ಭಾರತಕ್ಕೆ ಶೇ. 50, ಪಾಕ್‌ಗೆ ಶೇ. 19: ಟ್ರಂಪ್ ‘ದೋಸ್ತಿ’ಯ ಅಸಲಿ ಮುಖ ಅನಾವರಣ

Date:

ಅಮೆರಿಕದ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಮತ್ತು ಪ್ರಧಾನಿ ನರೇಂದ್ರ ಮೋದಿ ಅವರ ನಡುವಿನ ‘ಆಪ್ತ ಸ್ನೇಹ’ದ ಬಗ್ಗೆ ಜಾಗತಿಕ ಮಟ್ಟದಲ್ಲಿ ಸಾಕಷ್ಟು ಚರ್ಚೆಗಳಾಗಿವೆ. ಆದರೆ, ಈ ಸ್ನೇಹದ ಆಳ ಎಷ್ಟರಮಟ್ಟಿಗಿದೆ ಎಂಬುದನ್ನು ಅಮೆರಿಕ ಇತ್ತೀಚಿಗೆ ಹೇರಿರುವ ಸುಂಕ ನೀತಿಯು ಪ್ರಶ್ನಿಸುವಂತೆ ಮಾಡಿದೆ ಎಂದು ಭಾರತೀಯ ರಿಸರ್ವ್‌ ಬ್ಯಾಂಕ್‌ನ ಮಾಜಿ ಗವರ್ನರ್‌ ರಘುರಾಮ್‌ ರಾಜನ್‌ ಅಭಿಪ್ರಾಯಪಟ್ಟಿದ್ದಾರೆ. ಪಾಕಿಸ್ತಾನದ ಮೇಲೆ ಶೇ.19ರಷ್ಟು ಸುಂಕ ಹೇರಿ, ಭಾರತದ ಮೇಲೆ ಬರೋಬ್ಬರಿ ಶೇ.50 ರಷ್ಟು ಸುಂಕ ವಿಧಿಸಿರುವುದು ಭಾರತದ ಪಾಲಿಗೆ ನುಂಗಲಾರದ ತುತ್ತಾಗಿ ಪರಿಣಮಿಸಿದೆ.

ಕಳೆದ ಆಗಸ್ಟ್ (2025) ತಿಂಗಳಲ್ಲಿ ಟ್ರಂಪ್ ಆಡಳಿತವು ಭಾರತದ ಸರಕುಗಳ ಮೇಲಿನ ಆಮದು ಸುಂಕವನ್ನು ಶೇ. 50ಕ್ಕೆ ಏರಿಸಿತ್ತು. ಇದೇ ವೇಳೆ ನೆರೆಯ ಪಾಕಿಸ್ತಾನದ ಮೇಲಿನ ಸುಂಕವನ್ನು ಶೇ.29ರಿಂದ ಶೇ. 19ಕ್ಕೆ ಇಳಿಸಲಾಗಿತ್ತು. ಈ ತಾರತಮ್ಯದ ನಡೆಗೆ ಕೇವಲ ಆರ್ಥಿಕ ಕಾರಣಗಳಷ್ಟೇ ಅಲ್ಲ, ರಾಜಕೀಯ ಮತ್ತು ವೈಯಕ್ತಿಕ ಪ್ರತಿಷ್ಠೆಯೂ ಕಾರಣ ಎಂಬುದು ರಾಜನ್‌ ಅವರ ಅಭಿಪ್ರಾಯ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ‘ಬೋರ್ಡ್ ಆಫ್ ಪೀಸ್‌’ಗೆ ಸೇರದ ಭಾರತದ ನಿಲುವು ಸ್ವಾಗತಾರ್ಹ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಮೇ ತಿಂಗಳಲ್ಲಿ ಭಾರತ ಮತ್ತು ಪಾಕಿಸ್ತಾನದ ನಡುವೆ ನಡೆದ ಅಲ್ಪಾವಧಿಯ ಸಂಘರ್ಷದ ವೇಳೆ (ಆಪರೇಷನ್ ಸಿಂಧೂರ್), ಕದನ ವಿರಾಮ ಏರ್ಪಡುವಲ್ಲಿ ತಾನು ಮಧ್ಯಸ್ಥಿಕೆ ವಹಿಸಿದ್ದೆ ಎಂದು ಟ್ರಂಪ್‌ ಹೇಳಿಕೊಂಡಿದ್ದರು. ಪಾಕಿಸ್ತಾನವು ಟ್ರಂಪ್ ಅವರ ಹೇಳಿಕೆಯನ್ನು ಒಪ್ಪಿಕೊಂಡು ಅವರನ್ನು ಹೊಗಳುವ ಮೂಲಕ ಅವರ ಅಹಂ ಅನ್ನು ತೃಪ್ತಿಪಡಿಸಿತು. ಆದರೆ, ಭಾರತವು “ಇದು ದ್ವಿಪಕ್ಷೀಯ ಮಾತುಕತೆಯ ಫಲ, ಮೂರನೇ ವ್ಯಕ್ತಿಯ ಮಧ್ಯಸ್ಥಿಕೆ ಇಲ್ಲ” ಎಂದು ಸ್ಪಷ್ಟಪಡಿಸಿತು. ರಾಜನ್‌ ಅವರ ಪ್ರಕಾರ, ಭಾರತದ ಈ ನಡೆ ಟ್ರಂಪ್‌ ಅವರ ಅಸಮಾಧಾನಕ್ಕೆ ಕಾರಣವಾಯಿತು. ಪರಿಣಾಮವಾಗಿ, ರಷ್ಯಾದ ತೈಲ ಖರೀದಿಯ ನೆಪವೊಡ್ಡಿ ಭಾರತದ ಮೇಲೆ ಹೆಚ್ಚಿನ ಟ್ಯಾರಿಫ್ ಹೇರಲಾಯಿತು. ಇದರಿಂದ ಕಳೆದ ಐದು ತಿಂಗಳಲ್ಲಿ ಅಮೆರಿಕಕ್ಕೆ ಭಾರತದ ರಫ್ತು ಪ್ರಮಾಣದಲ್ಲಿ ಸುಮಾರು ಶೇ. 30ರಷ್ಟು ಕುಸಿತ ಕಂಡಿದ್ದು, ಇದು ಭಾರತದ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಿದೆ.

ಅಂತಾರಾಷ್ಟ್ರೀಯ ರಾಜಕಾರಣದಲ್ಲಿ ಶಾಶ್ವತ ಗೆಳೆಯರೂ ಇಲ್ಲ, ಶಾಶ್ವತ ಶತ್ರುಗಳೂ ಇಲ್ಲ ಎಂಬುದು ಮತ್ತೊಮ್ಮೆ ಸಾಬೀತಾಗಿದೆ. ‘ಹೌಡಿ ಮೋದಿ’ ಅಥವಾ ‘ನಮಸ್ತೆ ಟ್ರಂಪ್’ನಂತಹ ಅದ್ದೂರಿ ಕಾರ್ಯಕ್ರಮಗಳು ಕೇವಲ ಪ್ರದರ್ಶನಕ್ಕಷ್ಟೇ ಸೀಮಿತವಾಗಿದ್ದು, ಅಂತಿಮವಾಗಿ ಪ್ರತಿಯೊಂದು ರಾಷ್ಟ್ರವೂ ತನ್ನ ಲಾಭ-ನಷ್ಟದ ಲೆಕ್ಕಾಚಾರದಲ್ಲಿಯೇ ವ್ಯವಹರಿಸುತ್ತದೆ ಎಂಬುದಕ್ಕೆ ಈ ಟ್ಯಾರಿಫ್ ಸಮರವೇ ಸಾಕ್ಷಿ. ರಾಜನ್ ಹೇಳುವಂತೆ, ಇದು ಭಾರತಕ್ಕೆ ಒಂದು ಎಚ್ಚರಿಕೆಯ ಕರೆಗಂಟೆಯಾಗಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...