ಲಂಕೇಶರು ಕಂಡ ಜಗಜೀವನ ರಾಮ್

Date:

ಛೇರ್ಮನ್‌ ಗಿರಿಯಿಂದ ಅಲ್ಲೊಂದು ಇಲ್ಲೊಂದು ಚರಂಡಿ ತೋಡಿಸಿ ರಸ್ತೆ ಸರಿ ಮಾಡಬಹುದು. ಆದರೆ ಈ ಪಂಚಾಯ್ತಿಯ ಕಪ್ಪು ಜನರ ಹೃದಯಗಳ ನೋವನ್ನು ಒಂದುಗೂಡಿಸಿದರೆ ಮಾತ್ರ ಆತನ ಬದುಕಿಗೆ ಅರ್ಥ ಬರುತ್ತದೆ. 

“ನಮ್ಮ ಜೀವನರಾಮು ಕೊನೆಗೂ ಛೇರ್ಮನ್‌ ಆಗಲಿಲ್ಲ. ಬರ್ತೂರಿನ ಬೇರನ್ನು ಈ ಪಂಚಾಯ್ತಿಯ ಕತ್ತೆಗಳು ಎಷ್ಟು ಗಲೀಜು ಮಾಡಿದ್ದಾರೆಂದರೆ, ನಮ್ಮ ರಾಮು ಹಿಡಿಯುತ್ತಿದ್ದುದು ಈ ದರಿದ್ರ ಛೇರನ್ನು, ಊರಿನ ಯಜಮಾನ ಸಂಜೀವಿಯ ಆಶೀರ್ವಾದದಿಂದ ರಾಮು ಕುರ್ಚಿ ಏರಬೇಕಾಗಿರಲಿಲ್ಲ. ರಾಮು ನಮ್ಮೆಲ್ಲರ ಮನಸ್ಸಿನಲ್ಲಿ ಬಹಳ ಕಾಲ ಉಳಿಯುವ ಕಪ್ಪು ಸಂಕೇತ. ನಮ್ಮ ಅನ್ಯಾಯಗಳ ಸಂಕೇತ ಕೂಡ.

“ಪಂಚಾಯ್ತಿಯ ಜನ ಬಹಳ ಮಾತಾಡಿಕೊಳ್ಳುತ್ತಾರೆ. ಗುಂಡಗೆ ಕಪ್ಪಗಿರುವ ಜೀವನ ರಾಮು ವ್ಯಂಗ್ಯ ಚಿತ್ರ ಬರೆಯುವವನಿಗೆ ಹಬ್ಬವಾಗಬಲ್ಲ, ಈತನನ್ನು ಬಿಳಿ ಹಾಳೆಯ ಮೇಲೆ ಕಪ್ಪು ಇಂಕು ಚೆಲ್ಲಿ ಎರಡು ಕಣ್ಣು ಬರೆದು ಬಿಳಿ ಟೋಪಿ ಹಾಕಿ ತಮಾಷೆ ಮಾಡುವುದು ಸುಲಭ. ಆದರೆ ಈ ಕಪ್ಪು ಆಕಾರದ ಹಿಂದೆ ಅರ್ಧಶತಮಾನದ ಅನುಭವ ಇದೆ. ಕೋಟ್ಯಂತರ ಕಪ್ಪು, ಜನರ ನೋವು ಇದೆ. ಗಾಂಧೀಜಿ ಅನುಭವಿಸಿದ ದುರಂತವಿದೆ. ವೇದೋಪನಿಷತ್ತು ಹೇಳಿ ಮೋಸ ಮಾಡಿದವರ, ಸುಲಿದು ಉಂಡವರ ಅಟ್ಟಹಾಸದ ನೆನಪುಗಳಿವೆ. ಚರಣಪ್ಪನಂತ ಕಟ್ಟೆ ಮುಖಂಡರ ತಾತ್ಸಾರ ಮತ್ತು ಶೋಷಣೆ ಇದೆ. ಯಜಮಾನ ಸಂಜೀವಿಯಂಥವರ ಪಿತೂರಿ ಮತ್ತು ಸೇಡುಗಳ ಬರೆ ಸ್ಪಷ್ಟವಾಗಿದೆ. ಜಾತಿ, ವರ್ಗಗಳ ಕೊಲೆಗಡುಕ ಚೌಕಟ್ಟು ನಮ್ಮೆಲ್ಲರ ಕಣ್ಣು ಕುಕ್ಕುವಷ್ಟು ಸರಳವಾಗಿ ಎದ್ದು ಕಾಣುತ್ತಿದೆ.

ಈ ಸುದ್ದಿ ಓದಿದ್ದೀರಾ?: ತಾಯಿ ಮೇಲೆ ಆಣೆಯಿಟ್ಟ ಬೊಮ್ಮಾಯಿಯಿಂದ ಪಂಚಮಸಾಲಿಗಳಿಗೆ ಮೋಸ; ಸ್ವಾಮೀಜಿಯೇಕೆ ಹೀಗೆ ಮಾಡಿದರು?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜೀವನರಾಮು ಈಗಲಾದರೂ ತನ್ನ ದಾರಿ ಕಂಡುಕೊಳ್ಳಬೇಕು. ಛೇರ್ಮನ್‌ಗಿರಿಯಿಂದ ಅಲ್ಲೊಂದು ಇಲ್ಲೊಂದು ಚರಂಡಿ ತೋಡಿಸಿ ರಸ್ತೆ ಸರಿ ಮಾಡಬಹುದು. ಆದರೆ ಈ ಪಂಚಾಯ್ತಿಯ ಕಪ್ಪು ಜನರ ಹೃದಯಗಳ ನೋವನ್ನು ಒಂದುಗೂಡಿಸಿದರೆ ಮಾತ್ರ ಆತನ ಬದುಕಿಗೆ ಮತ್ತು ಅವನ ಶತ್ರುಗಳೆನ್ನಿಸಿಕೊಂಡ ಖಳರೆಲ್ಲರ ಬದುಕಿಗೆ ಅರ್ಥ ಬರುತ್ತದೆ. ಮೂವತ್ತು ವರ್ಷಗಳ ಮರಳು ರಾಜಕೀಯದಿಂದ ಅಲ್ಲ, ಜೀವನ ರಾಮುವಿನ ಎರೆಮಣ್ಣಿನ ರಾಜಕೀಯದಿಂದ ಒಳ್ಳೆಯದಾಗುತ್ತದೆ. ಈ ನೆಲಕ್ಕಿನ್ನೂ ಜೀವ ಬರಿಸುವ ಶಕ್ತಿ ಉಳಿದಿದೆಯೋ ಇಲ್ಲವೋ ಎಂಬುದು ಗೊತ್ತಾಗುತ್ತದೆ. ಗಾಳಿಯಲ್ಲಿ ಓಡಾಡುವ ಮೇಲುವರ್ಗದ ಜನಕ್ಕೆ ಕಾಣದ ಇದ್ದದ್ದು ಈ ಮಣ್ಣಿನ ಕಂದಮ್ಮನಿಗೆ ಕಾಣಬೇಕಾಗುತ್ತದೆ. ನಮ್ಮ ಕಪ್ಪು ಮುಖದ ಮಗುವಿನಂಥ ರಾಮುವಿನಲ್ಲಿ ಇನ್ನೂ ಸಾಕಷ್ಟು ಜೀವನದ್ರವ್ಯ ಇದೆಯೆಂದು ಆಶಿಸೋಣ. ಈತನ ನೋವಿನಲ್ಲಿ ಭಾಗಿಗಳಾಗೋಣ. ನಮ್ಮ ರಾಮು ತನ್ನ ಸ್ಪರ್ಧೆಯಲ್ಲಿ ಸೋತರೂ ಅದಕ್ಕಿರುವ ನಿಜವಾದ ಗೆಲುವಿನ ಬಗ್ಗೆ ಆಶಾವಾದಿಗಳಾಗೋಣ. ರಾಮುವಿನ ಬಗ್ಗೆ ಬರೆಯುವಾಗ ನನ್ನಲ್ಲಿ ವ್ಯಂಗ್ಯ ಸತ್ತು ಕಣ್ಣಂಚಿನಲ್ಲಿ ನೀರು ಕಾಣಿಸಿಕೊಳ್ಳುತ್ತಿದೆ. ಇದು ಖಂಡಿತ ಕರುಣೆ ಅಥವಾ ತೊಟ್ಟಿ ಅನುಕಂಪದ್ದಲ್ಲ. ಈ ಗಾಂಧೀಜಿಯ ನೆಲದ ಅನ್ಯಾಯ ದಿಂದ ಹೊರಟದ್ದು.”

– ಪಿ.ಲಂಕೇಶ್

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...