಧಿ, ರಾಜೀವ್ ಗಾಂಧಿ, ನರಸಿಂಹ ರಾವ್, ಮನಮೋಹನ್ ಸಿಂಗ್ ಮೊದಲಾದವರು ನಡೆಸಿದ ಪ್ರಯತ್ನಗಳು ವಿಶೇಷ ಮಹತ್ವ ಹೊಂದಿದ್ದವು. ದುರ್ಬಲ ವರ್ಗಗಳಿಗೆ ಅಧಿಕಾರ ಮತ್ತು ಸಂಪತ್ತಿನ ಮರು ಹಂಚಿಕೆಯಲ್ಲಿ ಅಂದಿನ ಪ್ರಧಾನಿ ವಿ.ಪಿ.ಸಿಂಗರು ಮುನ್ನೆಡೆಸಿದ ಮಂಡಲ್ ಚಳವಳಿ ಸಾಮಾಜಿಕ ಮತ್ತು ಆರ್ಥಿಕ ನ್ಯಾಯ ವಿತರಣೆ ದೃಷ್ಟಿಯಿಂದ ಭಾರತದ ಇತಿಹಾಸದಲ್ಲಿ ವಿಶೇಷ ಮೈಲುಗಲ್ಲಾಗಿದೆ.

1980ರ ದಶಕದಲ್ಲಿ ಆರಂಭಗೊಂಡ ಆರೆಸ್ಸೆಸ್ ನಿರ್ದೇಶಿತ ಕೋಮುವಾದಿ ರಾಜಕಾರಣ ಭಾರತದ ಸಾಮಾಜಿಕ ನ್ಯಾಯ ಚಳವಳಿಗೆ ಮಾರಣಾಂತಿಕ ಕೊಡಲಿ ಪೆಟ್ಟು ನೀಡಿತು. ಮಂದಿರವಾದಿಗಳು ಧಾರ್ಮಿಕ ಅಲ್ಪಸಂಖ್ಯಾತರು ಮತ್ತು ಅತಿ ಹಿಂದುಳಿದ ಸಮುದಾಯಗಳ ಬದುಕಿನ ಜೊತೆ ಚೆಲ್ಲಾಟವಾಡಿ ಕೋಮುವಾದಿ ರಾಜಕಾರಣವನ್ನು ಬಲಪಡಿಸಿ ಸಾಂವಿಧಾನಿಕ ಆಶಯಗಳನ್ನು ಗಾಳಿಗೆ ತೂರಿದರು. ‘ಜೋರ್ ಸೆ ಬೋಲೋ ಜೈ ಶ್ರೀರಾಮ್’ ಎಂಬುದಾಗಿ ಮುಗ್ಧರನ್ನು ದಾರಿ ತಪ್ಪಿಸಿ

ಮನುಷ್ಯರಿಗಿಂತ ದೇವರುಗಳೇ ಶ್ರೇಷ್ಠವೆಂಬ ಮಹಾಮೌಢ್ಯವನ್ನು ದೇಶದಾದ್ಯಂತ ಬಿತ್ತಿದರು. ಮಂದಿರಗಳನ್ನು ಕಟ್ಟುವುದರಿಂದ ಹೊಸ ತಲೆಮಾರಿನ ಭಿಕ್ಷುಕರು ಸೃಷ್ಠಿಯಾಗುವರೆಂಬ ಬಾಬಾ ಸಾಹೇಬ್ ಅಂಬೇಡ್ಕರ್‌ರ ಎಚ್ಚರಿಕೆಯನ್ನು ಕೋಮುವಾದಿಗಳು ನಿರ್ಲಕ್ಷಿಸಿದರು. ಇಂದು ಪ್ರಬುದ್ಧ ದಕ್ಷಿಣ ಭಾರತವನ್ನು ಹೊರತು ಪಡಿಸಿ ಬಹುತೇಕ ಭಾರತ ಕೋಮುವಾದಿಗಳು ಮತ್ತು ಜಾತಿವಾದಿಗಳ ಕಪಿಮುಷ್ಠಿಗೆ ಸಿಲುಕಿ ನರಳುತ್ತಿದೆ.

ವಿಕಸಿತ ಭಾರತ್’ ಮತ್ತು ‘ವಿಶ್ವಗುರು’ ಪರಿಕಲ್ಪನೆಗಳನ್ನು ಮುಂದಿಟ್ಟುಕೊಂಡು ಭಾರತವನ್ನು ಜಾಗತಿಕವಾಗಿ ಮೂರನೇ ಬಹುದೊಡ್ಡ ಆರ್ಥಿಕ ಶಕ್ತಿಯನ್ನಾಗಿ ರೂಪಿಸುವುದಾಗಿ ಆರೆಸ್ಸೆಸ್, ವಿಎಚ್‍ಪಿ, ಭಜರಂಗ ದಳ ಮೊದಲಾದವರು ಬಹುಜನ ಭಾರತೀಯರನ್ನು ಹೊಸ ಭ್ರಮೆಗೆ ಗುರಿಪಡಿಸಿದ್ದಾರೆ. ಹಸಿವು, ಅಪೌಷ್ಟಿಕತೆ, ಅನಾರೋಗ್ಯ, ಬಡತನ, ನಿರುದ್ಯೋಗ ಮೊದಲಾದ ವಿಷಯಗಳಲ್ಲಿ ಭಾರತದ ಸಾಧನೆ ಜಾಗತಿಕ ಮಟ್ಟದಲ್ಲಿ ಅತ್ಯಂತ ನಿರಾಶಾದಾಯಕವಾಗಿದೆ.

ಅಂತರರಾಷ್ಟ್ರೀಯ ಕಾರ್ಮಿಕ ಸಂಸ್ಥೆ(ಐಎಲ್‍ಒ) ಇತ್ತೀಚೆಗೆ ಬಿಡುಗಡೆಗೊಳಿಸಿದ ವರದಿಯೊಂದರಲ್ಲಿ ಅತಿ ಹೆಚ್ಚು ವಿದ್ಯಾವಂತ ಭಾರತೀಯರು ಹೆಚ್ಚು ನಿರುದ್ಯೋಗ ಸಮಸ್ಯೆಯಿಂದ ನರಳುತ್ತಿದ್ದಾರೆಂಬ ಆಘಾತಕಾರಿ ಸಂಗತಿ ಬೆಳಕಿಗೆ ಬಂದಿದೆ. ಪ್ರಬುದ್ಧ ಭಾರತದ ಅಸಲಿ ನಿರ್ಮಾಪಕರಾದ ಕೊಳಚೆ ಪ್ರದೇಶವಾಸಿಗಳು ಮೂಲಭೂತ ಹಕ್ಕುಗಳಿಂದ ವಂಚಿತರಾಗಿ ಮಸಣದ ಹೂವುಗಳಾಗಿದ್ದಾರೆ. ಇದು ವಿಶ್ವಗುರು ಮತ್ತು ಮನುವಾದಿಗಳ ಬಳಗಕ್ಕೆ ಕಾಣಿಸದಿರುವುದು ಅತ್ಯಂತ ನೋವಿನ ಸಂಗತಿಯಾಗಿದೆ.

ಭಾರತ ಸರ್ಕಾರ ಇತ್ತೀಚೆಗೆ ಚುನಾವಣಾ ಬಾಂಡ್‍ಗಳ ಮೂಲಕ ಆಳುವ ಪಕ್ಷದ ಧನ ಸಂಗ್ರಹಣೆ ಯೋಜನೆಯನ್ನು ಸಂವಿಧಾನಬದ್ಧವಾಗಿ ರದ್ದುಗೊಳಿಸಿ ಭಾರತದ ಮರ್ಯಾದೆಯನ್ನು ಸರ್ವೋಚ್ಚ ನ್ಯಾಯಾಲಯ ಉಳಿಸಿರುವುದು ಸ್ವಾಗತಾರ್ಹ ಸಂಗತಿಯಾಗಿದೆ. ‘ಪ್ರಜಾಪ್ರಭುತ್ವವು ಚುನಾವಣೆಯೊಂದಿಗೆ ಪ್ರಾರಂಭವಾಗುವುದಿಲ್ಲ ಮತ್ತು ಚುನಾವಣೆಯೊಂದಿಗೆ ಕೊನೆಗೊಳ್ಳುವುದಿಲ್ಲ’ ಎಂದು ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ್ ನೇತೃತ್ವದ ಐವರು ನ್ಯಾಯಾಧೀಶರ ಸಂವಿಧಾನ ಪೀಠವು ನವೆಂಬರ್ 2ರಂದು ನೀಡಿರುವ ತೀರ್ಪು ಐತಿಹಾಸಿಕ ಮಹತ್ವ ಹೊಂದಿದೆ. ಭಾರತೀಯ ಸಂವಿಧಾನದಲ್ಲಿ ಧರ್ಮ, ಜಾತಿ, ಧನ ಮೊದಲಾದ ಅಂಶಗಳಿಂದ ಮುಕ್ತವಾದ ಚುನಾವಣಾ ವ್ಯವಸ್ಥೆಯನ್ನು ರೂಪಿಸುವಲ್ಲಿ ಸರ್ಕಾರ ಜವಾಬ್ದಾರಿಯುತ ಪಾತ್ರ ವಹಿಸಬೇಕೆಂದು ಸ್ಪಷ್ಟವಾಗಿ ಸೂಚಿಸಲಾಗಿದೆ.

ಚುನಾವಣಾ ಪ್ರಕ್ರಿಯೆಯನ್ನು ಭ್ರಷ್ಟಾಚಾರ ಮುಕ್ತಗೊಳಿಸದಿದ್ದಲ್ಲಿ ಪ್ರಜಾಸತ್ತೆ ಉಳಿಯುವುದಿಲ್ಲವೆಂಬ ಮಹತ್ವದ ಸಂದೇಶವನ್ನು ಸರ್ವೋಚ್ಚ ನ್ಯಾಯಾಲಯ 2024ರ ಮಹಾ ಚುನಾವಣೆಯ ಹಿನ್ನೆಲೆಯಲ್ಲಿ ನೀಡಿರುವುದು ಅರ್ಥಪೂರ್ಣವಾಗಿದೆ.

ವಿಶೇಷವಾಗಿ ಕಾರ್ಪೋರೇಟ್ ವಲಯದ ಕಬಂಧಬಾಹುಗಳಿಂದ ಪ್ರಜಾಸತ್ತೆಯನ್ನು ಮುಕ್ತಗೊಳಿಸುವುದು ಪ್ರಸ್ತುತ ಸಂದರ್ಭದಲ್ಲಿ ಅನಿವಾರ್ಯವಾಗಿದೆ. ಚುನಾವಣಾ ಪ್ರಕ್ರಿಯೆಯ ಪರಿಶುದ್ಧತೆ ಮತ್ತು ಸಮಗ್ರತೆಯನ್ನು ಭದ್ರಪಡಿಸುವುದು ಸಂಸತ್ತು, ಚುನಾವಣಾ ಆಯೋಗ ಮತ್ತು ನ್ಯಾಯಾಂಗಗಳ ಸಾಮೂಹಿಕ ಜವಾಬ್ದಾರಿಯಾಗಿದೆ.

2024ರ ಚುನಾವಣೆಯನ್ನು ರಾಮಮಂದಿರ ನಿರ್ಮಾಣದ ಆಧಾರದ ಮೇಲೆ ಗೆಲ್ಲುವ ಮತ್ತೊಂದು ಮಾರಣಾಂತಿಕ ಭ್ರಮೆಯನ್ನು ಮೋದಿ ಪ್ರಭುತ್ವ ಇತ್ತೀಚೆಗೆ ಸೃಷ್ಟಿಸಿದೆ. ಕೋಮುವಾದಿಗಳು ಮತ್ತು ಜಾತಿವಾದಿಗಳ ಅನೈತಿಕ ಮೈತ್ರಿ ಕರ್ನಾಟಕ ರಾಜ್ಯವನ್ನೂ ಒಳಗೊಂಡಂತೆ ಭಾರತದಲ್ಲಿ ಪ್ರಜಾಸತ್ತಾತ್ಮಕ ರಾಜಕೀಯ ಪ್ರಕ್ರಿಯೆಯನ್ನು ದುರ್ಬಲಗೊಳಿಸಿರುವ ಸಂಗತಿ ಪ್ರಜ್ಞಾವಂತರನ್ನು ಘಾಸಿಗೊಳಿಸಿದೆ. ಮತ್ತೊಮ್ಮೆ ರಾಜಪ್ರಭುತ್ವ ಮತ್ತು ಪುರೋಹಿತಶಾಹಿ ಜೊತೆಗೂಡಿ ಸಾಂವಿಧಾನಿಕ ಮೌಲ್ಯಗಳು ಮತ್ತು ಪ್ರಜಾಪ್ರಭುತ್ವವನ್ನು ಕಸಿದುಕೊಳ್ಳುವ ಹುನ್ನಾರವನ್ನು ಮನುವಾದಿ ಮಾಧ್ಯಮಗಳನ್ನು ದುರ್ಬಳಕೆ ಮಾಡಿಕೊಂಡು ನಡೆಸಿವೆ.

ಇಂದು ಇಡೀ ಭಾರತದ ಜನತೆ ಗಾಂಧಿ, ಅಂಬೇಡ್ಕರ್, ಲೋಹಿಯಾ, ಪೆರಿಯಾರ್, ಫುಲೆ, ನಾರಾಯಣ ಗುರು, ಗೋಪಾಲಗೌಡ, ಕುವೆಂಪು ಮೊದಲಾದ ದಾರ್ಶನಿಕರ ಮಾರ್ಗದರ್ಶನದಲ್ಲಿ ಕ್ವಿಟ್ ಎನ್‍ಡಿಎ ಮತ್ತು ಸೇವ್ ಇಂಡಿಯಾ ಚಳವಳಿಗೆ ಸನ್ನದ್ಧರಾಗಬೇಕಿದೆ.

WhatsApp Image 2025 11 17 at 4.01.47 PM
ಡಾ. ಮಹೇಶ್‌ ಚಂದ್ರ ಗುರು
+ posts

ನಿವೃತ್ತ ಪ್ರಾಧ್ಯಾಪಕ, ಮೈಸೂರು ವಿಶ್ವವಿದ್ಯಾಲಯ

ಪೋಸ್ಟ್ ಹಂಚಿಕೊಳ್ಳಿ:

ಡಾ. ಮಹೇಶ್‌ ಚಂದ್ರ ಗುರು
ಡಾ. ಮಹೇಶ್‌ ಚಂದ್ರ ಗುರು
ನಿವೃತ್ತ ಪ್ರಾಧ್ಯಾಪಕ, ಮೈಸೂರು ವಿಶ್ವವಿದ್ಯಾಲಯ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...