ನಾಗರ ಪಂಚಮಿ | ಅಪೌಷ್ಟಿಕತೆಯ ಮಧ್ಯೆ ಮೌಢ್ಯದಿಂದ ಆಹಾರ ವ್ಯರ್ಥ

Date:

ಬಸವಣ್ಣನವರು ಆಹಾರವನ್ನು ವ್ಯರ್ಥ ಮಾಡುವ ಮೂಢನಂಬಿಕೆಯ ವಿರುದ್ಧ ಜಾಗೃತಿ ಮೂಡಿಸಿದ್ದರು. ಪಂಚಮಿಯ ಹಬ್ಬವು ಕೇವಲ ಒಡಹುಟ್ಟಿದವರ ಹಬ್ಬವಾಗಿತ್ತು. ಜಾನಪದರು ಈ ಕುರಿತಾಗಿ ತಮ್ಮ ಹಾಡುಗಳಲ್ಲಿಯೂ ತಿಳಿಸಿದ್ದಾರೆ.

ಹಸಿವು ಮತ್ತು ಆಹಾರದ ಕೊರತೆಯಿಂದ ಬಳಲುತ್ತಿರುವ ಸಮುದಾಯ ಒಂದೆಡೆಯಾದರೆ ಮೌಢ್ಯತೆಯಿಂದ ಆಹಾರ ಉತ್ಪನ್ನಗಳನ್ನು ವ್ಯರ್ಥ ಮಾಡುತ್ತಿರುವ ಸಮುದಾಯ ಮತ್ತೊಂದು ಕಡೆ ಮಕ್ಕಳಲ್ಲಿನ ಅಪೌಷ್ಟಿಕತೆಯ ಕುರಿತು ಯುನಿಸೆಫ್ ಇತ್ತೀಚೆಗೆ ವರದಿಯೊಂದನ್ನು ಬಿಡುಗಡೆ ಮಾಡಿದೆ. 2024ರ ವರದಿಯ ಪ್ರಕಾರ ಜಗತ್ತಿನಲ್ಲಿ ಐದು ವರ್ಷದ ಒಳಗಿನ 18.1 ಕೋಟಿ ಮಕ್ಕಳು ತೀವ್ರವಾದ ಆಹಾರ ಕೊರತೆಯನ್ನು ಎದುರಿಸುತ್ತಿದ್ದು. ಭಾರತದಲ್ಲಿ ಶೇಕಡಾ 40ರಷ್ಟು ಮಕ್ಕಳಿಗೆ ಆಹಾರದ ಕೊರತೆಯಿದೆ. ಚೀನಾ, ಅಫ್ಘಾನಿಸ್ತಾನ, ಪಾಕಿಸ್ತಾನ ಸೇರಿದಂತೆ ಭಾರತವು ಸೇರಿದಂತೆ 20 ದೇಶಗಳ ಪಾಲು ಇದರಲ್ಲಿ ಶೇಕಡಾ 65 ರಷ್ಟಿದೆ ಎಂಬುದು ಭಾರತೀಯರಿಗೆ ಎಚ್ಚರಿಕೆಯ ಸಂದೇಶವನ್ನು ನೀಡಿದೆ.

ಭಾರತದ ಮನೆಗಳಲ್ಲಿ 68.7ಮಿಲಿಯನ್ ಟನ್ ಆಹಾರ ವಾರ್ಷಿಕವಾಗಿ ವ್ಯರ್ಥವಾಗುತ್ತಿದೆ ಎಂದು 2023ರಲ್ಲಿ ಯುನೈಟೆಡ್ ಎನ್ವಿರಾನ್ಮೆಂಟ್ ಪ್ರೋಗ್ರಾಂ ಎಂಬ ಸಂಸ್ಥೆಯ ವರದಿಯು ದಿಗ್ಭ್ರಮೆ ಗೊಳಿಸುತ್ತದೆ. ಇದರ ಮಧ್ಯೆ ಭಾರತೀಯರು ಆಹಾರ ಉತ್ಪನ್ನಗಳನ್ನು ಹಾಗೂ ಆಹಾರವನ್ನು ಮೌಢ್ಯತೆಯ ಕಾರಣದಿಂದ ವ್ಯರ್ಥ ಮಾಡುತ್ತಿದ್ದಾರೆ. ಉದಾಹರಣೆಗೆ ನಾಗರ ಪಂಚಮಿಯ ಹೆಸರಿನಲ್ಲಿ ಲಕ್ಷಾಂತರ ಲೀಟಲ್ ಹಾಲು ಮಣ್ಣು ಪಾಲಾಗುತ್ತಿದೆ. ವೈಜ್ಞಾನಿಕವಾಗಿ ಹಾವುಗಳು ಹುಳುಗಳನ್ನು ತಿಂದು ಬದುಕುತ್ತದೆ. ಆದರೆ ಮೂಢನಂಬಿಕೆಯ ಪರಿಣಾಮವಾಗಿ ಜನರು ಕಲ್ಲು ನಾಗರಕ್ಕೆ ಹಾಲು ಸುರಿದು ವ್ಯರ್ಥ ಮಾಡುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

12ನೇ ಶತಮಾನದಲ್ಲಿ ಬಸವಣ್ಣನವರು ಈ ಕುರಿತು ತಮ್ಮ ವಚನಗಳಲ್ಲಿ ಕಲ್ಲ ನಾಗರ ಕಂಡಡೆ ಹಾಲನೆರೆಯೆಂಬರು ದಿಟದ ನಾಗರ ಕಂಡಡೆ ಕೊಲ್ಲೆಂಬರಯ್ಯಾ ಉಂಬ ಜಂಗಮ ಬಂದಡೆ ನಡೆಯೆಂಬರು ಉಣ್ಣದ ಲಿಂಗಕ್ಕೆ ಬೋನವ ಹಿಡಿಯೆಂಬರಯ್ಯಾ. ನಮ್ಮ ಕೂಡಲಸಂಗನ ಶರಣರ ಕಂಡು ಉದಾಸೀನವ ಮಾಡಿದಡೆ ಕಲ್ಲ ತಾಗಿದ ಮಿಟ್ಟೆಯಂತಪ್ಪರಯ್ಯಾ ಎಂದು ಮೂಢನಂಬಿಕೆಯ ವಿರುದ್ಧ ಜಾಗೃತಿ ಮೂಡಿಸಿದ್ದರು. ಪಂಚಮಿಯ ಹಬ್ಬವು ನಿಜವಾಗಿಯೂ ಕೇವಲ ಅಣ್ಣತಂಗಿ ಮತ್ತು ಒಡಹುಟ್ಟಿದವರ ಹಬ್ಬವಾಗಿತ್ತು. ಜಾನಪದರು ಈ ಕುರಿತಾಗಿ ತಮ್ಮ ಹಾಡುಗಳಲ್ಲಿಯೂ ತಿಳಿಸಿದ್ದಾರೆ.

ಅಪೌಷ್ಟಿಕತೆ

ಪಂಚಮಿ ಹಬ್ಬ ಉಳಿದಾವ ದಿನ ನಾಕ/ ಅಣ್ಣ ಬರಲಿಲ್ಲ ಯಾಕ ಕರಿಲಾಕ/ ನನ್ನ ತವರಲ್ಲಿ ಪಂಚಮಿ ಭಾರಿ ಮಣ ತೂಕಾದ ಬೆಲ್ಲ ಕೊಬ್ಬಾರಿ ಎಳ್ಳು ಅವಲಕ್ಕಿ ತಂಬಿಟ್ಟು ಸೂರಿ ನಾನು ತಿನುವಾಕಿ ಅಲ್ಲೆ ಮನ ಸಾರಿ ಎಂದು ಪದ ಕಟ್ಟಿ ಹಾಡಿದ್ದಾರೆ. ಅಂದು ಜೋಕಾಲಿ ಕಟ್ಟಿ ಪೌಷ್ಟಿಕಾಂಶದಿಂದ ಕೂಡಿದ ದ್ವಿದಳ ಧಾನ್ಯಗಳಿಂದ ತಯಾರಿಸಿದ ಆಹಾರ ಸೇವಿಸಿ ಸಂತೋಷಪಡುವುದು ಪಂಚಮಿ ಹಬ್ಬವಾಗಿತ್ತು, ಹೊರತು ಕಲ್ಲು ನಾಗರಕ್ಕೆ ಹಾಲು ಸುರಿದು ವ್ಯರ್ಥ ಮಾಡುವುದಾಗಿರಲಿಲ್ಲ ಎಂದು ಜಾನಪದರು ತಿಳಿಸಿದ್ದರು.

ನಾಗರಿಕ ಸಮಾಜವು ಬದಲಾಗಬೇಕಿದೆ ಮತ್ತು ಅನೇಕ ಧಾರ್ಮಿಕ ಕಾರ್ಯಗಳಲ್ಲಿ ಆಹಾರ ವ್ಯರ್ಥ ಮಾಡುವುದನ್ನು ನಿಲ್ಲಿಸಬೇಕಿದೆ. ರಾಜ್ಯದಲ್ಲಿ ಮಾನವ ಬಂಧುತ್ವ ವೇದಿಕೆ ಸೇರಿದಂತೆ ಅನೇಕ ಜನಪರ ಸಂಘಟನೆಗಳು ನಾಗರ ಪಂಚಮಿಯಂದು ಹಾಲು ವ್ಯರ್ಥ ಮಾಡುವುದನ್ನು ವಿರೋಧಿಸಿ ಜಾಗೃತಿ ಮೂಡಿಸುತ್ತಿವೆ. ಶಿಕ್ಷಣವಂತರು ಸಹ ಮೌಢ್ಯದ ನೆರಳಿನಲ್ಲಿ ಆಹಾರವನ್ನು ವ್ಯರ್ಥ ಮಾಡುತ್ತಿರುವುದು ವಿಪರ್ಯಾಸದ ಸಂಗತಿಯಾಗಿದೆ.

WhatsApp Image 2025 11 17 at 5.27.06 PM
ಸುನಿಲ್ ಹಂಪನ್ನವರ
+ posts

ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಸುನಿಲ್ ಹಂಪನ್ನವರ
ಸುನಿಲ್ ಹಂಪನ್ನವರ
ಬೆಳಗಾವಿ ಜಿಲ್ಲಾ ಸಂಯೋಜಕರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...