ದೆಹಲಿ ವಿವಿಯ ದೌಲತ್ ರಾಮ್ ಕಾಲೇಜು ಕೇಸರೀಕರಣ: ವಿದ್ಯಾರ್ಥಿಗಳು ಹೇಳುವುದೇನು?

Date:

ದೆಹಲಿ ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಆರ್‌ಎಸ್‌ಎಸ್‌ ಕಾರ್ಯಕರ್ತರೆ ತುಂಬಿಕೊಳ್ಳುತ್ತಿದ್ದಾರೆ. ವಿಶ್ವವಿದ್ಯಾಲಯವನ್ನು ಹಿಂದುತ್ವದ ಕೊಳಕು ಕೋಟೆಯನ್ನಾಗಿ ಪರಿವರ್ತಿಸಲಾಗುತ್ತಿದೆ. ಹಲವಾರು ಕಾಲೇಜುಗಳಲ್ಲಿ ಆರ್‌ಎಸ್‌ಎಸ್‌ ಪುಸ್ತಕಗಳನ್ನು ಸಹ ಬಿಡುಗಡೆ ಮಾಡಲಾಗುತ್ತಿದೆ...

ಅಯೋಧ್ಯೆಯ ರಾಮಮಂದಿರದ ಉದ್ಘಾಟನೆಯ ವಾರ್ಷಿಕೋತ್ಸವ ಆಚರಿಸಲು ದೆಹಲಿ ವಿಶ್ವವಿದ್ಯಾಲಯದ (ಡಿಯು) ದೌಲತ್ ರಾಮ್ ಕಾಲೇಜು (ಡಿಆರ್‌ಸಿ – ಮಹಿಳಾ ಕಾಲೇಜು) ಧಾರ್ಮಿಕ ಕಾರ್ಯಕ್ರಮವನ್ನು ಆಯೋಜಿಸಿತ್ತು. ‘ಶ್ರೀ ರಾಮಲಲ್ಲಾ ವಿರಾಜ್‌ಮಾನ್ ಕಿ ಪ್ರಾಣಪತಿಷ್ಠಾ ಕಿ ಪ್ರಥಮ ವರ್ಷಗಂತ್’ (ಶ್ರೀ ರಾಮಲಲ್ಲಾ ವಿರಾಜ್‌ಮಾನ್‌ನ ಪ್ರತಿಷ್ಠಾಪನೆಯ ಮೊದಲ ವಾರ್ಷಿಕೋತ್ಸವ) ಎಂಬ ಹೆಸರಿನಲ್ಲಿ ಕಾರ್ಯಕ್ರಮ ನಡೆದಿದೆ. ಡಿಆರ್‌ಸಿ ಪ್ರಾಂಶುಪಾಲೆ ಸವಿತಾ ರಾಯ್, ಆರ್‌ಎಸ್‌ಎಸ್‌ ಮತ್ತು ಬಿಜೆಪಿಯ ಮುಖಂಡರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದರು. ಇಡೀ ಕಾರ್ಯಕ್ರಮವು ಬಿಜೆಪಿ ಆಯೋಜಿಸಿದ್ದ ಕಾರ್ಯಕ್ರಮದಂತೆ ಕಾಣುತ್ತಿತ್ತು ಎಂದು ಹೇಳುತ್ತಾರೆ ಅಲ್ಲಿನ ವಿದ್ಯಾರ್ಥಿಗಳು.

ಕಾರ್ಯಕ್ರಮ ನಡೆಸಿದ್ದರ ಬಗ್ಗೆ ಡಿಆರ್‌ಸಿಯ ಹಲವಾರು ವಿದ್ಯಾರ್ಥಿಗಳು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಕಾರ್ಯಕ್ರಮವನ್ನು ಖಂಡಿಸಿದ್ದಾರೆ. ಬಹುತ್ವ ಮೌಲ್ಯಗಳು, ಸೌಹಾರ್ದತೆ ಮತ್ತು ಸುರಕ್ಷತೆಯ ಸ್ಥಳವಾಗಿದ್ದ ನಮ್ಮ ಕಾಲೇಜನ್ನು ಕೇಸರೀಕರಣಗೊಳಿಸುವ ಪ್ರಯತ್ನದ ಭಾಗವಾಗಿ ಈ ಕಾರ್ಯಕ್ರಮ ನಡೆದಿದೆ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅದರಲ್ಲೂ, ಕಾಲೇಜಿನ ಓರ್ವ ಪ್ರಾಧ್ಯಾಪಕಿ ಉದ್ದೇಶಪೂರ್ವಕವಾಗಿಯೇ ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಯನ್ನು ರಾಮಾಯಣದ ಬಗ್ಗೆ ಪ್ರಶ್ನಿಸಿದ್ದಾರೆ. ತಾನು ಹಿಜಾಬ್ ಧರಿಸಿದ್ದ ಕಾರಣಕ್ಕಾಗಿಯೇ ತಮ್ಮನ್ನು ಪ್ರಾಧ್ಯಾಪಕಿ ಪ್ರಶ್ನಿಸಿದರು. ಜಾತಿ-ಧರ್ಮಗಳನ್ನು ನೋಡದೆ ಬೋಧಿಸಬೇಕಾದ ಪ್ರಾಧ್ಯಾಪಕರು ಕೋಮುದ್ವೇಷದಿಂದ ವರ್ತಿಸುತ್ತಿದ್ದಾರೆ ಎಂದು ವಿದ್ಯಾರ್ಥಿನಿ ಬೇಸರ ವ್ಯಕ್ತಪಡಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಾರ್ಯಕ್ರಮವನ್ನು ದೂರದಿಂದಲೇ ಗಮನಿಸಿದ ದಲಿತ ವಿದ್ಯಾರ್ಥಿನಿಯೊಬ್ಬರು, ”ಡಿಆರ್‌ಸಿ ಸಿಬ್ಬಂದಿಗಳು ತಮ್ಮ ಪ್ರಬಲ ಜಾತಿಯ ಧೋರಣೆಗಳನ್ನು ಬಹಿರಂಗವಾಗಿ ಪ್ರದರ್ಶಿಸಿದರು. ಅವರ ನಡೆಯಲ್ಲಿ ನನಗೆ ಯಾವುದೇ ಆಶರ್ಯವಾಗಲಿಲ್ಲ. ಸಿಬ್ಬಂದಿಗಳು ಅಲ್ಪಸಂಖ್ಯಾತ ಸಮುದಾಯದ ವಿದ್ಯಾರ್ಥಿಗಳು ಮತ್ತು ಸಿಬ್ಬಂದಿಯನ್ನು ನಡೆಸಿಕೊಳ್ಳುವ ರೀತಿ, ಮಹಿಳಾ ಕಾಲೇಜಿನ ಮೂಲ ಉದ್ದೇಶವನ್ನು ಅಳಿಸಿಹಾಕಲು ಅವರೆಲ್ಲರೂ ಪ್ರಯತ್ನಿಸುತ್ತಿರುವ ಧೋರಣೆಗಳನ್ನು ಮೊದಲಿನಿಂದಲೂ ನೋಡಿದ್ದೇವೆ. ಈ ಕಾರ್ಯಕ್ರಮವು ಅವರ ಪ್ರಯತ್ನಗಳನ್ನು ಇನ್ನಷ್ಟು ದೃಢವಾಗಿ ಬಹಿರಂಗಗೊಳಿಸಿದೆ” ಎಂದು ಹೇಳಿದ್ದಾರೆ.

ಇನ್ನು, ಕಾಲೇಜಿನ ಗ್ರಂಥಾಲಯದಲ್ಲಿ ಹಿಂದು ಪುರಾಣಗಳನ್ನು ವಿವರಿಸುವ ಪುಸ್ತಕಗಳಿಗಾಗಿಯೇ ವಿಶೇಷ ವಿಭಾಗವನ್ನು ತೆರೆಯಲಾಗಿದ್ದು, ಅದಕ್ಕೆ ‘ರಾಮಾಲಯ’ ಎಂದು ಹೆಸರಿಡಲಾಗಿದೆ. ಅದನ್ನೂ ಕಾರ್ಯಕ್ರಮದಲ್ಲಿ ಉದ್ಘಾಟಿಸಲಾಗಿದೆ. ”ಕಾರ್ಯಕ್ರಮವು ವಿದ್ಯಾರ್ಥಿಗಳಿಗೆ ಸಾಂಪ್ರದಾಯಿಕ ಮೌಲ್ಯಗಳು ಮತ್ತು ಸಂಸ್ಕೃತಿಯನ್ನು ಅರ್ಥಮಾಡಿಕೊಳ್ಳಲು ಸಹಾಯ ಮಾಡಿದೆ” ಎಂದು ಬಿಜೆಪಿ ಬೆಂಬಲಿತ ಕೋಮುವಾದಿ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕಾರ್ಯದರ್ಶಿ ಮಹಿಮಾ ಸಿಂಗ್ ಹೇಳಿದ್ದಾರೆ.

ಕಾಲೇಜಿನ ಈ ನಡೆಯನ್ನು ಹಲವರು ಖಂಡಿಸಿದ್ದಾರೆ. ಡಿಆರ್‌ಸಿ ಕಾಲೇಜಿನ ಸಂಸ್ಥಾಪಕ, ಶಿಕ್ಷಣ ತಜ್ಞ ದೌಲತ್ ರಾಮ್ ಗುಪ್ತಾ ಅವರು ಪ್ರತಿನಿಧಿಸುತ್ತಿದ್ದ ಮೌಲ್ಯಗಳನ್ನು ಕಾಲೇಜಿನ ಪ್ರಸ್ತುತ ಆಡಳಿತ ಮಂಡಳಿ ನಾಶಮಾಡಿದೆ. ದೌಲತ್ ರಾಮ್ ಅವರು ಲಾಲಾ ಲಜಪತ್ ರಾಯ್ ಅವರ ಶಿಷ್ಯರಾಗಿದ್ದರು. ಮಹಾತ್ಮ ಗಾಂಧಿಯವರ ನೇತೃತ್ವದಲ್ಲಿ ಕೆಲಸ ಮಾಡಿದ್ದರು. ಇಂದು ಅವರ ಮೌಲ್ಯಗಳು-ಆಶಯಗಳಿಗೆ ವಿರುದ್ಧವಾಗಿ ಆಡಳಿತ ಮಂಡಳಿ ನಡೆದುಕೊಂಡಿದೆ ಎಂದು ಕಿಡಿಕಾರಿದ್ದಾರೆ.

ದೆಹಲಿ ವಿವಿ, ದೌಲತ್ ರಾಮ್ ಕಾಲೇಜು, ಡಿಆರ್‌ಸಿ, ಕೇಸರೀಕರಣ, Delhi University, Daulat Ram College, DRC, Saffronization,

ಕಾಲೇಜಿನಲ್ಲಿ ಇಂತಹ ಬಲಪಂಥೀಯ ವಿಚಾರಗಳೊಂದಿಗೆ ಕಾರ್ಯಕ್ರಮಗಳು ನಡೆದಿರುವುದು ಇದೇ ಮೊದಲಲ್ಲ. ಇದೇ ಕೊನೆಯೂ ಅಲ್ಲ. ಈ ಹಿಂದೆ, 2024ರ ಅಕ್ಟೋಬರ್‌ನಲ್ಲಿ ಡಿಆರ್‌ಸಿ ‘ಅಮೃತಕಾಲ ವಿಮರ್ಶೆ: ಭಾರತ್ @2027’ ಹೆಸರಿನಲ್ಲಿ ಕಾರ್ಯಕ್ರಮ ನಡೆಸಿತ್ತು. ಇದೀಗ, ಮುಂದಿನ ತಿಂಗಳು (ಫೆಬ್ರವರಿ 8) ಜಾಗತಿಕ ಭಯೋತ್ಪಾದನಾ ನಿಗ್ರಹ ಮಂಡಳಿಯ ಸಹಯೋಗದಲ್ಲಿ ‘ಅಮೃತಕಾಲಕ್ಕಾಗಿ ಭಾರತದ ಭೂ-ತಂತ್ರ’ ಎಂಬ ಕಾರ್ಯಕ್ರಮ ಆಯೋಜಿಸಲು ನಿರ್ಧರಿಸಿದೆ.

ಗಮನಾರ್ಹವಾಗಿ, ರೈತ ಹೋರಾಟಗಳನ್ನು ಬೆಂಬಲಿಸಿದ್ದ, ಅಂಬೇಡ್ಕರ್ ಮತ್ತು ಸಂವಿಧಾನದ ಮೌಲ್ಯಗಳ ಬಗ್ಗೆ ವಿದ್ಯಾರ್ಥಿಗಳಿಗೆ ಬೋಧಿಸುತ್ತಿದ್ದ ಕಾರಣಕ್ಕಾಗಿ ಪ್ರಾಧ್ಯಾಪಕಿ ರಿತು ಸಿಂಗ್ ಅವರನ್ನು 2020ರಲ್ಲಿ ಕಾಲೇಜು ಆಡಳಿತ ವಜಾಗೊಳಿಸಿತ್ತು. ದಲಿತ ಸಮುದಾಯಕ್ಕೆ ಸೇರಿದ ರಿತು ಸಿಂಗ್ ಅವರ ಬೋಧನೆ ಮತ್ತು ಅಭಿಪ್ರಾಯಗಳನ್ನು ಕಾಲೇಜಿನ ಪ್ರಾಂಶುಪಾಲರು ‘ಬೆದರಿಕೆ’ ಎಂದು ಬಣ್ಣಿಸಿದ್ದರು. ರಿತು ಸಿಂಗ್ ಅವರು ಕಾಲೇಜಿ ನಾಲ್ಕನೇ ಗೇಟ್‌ ಎದುರು 186 ದಿನಗಳಿಗೂ ಹೆಚ್ಚು ಕಾಲ ಪ್ರತಿಭಟನೆ ನಡೆಸಿದ್ದರು.

ಆ ವೇಳೆ, ಕೋವಿಡ್‌ ಲಾಕ್‌ಡೌನ್ ಘೋಷಿಸಲಾಯಿತು. 2020ರ ಆಗಸ್ಟ್‌ನಲ್ಲಿ ಲಾಕ್‌ಡೌನ್‌ ಮುಗಿದ ಬಳಿ ಕಾಲೇಜಿಗೆ ಬಂದ ಸಿಂಗ್‌ ಅವರಿಗೆ ಪ್ರಾಂಶುಪಾಲರು ಸೇರ್ಪಡೆ ಪತ್ರವನ್ನು ನೀಡಿರಲಿಲ್ಲ. ತಮ್ಮನ್ನು ಅಕ್ರಮವಾಗಿ ವಜಾಗೊಳಿಸಿದ್ದರ ವಿರುದ್ಧ ಕಾಲೇಜಿನ ಎದುರು ಮತ್ತೆ 10 ದಿನಗಳ ಕಾಲ ಪ್ರತಿಭಟನೆ ನಡೆಸಿದ್ದರು. ಆದರೂ, ಅವರನ್ನು ಮರು ನೇಮಕ ಮಾಡಿಕೊಳ್ಳಲಿಲ್ಲ. ಬದಲಾಗಿ, ಅವರ ವಿರುದ್ಧ ದೆಹಲಿ ಪೊಲೀಸರು ಸಾಂಕ್ರಾಮಿಕ ರೋಗ ಕಾಯ್ದೆಯಡಿ ಎರಡು ಎಫ್‌ಐಆರ್‌ಗಳನ್ನು ದಾಖಲಿಸಿದರು.

ಈ ವರದಿ ಓದಿದ್ದೀರಾ?: ಭಾರತಕ್ಕೆ ಮುಳುವಾದ ಟ್ರಂಪ್ ನೀತಿಗಳು; ದೇಶದ ಆರ್ಥಿಕತೆಯ ಗತಿ ಏನು?

”ಶಿಕ್ಷಣ ಮತ್ತು ಧರ್ಮವು ಪರಸ್ಪರ ಪ್ರತ್ಯೇಕವಾಗಿರಬೇಕು. ದೆಹಲಿ ವಿಶ್ವವಿದ್ಯಾಲಯದ ಕುಲಪತಿಯ ಬೆಂಬಲವಿಲ್ಲದೆ ಕಾಲೇಜಿನಲ್ಲಿ ಇಂತಹ ಕಾರ್ಯಕ್ರಮಗಳು ನಡೆಯಲು ಸಾಧ್ಯವಿಲ್ಲವೆಂದು ನಾನು ಭಾವಿಸುತ್ತೇನೆ. ದೆಹಲಿ ವಿಶ್ವವಿದ್ಯಾಲಯವು ಆರ್‌ಎಸ್‌ಎಸ್ ಸಿದ್ಧಾಂತಕ್ಕೆ ನೆಲೆಯಾಗುತ್ತಿದೆ. ಡಿಆರ್‌ಸಿ ಪ್ರಾಂಶುಪಾಲೆ ಸವಿತಾ ರಾಯ್ ಅವರ ಸಹಕಾರ ಹೆಚ್ಚಿದೆ. ದೆಹಲಿ ವಿಶ್ವವಿದ್ಯಾಲಯದ ಬೋಧಕ ಮತ್ತು ಬೋಧಕೇತರ ಹುದ್ದೆಗಳಿಗೆ ಆರ್‌ಎಸ್‌ಎಸ್‌ ಕಾರ್ಯಕರ್ತರೆ ತುಂಬಿಕೊಳ್ಳುತ್ತಿದ್ದಾರೆ. ವಿಶ್ವವಿದ್ಯಾಲಯವನ್ನು ಹಿಂದುತ್ವದ ಕೊಳಕು ಕೋಟೆಯನ್ನಾಗಿ ಪರಿವರ್ತಿಸಲಾಗುತ್ತಿದೆ. ಹಲವಾರು ಕಾಲೇಜುಗಳಲ್ಲಿ ಆರ್‌ಎಸ್‌ಎಸ್‌ ಪುಸ್ತಕಗಳನ್ನು ಸಹ ಬಿಡುಗಡೆ ಮಾಡಲಾಗುತ್ತಿದೆ” ಎಂದು ಸಿಂಗ್ ಆರೋಪಿಸಿದ್ದಾರೆ.

ದೆಹಲಿ ವಿಶ್ವವಿದ್ಯಾಲಯದ ಹಲವಾರು ಕಾಲೇಜುಗಳ ಕ್ಯಾಂಪಸ್‌ನಲ್ಲಿ ಹೋಮ-ಹವನ, ಪೂಜೆಗಳು ಹಾಗೂ ರಾಮಾಯಣ ಬೋಧನೆ ರೀತಿಯ ಕಾರ್ಯಕ್ರಮಗಳನ್ನು ಆಯೋಜಿಸುವ ಪ್ರವೃತ್ತಿಗಳು ನಡೆಯುತ್ತಿವೆ. ದೆಹಲಿಯ ಲಕ್ಷ್ಮಿಬಾಯಿ ಕಾಲೇಜು, ಹಂಸರಾಜ್ ಕಾಲೇಜುಗಳು ಹಿಂದಿನಿಂದಲೂ ಇಂತಹ ಕಾರ್ಯಕ್ರಮಗಳನ್ನು ಆಯೋಜಿಸಿವೆ. 2022ರಲ್ಲಿ, ಲಕ್ಷ್ಮಿಬಾಯಿ ಕಾಲೇಜಿನ ಪ್ರಾಂಶುಪಾಲರು ದೈನಂದಿನ ಬೆಳಗಿನ ಸಮಯದಲ್ಲಿ ಭಗವದ್ಗೀತೆ ಪಠಣ ಮತ್ತು ತಿಂಗಳಿಗೆ ಒಮ್ಮೆ ಸುಂದರ್‌ಕಾಂಡ್‌ ಪಠಣ ಮಾಡುವ ಆಚರಣೆಯನ್ನು ಆರಂಭಿಸಿದ್ದರು.

ಮತ್ತೊಂದು ಗಂಭೀರ ವಿಚಾರವೆಂದರೆ, ದೆಹಲಿ ವಿಶ್ವವಿದ್ಯಾಲಯದ ಅಡಿಯಲ್ಲಿರುವ ಕೆಲವು ಕಾಲೇಜುಗಳನ್ನು ಖಾಸಗೀಕರಣಗೊಳಿಸುವ ಪ್ರಯತ್ನಗಳು ನಡೆಯುತ್ತಿವೆ. ಡಿಆರ್‌ಸಿಯನ್ನೂ ಖಾಸಗೀಕರಣ ಮಾಡುವ ಹುನ್ನಾರವಿದೆ ಎಂಬ ಆರೋಪಗಳಿವೆ.

ಮಾಹಿತಿ ಮೂಲ: ದಿ ವೈರ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...