ಅಲ್ಪಸಂಖ್ಯಾತರ ಶೈಕ್ಷಣಿಕ-ಸಾಮಾಜಿಕ-ಆರ್ಥಿಕ ಪ್ರಗತಿಗಾಗಿ ಸರ್ಕಾರದ ಕಾರ್ಯಕ್ರಮಗಳೇನು?

Date:

ಕಳೆದ ಬಾರಿ 2024-25ರ ವಾರ್ಷಿಕ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ವ್ಯವಹಾರಗಳ ಇಲಾಖೆಗೆ ರೂ. 3183 ಕೋಟಿ ಅನುದಾನವನ್ನು ನೀಡಿದ್ದರು. ಆದರೆ ಅದನ್ನು ಪರಿಷ್ಕರಿಸಿ ರೂ. 1868 ಕೋಟಿ ಅನುದಾನವನ್ನು ಒದಗಿಸಿದ್ದರು, ಅಂದರೆ ಬಿಡುಗಡೆ ಸಂದರ್ಭದಲ್ಲಿ ಸುಮಾರು ರೂ. 1300 ಕೋಟಿ ಅನುದಾನವನ್ನು ಹಿಂಪಡೆದುಕೊಂಡಿದ್ದರು.

ಸತತ ಮೂರನೇ ಅವಧಿಗೆ ಅಧಿಕಾರದಲ್ಲಿರುವ ಬಿಜೆಪಿ ಆಡಳಿತದ ಮೋದಿ ನೇತೃತ್ವದ ಒಕ್ಕೂಟ ಸರ್ಕಾರವು ದೇಶದ ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿ ಈ ಹಿಂದೆ ಸ್ಥಾಪಿಸಲಾಗಿದ್ದ ಅನೇಕ ಸಂಸ್ಥೆಗಳನ್ನು ಮತ್ತು ಯೋಜನೆ/ಕಾರ್ಯಕ್ರಮಗಳನ್ನು ಕ್ರಮೇಣವಾಗಿ ಕಡಿತಗೊಳಿಸುವ ವ್ಯವಸ್ಥಿತ ಕೆಲಸವನ್ನು ಮಾಡುತ್ತಿರುವ ಬಗ್ಗೆ ಹಲವು ವರದಿಗಳು ಬಂದಿವೆ. ವಿವಿಧ ಸಂದರ್ಭಗಳಲ್ಲಿ ಸರ್ಕಾರದ ಇಚ್ಚಾಶಕ್ತಿಯೂ ಮುನ್ನೆಲೆಗೆ ಬಂದಿದೆ.

ಬಿಜೆಪಿ ನೇತೃತ್ವದ ಸರ್ಕಾರವು 2025-26ರ ಈ ಬಾರಿಯ ಕೇಂದ್ರ ಬಜೆಟ್‌ನಲ್ಲಿ ಅಲ್ಪಸಂಖ್ಯಾತರ ವ್ಯವಹಾರಗಳ ಇಲಾಖೆಗೆ ರೂ. 3350 ಕೋಟಿ ಅನುದಾನವನ್ನು ಘೋಷಿಸಿದೆ. ಇದು ಕಳೆದ ಬಾರಿಯ ಬಜೆಟ್‌ನಲ್ಲಿ ಘೋಷಿಸಿದ್ದ ಅನುದಾನಕ್ಕಿಂತಲೂ ಪ್ರತಿಶತ 5ರಷ್ಟು ಅಂದರೆ ರೂ. 166 ಕೋಟಿ ಅನುದಾನ ಹೆಚ್ಚಾಗಿದ್ದರೂ ಸಹ ಶಿಕ್ಷಣಕ್ಕೆ ಸಂಬಂಧಿಸಿದ ಅನೇಕ ಕಾರ್ಯಕ್ರಮಗಳಿಗೆ ನೀಡಲಾಗುತ್ತಿದ್ದ ಅನುದಾನವನ್ನು ಸಂಪೂರ್ಣವಾಗಿ ನಿಲ್ಲಿಸುವ ಮೂಲಕ ಸಮುದಾಯದ ಶೈಕ್ಷಣಿಕ ಪ್ರಗತಿಯನ್ನು ಕುಂಠಿತಗೊಳಿಸುತ್ತಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಳೆದ ಬಾರಿ 2024-25ರ ವಾರ್ಷಿಕ ಬಜೆಟ್ ನಲ್ಲಿ ಅಲ್ಪಸಂಖ್ಯಾತರ ವ್ಯವಹಾರಗಳ ಇಲಾಖೆಗೆ ರೂ. 3183 ಕೋಟಿ ಅನುದಾನವನ್ನು ನೀಡಿದ್ದರು. ಆದರೆ ಅದನ್ನು ಪರಿಷ್ಕರಿಸಿ ರೂ. 1868 ಕೋಟಿ ಅನುದಾನವನ್ನು ಒದಗಿಸಿದ್ದರು. ಅಂದರೆ ಬಿಡುಗಡೆ ಸಂದರ್ಭದಲ್ಲಿ ಸುಮಾರು ರೂ. 1300 ಕೋಟಿ ಅನುದಾನವನ್ನು ಹಿಂಪಡೆದುಕೊಂಡಿದ್ದರು.

ಅಲ್ಪಸಂಖ್ಯಾತರ ಸಮುದಾಯದ ವಿದ್ಯಾರ್ಥಿಗಳ ಶೈಕ್ಷಣಿಕ ಏಳಿಗೆಗಾಗಿ ಕೇಂದ್ರದ ಮೂಲಕ ಜಾರಿಗೊಳ್ಳುತ್ತಿರುವ ಮೆಟ್ರಿಕ್ ಪೂರ್ವ, ಮೆಟ್ರಿಕ್ ನಂತರದ ಮತ್ತು ಮೌಲಾನಾ ಆಜಾದ್ ನ್ಯಾಷನಲ್ ಫೆಲೋಶಿಪ್ ಮತ್ತು ಉಚಿತ ಕೋಚಿಂಗ್ ಹಾಗೂ ಶೈಕ್ಷಣಿಕ ಸಾಲ ಸೌಲಭ್ಯಗಳನ್ನು ಒಳಗೊಂಡ ಒಟ್ಟು 6 ಯೋಜನೆ/ಕಾರ್ಯಕ್ರಮಗಳಿಗೆ ರೂ. 678 ಕೋಟಿ ಅನುದಾನವನ್ನು ಮೀಸಲಿಟ್ಟಿದ್ದು, ಕಳೆದ ಬಾರಿಗೆ ಹೋಲಿಸಿದರೆ ಸುಮಾರು ರೂ. 900 ಕೋಟಿಯಷ್ಟು ಅನುದಾನವನ್ನು ಕಡಿತಗೊಳಿಸಿದ್ದಾರೆ, ಇದೇ ಯೋಜನೆಗಳಿಗೆ ಕಳೆದ ಬಾರಿ ರೂ. 1575 ಕೋಟಿ ಅನುದಾನವನ್ನು ಘೋಷಿಸಿದ್ದರು. ಆದರೆ ಬಿಡುಗಡೆಗೊಳಿಸಿದ್ದು ಮಾತ್ರ ಕೇವಲ ರೂ. 517 ಕೋಟಿ.

ಬಹಳ ಪ್ರಮುಖವಾಗಿ, ಮುಸ್ಲಿಮ್ ಸಮುದಾಯದ ಮಕ್ಕಳು ಅಭ್ಯಸಿಸುವ ಮದ್ರಸಾ ಶಿಕ್ಷಣಕ್ಕೆ ಆಧುನಿಕ ಅಥವಾ ಔಪಚಾರಿಕ ಶಿಕ್ಷಣದ ಕಲಿಕೆಯನ್ನು ಸಂಯೋಜಿಸಲು ನೀಡುತ್ತಿದ್ದ ಆರ್ಥಿಕ ಸಹಾಯವನ್ನು ಅತೀ ದೊಡ್ಡ ಪ್ರಮಾಣದಲ್ಲಿ ನಿಲ್ಲಿಸಿದ್ದಾರೆ. ಈ ಬಾರಿಯ ಬಜೆಟ್‌ನಲ್ಲಿ ಮದ್ರಸಾ ಶಿಕ್ಷಣಕ್ಕೆ ಕೇವಲ ರೂ. 0.01 ಕೋಟಿ ಅಂದರೆ ಕೇವಲ ರೂ. 10 ಲಕ್ಷ ಅನುದಾನವನ್ನು ಮಾತ್ರ ಮೀಸಲಿಟ್ಟಿದ್ದಾರೆ, ಆದರೆ ಕಳೆದ ಬಾರಿ ಇದಕ್ಕಾಗಿ ರೂ. 10 ಕೋಟಿ ಘೋಷಿಸಿದ್ದರು ನಂತರದಲ್ಲಿ ಅದನ್ನು ಪರಿಷ್ಕರಿಸಿ 2ಕೋಟಿಗೆ ಇಳಿಸಿದ್ದರು.

ಸಂಪೂರ್ಣ ಒಕ್ಕೂಟ ಸರ್ಕಾರದಿಂದ ಅನುಷ್ಠಾನಗೊಳ್ಳುತ್ತಿರುವ ಅನೇಕ ಶೈಕ್ಷಣಿಕ, ಆರ್ಥಿಕ ಮತ್ತು ಕೌಶಲ್ಯಾಭಿವೃದ್ಧಿ ಹಾಗೂ ಜೀವನೋಪಾಯಕ್ಕೆ ಸಂಬಂಧಿಸಿದ ಕಾರ್ಯಕ್ರಮಗಳಿಗೆ ಈ ಬಾರಿ 1237ಕೋಟಿ ಅನುದಾನವನ್ನು ಒದಗಿಸಿದ್ದಾರೆ. ಇದಕ್ಕೆಲ್ಲ ಕಳೆದ ಬಾರಿ 2120ಕೋಟಿ ಅನುದಾನವನ್ನು ನೀಡಿದ್ದರು. ಆದರೆ ನಂತರದಲ್ಲಿ ಅದನ್ನು ಪರಿಷ್ಕರಿಸಿ ರೂ. 770ಕೋಟಿ ಅನುದಾನವನ್ನು ನೀಡಿದ್ದರು, ಒಟ್ಟಾರೆ ರೂ.800 ಕೋಟಿಗಿಂತಲೂ ಅಧಿಕ ಅನುದಾನವನ್ನು ಕಡಿತಗೊಳಿಸಿದ್ದಾರೆ‌.

ಈ ಬಜೆಟ್ ನಲ್ಲಿ ಗಮನಿಸಬೇಕಾದದ್ದು ಏನೆಂದರೆ ಅಲ್ಪಸಂಖ್ಯಾತರ ಅಭಿವೃದ್ಧಿಗಾಗಿ ರೂಪಿಸಿರುವ “ಪ್ರಧಾನಮಂತ್ರಿ ಜನವಿಕಾಸ ಕಾರ್ಯಕ್ರಮ”ಕ್ಕೆ ಕಳೆದ ಬಾರಿ ರೂ. 910ಕೋಟಿ ಅನುದಾನವನ್ನು ನೀಡಿದ್ದರು. ಆದರೆ ಈ ಬಾರಿಯ ಬಜೆಟ್ ನಲ್ಲಿ ಈ ಯೋಜನೆಗೆ ರೂ. 1913ಕೋಟಿ ಅನುದಾನವನ್ನು ಮೀಸಲಿಟ್ಟಿದ್ದಾರೆ. ಅಂದರೆ ಸುಮಾರು ರೂ. 1ಸಾವಿರ ಕೋಟಿ ಹೆಚ್ಚುವರಿ ಅನುದಾನವನ್ನು ಈ ಯೋಜನೆಗೆ ಮೀಸಲಿಟ್ಟಿರುವುದು ಮೇಲ್ನೋಟಕ್ಕೆ ಪ್ರಧಾನಿಯ ಹೆಸರಿನ ಮೇಲೆ ಚಾಲ್ತಿಯಲ್ಲಿರುವ ಯೋಜನೆಯನ್ನು ಜನಪ್ರಿಯಗೊಳಿಸುವ ಮೂಲಕ ಅಲ್ಪಸಂಖ್ಯಾತರ ಕಾಳಜಿಯನ್ನು ಪ್ರಕಟಿಸುವುದಾಗಿದೆ‌ಯೇ ಹೊರತು ಸಮುದಾಯದ ಸಬಲೀಕರಣಕ್ಕೆ ಅಗತ್ಯವಿರುವ ಯೋಜನೆಗಳಿಗೆ ಅನುದಾನ ನೀಡದಿರುವುದು ನೈಜ ಕಾಳಜಿ ಹೊಂದಿಲ್ಲ ಎಂಬುದು ಗೊತ್ತಾಗುತ್ತದೆ, ಪ್ರಚಾರ ಗಿಟ್ಟಿಸಿಕೊಳ್ಳಲು ಈ ಬಗೆಯ ಕಾರ್ಯತಂತ್ರವನ್ನು ಕೇಂದ್ರ ನಿರಂತರವಾಗಿ ಮಾಡುತ್ತಿರುವುದು ಜಗಜ್ಜಾಹೀರಾಗಿದೆ.‌

ಅಝಾದ್ ಫೌಂಡೇಷನ್

ಯುಪಿಎಸ್ಸಿ ಪೂರ್ವಭಾವಿ ಮತ್ತು ಎಸ್.ಎಸ್.ಸಿ ಹಾಗೂ ರಾಜ್ಯದ ಲೋಕಸೇವಾ ಆಯೋಗಗಳ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ತೇರ್ಗಡೆಯಾಗಲು ನೀಡುತ್ತಿದ್ದ ಕೋಚಿಂಗ್ ಅನ್ನು ಸಹ ನಿಲ್ಲಿಸಲಾಗಿದೆ. ಅದಲ್ಲದೇ ಮೌಲಾನಾ ಆಜಾದ್ ಎಜುಕೇಷನ್ ಫೌಂಡೇಷನ್ ಸಂಸ್ಥೆ(MANF) ಮತ್ತು ಎನ್.ಎಮ್.ಡಿ.ಎಫ್.ಸಿ (NMDFC)ಗೆ ಯಾವುದೇ ರೀತಿಯ ಅನುದಾನವನ್ನು ನೀಡಿಲ್ಲ, ಈ ಸಂಸ್ಥೆಗಳಿಗೆ ಕಳೆದ ಬಾರಿಯೂ ಸಹ ಯಾವುದೇ ಅನುದಾನವನ್ನು ನೀಡದೆ, ಸಂಸ್ಥೆಯ ಕಾರ್ಯವನ್ನು ನಿಲ್ಲಿಸಲಾಗಿದೆ.‌

2023-24ರ ಬಜೆಟ್ ನಲ್ಲಿ ಮೆಟ್ರಿಕ್ ಪೂರ್ವ ವಿದ್ಯಾರ್ಥಿವೇತನಕ್ಕೆ ರೂ. 433ಕೋಟಿ ನೀಡಲಾಗಿತ್ತು, ಆದರೆ ಅದರಲ್ಲಿ ಬಳಕೆ ಮಾಡಿದ್ದು ಮಾತ್ರ ಕೇವಲ ರೂ. 95 ಕೋಟಿ, 2024-25ರ ಬಜೆಟ್‌ನಲ್ಲಿ ಈ ಯೋಜನೆಯ ಅನುದಾನವನ್ನು ರೂ. 326 ಕೋಟಿಗೆ ಇಳಿಸಲಾಯಿತು. ತದನಂತರ ಅದರಲ್ಲಿ ಕೇವಲ ರೂ. 90ಕೋಟಿ ಅನುದಾನವನ್ನು ಮಾತ್ರ ಬಿಡುಗಡೆಗೊಳಿಸಿತ್ತು. ಇದೀಗ 2025-26ರ ಬಜೆಟ್ ನಲ್ಲಿ ಕೇವಲ ರೂ. 195 ಕೋಟಿ ಅನುದಾನವನ್ನು ಮೀಸಲಿಟ್ಟಿದ್ದಾರೆ. ಈ ಹಿಂದೆ ಪ್ರಿ-ಮೆಟ್ರಿಕ್ ಸ್ಕಾಲರ್‌ ಶಿಪ್ ಅನ್ನು 1 ರಿಂದ 8ನೇ ತರಗತಿಯ ವಿದ್ಯಾರ್ಥಿಗಳಿಗೂ ನೀಡಲಾಗುತ್ತಿತ್ತು. ಕಳೆದ ವರ್ಷದಲ್ಲಿ ಮೆಟ್ರಿಕ್ ಪೂರ್ವ ಸ್ಕಾಲರ್‌ ಶಿಪ್ ಅನ್ನು ನಿಲ್ಲಿಸಿ ಕೇವಲ 9 ಮತ್ತು 10ನೇ ತರಗತಿಯ ವಿದ್ಯಾರ್ಥಿಗಳಿಗೆ ಮಾತ್ರ ಈ ಯೋಜನೆಯನ್ನು ಮುಂದುವರೆಸಲಾಗುತ್ತಿದೆ‌. ಇದಕ್ಕಾಗಿ ಆರ್‌ಟಿಇ ಕಾಯ್ದೆಯನ್ನು ತಪ್ಪಾಗಿ ಅರ್ಥೈಸಲಾಗಿದೆ. ಇದು ಆರ್‌ಟಿಇಯ ಶೈಕ್ಷಣಿಕ ಹಕ್ಕಿನ ಸ್ಪಷ್ಟ ಉಲ್ಲಂಘನೆಯಾಗಿದ್ದರೂ ಸಹ ಕೇಂದ್ರ ಸರ್ಕಾರ ಯೋಜನೆಯನ್ನು ಉದ್ದೇಶಪೂರ್ವಕವಾಗಿ ನಿಲ್ಲಿಸಿದೆ.

ಅದೇ ರೀತಿ ಮೆಟ್ರಿಕ್ ನಂತರದ ವಿದ್ಯಾರ್ಥಿವೇತನಕ್ಕೆ ಕಳೆದ ಬಾರಿ ರೂ. 413 ಕೋಟಿ ಅನುದಾನವನ್ನು ಹಂಚಿಕೆ ಮಾಡಲಾಗಿತ್ತು. ಆದರೆ ಈ ಬಾರಿ ಅನುದಾನವನ್ನು ಶೇ. 65% ರಷ್ಟು ಇಳಿಕೆ ಮಾಡಿದ್ದಾರೆ.

ಸ್ನಾತಕ ಮತ್ತು ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ನೀಡುವ ಮೆರಿಟ್-ಕಮ್-ಮೀನ್ಸ್ ಸ್ಕಾಲರ್‌ಶಿಪ್ ಯೋಜನೆ ಗೆ ಕಳೆದ ಬಾರಿ ರೂ.33.80 ಕೋಟಿ ಅನುದಾನವನ್ನು ನೀಡಿದ್ದರು. ಆದರೆ ಈ ಬಾರಿ ಅನುದಾನವನ್ನು ರೂ. 7.34 ಕೋಟಿಗೆ ಇಳಿಕೆ ಮಾಡಿದ್ದಾರೆ.

ಉನ್ನತ ಶಿಕ್ಷಣ ಅಧ್ಯಯನಕ್ಕೆ ವಿದೇಶಿ ವಿವಿಗಳಲ್ಲಿ ಕಲಿಯಲು ಶೈಕ್ಷಣಿಕ ಸಾಲ ಸೌಲಭ್ಯಕ್ಕಾಗಿ ಕಳೆದ ಬಾರಿ ರೂ. 15.30 ಕೋಟಿ ಅನುದಾನವನ್ನು ನೀಡಿದ್ದರು ಆದರೆ ಈ ಬಾರಿ ಅದನ್ನು ಕಡಿತಗೊಳಿಸಿ ರೂ. 8.16 ಕೋಟಿ ಮಾತ್ರ ಅನುದಾನವನ್ನು ಮೀಸಲಿಟ್ಟಿದ್ದಾರೆ.

ಈ ಹಿಂದಿನಿಂದಲೂ ಸಾಚಾರ್ ವರದಿ ಮತ್ತು ರಂಗನಾಥ ಮಿಶ್ರಾ ದಂತಹ ಸಮೀಕ್ಷಾ ವರದಿಗಳ ಅಂಕಿ-ಅಂಶಗಳು ಸರ್ಕಾರದ ಮುಂದಿದ್ದರೂ ಸಹ ರಾಜಿಕೀಯ ಇಚ್ಚಾಶಕ್ತಿ ಮತ್ತು ಸಾಮಾಜಿಕ ನ್ಯಾಯದ ಬಗೆಗೆ ನಿಜವಾದ ಕಾಳಜಿ ಇಲ್ಲದಿರುವುದು ಹಾಗೂ ಜಾತಿ, ಧರ್ಮ, ಸೈದ್ಧಾಂತಿಕ ಭಿನ್ನತೆಯ ಆಧಾರದಲ್ಲಿ ಅಭಿವೃದ್ಧಿಯನ್ನು ಕಂಡುಕೊಳ್ಳುವುದು ಸಾಮಾಜಿಕ ಸಮಾನತೆಗೆ ವಿರುದ್ಧವಾದುದಾಗಿದೆ.

ಇದನ್ನೂ ಓದಿ ಅಲ್ಪಸಂಖ್ಯಾತ ಸಮುದಾಯದ ಮುಖಂಡರನ್ನು ಹೊರಗಿಟ್ಟು ಬಜೆಟ್ ಪೂರ್ವಭಾವಿ ಸಭೆ: ಆಕ್ರೋಶ

WhatsApp Image 2025 11 17 at 4.22.38 PM
ಮಹಮ್ಮದ್ ಪೀರ್ ಲಟಗೇರಿ
+ posts

ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ನಿವಾಸಿಯಾಗಿದ್ದು, ಬಿ.ಇಡಿ ಪದವಿ ಮುಗಿಸಿ, ಎಂ.ಎಸ್ಸಿ ಅಧ್ಯಯನ ಮಾಡುತ್ತಿದ್ದಾರೆ. ವಿದ್ಯಾರ್ಥಿ -ಯುವಜನ ಮುಖಂಡರಾಗಿ ಗುರುತಿಸಿಕೊಂಡಿರುವ ಇವರು ರಾಜ್ಯ ಮಟ್ಟದ ಅನೇಕ ಶೈಕ್ಷಣಿಕ, ಸಾಮಾಜಿಕ ಮತ್ತು ರಾಜಕೀಯ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಮಹಮ್ಮದ್ ಪೀರ್ ಲಟಗೇರಿ
ಮಹಮ್ಮದ್ ಪೀರ್ ಲಟಗೇರಿ
ಬಾಗಲಕೋಟೆ ಜಿಲ್ಲೆಯ ಇಳಕಲ್ ನಗರದ ನಿವಾಸಿಯಾಗಿದ್ದು, ಬಿ.ಇಡಿ ಪದವಿ ಮುಗಿಸಿ, ಎಂ.ಎಸ್ಸಿ ಅಧ್ಯಯನ ಮಾಡುತ್ತಿದ್ದಾರೆ. ವಿದ್ಯಾರ್ಥಿ -ಯುವಜನ ಮುಖಂಡರಾಗಿ ಗುರುತಿಸಿಕೊಂಡಿರುವ ಇವರು ರಾಜ್ಯ ಮಟ್ಟದ ಅನೇಕ ಶೈಕ್ಷಣಿಕ, ಸಾಮಾಜಿಕ ಮತ್ತು ರಾಜಕೀಯ ಕಾರ್ಯಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...