ಒಳಮೀಸಲಾತಿಯ ಚೆಂಡು ಉರುಳಿ ಬಂದಿದ್ದು ಎಲ್ಲಿಗೆ ?

Date:

ಕರ್ನಾಟಕ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ವಿಷಯದಲ್ಲಿ ಸುಪ್ರೀಂಕೋರ್ಟಿನಲ್ಲಿ ಆಗುತ್ತಿದ್ದ ಬೆಳವಣಿಗೆಗಳ ಬಗ್ಗೆ ಸ್ವಲ್ಪವೂ ನಿಗಾ ಇರಲಿಲ್ಲ. ತಾನು ಏನೋ ಒಂದು ಶಿಫಾರಸ್ಸು ಮಾಡಿ ಮುಖ ಉಳಿಸಿಕೊಂಡೆ ಎಂಬ ಕಾಟಾಚಾರ ಮಾತ್ರ ಇಡೀ ಬೆಳವಣಿಗೆಯಲ್ಲಿ ಎದ್ದು ಕಾಣುತ್ತಿತ್ತು.

2023ರ ಕರ್ನಾಟಕ ವಿಧಾನಸಭಾ ಚುನಾವಣೆಯ ಸಂದರ್ಭ, ಡಾ ಜಿ ಪರಮೇಶ್ವರ್ ಕಾಂಗ್ರೆಸ್ ಪಕ್ಷದ ಚುನಾವಣಾ ಪ್ರಣಾಳಿಕೆ ರಚನಾ ಸಮಿತಿಯ ಅಧ್ಯಕ್ಷರು.”ಗ್ಯಾರಂಟಿಗಳನ್ನು ಪ್ರಣಾಳಿಕೆಗಳ ಮೂಲಕ ಹೇಳಬೇಕಿತ್ತು. ಆದರೆ ಅದಕ್ಕೆ ಅವಕಾಶ ಕೊಡದೆ ಚುನಾವಣಾ ಸಭೆಗಳಲ್ಲೇ ಘೋಷಿಸಲಾಗುತ್ತಿದೆ. ಹೀಗಾದರೆ ಪ್ರಣಾಳಿಕೆ ಸಮಿತಿ ಅಧ್ಯಕ್ಷರಿಗೇನು ಕೆಲಸ” ಎಂದು ಹೇಳಿ ಸ್ವಲ್ಪ ದಿನ ಡಾ ಪರಮೇಶ್ವರ್ ಮುನಿಸಿಕೊಂಡಿದ್ದರು. ಕೊನೆಗೂ ಪ್ರಣಾಳಿಕೆ ಸಮಿತಿ ಅಧ್ಯಕ್ಷರಿಗೆ ಒಂದು ಬಲವಾದ ಭರವಸೆಯನ್ನು ಘೋಷಿಸುವ ಅವಕಾಶ ಸಿಕ್ಕಿತು. ಒಳ ಮೀಸಲಾತಿಯ ಕುರಿತಾಗಿ ಪ್ರಣಾಳಿಕೆಯಲ್ಲಿ ಭರವಸೆ ನೀಡಲಾಯಿತು. ‘ಕಾಂಗ್ರೆಸ್ ಅಧಿಕಾರಕ್ಕೆ ಬಂದ ನಂತರ ಮೊದಲ ಸಚಿವ ಸಂಪುಟ ಸಭೆಯಲ್ಲೇ ನ್ಯಾ ಸದಾಶಿವ ವರದಿಗೆ ಒಪ್ಪಿಗೆ ಕೊಟ್ಟು ಕೇಂದ್ರಕ್ಕೆ ಶಿಫಾರಸ್ಸು ಮಾಡಲಾಗುವುದು’ ಎಂದು.

ಕಾಂಗ್ರೆಸ್ ಅಧಿಕಾರಕ್ಕೆ ಬಂತು. ಸಚಿವ ಸಂಪುಟ ಸಭೆಗ ನಡೆದವು. ಒಳ ಮೀಸಲಾತಿ ವಿಷಯ ಪ್ರಸ್ತಾಪವಾಗದೇ ಮೂಲೆ ಸೇರಿತು. ಅತ್ತ ತೆಲಂಗಾಣದಲ್ಲಿ ಪ್ರಧಾನಿ ನರೇಂದ್ರ ಮೋದಿ ‘ಮಾದಿಗ ವಿಶ್ವರೂಪಂ’ ಸಭೆಯಲ್ಲಿ ಭಾಗವಹಿಸಿ ತೋರಿಸಿದ ಬದ್ಧತೆಗೆ ಕಾಂಗ್ರೆಸ್ ಒಳಗೊಳಗೆ ನಡುಗಿ ಹೋಗಿತ್ತು. ಇತ್ತ ಕರ್ನಾಟಕದಲ್ಲಿ ಆರಂಭವಾದ ಮಾದಿಗ ಮುನ್ನಡೆ ಸಮಾವೇಶಗಳು, ಅದಕ್ಕೆ ಸಿಕ್ಕ ಜನಸ್ಪಂದನದಿಂದಾಗಿ ಕಾಂಗ್ರೆಸ್ ತಾನು ಕೊಟ್ಟ ಪ್ರಣಾಳಿಕೆಯಲ್ಲಾದರೂ ಎಚ್ಚೆತ್ತುಕೊಳ್ಳಬೇಕಾಯಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜನವರಿ 17, 2024 ಕರ್ನಾಟಕ ಸರ್ಕಾರದ ಸಚಿವ ಸಂಪುಟದ ಸಭೆ. ‘ಸಂವಿಧಾನದ 341ನೇ ವಿಧಿಗೆ ಕೇಂದ್ರ ಸರ್ಕಾರ ತಿದ್ದುಪಡಿ ತಂದು ಒಳ ಮೀಸಲಾತಿ ಜಾರಿ ಮಾಡುವ ಅಧಿಕಾರವನ್ನು ರಾಜ್ಯಗಳಿಗೆ ಕೊಡಬೇಕು’ ಎಂದು ಕೇಂದ್ರ ಸರ್ಕಾರಕ್ಕೆ ಪತ್ರ ಬರೆಯಲು ಸಂಪುಟ ಸಭೆ ನಿರ್ಧರಿಸಿತು. ಸಂಪುಟ ಸಭೆಯ ನಂತರ ಇದನ್ನು ಪತ್ರಕರ್ತರಿಗೆ ವಿವರಿಸಲು ಬಂದ ಸಮಾಜ ಕಲ್ಯಾಣ ಸಚಿವರು ತಡಬಡಾಯಿಸಿದರು.

341ನೇ ವಿಧಿಗೆ ತಿದ್ದುಪಡಿ ಆಗಬೇಕು ಎಂದು ನ್ಯಾ ಉಷಾ ಮೆಹ್ರಾ ಆಯೋಗ 2008ರಲ್ಲಿ ಹೇಳಿದ್ದು ನಿಜ. 2008ರಿಂದ 2013ರವರಗೆ ಕೇಂದ್ರದಲ್ಲಿ ಕಾಂಗ್ರೆಸ್ ನೇತೃತ್ವದ ಯುಪಿಎ ಸರ್ಕಾರವೇ ಇತ್ತಲ್ಲ! ಆಗೇಕೆ 341ನೇ ವಿಧಿಗೆ ತಿದ್ದುಪಡಿ ಮಾಡಲಿಲ್ಲ? 2013ರಿಂದ 2018ರವರೆಗೆ ಕರ್ನಾಟಕದಲ್ಲಿ ಸಿದ್ಧಾರಾಮಯ್ಯ ನೇತೃತ್ವದ ಬಹುಮತದ ಸರ್ಕಾರವೇ ಇತ್ತಲ್ಲ! ಆಗೇಕೆ ಈ ಶಿಫಾರಸ್ಸನ್ನು ಕಳುಹಿಸಲಿಲ್ಲ? ಪತ್ರಕರ್ತರ ಪ್ರಶ್ನೆಗೆ ಸಮಾಜ ಕಲ್ಯಾಣ ಸಚಿವರಲ್ಲಿ ಉತ್ತರ ಇರಲಿಲ್ಲ, ಬೆವರೊರೆಸಿಕೊಂಡು ಎದ್ದ ಸಚಿವರು, ʼಯಾರೋ ಮೀಡಿಯಾದವರನ್ನೆಲ್ಲ ಟ್ಯೂನ್ ಮಾಡಿ ಕಳುಹಿಸಿದ್ದಾರೆ’ ಎಂದು ಗೊಣಗಿಕೊಂಡು ಹೋದರೆಂದು ಪತ್ರಕರ್ತರೊಬ್ಬರು ಹೇಳಿದರು.

  • 2020ರ ತಮ್ಮ ತೀರ್ಪಿನಲ್ಲೇ ನ್ಯಾ ಅರುಣ ಮಿಶ್ರಾ ‘341ನೇ ವಿಧಿಗೆ ತಿದ್ದುಪಡಿ ತರುವ ವಿಷಯ ಅಪ್ರಸ್ತುತ’ ಎಂದು ಸ್ಪಷ್ಟವಾಗಿ ಹೇಳಿದ್ದರು.
  • 2023ರ ಅಕ್ಟೋಬರ್‌ನಲ್ಲಿ ಒಳಮೀಸಲಾತಿಯ ವಿಚಾರಣೆಗಾಗಿ ಸುಪ್ರೀಂಕೋರ್ಟ್ ಏಳು ಸದಸ್ಯರ ಪೀಠವನ್ನು ರಚಿಸಿತು.
  • ಕೇಂದ್ರ ಸರ್ಕಾರ ಒಳಮೀಸಲಾತಿಯ ಪರವಾಗಿ ವಕಾಲತ್ತು ವಹಿಸಿತು.
  • ವಿಚಾರಣೆ ಆರಂಭವಾಗಲು ಕೆಲದಿನಗಳು ಇರುವಾಗ 2024 ಜನವರಿ 17ರಂದು ಕರ್ನಾಟಕ ಸರ್ಕಾರ ‘341ನೇ ವಿಧಿಗೆ ತಿದ್ದುಪಡಿ ತನ್ನಿ’ ಎಂದು ಕೇಂದ್ರಕ್ಕೆ ಪತ್ರ ಬರೆಯಿತು.

ಕರ್ನಾಟಕ ಸರ್ಕಾರಕ್ಕೆ ಸಾಮಾಜಿಕ ನ್ಯಾಯದ ವಿಷಯದಲ್ಲಿ ಸುಪ್ರೀಂಕೋರ್ಟಿನಲ್ಲಿ ಆಗುತ್ತಿದ್ದ ಬೆಳವಣಿಗೆಗಳ ಬಗ್ಗೆ ಸ್ವಲ್ಪವೂ ನಿಗಾ ಇರಲಿಲ್ಲ. ತಾನು ಏನೋ ಒಂದು ಶಿಫಾರಸ್ಸು ಮಾಡಿ ಮುಖ ಉಳಿಸಿಕೊಂಡೆ ಎಂಬ ಕಾಟಾಚಾರ ಮಾತ್ರ ಇಡೀ ಬೆಳವಣಿಗೆಯಲ್ಲಿ ಎದ್ದು ಕಾಣುತ್ತಿತ್ತು.

ದುರಂತವೆಂದರೆ ಆಗಸ್ಟ್ 1ರಂದು ಸುಪ್ರೀಂಕೋರ್ಟಿನ ಐತಿಹಾಸಿಕ ತೀರ್ಪು ಹೊರಬಿತ್ತು. ಆಗಲೂ ನಮ್ಮ ಸಮಾಜ ಕಲ್ಯಾಣ ಸಚಿವರು ಹೇಳಿದ್ದು ‘ಕೇಂದ್ರ ಸರ್ಕಾರ ಸಂವಿಧಾನ ತಿದ್ದುಪಡಿ ಮಾಡಬೇಕಾಗುತ್ತದೆ!’ ಇಂತಹ ‘ಬಂಡೆ’ ಸರ್ಕಾರದ ಎದುರು ಒಳ ಮೀಸಲಾತಿಯ ಚೆಂಡು ಉರುಳಿ ಬಂದಿದೆಯೇ ? ಕಾಲವೇ ಉತ್ತರಿಸಬೇಕು.

ಮಂಜುನಾಥ ಬುರಡಿ
ಮಂಜುನಾಥ ಬುರಡಿ
+ posts

ಗದಗ ಜಿಲ್ಲಾ ಮಾದಿಗ ದಂಡೋರ ಜಿಲ್ಲಾ ಪ್ರಧಾನ ಕಾರ್ಯದರ್ಶಿ

ಪೋಸ್ಟ್ ಹಂಚಿಕೊಳ್ಳಿ:

ಮಂಜುನಾಥ ಬುರಡಿ
ಮಂಜುನಾಥ ಬುರಡಿ
ಗದಗ ಜಿಲ್ಲಾ ಮಾದಿಗ ದಂಡೋರ ಜಿಲ್ಲಾ ಪ್ರಧಾನ ಕಾರ್ಯದರ್ಶಿ

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...