ಶರದ್ ಪವಾರ್ ಅವರನ್ನು ಬಗ್ಗಿಸುವುದು ಅಷ್ಟು ಸುಲಭವಲ್ಲ. ಇದನ್ನು Heroically ಹೇಳುತ್ತಿಲ್ಲ

Date:

ಈ ಕೆಳಗಿನ ಚಿತ್ರ ನೋಡಿ. ಮಹಾರಾಷ್ಟ್ರದಲ್ಲಿ 2019ರ ವಿಧಾನಸಭಾ ಚುನಾವಣೆಯ ದೃಶ್ಯವಿದು. ಯಾವ ರಾಜಕೀಯ ವಿಶ್ಲೇಷಕರೂ ನಿರೀಕ್ಷಿಸದಷ್ಟು ವಿಧಾನಸಭಾ ಕ್ಷೇತ್ರಗಳನ್ನು ಗೆದ್ದುಕೊಂಡ ಶರದ್ ಪವಾರ್, ಆಗ ಹೊಸ ಸರಕಾರ ರಚಿಸುವಲ್ಲಿ King Maker ಆಗಿದ್ದರು!

sharad pawar rain speech

ಮಹಾರಾಷ್ಟ್ರದಲ್ಲಿ ಉದ್ಧವ್ ಠಾಕ್ರೆಯ ಶಿವಸೇನೆ ಮತ್ತು ಸೋನಿಯಾ ಗಾಂಧಿಯವರ ಕಾಂಗ್ರೆಸ್ ಎರಡನ್ನೂ ಮಾತುಕತೆಯ ಟೇಬಲ್ ಮುಂದೆ ಕೂರಿಸಿ ಕಾಮಗಾರ್ ಅಗಾಡಿ ಮೈತ್ರಿಕೂಟವನ್ನು ರಚಿಸಿ ಮಹಾರಾಷ್ಟ್ರದ ಅಧಿಕಾರವನ್ನು ಕೈವಶ ಮಾಡಿಕೊಂಡವರು ಇದೇ ಶರದ್ ಪವಾರ್!

ಈಗ ಅದೇ ರಾಜಕೀಯ ತಂತ್ರಗಾರಿಕೆಯನ್ಬು ಒರಟಾಗಿ ಶರದ್ ಪವಾರ್ ವಿರುದ್ಧ ಪ್ರಯೋಗಿಸಿದ್ದಾರೆ ಬಿಜೆಪಿಯ ನರೇಂದ್ರ ಮೋದಿ ಮತ್ತು ಅಮಿತ್ ಶಾ. ಮೊದಲು ಶಿವಸೇನೆಯನ್ನು ಒಡೆದು ಉದ್ಧವ್ ಠಾಕ್ರೆಯನ್ನೇ ಮನೆಯಿಂದ ಹೊರ ಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈಗ ಎನ್‌ಸಿಪಿಯಿಂದ ಶರದ್ ಪವಾರ್ ಅವರನ್ನೇ ಹೊರತಳ್ಳುವ ಯತ್ನ ನಡೆದಿದೆ! ಇದೊಂದು ಒರಟು ಪ್ರಯೋಗ. ಯಾಕೆಂದರೆ, ಹಿಂದೆ ಉದ್ಧವ್ ಠಾಕ್ರೆ, ಯಾವ ಪಕ್ಷವನ್ನೂ ಒಡೆದಿರಲಿಲ್ಲ, ಪೂರ್ತಿ ಪಕ್ಷವೇ ಎನ್‌ಸಿಪಿ ಮತ್ತು ಕಾಂಗ್ರೆಸ್ ಜೊತೆ ಸೇರಿ ಸರ್ಕಾರ ರಚಿಸಿತ್ತು. ಪ್ರಜಾಪ್ರಭುತ್ವದ ನೇರ ದಾರಿಯದು. ಈಗ ಬಿಜೆಪಿ ನಡೆಸಿರುವುದು ಪ್ರಜಾಪ್ರಭುತ್ವದ ಬಲವಂತದ ಗರ್ಭಪಾತ.

ಶರದ್ ಪವಾರ್ ನೇತೃತ್ವದಲ್ಲಿ ಹಿಂದೆ ಉದ್ದವ್ ಠಾಕ್ರೆ ಸಿಎಂ ಆಗಿ ಸಮ್ಮಿಶ್ರ ಸರಕಾರ ರಚನೆಯಾದಾಗ ನಡೆದ ರಾಜಕೀಯ ಸಮರದ ಹಿಂದೆ ಇದ್ದದ್ದು Maratha Pride Vs Brahmin Pride ಸಿದ್ದಾಂತ. ಈ ಸಿದ್ದಾಂತವನ್ನು ಬುಡಮೇಲು ಮಾಡುವುದು ಮೋದಿ- ಶಾ ಜೋಡಿ ಅಂದುಕೊಂಡಷ್ಟು ಸುಲಭವಲ್ಲ.

ಈ ಸುದ್ದಿ ಓದಿದ್ದೀರಾ? ಶರದ್‌ ಪವಾರ್‌ಗೆ ಕೈಕೊಟ್ಟು ಮೈತ್ರಿ ಸರ್ಕಾರದಲ್ಲಿ ಡಿಸಿಎಂ ಪಟ್ಟ ಅಲಂಕರಿಸಿದ ಅಜಿತ್‌ ಪವಾರ್

ಮಹಾರಾಷ್ಟ್ರದಲ್ಲಿ 2024ರ ಲೋಕಸಭಾ ಚುನಾವಣೆಯನ್ನು ಗೆಲ್ಲುವ ಮೋದಿ- ಶಾ ತಂತ್ರವನ್ನು ವಿಫಲಗೊಳಿಸಲು ಶರದ್ ಪವಾರ್‌ಗೆ ಮಾತ್ರ ಸಾಧ್ಯ. ಪವಾರ್ ಮತ್ತೆ ಮರಾಠ ಹೆಮ್ಮೆಯನ್ನು ಉದ್ದೀಪಿಸಿದರೆ ಅದನ್ನು ಯಾವ ಪಕ್ಷಾಂತರದ ಮಳೆಯೂ ತಡೆಯುವುದು ಕಷ್ಟಸಾಧ್ಯ.

ಅದು ಬಿಜೆಪಿಗೂ ಗೊತ್ತಿದೆ. ಕೇಂದ್ರ ಸರಕಾರ ತನ್ನ ಕೈಯಲ್ಲಿದೆ ಎನ್ನುವ ಗರ್ವದಿಂದ ಬಿಜೆಪಿ ಈಗ ಮುಂದಡಿಯಿಟ್ಟಿದೆ. ಆದರೆ ಬಿಜೆಪಿ ಈಗ ಕರ್ನಾಟಕದ ಲೇಟೆಸ್ಟ್ ಮುಖಭಂಗವನ್ನು ಮರೆತಂತಿದೆ.

b m hanif
ಬಿ ಎಂ ‌ ಹನೀಫ್
+ posts

ಹಿರಿಯ ಪತ್ರಕರ್ತ, ಲೇಖಕ

ಪೋಸ್ಟ್ ಹಂಚಿಕೊಳ್ಳಿ:

ಬಿ ಎಂ ‌ ಹನೀಫ್
ಬಿ ಎಂ ‌ ಹನೀಫ್
ಹಿರಿಯ ಪತ್ರಕರ್ತ, ಲೇಖಕ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

84.56 ಲಕ್ಷ ಕೋಟಿ ರೂ. ನಷ್ಟದ ಅಮೆರಿಕ – ಇರಾನ್ ಸಂಘರ್ಷದಲ್ಲಿ ನಿಜಕ್ಕೂ ಗೆದ್ದವರಾರು?

ಅಮೆರಿಕದ ಬಹುಕೋಟಿ ಡಾಲರ್ ವೆಚ್ಚದ 'ಪೇಟ್ರಿಯಾಟ್' ಮತ್ತು 'ಥಾಡ್' ಕ್ಷಿಪಣಿ ನಿರೋಧಕ...