ಸಂವಿಧಾನದ ಆಶಯದಂತೆ ಶಿಕ್ಷಣ ನೀತಿಯನ್ನು ರೂಪಿಸುತ್ತಿಲ್ಲ

Date:

ಶಿಕ್ಷಣ ನೀತಿಯನ್ನು ರೂಪಿಸುವಾಗ ಭಾಷಾ ಪ್ರಶ್ನೆಗಳು, ಪ್ರಾದೇಶಿಕ ಪ್ರಶ್ನೆಗಳು,   ಸ್ಕಿಲ್ ಪ್ರಶ್ನೆಗಳು, ಮೌಲ್ಯದ ಪ್ರಶ್ನೆಗಳು ಬಿಡಿಬಿಡಿಯಾಗಿ ಚರ್ಚೆಯಲ್ಲಿರುತ್ತವೆಯೇ ಹೊರತು ಶಿಕ್ಷಣದ ಮೂಲ ಉದ್ದೇಶ – ಸಂವಿಧಾನ ಉದ್ದೇಶಿಸಿರುವ ಸಮಾಜ ರೂಪಿಸುವ ಉದ್ದೇಶ- ಇಡಿಯಾಗಿ ಚರ್ಚೆಯಲ್ಲಿರುವುದೇ ಇಲ್ಲ.

ನಮ್ಮ ಸಂವಿಧಾನದ ಉದ್ದೇಶ ಜಾತ್ಯತೀತ, ಪ್ರಜಾಪ್ರಭುತ್ವ, ಸಮಾಜವಾದಿ ಸಮಾಜ ರೂಪಿಸುವುದು. ಶಾಸಕಾಂಗ, ನ್ಯಾಯಾಂಗ, ಕಾರ್ಯಾಂಗ ಹಾಗು ಮಾಧ್ಯಮಗಳು ಸಂವಿಧಾನ ಉದ್ದೇಶಿಸಿರುವ ಸಮಾಜವನ್ನು ರೂಪಿಸುವ ಹೊಣೆಗಾರಿಕೆಯನ್ನು ಹೊಂದಿವೆ. ಈ ನಾಲ್ಕು ಅಂಗಗಳಲ್ಲಿ ಕಾರ್ಯನಿರ್ವಹಿಸುವ ಎಲ್ಲರನ್ನೂ ಶಿಕ್ಷಣ ಸೃಷ್ಟಿಸುತ್ತದೆ.

ಶಾಸಕರನ್ನು, ನ್ಯಾಯಧೀಶರನ್ನು, ಅಧಿಕಾರಿಗಳನ್ನು, ಸುದ್ಧಿ ಮಾಡುವವರನ್ನು ಮತ್ತು ನಾಲ್ಕು ಅಂಗಗಳಲ್ಲಿ ದುಡಿಯುವ ಎಲ್ಲರನ್ನೂ ಶಿಕ್ಷಣ ಸೃಷ್ಟಿಸುತ್ತದೆ. ಅಷ್ಟು ಮಾತ್ರವಲ್ಲ ವೈದ್ಯ, ಎಂಜಿನಿಯರ್‌, ಉಪನ್ಯಾಸಕ, ಗುಮಾಸ್ತ, ಪೊಲೀಸರನ್ನು ಹೀಗೆ ಆಧುನಿಕ ಸಂಸ್ಥೆಗಳಲ್ಲಿ ದುಡಿಯುವ ಎಲ್ಲರನ್ನೂ ಶಿಕ್ಷಣ ಸೃಷ್ಟಿಸುತ್ತದೆ. ಇವರೆಲ್ಲರಿಗೆ ಜಾತ್ಯತೀತ, ಪ್ರಜಾಪ್ರಭುತ್ವ, ಸಮಾಜವಾದಿ ಸಮಾಜ ರೂಪಿಸಲು ಅವಶ್ಯವಿರುವ ಪರಿಣಿತಿ ಹಾಗು ಮೌಲ್ಯಗಳನ್ನು ನೀಡುವುದು ಶಿಕ್ಷಣದ ಕರ್ತವ್ಯ.

ಆದರೆ, ಸಂವಿಧಾನ ಅನುಷ್ಠಾನಗೊಳಿಸುವ ಜವಾಬ್ದಾರಿ ಹೊತ್ತ ಸರಕಾರಗಳು ಶಿಕ್ಷಣವನ್ನು ಈ ದೃಷ್ಟಿಯಿಂದ ನೋಡಿವೆಯೇ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿಕ್ಷಣ ನೀತಿಯನ್ನು ರೂಪಿಸುವಾಗ ಭಾಷಾ ಪ್ರಶ್ನೆಗಳು, ಪ್ರಾದೇಶಿಕ ಪ್ರಶ್ನೆಗಳು, ಶಿಕ್ಷಣ ಸಂಸ್ಥೆಗಳ ಒಡೆತನ (ಪಬ್ಲಿಕ್ ವರ್ಸಸ್ ಪ್ರವೈಟ್), ಸ್ಕಿಲ್ ಪ್ರಶ್ನೆಗಳು, ಮೌಲ್ಯದ ಪ್ರಶ್ನೆಗಳು ಬಿಡಿಬಿಡಿಯಾಗಿ ಚರ್ಚೆಯಲ್ಲಿರುತ್ತವೆಯೇ ಹೊರತು ಶಿಕ್ಷಣದ ಮೂಲ ಉದ್ದೇಶ – ಸಂವಿಧಾನ ಉದ್ದೇಶಿಸಿರುವ ಸಮಾಜ ರೂಪಿಸುವ ಉದ್ದೇಶ- ಇಡಿಯಾಗಿ ಚರ್ಚೆಯಲ್ಲಿರುವುದೇ ಇಲ್ಲ.

ಶಿಕ್ಷಣದ ಸುಧಾರಣೆಯನ್ನು ಸಂವಿಧಾನವನ್ನು ಅನುಷ್ಠಾನಗೊಳಿಸಲು ಅವಶ್ಯವಿರುವ ಮಾನವ ಸಂಪನ್ಮೂಲದ ದೃಷ್ಟಿಯಿಂದ ನೋಡದಿರುವುದರಿಂದ ಶಿಕ್ಷಣ ಮತ್ತು ಇತರ ಆಧುನಿಕ ಸಂಸ್ಥೆಗಳಲ್ಲಿ ವಸಾಹತುಶಾಹಿ/ಊಳಿಗಮಾನ್ಯ ಮೌಲ್ಯಗಳ ಮಿಶ್ರಣಗಳು ಕಾರುಬಾರು ಮಾಡುತ್ತಿವೆ. ಶಾಸಕಾಂಗ, ಕಾರ್ಯಾಂಗ, ನ್ಯಾಯಾಂಗ, ಮಾಧ್ಯಮ ಎಲ್ಲ ಕಡೆಗಳಲ್ಲೂ ಸಂವಿಧಾನಿಕ ಮೌಲ್ಯಗಳ ಬದಲು ಬ್ರಾಹ್ಮಣ್ಯದ ಮೌಲ್ಯಗಳು ಕಾರಬಾರು ಮಾಡುತ್ತಿವೆ.

ಕೆಲವು ಪಕ್ಷಗಳು ನೇರವಾಗಿ ಬ್ರಾಹ್ಮಣ್ಯವನ್ನು ಪ್ರತಿಪಾದಿಸಿದರೆ ಇನ್ನೂ ಕೆಲವು ಲಿಬರಲ್ ಪಕ್ಷಗಳು ಪರೋಕ್ಷವಾಗಿ ಬ್ಯಾಹ್ಮಣ್ಯವನ್ನು ಪ್ರತಿಪಾದಿಸುತ್ತಿವೆ. ಬ್ರಾಹ್ಮಣ್ಯವನ್ನು ನೇರವಾಗಿ ಪ್ರತಿಪಾದಿಸುವ ಪಕ್ಷಗಳು ಶಿಕ್ಷಣ ನೀತಿಗಳನ್ನು, ಸಂಸ್ಥೆಗಳನ್ನು ಸಂಪೂರ್ಣವಾಗಿ ತಮ್ಮ ಪಾರ್ಟಿ ಅಜೆಂಡಾವನ್ನು ಜಾರಿಗೆ ತರಲು ಪೂರಕವಾಗಿ ರೂಪಿಸುತ್ತಿವೆ. ಲಿಬರಲ್ ಪಕ್ಷಗಳು ಶಿಕ್ಷಣ ನೀತಿಗಳನ್ನು ರೂಪಿಸುವಾಗ ಸಂವಿಧಾನವನ್ನು ಜಾರಿಗೊಳಿಸುವ ಮಾನವ ಸಂಪನ್ಮೂಲ ಸೃಷ್ಟಿಸುವುದಕ್ಕಿಂತ ಹೆಚ್ಚು ಮಾರುಕಟ್ಟೆಯಲ್ಲಿ ಬೇಡಿಕೆಯುಳ್ಳ ಮಾನವ ಸಂಪನ್ಮೂಲ ಸೃಷ್ಟಿಗೆ ಮಹತ್ವ ನೀಡುತ್ತಿವೆ. ಹೀಗೆ ಶಿಕ್ಷಣ ಸೋಲುತ್ತಿದೆ, ಆದುದರಿಂದ ಸಂವಿಧಾನ ಸೋಲುತ್ತಿದೆ. ಸಂವಿಧಾನ ಸೋಲಬಾರದೆಂದಾದರೆ ಸಂವಿಧಾನ ಉದ್ದೇಶಿಸಿರುವ ಸಮಾಜ ನಿರ್ಮಿಸುವ ಮಾನವ ಸಂಪನ್ಮೂಲ ಸೃಷ್ಟಿ ಶಿಕ್ಷಣದ ಉದ್ದೇಶ ಆಗಬೇಕು.

WhatsApp Image 2025 11 17 at 4.14.13 PM
ಪ್ರೊ ಚಂದ್ರ ಪೂಜಾರಿ
+ posts

ನಿವೃತ್ತ ಪ್ರಾಧ್ಯಾಪಕ, ರಾಜಕೀಯ ವಿಶ್ಲೇಷಕ

ಪೋಸ್ಟ್ ಹಂಚಿಕೊಳ್ಳಿ:

ಪ್ರೊ ಚಂದ್ರ ಪೂಜಾರಿ
ಪ್ರೊ ಚಂದ್ರ ಪೂಜಾರಿ
ನಿವೃತ್ತ ಪ್ರಾಧ್ಯಾಪಕ, ರಾಜಕೀಯ ವಿಶ್ಲೇಷಕ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...