ಅಲ್ಪಸಂಖ್ಯಾತರಿಗೆ ಅನುದಾನ; ಬಿಜೆಪಿ ನಾಯಕರ ಹೇಳಿಕೆ ಹಾಸ್ಯಾಸ್ಪದ

Date:

2019ರಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನ ಸುಮಾರು ರೂ.2800 ಕೋಟಿ ಇತ್ತು. ಬಿಜೆಪಿ ಸರ್ಕಾರ ರೂ. 1100 ಕೋಟಿಯವರೆಗೆ ಕಡಿತಗೊಳಿಸಿ ಇಲಾಖೆಯ ಸುಮಾರು 16 ಯೋಜನೆಗಳನ್ನು ರದ್ದುಗೊಳಿಸಿತ್ತು

ಮುಖ್ಯಮಂತ್ರಿ ಸಿದ್ದರಾಮಯ್ಯನವರು ಇತ್ತೀಚಿಗೆ ಹುಬ್ಬಳ್ಳಿಯಲ್ಲಿ ನಡೆದ ಮುಸ್ಲಿಂ ಧಾರ್ಮಿಕ ಸಮ್ಮೇಳನದಲ್ಲಿ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಗೆ ಹಂತ ಹಂತವಾಗಿ ರೂ.10 ಸಾವಿರ ಕೋಟಿ ಅನುದಾನ ನೀಡಲಾಗುವುದು ಎಂದು ಹೇಳಿರುವುದನ್ನು ಸ್ವಾಗತಿಸುತ್ತೇವೆ. 2023-24ನೇ ಸಾಲಿಗಾಗಿ ಕೇವಲ ರೂ. 2101 ಕೋಟಿ ಅನುದಾನ ನೀಡಲಾಗಿದೆ. ಅಲ್ಲದೇ ಮುಖ್ಯಮಂತ್ರಿಯವರ ಹೇಳಿಕೆಯನ್ನು ಬಿಜೆಪಿ ನಾಯಕರು ಅಲ್ಪಸಂಖ್ಯಾತರ ತುಷ್ಟೀಕರಣವೆಂದು ಆರೋಪ ಮಾಡುತ್ತಿರುವುದು ಖಂಡನೀಯ. ತುಷ್ಟೀಕರಣ ಅಥವಾ ಓಲೈಕೆ ಪದದ ಅರ್ಥವೇ ಗೊತ್ತಿಲ್ಲದ ಬಿಜೆಪಿ ನಾಯಕರು ಮನಸ್ಸಿಗೆ ಬಂದಂತೆ ಹೇಳಿಕೆ ನೀಡುತ್ತಿರುವುದು ಹಾಸ್ಯಾಸ್ಪದವಾಗಿದೆ.

2019ರಲ್ಲಿ ರಾಜ್ಯ ಸರಕಾರದ ಬಜೆಟ್ ಗಾತ್ರ ರೂ. 2,45,000 ಕೋಟಿ ಇತ್ತು. ಅಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ಅನುದಾನ ಸುಮಾರು ರೂ.2800 ಕೋಟಿ ಇತ್ತು. ಅದನ್ನು ಬಿಜೆಪಿ ನಾಯಕರು ರೂ. 1100 ಕೋಟಿವರೆಗೆ ಕಡಿತಗೊಳಿಸಿ ಇಲಾಖೆಯ ಸುಮಾರು 16 ಯೋಜನೆಗಳನ್ನು ರದ್ದುಗೊಳಿಸಿದರು. ಮುಸ್ಲಿಮರ ಮೀಸಲಾತಿ ಸಂವಿಧಾನಬಾಹಿರವಾಗಿ ರದ್ದುಗೊಳಿಸಿ ಚುನಾವಣೆಯಲ್ಲಿ ಬಹಿರಂಗ ಬೆನ್ನು ತಟ್ಟಿಕೊಂಡರು. ಇದರಿಂದ ರಾಜ್ಯದ ಜನ ಅವರಿಗೆ ತಕ್ಕ ಪಾಠ ಕಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಒಂದು ಸರಕಾರ ಎಲ್ಲರನ್ನೂ ಒಂದೇ ರೀತಿ ನೋಡಬೇಕು. ಓಲೈಕೆ ಮಾಡಬಾರದೆಂದು ಯಡಿಯೂರಪ್ಪನವರು ಹೇಳಿರುವುದು ಅವರ ಸರಕಾರದಲ್ಲಿ ಅಲ್ಪಸಂಖ್ಯಾತರ ವಿರುದ್ದ ನಡೆದುಕೊಂಡಾಗ, ಅದರಲ್ಲೂ ವಿಶೇಷವಾಗಿ ಅಲ್ಪಸಂಖ್ಯಾತರ ವಿದ್ಯಾರ್ಥಿಗಳ ವಿದ್ಯಾರ್ಥಿ ವೇತನ ಅನುದಾನ ಕಡಿತಗೊಳಿಸಿದಾಗ ಒಂದೇ ರೀತಿ ನೋಡುವ ಪರಿ ಎಲ್ಲಿ ಹೋಗಿತ್ತು ಎಂದು ಪ್ರಶ್ನಿಸಬೇಕಾಗುತ್ತದೆ.

ಬಿಜೆಪಿ ಸರಕಾರದ ಅವಧಿಯಲ್ಲಿ ಮಂಗಳೂರು ಗೋಲಿಬಾರ್‌ನಲ್ಲಿ ಮೃತಪಟ್ಟ ಇಬ್ಬರು ಮುಸ್ಲಿಂ ವ್ಯಕ್ತಿಗಳಿಗೆ ಪರಿಹಾರದ ಚೆಕ್ ನೀಡಿ ವಾಪಸ್ ಪಡೆದಿದ್ದು ನೆನಪಿಲ್ಲವೇ? ನರಗುಂದದಲ್ಲಿ ಕೋಮುಗಲಭೆಯಲ್ಲಿ ಮೃತಪಟ್ಟ ಸಮೀರ ಕುಟುಂಬಕ್ಕೆ ಪರಿಹಾರ ನೀಡದೇ ಶಿವಮೊಗ್ಗದಲ್ಲಿ ಮೃತಪಟ್ಟ ಹರ್ಷನ ಕುಟುಂಬಕ್ಕೆ ಪರಿಹಾರ ನೀಡಿದಾಗ ನೆನಪಾಗಲಿಲ್ಲವೇ ಯಡಿಯೂರಪ್ಪನವರೇ?

ಇನ್ನು ಬಿಜೆಪಿ ಸಖ್ಯ ಬೆಳೆಸಿದ ಕುಮಾರಸ್ವಾಮಿಯವರು ಓಲೈಕೆ ರಾಜಕಾರಣದ ಬಗ್ಗೆ ಮಾತನಾಡಿರುವುದು ಅವರ ಜಾತ್ಯತೀತ ಮುಖವಾಡ ಕಳಚಿ ಬಿದ್ದಂತಾಗಿದೆ. ಇಲ್ಲಿಯವರೆಗೂ ಕಾಣದ ಓಲೈಕೆ, ಈಗ ಮಾತ್ರ ಓಲೈಕೆ ಕಾಣುತ್ತಿರುವುದು ಬಿಜೆಪಿ ನಾಯಕರನ್ನು ಮೆಚ್ಚಿಸುವ ಪ್ರಯತ್ನವೆಂಬಂತೆ ಕಾಣುತ್ತಿದೆ. ನಿಜವಾಗಿಯೂ ಈ ದೇಶದಲ್ಲಿ ಮುಸ್ಲಿಮರ ಓಲೈಕೆ ನಡೆದಿದ್ದರೆ ಮುಸ್ಲಿಮರ ಈಗಿನ ಸ್ಥಿತಿ ಭಿನ್ನವಾಗಿರುತ್ತಿತ್ತು. ಹತ್ತು ಹಲವು ಆಯೋಗಗಳು ನೀಡಿದ ವರದಿಯಂತೆ ಮುಸ್ಲಿಮರು ಸಾಮಾಜಿಕವಾಗಿ, ಶೈಕ್ಷಣಿಕವಾಗಿ ಈಗಲೂ ಅತ್ಯಂತ ಹಿಂದುಳಿದ ಸಮುದಾಯವೆಂದೇ ಪರಿಗಣಿಸಿವೆ. ಅಲ್ಲದೇ ಶಾಲೆ ಬಿಟ್ಟ ಮಕ್ಕಳ ಸಂಖ್ಯೆ ಅತ್ಯಂತ ಹೆಚ್ಚಿರುವುದು ಮುಸ್ಲಿಂ ಸಮದಾಯದಲ್ಲೇ ಎನ್ನುವುದು ನೋವಿನ ಸಂಗತಿ.

ರಾಜ್ಯದಲ್ಲಿ ವಿವಿಧ ಸಮುದಾಯಗಳಿಗೆ ಪ್ರತ್ಯೇಕ ಕಲ್ಯಾಣ ಇಲಾಖೆಗಳಿವೆ. ಪ್ರತಿಯೊಂದು ಕಲ್ಯಾಣ ಇಲಾಖೆಗಳಿಗೂ ಪ್ರತ್ಯೇಕ ಅನುದಾನವಿದೆ. ಆ ಸಮುದಾಯದ ಕಾರ್ಯಕ್ರಮಕ್ಕೆ ಹೋದಾಗ ಆ ಇಲಾಖೆಯ ಬಗ್ಗೆ ಚರ್ಚೆ ನಡೆಯುತ್ತದೆ. ಅದರ ಅನುದಾನ ಕೊರತೆ ಬಗ್ಗೆ ನಾಯಕರು ಮುಖ್ಯಮಂತ್ರಿಗಳ ಗಮನಕ್ಕೆ ತಂದಾಗ ಅದರ ಕುರಿತು ಭರವಸೆ ನೀಡಲಾಗುತ್ತದೆ. ಇದು ಎಲ್ಲಾ ಸಮುದಾಯಗಳ ಕಾರ್ಯಕ್ರಮಗಳಲ್ಲಿ ನಡೆಯುವ ಸಹಜ ಪ್ರಕ್ರಿಯೆ. ಅದನ್ನೇ ಬಹಳ ದೊಡ್ಡ ವಿಷಯ ಮಾಡಿ ಒಂದು ಸಮುದಾಯವನ್ನೇ ಗುರಿ ಮಾಡುವುದು ಎಷ್ಟು ಸರಿ?

ರಾಜ್ಯದಲ್ಲಿ ಬಜೆಟ್ ಗಾತ್ರ ಹೆಚ್ಚಾದಂತೆ ಇಲಾಖೆಗಳ ಅನುದಾನವೂ ಹೆಚ್ಚಾಗುತ್ತದೆ. ಅದನ್ನೇ ಮುಖ್ಯಮಂತ್ರಿಗಳು ಹೇಳಿದ್ದಾರೆ. ಮುಸ್ಲಿಮರನ್ನು ಟೀಕಿಸುವುದು ಬಿಜೆಪಿಯವರ ಹವ್ಯಾಸವಾಗಿದೆ. ಅದನ್ನು ಯಾರೂ ಗಂಭೀರವಾಗಿ ಪರಿಗಣಿಸುವುದೇ ಇಲ್ಲ. ಇತ್ತೀಚಿಗೆ ತೆಲಂಗಾಣ ರಾಜ್ಯದ ಚುನಾವಣೆಯಲ್ಲಿಯೂ ಕೇಂದ್ರ ಗೃಹ ಸಚಿವ ಅಮಿತ್‌ ಶಾ ಅವರು ನಮ್ಮ ಸರಕಾರ ಆಡಳಿತಕ್ಕೆ ಬಂದರೆ ಮುಸ್ಲಿಮರ ಮೀಸಲಾತಿ ರದ್ದುಗೊಳಿಸುತ್ತೇವೆ ಎಂದು ಹೇಳಿದ್ದರು. ಆದರೆ, ಆ ರಾಜ್ಯದ ಜನ ಇವರ ಮಾತಿಗೆ ಕವಡೆ ಕಾಸಿನ ಕಿಮ್ಮತ್ತು ನೀಡಿಲ್ಲ.

ಮುಖ್ಯಮಂತ್ರಿಯವರ ಹೇಳಿಕೆ ಹಿಂದೆ ಅಲ್ಪಸಂಖ್ಯಾತ ಸಮುದಾಯದ ಹಿತ ಕಾಪಾಡುವ ಉದ್ದೇಶವಿದೆಯೇ, ಹೊರತು ಓಲೈಕೆಯಲ್ಲ. ಇತರೆ ಸಮುದಾಯದ ಕಾರ್ಯಕ್ರಮಗಳಲ್ಲಿ ಮುಖ್ಯಮಂತ್ರಿಗಳು ವಿವಿಧ ಭರವಸೆಗಳನ್ನು ನೀಡಿದಂತೆ ಮುಸ್ಲಿಂ ಸಮುದಾಯದ ಸಮಾವೇಶದಲ್ಲಿಯೂ ಅನುದಾನ ಹೆಚ್ಚಿಸುವ ಹೇಳಿಕೆ ಹೇಳಿದ್ದಾರೆ ಎನ್ನುವುದು ಬಿಜೆಪಿ ಮತ್ತು ಜನತಾದಳ ಪಕ್ಷದ ನಾಯಕರು ಅರ್ಥಮಾಡಿಕೊಳ್ಳಲಿ.

WhatsApp Image 2025 11 17 at 3.55.49 PM
ಡಾ ರಝಾಕ್‌ ಉಸ್ತಾದ್‌
+ posts

ರಾಜ್ಯ ಉಪಾಧ್ಯಕ್ಷರು, ಹೈದ್ರಾಬಾದ್‌ ಕರ್ನಾಟಕ ಹೋರಾಟ ಸಮಿತಿ ರಾಯಚೂರು

ಪೋಸ್ಟ್ ಹಂಚಿಕೊಳ್ಳಿ:

ಡಾ ರಝಾಕ್‌ ಉಸ್ತಾದ್‌
ಡಾ ರಝಾಕ್‌ ಉಸ್ತಾದ್‌
ರಾಜ್ಯ ಉಪಾಧ್ಯಕ್ಷರು, ಹೈದ್ರಾಬಾದ್‌ ಕರ್ನಾಟಕ ಹೋರಾಟ ಸಮಿತಿ ರಾಯಚೂರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...