ಗಣಪತಿ ಕತೆ ಅವೈಜ್ಞಾನಿಕ, ಅಸಹ್ಯಕರ: ಬನ್ನಂಜೆಯವರ ಹಳೆಯ ವಿಡಿಯೊ ವೈರಲ್

Date:

“ಗಣಪತಿಯ ಕತೆ ಅವೈಜ್ಞಾನಿಕ ಮತ್ತು ಅಸಹ್ಯಕರ” ಎಂದು ಹಿರಿಯ ವಿದ್ವಾಂಸರಾದ ದಿವಂಗತ ಬನ್ನಂಜೆ ಗೋವಿಂದಾಚಾರ್ಯರು ಹೇಳಿರುವ ವಿಡಿಯೊ ಕ್ಲಿಪ್ ಈಗ ವೈರಲ್ ಆಗುತ್ತಿದೆ.

ಸಾಣೇಹಳ್ಳಿ ಮಠದ ಪಂಡಿತಾರಾಧ್ಯ ಶಿವಾಚಾರ್ಯ ಸ್ವಾಮೀಜಿಯವರು, “ಗಣಪತಿ ನಮ್ಮ ಸಂಸ್ಕೃತಿಯಲ್ಲ” ಎಂದು ಲಿಂಗಾಯತ ಧರ್ಮಾನುಯಾಯಿಗಳಿಗೆ ತಿಳಿಸಿದ ಬಳಿಕ ಹಿಂದುತ್ವವಾದಿ ವಿಚಾರಗಳ ಪ್ರತಿಪಾದಕರು ಸ್ವಾಮೀಜಿಯವರ ಮೇಲೆ ಮುಗಿಬಿದ್ದಿದ್ದಾರೆ. ಈ ಹಿನ್ನೆಲೆಯಲ್ಲಿ ಬನ್ನಂಜೆ ಮತ್ತು ಅದಮಾರು ಪೀಠದ ವಿಶ್ವಪ್ರಿಯ ತೀರ್ಥ ಸ್ವಾಮೀಜಿಯವರ ವಿಡಿಯೊ ತುಣುಕುಗಳು ವೈರಲ್ ಆಗುತ್ತಿವೆ.

“ಲಿಂಗಾಯತ ಸ್ವಾಮೀಜಿಯವರನ್ನು ಪ್ರಶ್ನಿಸುವ ಹಿಂದುತ್ವವಾದಿಗಳು, ಬನ್ನಂಜೆ ಮತ್ತು ಮಾಧ್ವ ಮಠದ ಸ್ವಾಮೀಜಿಯ ವಿಡಿಯೊ ಕುರಿತು ಏನಂತಾರೆ?” ಎಂಬ ಪ್ರಶ್ನೆ ಮುನ್ನೆಲೆಗೆ ಬಂದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬನ್ನಂಜೆಯವರು ಮಾತನಾಡುತ್ತಾ, “ಗಣಪತಿಯ ಕಥೆಗಳನ್ನು ಕೇಳಿರಬಹುದು. ಪಾರ್ವತಿ ಸ್ನಾನಕ್ಕೆ ಹೋಗುವಾಗ, ತಾನು ಸ್ನಾನ ಮುಗಿಸಿ ಬರುವವರೆಗೂ ಯಾರೂ ಬರಬಾರದೆಂದು ಯೋಚಿಸಿ ಅವಳ ಮೈಯ ಮಣ್ಣಿನಿಂದ ಬೊಂಬೆ ಮಾಡಿ ಅದಕ್ಕೆ ಜೀವ ತುಂಬಿದಳು. ಅವನನ್ನು ಹೊರಗೆ ಕೂರಿಸಿದಳು. ಬಾತ್ ರೂಮ್‌ಗೆ ಹೋಗಿ ಬರುವವರೆಗೂ ಯಾರನ್ನೂ ಒಳಗೆ ಬರಲು ಬಿಡಬೇಡ ಎಂದು ಹೇಳಿದ್ದಳು. ದೇವಲೋಕದ ಬಾತ್‌ ರೂಮ್‌ಗೆ ಬೋಲ್ಟ್ ಇಲ್ಲ ಅಂತಾಯ್ತು. ಸ್ನಾನ ಮಾಡ್ತಾ ಇದ್ದಾರೆಂದು ತಿಳಿಯದೆ ಸೀದಾ ಒಳಗೆ ಹೋಗಿಬಿಡಬಹುದು. ಇದು ತೀರಾ ಅವೈಜ್ಞಾನಿಕ ಮತ್ತು ಅಸಹ್ಯಕರವಾದ ಕತೆ” ಎಂದಿರುವುದನ್ನು ವಿಡಿಯೊದಲ್ಲಿ ಕಾಣಬಹುದು.

ಮಾಧ್ವ ಮಠದ ಸ್ವಾಮೀಜಿ ವಿಶ್ವಪ್ರಿಯ ತೀರ್ಥರು ಮಾತನಾಡುತ್ತಾ, “ಗಣಪತಿಗೆ ಪ್ರಿಯವಾಗಲಿ ಎಂದು ನಮ್ಮಲ್ಲಿ ಗಣ ಹೋಮ ಮಾಡುತ್ತಾರೆ. ಗಣಪತಿ ಅಂತ ಒಬ್ಬ ರಾಕ್ಷಸ ಇದ್ದಾನೆ. ಗಣ ಹೋಮದಿಂದ ಆತನಿಗೆಯೇ ಪ್ರೀತಿಯಾಯ್ತು. ಗಣಪತಿಗೆ ತಲುಪಲಿಲ್ಲ ಎಂದು ಶಾಸ್ತ್ರಕಾರರು ಹೇಳುತ್ತಾರೆ. ಆದರೆ ಆ ವಿಚಾರವನ್ನು ಹೇಳಿದರೂ ನಮ್ಮ ಜನಕ್ಕೆ ತಲುಪಲ್ಲ” ಎಂದಿದ್ದಾರೆ.

ಮುಂದುವರಿದು, “ಗಣಪತಿ ಹೆಸರಿನ ರಾಕ್ಷಸ ಇದ್ದಾನೆಂದು ಶಾಸ್ತ್ರಕಾರರು ಹೇಳುತ್ತಾರೆ. ಏನೋ ಪರಿಹಾರ ಆಗಬೇಕು ಅಂತ ಗಣಪತಿ ಹೋಮ ಮಾಡಿಸುತ್ತಾರೆ. ಸಮಸ್ಯೆ ಪರಿಹಾರವಾಗಲಿಲ್ಲ. ಸಮಸ್ಯೆ ಉಲ್ಭಣವಾಯಿತು. ಗಣಪತಿಗೆ (ರಾಕ್ಷಸನಿಗೆ) ಕೊಟ್ಟಿದ್ದರಿಂದ ಆತ ಇನ್ನೂ ಬಲಿಷ್ಠನಾದ. ಮತ್ತಷ್ಟು ಉಪದ್ರ ಮಾಡಲು ಶುರು ಮಾಡಿದ” ಎಂದಿರುವುದನ್ನು ಇಲ್ಲಿ ಕಾಣಬಹುದು.

ಗಣಪತಿ ನಮ್ಮ ಸಂಸ್ಕೃತಿಯಲ್ಲ ಎಂದಿರುವ ಸಾಣೇಹಳ್ಳಿ ಸ್ವಾಮೀಜಿಯವರಿಗೆ “ದೇವರ ತಂಟೆ” ಬೇಡ ಎಂದಿರುವ ವಿಶ್ವವಾಣಿ ಪತ್ರಿಕೆಯ ವಿಶ್ವೇಶ್ವರ ಭಟ್ಟ ಅವರು ತಮ್ಮ ಜಾತಿಯ ವಿದ್ವಾಂಸರ ವಿರುದ್ಧ ಮಾತನಾಡುತ್ತಾರಾ ಎಂದು ಪ್ರಶ್ನಿಸಲಾಗುತ್ತಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...