ಬ್ರಿಜ್ ಭೂಷಣ್ ಭಕ್ತಪಡೆಯ ಸಮರ್ಥನೆಗೆ ಅರ್ಥವಿದೆಯೇ?

Date:

ಒಬ್ಬ ಆಪಾದಿತನ ಅನಗತ್ಯ ರಕ್ಷಣೆಗೆ ಪ್ರಭುತ್ವ ಹೊರಟರೆ, ಅದು ಒಂದು ಸುಳ್ಳಿಗೆ ಹತ್ತು ಸುಳ್ಳು ಸೇರಿಸಬೇಕಾಗುತ್ತದೆ. ಬರುವ ವರ್ಷದ ಸಾರ್ವತ್ರಿಕ ಚುನಾವಣೆಗಳ ಮುನ್ನ ಇದು ಆಡಳಿತಪಕ್ಷಕ್ಕೆ ಹೊರಲಾಗದ ಹೊರೆಯಾಗುವ ಎಲ್ಲ ಲಕ್ಷಣಗಳೂ ಈ ಪ್ರಕರಣದಲ್ಲಿ ಕಾಣಿಸುತ್ತಿವೆ.

೧. ಈ ಇಡಿಯ ಗದ್ದಲದ ಹಿಂದೆ ಹರ್ಯಾಣಾ ಕುಸ್ತಿ ಫೆಡರೇಷನ್ ಮತ್ತು ಭಾರತೀಯ ಕುಸ್ತಿ ಫೇಡರೇಶನ್ ಗಳ ನಡುವಿನ ರಾಜಕೀಯ ಮೇಲಾಟ ಇದೆ. (ಇದು ಭಕ್ತವೃಂದದ ಕಳಕಳಿ)

೨. FIR ಆಗಿದೆ. ಲೈಂಗಿಕ ಕಿರುಕುಳ ಆಗಿದ್ದರೆ ಪ್ರೂಫ್ ಕೊಡಿ. ಅದಕ್ಕಿಂತ ಮೊದಲೇ ಅರೆಸ್ಟ್ ಮಾಡಿ ಎಂದರೆ ಹೇಗೆ? (ಇದು ಒಬ್ಬರು ಮಾಜೀ ಪೊಲೀಸ್ ಅಧಿಕಾರಿ ಹೇಳಿದ್ದು!)

೩. ಹೊಳೆಯಲ್ಲಿ ಪದಕ ಮುಳುಗಿಸಿದರೆ ನನಗೆ ಫಾಸಿ ಆಗದು. ನ್ಯಾಯಾಲಯದಲ್ಲಿ ಪ್ರೂಫ್ ಕೊಡಿ. ಆಗ ಫಾಸಿ ಆದೀತು. (ಸ್ವತಃ ಆರೋಪಿ ಹೇಳಿದ್ದು – ವೀಡಿಯೊ ಇದೆ).

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗ ಈ ಪ್ರಕರಣದ ಫ್ಯಾಕ್ಟ್‌ಗಳನ್ನು ಗಮನಿಸಿ.

೧. ಈ ಪ್ರಕರಣವನ್ನು ಸಂತ್ರಸ್ತೆಯರು ಪೊಲೀಸ್ ವ್ಯವಸ್ಥೆಯ ಬಳಿ ಕೊಂಡೊಯ್ದಾಗ, ಅವರು FIR ದಾಖಲಿಸಲಿಲ್ಲ. ಕಡೆಗೆ ಸುಪ್ರೀಂಕೋರ್ಟು ಹಸ್ತಕ್ಷೇಪ ಮಾಡಿದ ಬಳಿಕ ಪ್ರಕರಣ ದಾಖಲಾಯಿತು. ಆ ಬಳಿಕ ಇಲ್ಲಿಯ ತನಕ ಆಪಾದಿತರನ್ನು ಪೊಲೀಸ್ ತನಿಖೆಗೆ ಒಳಪಡಿಸಿಲ್ಲ, ಬಂಧಿಸಿಲ್ಲ.

೨. ಒಬ್ಬ ವ್ಯಕ್ತಿ ಲೈಂಗಿಕ ಕಿರುಕುಳ ನೀಡಿದ ಸಂದರ್ಭದಲ್ಲಿ ಅದನ್ನು ಸಂತ್ರಸ್ತೆ “ಸಾಕ್ಷ್ಯ ಸಮೇತ” ಕಾನೂನಿನ ಎದುರು ಸಾಬೀತುಪಡಿಸುವುದು ಹೇಗೆ? ನ್ಯಾಯಶಾಸ್ತ್ರದ ತತ್ವಗಳು ಬೇರೆಲ್ಲ ಪ್ರಕರಣಗಳಲ್ಲಿ “ಆಪಾದನೆ” ಮಾಡಿದಾಗ ಆಪಾದನೆಯನ್ನು ಸಾಬೀತುಪಡಿಸುವುದು ಆಪಾದನೆ ಮಾಡಿದವರ ಹೊಣೆ ಎಂದು ಹೇಳುತ್ತವೆ. ಆದರೆ ಲೈಂಗಿಕ ಪ್ರಕರಣಗಳಲ್ಲಿ (ರೇಪ್/ಕಿರುಕುಳ ಇತ್ಯಾದಿ), ಸಂತ್ರಸ್ತೆ “ಅಂತಹದೊಂದು ಕೃತ್ಯ ತನ್ನಮೇಲೆ ಆಗಿದೆ” ಎಂದರೆ ಸಾಕಾಗುತ್ತದೆ. ಈ ಆಪಾದನೆಯನ್ನು ಅಲ್ಲವೆಂದು ಸಾಬೀತು ಪಡಿಸುವುದು (burden of proof), ಆರೋಪಿಯ ಹೊಣೆ. POCSOದಂತಹ ಹೀನಸ್ ಪ್ರಕರಣಗಳಲ್ಲಿ ಸಾಮಾನ್ಯವಾಗಿ ಪ್ರಕರಣ ದಾಖಲಾದ ತಕ್ಷಣ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡು ತನಿಖೆಗೆ ಒಳಪಡಿಸುವುದು ಮತ್ತು ಸಂತ್ರಸ್ತರಿಗೆ ಹಾನಿ ಮಾಡಲು/ಅವರ ಮೇಲೆ ಪ್ರಭಾವ ಬೀರಲು ಆರೋಪಿಗೆ ಅವಕಾಶ ನಿರಾಕರಿಸುವುದು ಸಹಜ ನ್ಯಾಯ. ಅದು ಈ ಪ್ರಕರಣದಲ್ಲಿ ಆಗಿಲ್ಲ. ಇದೆಲ್ಲ ಚೆನ್ನಾಗಿ ಗೊತ್ತಿರುವ ಒಬ್ಬರು ಮಾಜೀ ಪೊಲೀಸ್ ಅಧಿಕಾರಿ ಹೀಗೆ ತಟ್ಟಿಹಾರಿಸುವ ಕೆಲಸ ಮಾಡಿದಾಗ ನಿರಾಸೆ ಆಗುತ್ತದೆ.

೩. ಸ್ವತಃ ಆರೋಪಿ, ತಾನೇ ಸ್ವತಃ ಕಾನೂನು ನಿರೂಪಕನೂ, ಜನಪ್ರತಿನಿಧಿಯೂ ಆಗಿದ್ದು, ತನ್ನ ಮೇಲೆ ಗಂಭೀರ ಆಪಾದನೆ ಹೊರಿಸಿದವರ ವಿರುದ್ಧ ಸಭೆಗಳನ್ನು ಏರ್ಪಡಿಸಿ ಬೆದರಿಕೆಯ ಧ್ವನಿಯಲ್ಲಿ ಮಾತನಾಡುವುದು, ಪ್ರಕರಣವನ್ನು ರಾಜಕಿಯೀಕರಣಗೊಳಿಸುವುದು… ತನ್ನ ಅಪರಾಧವನ್ನು ಮುಚ್ಚಿಹಾಕುವ, ಸಂತ್ರಸ್ತರನ್ನು ಬೆದರಿಸುವ ಪ್ರಯತ್ನ ಅನ್ನಿಸುತ್ತದೆ. ಕಾನೂನು ತನ್ನ ಕೆಲಸ ಮಾಡದಿದ್ದಾಗ ಇದೆಲ್ಲ ಆಗುವುದು ಸಾಧ್ಯ.

೪. ಇದೆಲ್ಲದಕ್ಕಿಂತ ಹೆಚ್ಚಾಗಿ, ಒಂದು ಪ್ರಭುತ್ವ, ತನ್ನ ಸದಸ್ಯರೊಬ್ಬರ ಮೇಲೆ ಗಂಭೀರ ಆಪಾದನೆ ಬಂದಾಗ, ನಾಗರಿಕವಾಗಿ ವರ್ತಿಸುವುದು ಹೇಗೆ? ಅದು ಆಪಾದಿತನಿಗೆ ಕಾನೂನಿನ ಅಡಿ ತನ್ನ ನಿರಪರಾಧಿತ್ವ ಸಾಬೀತು ಮಾಡಲು ಹೇಳಬೇಕು. ಅದರ ಬದಲು ತಾನೇ ಸ್ವತಃ ಗಾಢ ಮೌನ ತೋರಿಸಿದರೆ, ಅದು ಬೇರೆಯೇ ಅರ್ಥ ಹೊರಡಿಸುತ್ತದೆ. ತಪ್ಪು ಆಗಿಲ್ಲ ಎಂದಾದರೆ ಅದನ್ನು ಸಾಬೀತುಪಡಿಸಲು ಕಾನೂನು ಪ್ರಕ್ರಿಯೆಯ ಒಳಗೆ ಹೆಚ್ಚು ಸಮಯ ಬೇಕಾಗದು.

೫. ಕುಸ್ತಿ ಫೆಡರೇಷನ್ನಿನ ರಾಜಕೀಯಗಳ ಬಗ್ಗೆ ತಿಳಿಯಲು ಒಮ್ಮೆ ಅವರ ವೆಬ್‌ಸೈಟ್ ಕಡೆ ಹೋಗಿಬನ್ನಿ. ಅಲ್ಲಿರುವ ಯಾವುದೇ ಸರ್ಕ್ಯುಲರ್‌ಗಳಿಗೆ (ಈ ರಾಜಕೀಯಕ್ಕೆ ಸಂಬಂಧಿಸಿದಂತಹವು) ಅವು ಪ್ರಕಟಗೊಂಡ ದಿನಾಂಕವಾಗಲೀ, ಸರ್ಕ್ಯುಲರ್ ನಂಬರ್ ಇತ್ಯಾದಿಗಳಾಗಲೀ ಇಲ್ಲ. ಇವೆಲ್ಲವೂ ಈಗ ಪ್ರಕರಣ ತೀವ್ರಗೊಂಡ ಬಳಿಕದ ಸೃಷ್ಟಿ ಆಗಿರುವ ಸಾಧ್ಯತೆಗಳೂ ಇಲ್ಲದಿಲ್ಲ. ಅದು ಹೌದಾಗಿದ್ದಲ್ಲಿ, ಇವೆಲ್ಲವೂ ಸಾಕ್ಷ್ಯ ತಿರುಚುವ ಪ್ರಯತ್ನಗಳೇ. ನ್ಯಾಯಾಂಗೀಯ ತಪಾಸಣೆಗಳಲ್ಲಿ ಇವು ಸುಲಭವಾಗಿ ಬಯಲಾಗಬಲ್ಲವು.

ಒಬ್ಬ ಆಪಾದಿತನ ಅನಗತ್ಯ ರಕ್ಷಣೆಗೆ ಪ್ರಭುತ್ವ ಹೊರಟರೆ, ಅದು ಒಂದು ಸುಳ್ಳಿಗೆ ಹತ್ತು ಸುಳ್ಳು ಸೇರಿಸಬೇಕಾಗುತ್ತದೆ. ಬರುವ ವರ್ಷದ ಸಾರ್ವತ್ರಿಕ ಚುನಾವಣೆಗಳ ಮುನ್ನ ಇದು ಆಡಳಿತಪಕ್ಷಕ್ಕೆ ಹೊರಲಾಗದ ಹೊರೆಯಾಗುವ ಎಲ್ಲ ಲಕ್ಷಣಗಳೂ ಈ ಪ್ರಕರಣದಲ್ಲಿ ಕಾಣಿಸುತ್ತಿವೆ.

ರಾಜಾರಾಂ ತಲ್ಲೂರು
ರಾಜಾರಾಂ ತಲ್ಲೂರು
+ posts

ಹಿರಿಯ ಪತ್ರಕರ್ತರು, ರಾಜಕೀಯ ವಿಶ್ಲೇಷಕರು. ಉಡುಪಿಯ ಕುಂದಾಪುರ ತಾಲ್ಲೂಕಿನ ತಲ್ಲೂರು ಗ್ರಾಮದಲ್ಲಿ 1969ರಲ್ಲಿ ಜನಿಸಿದರು. ಕರಾವಳಿ ಅಲೆ, ಕೆನರಾಟೈಮ್ಸ್, ಜನಂತರಂಗ ಬಳಗದಲ್ಲಿ ಪತ್ರಕರ್ತರಾಗಿ ದುಡಿಮೆ ಆರಂಭಿಸಿದರು. ಪಟ್ಟಾಂಗ ಎಂಬ ಪತ್ರಿಕೆ ಮತ್ತು ಸವಿ ಎಂಬ ಜಾಹೀರಾತು ಏಜೆನ್ಸಿ ಪ್ರಾರಂಭಿಸಿದರು. 2000ರಲ್ಲಿ ಉದಯವಾಣಿ ಆನ್ ಲೈನ್ ಆವೃತ್ತಿಗೆ ಸುದ್ದಿ ಸಂಪಾದಕರಾಗಿ, ಆರೋಗ್ಯ ಪುರವಣಿಗೆ ಸಂಪಾದಕರಾಗಿ ಸೇವೆ ಸಲ್ಲಿಸಿದರು. 2008ರಿಂದ ತಲ್ಲೂರಿನಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್(ರಿ.) ಮೂಲಕ ನಾರಾಯಣ ವಿಶೇಷ ಮಕ್ಕಳ ಶಾಲೆ ಮತ್ತಿತರ ಸಾಮಾಜಿಕ ಚಟುವಟಿಕೆಗಳಲ್ಲಿ ನಿರತ ಟ್ರಸ್ಟಿಯಾಗಿ ಸೇವೆ ಸಲ್ಲಿಸುತ್ತಲೇ 2015ರಲ್ಲಿ ಪ್ರೊಡಿಜಿ ಮುದ್ರಣ -ಸಂಸ್ಥೆ ಆರಂಭಿಸಿದರು. ಪ್ರಕಟಿತ ಕೃತಿಗಳು: 'ನುಣ್ಣನ್ನ ಬೆಟ್ಟ' (2017), 'ತಲ್ಲೂರು ಎಲ್ ಎನ್'(2018), 'ಏನಿದು ಪೌರತ್ವ ಕಾಯಿದೆ? (2019), 'ದುಪ್ಪಟ್ಟು'(2020), ಕರಿಡಬ್ಬಿ(2022). ಪುರಸ್ಕಾರಗಳು: ಅಮ್ಮ ಪ್ರಶಸ್ತಿ(2017), ಶಿವರಾಮ ಕಾರಂತ ಪುರಸ್ಕಾರ-2019 (2020).

ಪೋಸ್ಟ್ ಹಂಚಿಕೊಳ್ಳಿ:

ರಾಜಾರಾಂ ತಲ್ಲೂರು
ರಾಜಾರಾಂ ತಲ್ಲೂರು
ಹಿರಿಯ ಪತ್ರಕರ್ತರು, ರಾಜಕೀಯ ವಿಶ್ಲೇಷಕರು. ಉಡುಪಿಯ ಕುಂದಾಪುರ ತಾಲ್ಲೂಕಿನ ತಲ್ಲೂರು ಗ್ರಾಮದಲ್ಲಿ 1969ರಲ್ಲಿ ಜನಿಸಿದರು. ಕರಾವಳಿ ಅಲೆ, ಕೆನರಾಟೈಮ್ಸ್, ಜನಂತರಂಗ ಬಳಗದಲ್ಲಿ ಪತ್ರಕರ್ತರಾಗಿ ದುಡಿಮೆ ಆರಂಭಿಸಿದರು. ಪಟ್ಟಾಂಗ ಎಂಬ ಪತ್ರಿಕೆ ಮತ್ತು ಸವಿ ಎಂಬ ಜಾಹೀರಾತು ಏಜೆನ್ಸಿ ಪ್ರಾರಂಭಿಸಿದರು. 2000ರಲ್ಲಿ ಉದಯವಾಣಿ ಆನ್ ಲೈನ್ ಆವೃತ್ತಿಗೆ ಸುದ್ದಿ ಸಂಪಾದಕರಾಗಿ, ಆರೋಗ್ಯ ಪುರವಣಿಗೆ ಸಂಪಾದಕರಾಗಿ ಸೇವೆ ಸಲ್ಲಿಸಿದರು. 2008ರಿಂದ ತಲ್ಲೂರಿನಲ್ಲಿ ತಲ್ಲೂರು ಫ್ಯಾಮಿಲಿ ಟ್ರಸ್ಟ್(ರಿ.) ಮೂಲಕ ನಾರಾಯಣ ವಿಶೇಷ ಮಕ್ಕಳ ಶಾಲೆ ಮತ್ತಿತರ ಸಾಮಾಜಿಕ ಚಟುವಟಿಕೆಗಳಲ್ಲಿ ನಿರತ ಟ್ರಸ್ಟಿಯಾಗಿ ಸೇವೆ ಸಲ್ಲಿಸುತ್ತಲೇ 2015ರಲ್ಲಿ ಪ್ರೊಡಿಜಿ ಮುದ್ರಣ -ಸಂಸ್ಥೆ ಆರಂಭಿಸಿದರು. ಪ್ರಕಟಿತ ಕೃತಿಗಳು: 'ನುಣ್ಣನ್ನ ಬೆಟ್ಟ' (2017), 'ತಲ್ಲೂರು ಎಲ್ ಎನ್'(2018), 'ಏನಿದು ಪೌರತ್ವ ಕಾಯಿದೆ? (2019), 'ದುಪ್ಪಟ್ಟು'(2020), ಕರಿಡಬ್ಬಿ(2022). ಪುರಸ್ಕಾರಗಳು: ಅಮ್ಮ ಪ್ರಶಸ್ತಿ(2017), ಶಿವರಾಮ ಕಾರಂತ ಪುರಸ್ಕಾರ-2019 (2020).

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಅಸ್ಸಾಂ ಚುನಾವಣೆ: ಬಿಜೆಪಿಯ ಹತಾಶ ‘ಆಪರೇಷನ್’ ತಂತ್ರ, ಪುಟಿದೇಳಲು ಕಾಂಗ್ರೆಸ್‌ಗೆ ಸುವರ್ಣಾವಕಾಶ

ಬಿಜೆಪಿಯ ಎಲ್ಲಾ ರಾಜಕೀಯ ಮೇಲಾಟಗಳನ್ನು ಅಸ್ಸಾಂನ ಮತದಾರರು ಬಹಳ ಸೂಕ್ಷ್ಮವಾಗಿ ಗಮನಿಸುತ್ತಿದ್ದಾರೆ....

IPL 2026: ಟೂರ್ನಿಗೂ ಮುನ್ನವೇ ಫ್ರಾಂಚೈಸಿಗಳಿಗೆ ಗಾಯದ ಬಿಸಿ; ಇಲ್ಲಿದೆ ಅಲಭ್ಯ ಆಟಗಾರರ ಸಂಪೂರ್ಣ ಪಟ್ಟಿ

ಐಪಿಎಲ್ 2026 ಟೂರ್ನಿಯು ಗಾಯದ ಸಮಸ್ಯೆಗಳ ಕರಿನೆರಳಿನಲ್ಲೇ ಆರಂಭವಾಗಲು ಸಜ್ಜಾಗಿದೆ. ಹಲವು...

ಕೇರಳ ಚುನಾವಣೆ | ಕಾಂಗ್ರೆಸ್‌ನಲ್ಲಿ ಸಿಎಂ ಸ್ಥಾನಕ್ಕೆ ನಾಲ್ವರ ಪೈಪೋಟಿ; ಹಿಂದೆ ಸರಿಯುವ ಮಾತೇ ಇಲ್ಲ!

ಕಾಂಗ್ರೆಸ್‌ನ ನಾಲ್ವರು ನಾಯಕರು ಒಳಗೆಷ್ಟು ಅಸಮಾಧಾನ, ಪೈಪೋಟಿ ಹೊಂದಿದ್ದರೂ ರಾಜ್ಯದ ಕಾಂಗ್ರೆಸ್...

ಐಪಿಎಲ್ | ಅತಿ ಹೆಚ್ಚು ವಿಕೆಟ್ ಪಡೆದರೂ ‘ಪರ್ಪಲ್ ಕ್ಯಾಪ್’ ಒಲಿಯದ 5 ದಿಗ್ಗಜ ಬೌಲರ್‌ಗಳು

ಐಪಿಎಲ್ ಇತಿಹಾಸದಲ್ಲಿ ಬೌಲರ್‌ಗಳ ಸಾಧನೆಯನ್ನು ಗುರುತಿಸಲು ಪ್ರತಿ ಆವೃತ್ತಿಯಲ್ಲಿ ಅತಿ ಹೆಚ್ಚು...