ಬಂಗಾರದ ಹುಡುಗಿಯರು ಬೀದಿಯಲ್ಲಿದ್ದರೆ, ದೇಶಕ್ಕೆ ಶೋಭೆಯೇ ?

Date:

ಇದು ಕ್ರೀಡಾಪಟುಗಳ ಘನತೆಯ ಪ್ರಶ್ನೆಯಾಗಿದೆ. ಆರೋಪಿ ಸ್ವತಂತ್ರವಾಗಿ ತಿರುಗುತ್ತಿದ್ದಾನೆ. ಆದರೆ ಈ ಮಕ್ಕಳು ನ್ಯಾಯಕ್ಕಾಗಿ ಬೀದಿಯಲ್ಲಿ ಕುಳಿತಿದ್ದಾರೆಂದರೆ ಅರ್ಥವೇನು? ಈ ಹೆಣ್ಣುಮಕ್ಕಳು ಬಂಗಾರದ ಪದಕಗಳನ್ನು ಗೆದ್ದು ತಂದಾಗ ಅವರನ್ನು ಮನೆಗೆ ಕರೆದು ಅವರೊಂದಿಗೆ ಟೀ ಕುಡಿದ ಪ್ರಧಾನಿಗೆ ಈಗ ಅವರ ನೆರವಿಗೆ ಹೋಗಬೇಕೆಂಬ ಅರಿವಿಲ್ಲವೇ? 

“ಪೊಲೀಸರು ಕುಡಿದು ಬಂದು ನಮ್ಮನ್ನು ನಿಂದಿಸಿದರು. ಇಂತಹ ದಿನ ನೋಡಲು ನಾವು ದೇಶಕ್ಕಾಗಿ ಪದಕಗಳನ್ನು ಗೆದ್ದಿದ್ದೇವೆಯೇ?” ಇದು ದೇಶಕ್ಕೆ ಬಂಗಾರದ ಪದಕ ಗೆದ್ದು ಕೊಟ್ಟು ವಿಶ್ವದ ಮುಂದೆ ಭಾರತದ ಕೀರ್ತಿಪತಾಕೆ ಎತ್ತರಕ್ಕೆ ಹಾರುವಂತೆ ಮಾಡಿದ್ದ ವಿನೇಶಾ ಪೋಗಟ್‍ ಅವರ ನೋವಿನ ನುಡಿ.

ಒಲಂಪಿಕ್ ಮತ್ತು ಕಾಮನ್‌ವೆಲ್ತ್ ಗೇಮ್ಸ್‌ನಲ್ಲಿ ಚಿನ್ನದ ಪದಕ ವಿಜೇತರಾದ ವಿನೇಶಾ ಫೋಗಟ್, ಸಾಕ್ಷಿ ಮಲ್ಲಿಕ್, ತಮ್ಮ ಮೇಲೆ ಲೈಂಗಿಕ ಕಿರುಕುಳ ನೀಡಿದವನ ವಿರುದ್ಧ ಕ್ರಮ ಜರುಗಿಸಿ ಎಂದು ಒತ್ತಾಯಿಸಿ ಜಂತರ್ ಮಂತರ್‌ನಲ್ಲಿ ಧರಣಿ ನಡೆಸುತ್ತಿದ್ದಾರೆ. ದಿಟ್ಟತನದಿಂದ ದೊಡ್ಡ ದೊಡ್ಡ ಸವಾಲುಗಳನ್ನು ಎದುರಿಸಿದ ಈ ಆಟಗಾರ್ತಿಯರು ಇಂದು ಬಿಕ್ಕಿ ಬಿಕ್ಕಿ ಅಳುತ್ತಿದ್ದಾರೆ. ಪ್ರಧಾನ ಮಂತ್ರಿಗಳು ಕರ್ನಾಟಕದ ಗಲ್ಲಿ ಗಲ್ಲಿಗಳಲ್ಲಿ ರೋಡ್ ಶೋಗಳನ್ನು ಮಾಡುವುದು ಬಿಟ್ಟು ಆ ಹೆಂಗೂಸುಗಳ ಮನ್ ಕಿ ಬಾತ್ ಏನೆಂದು ಕೇಳಬಾರದೇ?

ಮಧ್ಯರಾತ್ರಿ ಬಂದ ಪೊಲೀಸರು ಬೀಸಿದ ಲಾಟಿಗಳಿಂದ ಕುಸ್ತಿ ಪಟುಗಳ ತಲೆಗೆ ಪೆಟ್ಟಾಗಿದೆ. ಈ ಸರ್ಕಾರ ಮತ್ತು ಅದರ ಅಂಗ ಸಂಸ್ಥೆಗಳು ದೇಶದ ಮಹಿಳೆಯರನ್ನು ಯಾವ ಸ್ಥಿತಿಗೆ ದೂಡುತ್ತಿವೆ? ಕುಡಿದು ಬಂದ ಪೊಲೀಸರು ಮಹಿಳೆಯರ ಮೇಲೆ ತೋರಿದ ದುರ್ವರ್ತನೆ ಮತ್ತು ದೌರ್ಜನ್ಯಗಳನ್ನು ಇಡೀ ದೇಶ ಖಂಡಿಸುತ್ತಿದೆ. ಈ ಕ್ರೀಡಾಪಟುಗಳು ದೂರು ನೀಡಿ ಮೂರು ತಿಂಗಳಾದರೂ ದೆಹಲಿ ಪೊಲೀಸರು ಎಫ್ ಐ ಆರ್ ದಾಖಲಿಸದಿರುವ ಹಿನ್ನೆಲೆಯಲ್ಲಿ ಈಗ ಸುಪ್ರೀಂ ಕೋರ್ಟ್‌ ಮಧ್ಯಪ್ರವೇಶಿಸಿದ ನಂತರ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಎಫ್.ಐ.ಆರ್ ದಾಖಲಿಸಿದ್ದಾರೆ.

“ಬೇಟಿ ಬಚಾವೋ ಬೇಟಿ ಪಢಾವೋ” ಎನ್ನುವ ಪ್ರಧಾನಿಗೆ ಇದು ತಿಳಿದೇ ಇಲ್ಲವೇ? ಮಹಿಳೆಯರ ಸುರಕ್ಷತೆ ಅವರ ಕರ್ತವ್ಯವಲ್ಲವೇ? ಅವರ ಪಕ್ಷ ಭ್ರಷ್ಟಾಚಾರಿಗಳು, ಅತ್ಯಾಚಾರಿಗಳು, ಕೊಲೆಗಡುಕರನ್ನು ರಕ್ಷಿಸುವ ಅಡಗುತಾಣವೇ? ಧರಣಿ ನಿರತರಿಗೆ ನೈತಿಕ ಧೈರ್ಯ ತುಂಬಲು ಬಂದ ಕಾಂಗ್ರೆಸ್ ಮುಖಂಡ ದೀಪೇಂದರ್ ಸಿಂಗ್ ಹುಡಾ ಅವರನ್ನು ದೆಹಲಿ ಪೊಲೀಸರು ಬಂಧಿಸಿರುವುದು ಅನ್ಯಾಯ. ಆರೋಪಿ ಬ್ರಿಜ್‌ ಭೂಷಣ್‌ ಶರಣ್‌ ಸಿಂಗ್‌ನನ್ನು ಇಲ್ಲಿಯವರೆಗೂ ಯಾಕೆ ಬಂಧಿಸಿಲ್ಲ ಎಂಬುದು ಜನತೆಯ ಪ್ರಶ್ನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದು ಕ್ರೀಡಾಪಟುಗಳ ಘನತೆಯ ಪ್ರಶ್ನೆಯಾಗಿದೆ. ಆರೋಪಿ ಸ್ವತಂತ್ರವಾಗಿ ತಿರುಗುತ್ತಿದ್ದಾನೆ. ಆದರೆ ಈ ಮಕ್ಕಳು ನ್ಯಾಯಕ್ಕಾಗಿ ಬೀದಿಯಲಿ ಪೊಲೀಸರ ಹೊಡೆತ ತಿನ್ನುತ್ತಾರೆಂದರೆ ಇದರ ಅರ್ಥವೇನು? ಈ ಹೆಣ್ಣುಮಕ್ಕಳು ಬಂಗಾರದ ಪದಕಗಳನ್ನು ಗೆದ್ದು ತಂದಾಗ ಮನೆಗೆ ಕರೆದು ಅವರೊಂದಿಗೆ ಟೀ ಕುಡಿದ ಪ್ರಧಾನಿಗೆ ಈಗ ಅವರ ನೆರವಿಗೆ ಹೋಗಬೇಕೆಂಬ ಅರಿವಿಲ್ಲವೇ?

ಕುಸ್ತಿಪಟುಗಳ ಬೆಂಬಲಕ್ಕೆ ಇಡೀ ದೇಶವೇ ನಿಂತಿದೆ. ಜೆ.ಎನ್.ಯು ವಿದ್ಯಾರ್ಥಿಗಳೂ, ರೈತರೂ ಬೆಂಬಲ ಸೂಚಿಸಿದ್ದಾರೆ. ಮೊದಲು “ಹೀಗೆ ಪ್ರತಿಭಟಿಸುವುದು ಅಶಿಸ್ತಿನ ವರ್ತನೆ” ಎಂದು ಹೇಳಿದ್ದ ಹಿರಿಯ ಅಥ್ಲೆಟ್ ಹಾಗೂ ಭಾರತೀಯ ಒಲಂಪಿಕ್ ಅಸೋಸಿಯೇಷನ್ ಅಧ್ಯಕ್ಷೆ ಪಿ.ಟಿ.ಉಷಾ ಕೂಡ ಜಂತರ್‌ ಮಂತರ್‌ಗೆ ಹೋಗಿ ತಮ್ಮ ಬೆಂಬಲ ಸೂಚಿಸಿದ್ದಾರೆ. ಟೆನ್ನಿಸ್ ಆಟಗಾರ್ತಿ ಸಾನಿಯಾ ಮಿರ್ಜಾರವರು ಕೂಡ ಈ ಹೋರಾಟಕ್ಕೆ ಬೆಂಬಲ ಸೂಚಿಸಿದ್ದಾರೆ. ಇದು ಈ ದೇಶದ ಗೌರವಾನ್ವಿತ ಮಹಿಳೆಯರ ಘನತೆಯ ಪ್ರಶ್ನೆಯಾಗಿದೆ ಎಂದು ಸಾನಿಯಾ ಹೇಳಿದ್ದಾರೆ. ಬ್ರಿಜ್ ಭೂಷಣ್ ವಿರುದ್ಧ ಆರೋಪ ಮಾಡಿದ ಏಳು ಕ್ರೀಡಾಳುಗಳಲ್ಲಿ ಒಬ್ಬ ಅಪ್ರಾಪ್ತ ಹುಡುಗಿಯೂ ಇದ್ದಾಳೆ!

ನಮಗೆ ನಮ್ಮ ಸಂವಿಧಾನ ಮುಖ್ಯ. ಸಂವಿಧಾನ ಪರವಾದ ನಡೆ ಸರ್ಕಾರ ತೋರಿಸದಿದ್ದರೆ, ಜನರು ತಿರುಗಿ ಬೀಳುವ ದಿನಗಳು ದೂರವಿಲ್ಲ.

k shareefa
ಡಾ ಕೆ ಷರೀಫಾ
+ posts

ಬಂಡಾಯ ಸಾಹಿತಿ, ಕವಿ

ಪೋಸ್ಟ್ ಹಂಚಿಕೊಳ್ಳಿ:

ಡಾ ಕೆ ಷರೀಫಾ
ಡಾ ಕೆ ಷರೀಫಾ
ಬಂಡಾಯ ಸಾಹಿತಿ, ಕವಿ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...