ತ್ರಿಭಾಷಾ ಸೂತ್ರ ಕುರಿತು ಕುವೆಂಪು ಖಚಿತ ನಿಲುವು

Date:

ಸಾಮಾನ್ಯವಾಗಿ ಮಂತ್ರಿಗಳೆಲ್ಲ ತ್ರಿಭಾಷಾ ಸೂತ್ರವನ್ನು ನಿಶ್ಯಂಕೆಯಿಂದ ಸಾರುತ್ತಾರೆ; ಅದರ ಅಪಾಯಗಳನ್ನು ಗ್ರಹಿಸುವುದಿಲ್ಲ. ಈ ವಿಚಾರದಲ್ಲಿ ನಾವು ಹಗಲುಗುರುಡರಾಗಿ ವರ್ತಿಸಬಾರದು. ತ್ರಿಭಾಷಾ ಸೂತ್ರ ವಾಸ್ತವವಾಗಿ ಕನ್ನಡ ಮಕ್ಕಳ ಎದೆಗೆ ತ್ರಿಶೂಲ ಸದೃಶವೆ ಆಗಿದೆ…

ರಾಜಕೀಯ ದುರಭಿಸಂಧಿಯಿಂದ ಪ್ರೇರಿತವಾದುದು ಈ ತ್ರಿಭಾಷಾ ಸೂತ್ರ. ಅದರ ಪ್ರಕಾರ, ಹಿಂದಿ ಇಂಗ್ಲಿಷುಗಳು ಬಲಾತ್ಕಾರ ಭಾಷೆಗಳಾಗುತ್ತವೆ. ಕನ್ನಡಕ್ಕೆ ಪೆಟ್ಟು ಬೀಳುತ್ತದೆ. ಇದು ಈ ಸೂತ್ರದಲ್ಲಿ ಕಾದಿರುವ ತೀವ್ರವಾದ ಅಪಾಯ. ಎಲ್ಲರೂ ಇಂಗ್ಲಿಷ್ ಮತ್ತು ಹಿಂದಿ ಕಲಿಯಬೇಕೆನ್ನುವುದು ದಬ್ಬಾಳಿಕೆಯ ಸೂಚಕವಲ್ಲದೆ ಮತ್ತೇನು? ಪ್ರಜಾಪ್ರಭುತ್ವದಲ್ಲಿ ಬಲಾತ್ಕಾರಕ್ಕೆ ಸ್ಥಾನವಿರಕೂಡದು. ಎಲ್ಲರಿಗೂ ಎಲ್ಲ ಭಾಷೆಗಳೂ ಏತಕ್ಕೆ ಬೇಕು? ಪ್ರತಿಯೊಬ್ಬರೂ ತಮಗೆ ಅಗತ್ಯವಿರುವ ಭಾಷೆಯನ್ನು ಕಲಿಯಬಹುದು. ಅಲ್ಲದೆ ತ್ರಿಭಾಷಾ ಸೂತ್ರವೇ ಏಕೆ?

ಇಂಗ್ಲಿಷಿನ ಸ್ಥಾನದಲ್ಲಿ ಹಿಂದಿಯನ್ನು ತಂದು ಕೂರಿಸಬೇಕೆಂಬುದು ಹಿಂದಿವಾದಿಗಳ ಸಂಚು. ಇದನ್ನು ಕನ್ನಡಿಗರು ಪ್ರತಿಭಟಿಸಿ ವಿಫಲಗೊಳಿಸಬೇಕು. ಕೇಂದ್ರ ಸರ್ಕಾರವನ್ನು ಮೆಚ್ಚಿಸುವುದಕ್ಕಾಗಿ ರಾಜ್ಯ ಸರ್ಕಾರ ಹಿಂದಿ ವಿಶ್ವವಿದ್ಯಾನಿಲಯ ಸ್ಥಾಪನೆಯೇ ಮುಂತಾದ ಅವಿವೇಕದ ಕಾರ್ಯಗಳಿಗೆ ಕೈಹಾಕಿ ಕನ್ನಡಿಗರ ಹಿತವನ್ನು ಬಲಿಕೊಡಬಾರದು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಐವತ್ತು ಕೋಟಿ ಭಾರತೀಯರೂ ಹಿಂದಿಯನ್ನು ಕಲಿಯಬೇಕೆನ್ನುವ ವಾದದಲ್ಲಿ ಗತ ಸಾಮ್ರಾಜ್ಯಶಾಹಿಯ ಮನೋಧರ್ಮದ ವಿನಾ ಇನ್ನಾವ ಅರ್ಥವೂ ಇಲ್ಲ.

ಭಾಷಾ ತ್ರಿಶೂಲವೀ ತ್ರಿಭಾಷಾ ಸೂತ್ರ
ಬಾಲಕರ ರಕ್ಷಿಸೈ, ಹೇ ತ್ರಿಣೇತ್ರ |
ಚೂರು ತಿಂಡಿಗೆ ಸಿಕ್ಕಿಸಿಹರೊ ಈ ಮೂರು ಗಾಳ
ನುಂಗದಿದ್ದರೆ ಹಸಿವೆ; ನುಂಗಿದರೆ ಪ್ರಾಣ ಶೂಲ. ||

(ಕುವೆಂಪು ಅವರ ವಿಚಾರ ಕ್ರಾಂತಿಗೆ ಆಹ್ವಾನ ಪುಸ್ತಕದ ‘ಕರ್ನಾಟಕ: ಇಟ್ಟ ಹೆಸರು ಕೊಟ್ಟ ಮಂತ್ರ’ ಲೇಖನದ ಆಯ್ದ ಭಾಗ)

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...