ರೋಹಿತ್ ವೇಮುಲ: ಮತ್ತೆ ಮರುಹುಟ್ಟು ಪಡೆಯಬೇಕಾಗಿತ್ತು ಎನ್ನುತ್ತಾರೆ ದೇವನೂರ ಮಹಾದೇವ

Date:

ರೋಹಿತ್ ವೇಮುಲ ತನ್ನ ಡೆತ್‍ನೋಟ್‍ನಲ್ಲಿ ”ಈ ನಿಮಿಷದಲ್ಲಿ ನಾನು… ಖಾಲಿಯಾಗಿದ್ದೇನೆ” ಎಂದು ಬರೆದಿದ್ದಾನೆ. ಜರ್ಝರಿತ ಆ ಅಮಾನವೀಯ ಆ ಖಾಲಿಯಾದ ಸ್ಥಿತಿಯಲ್ಲಿ ಸಂಭಾಳಿಸಿಕೊಂಡು ಅಂಬೇಡ್ಕರ್ ಮರುಹುಟ್ಟು ಪಡೆಯುತ್ತಾರೆ. ಧಾರಣಾಶಕ್ತಿಯನ್ನು ಕೂಡಿಸಿಕೊಂಡು ವಿಷಕಂಠನಂತಾಗುತ್ತಾರೆ. ಆದರೆ ವೇಮುಲ, ಅಂಬೇಡ್ಕರರ ಶೇಕಡ ಹತ್ತರಷ್ಟು ಅವಮಾನ, ತಾರತಮ್ಯಗಳನ್ನು ಅನುಭವಿಸದ ವೇಮುಲ, ತನ್ನ ಅಸಹಾಯಕ ಸಮುದಾಯಕ್ಕೆ ಬೆಳಕಾಗಬೇಕಿದ್ದ ರೋಹಿತ್ ವೇಮುಲ, ಆ ಖಾಲಿಯಾದ ಸ್ಥಿತಿಯೊಳಗಿಂದಲೇ ಅಂಬೇಡ್ಕರರಂತೆ ಮರುಹುಟ್ಟು ಪಡೆಯಬೇಕಾಗಿತ್ತು

ರೋಹಿತ್ ವೇಮುಲನ ಬಗ್ಗೆ ಒಂದು ಸಣ್ಣ ಟಿಪ್ಪಣಿ ಬರೆಯಲು ಕೂತಾಗಲೆಲ್ಲಾ ರೋಹಿತನ ಮುಖ, ಆತನು ಬರೆದ ಡೆತ್‍ನೋಟ್ ಕಲೆಸಿಕೊಂಡು ಕಣ್ಮುಂದೆ ನಿಲ್ಲುತ್ತದೆ. ಇದಕ್ಕೆ ಪದಗಳು ಸಿಗುತ್ತಿಲ್ಲ.

…ಸಾಯುವ ಕ್ಷಣಗಳಲ್ಲಿ ಬರೆದ ಆ ಡೆತ್‍ನೋಟ್‍ ಅನ್ನು ರೋಹಿತ್ ಯಾರಿಗೆ ಬರೆದ? ಓದಿದರೆ ಈ ಭೂಮಿ ಉದ್ದೇಶಿಸಿ ಮಾತಾಡುತ್ತಿದ್ದಾನೆ ಅನ್ನಿಸುತ್ತದೆ. ಅವನು ಸತ್ತು, ಆ ಸಾವಿಗೆ ಯಾರೂ ಕಾರಣರಲ್ಲ ಎಂದು ಹೇಳುವ ರೋಹಿತ್ ಈಗ ಬದುಕುತ್ತಿರುವವರಿಗೆ ಅಂದರೆ ನಾಳೆ ಸಾಯುವವರಿಗೆ ಅಣುಕಿಸುತ್ತಿದ್ದಾನೊ ಅಥವಾ ಸಾಂತ್ವನ ಹೇಳುತ್ತಿದ್ದಾನೊ?

ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದ ರೋಹಿತನು ಡಿಸೆಂಬರ್ 18, 2015 ರಲ್ಲಿ ಉಪಕುಲಪತಿಗೆ ಬರೆದ ಪತ್ರದಲ್ಲಿ-

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ಎಲ್ಲಾ ದಲಿತ ವಿದ್ಯಾರ್ಥಿಗಳಿಗೂ ಅವರ ಪ್ರವೇಶಾತಿಯ ಸಮಯದಲ್ಲಿ 10 ಮಿಲಿಗ್ರಾಂ ಸೋಡಿಯಂ ಆಕ್ಸೈಡ್ ಕೊಡಿ. ಅಂಬೇಡ್ಕರ್ ಅನ್ನು ಓದಬೇಕು ಅನ್ನಿಸಿದಾಗ ಅವರಿಗೆ ಅದನ್ನು ತಿನ್ನಲು ಸೂಚನೆ ನೀಡಿ”,

”ಒಂದು ಒಳ್ಳೆಯ ಹಗ್ಗವನ್ನು ಎಲ್ಲಾ ದಲಿತ ವಿದ್ಯಾರ್ಥಿಗಳ ಕೊಠಡಿಗೆ ನಿಮ್ಮ ಗೆಳೆಯರಾದ ಮಹಾನ್ ವಾರ್ಡನ್ ಅವರಿಗೆ ಹೇಳಿ ಸರಬರಾಜು ಮಾಡಿಸಿ.”

ಈ ಮಾತುಗಳಲ್ಲಿ ರೋಹಿತನ ಅಗ್ನಿಪರ್ವತದಿಂದ ಹೊಮ್ಮುವ ಲಾವಾರಸದಂಥ ಮಾತುಗಳಲ್ಲಿ ಆತನ ಸಾವಿನ ಕಾರಣ ಅಡಗಿ ಕೂತಿದೆ.

ಆದರೂ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದು ನೇಣಿಗೆ ಜೀವ ಕೊಡುವ ರೋಹಿತನ ಪ್ರಜ್ಞೆ ಹೇಗಿರಬಹುದು? ತನ್ನ ಸುತ್ತಲ ಜಗತ್ತು ಹೇಗೆ ಕಂಡಿರಬಹುದು? ಈ ಜಾತಿ ಈ ಮತ ಈ ಸುಳ್ಳು, ಈ ತಾರತಮ್ಯ ವಂಚನೆಗಳಲ್ಲಿ ಬದುಕು ಸವೆಸುತ್ತಿರುವ ತನ್ನ ಸುತ್ತಲ ಸಮೂಹವು ಕ್ಷುದ್ರಜೀವಿಗಳು, ಹುಳುಗಳು ಎಂದು ಅನ್ನಿಸದಿದ್ದರೆ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆಯಲು ರೋಹಿತನಿಗೆ ಸಾಧ್ಯವಾಗುತ್ತಿತ್ತೇ? ಅದಕ್ಕೇ ಆತನಿಗೆ ಈ ಬದುಕು ಅಸಹ್ಯ ಅನ್ನಿಸಿರಬೇಕು. ಸಹ್ಯ ಮಾಡಿಕೊಳ್ಳಲು ಆತ ಆಕಾಶಕ್ಕೆ ನೆಗೆದು ಬಿಡುತ್ತಾನೇನೊ?

ಹೀಗಿದ್ದೂ, ಭಾರತವನ್ನಾಳುವ ಸಂಸತ್‍ನಲ್ಲಿ ಕೇಂದ್ರ ಮಾನವ ಸಂಪನ್ಮೂಲ ಸಚಿವೆ ಸ್ಮೃತಿ ಇರಾನಿಯವರು ”ರೋಹಿತ್ ತನ್ನ ಸಾವಿಗೆ ಯಾರೂ ಕಾರಣರಲ್ಲ ಎಂದು ಬರೆದಿದ್ದಾನೆ” ಎಂದು ಹೇಳಿ ಅದು ಸಾಲದೆ ಸುಳ್ಳಿನ ಹೂಮಾಲೆ ಕಟ್ಟಿ ಸಂಸತ್‍ ಅನ್ನೆ ಕುಬ್ಜಗೊಳಿಸಿಬಿಟ್ಟರು. ನಾಚಿಕೆಯನ್ನೇ ಕೊಂದುಬಿಟ್ಟರು. ಸಂಸತ್‍ ಅನ್ನು ಸಂವೇದನಾಹೀನ ಕುಷ್ಠ ಜೀವಿಗಳ ಸಂತೆ ಮಾಡಿಬಿಟ್ಟರು. ಇರಲಿ…

ವಿದೇಶಗಳಲ್ಲಿ ಉನ್ನತ ವ್ಯಾಸಂಗ ಪೂರೈಸಿ ಅಂಬೇಡ್ಕರ್, 1917ರಲ್ಲಿ ಭಾರತದ ಬರೋಡಾಕ್ಕೆ ಬಂದು ಎಲ್ಲೂ ಮನೆ ಸಿಗದೆ ಕೊನೆಗೆ ಪಾರ್ಸಿ ಹೋಟೆಲಿನಲ್ಲಿ ಸುಳ್ಳು ಜಾತಿ ಹೇಳಿ ಉಳಿದುಕೊಂಡಿದ್ದಾಗ ಮಹರ್ ಎಂದು ಗೊತ್ತಾಗಿ ಹೋಟೆಲ್‍ನಿಂದ ಅಂಬೇಡ್ಕರ್ ರನ್ನು ಅವಮಾನಕರವಾಗಿ ಹೊರ ಹಾಕಲ್ಪಟ್ಟ ಆ ದಿಕ್ಕೆಟ್ಟ ಸಂದರ್ಭದ ಬಗ್ಗೆ ಅಂಬೇಡ್ಕರ್ ಬರೆಯುತ್ತಾ ”ನನ್ನ ತಲೆ ಖಾಲಿಯಾಗಿತ್ತು” ಎನ್ನುತ್ತಾರೆ.

ವೇಮುಲನು ತನ್ನ ಡೆತ್‍ನೋಟ್‍ನಲ್ಲಿ ”ಈ ನಿಮಿಷದಲ್ಲಿ ನಾನು… ಖಾಲಿಯಾಗಿದ್ದೇನೆ” ಎಂದು ಬರೆದಿದ್ದಾನೆ. ಜರ್ಝರಿತ ಆ ಅಮಾನವೀಯ ಆ ಖಾಲಿಯಾದ ಸ್ಥಿತಿಯಲ್ಲಿ ಸಂಭಾಳಿಸಿಕೊಂಡು ಅಂಬೇಡ್ಕರ್ ಮರುಹುಟ್ಟು ಪಡೆಯುತ್ತಾರೆ. ಧಾರಣಾಶಕ್ತಿಯನ್ನು ಕೂಡಿಸಿಕೊಂಡು ವಿಷಕಂಠನಂತಾಗುತ್ತಾರೆ. ಆದರೆ ವೇಮುಲ, ಅಂಬೇಡ್ಕರರ ಶೇಕಡ ಹತ್ತರಷ್ಟು ಅವಮಾನ, ತಾರತಮ್ಯಗಳನ್ನು ಅನುಭವಿಸದ ವೇಮುಲ, ತನ್ನ ಅಸಹಾಯಕ ಸಮುದಾಯಕ್ಕೆ ಬೆಳಕಾಗಬೇಕಿದ್ದ ವೇಮುಲ, ಆ ಖಾಲಿಯಾದ ಸ್ಥಿತಿಯೊಳಗಿಂದಲೇ ಅಂಬೇಡ್ಕರರಂತೆ ಮರುಹುಟ್ಟು ಪಡೆಯಬೇಕಾಗಿತ್ತು, ಅಂತ ಅವನ ಮುಖ ನೆನಪಾದಾಗಲೆಲ್ಲಾ ಅನ್ನಿಸುತ್ತದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...