ವಿಚಾರ | ಸರ್ಕಾರಿ ಶಾಲೆ, ಮಾದರಿ ಶಾಲೆ ಆಗದೇಕೆ?

Date:

ಮೊದಲು ರಾಜಕಾರಣಿಗಳು ಹಾಗೂ ಸರ್ಕಾರಿ ನೌಕರರ ಮಕ್ಕಳಿಗೆ ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿಯೇ ಶಿಕ್ಷಣ ಕೊಡಿಸಬೇಕೆಂಬ ಕಾನೂನು ಜಾರಿಯಾಗಬೇಕು.

ಆಧುನಿಕ ದಿನಮಾನಗಳಲ್ಲಿ ರಾಜಕಾರಣಿಗಳು, ಹೆಸರಾಂತ ವ್ಯಕ್ತಿಗಳು, ಹೋರಾಟಗಾರರು ಸರ್ಕಾರಿ ಶಾಲೆಗಳನ್ನು ಉಳಿಸಿ, ಸರ್ಕಾರಿ ಶಾಲೆಗಳನ್ನು ಬೆಳೆಸಿ ಎಂಬ ಮಾತುಗಳನ್ನಾಡುವುದನ್ನು ನಾವು ಕೇಳಿದ್ದೇವೆ. ಆದರೆ, ಇವರುಗಳು ಮಾಡುತ್ತಿರುವುದಾದರೂ ಏನು? ಶಾಲೆಗಳ ಅಭಿವೃದ್ಧಿಯನ್ನು ಯಾರು ಮಾಡಬೇಕು? ಹೇಗೆ ಮಾಡಬೇಕು? ಸರ್ಕಾರಿ ಶಾಲೆಗಳ ಅಭಿವೃದ್ಧಿ ಕೆಲಸಗಳಲ್ಲಿ ನಮ್ಮ ಪಾತ್ರ ಹೇಗಿರಬೇಕು ಎಂಬ ಅರಿವೇ ಇಲ್ಲದೆ ಸರ್ಕಾರಿ ಶಾಲೆಗಳ ಪ್ರಗತಿಯ ಕುರಿತು ಮಾತನಾಡುತ್ತಿದ್ದಾರೆ.

ಭೂತದ ಬಾಯಲ್ಲಿ ಭಗವದ್ಗೀತೆ ಎಂಬಂತೆ ಸರ್ಕಾರಿ ಶಾಲೆಯ ಒಳಿತನ್ನು ಬಯಸುತ್ತಿದ್ದೇವೆ ಎಂದು ನಟಿಸುವ ಇವರುಗಳು, ಅವರ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿಯೇ ಶಿಕ್ಷಣ ಕೊಡಿಸುತ್ತಿದ್ದಾರೆಯೇ?, ಇಲ್ಲ. ಸರ್ಕಾರಿ ಕೆಲಸ ಬೇಕು, ಸರ್ಕಾರದ ಸೌಲಭ್ಯ ಬೇಕು, ತಮ್ಮ ಮಕ್ಕಳಿಗೆ ಸರ್ಕಾರಿ ಶಾಲೆಗಳಲ್ಲಿ ಶಿಕ್ಷಣ ಬೇಡ. ಇದಕ್ಕೆ ಕಾರಣ ಸರ್ಕಾರಿ ಶಾಲೆಗಳಲ್ಲಿನ ಅವ್ಯವಸ್ಥೆ ಮತ್ತು ದೋಷಪೂರಿತ ಶಿಕ್ಷಣದ ಕುರಿತು ಇವರುಗಳು ಈಗಾಗಲೇ ಅರಿತಿರುವುದು.

ಭ್ರಷ್ಟಾಚಾರದಲ್ಲಿ ತೊಡಗಿರುವ ರಾಜಕಾರಣಿಗಳು ತಮ್ಮದೇ ಆದ ಖಾಸಗಿ ಶಾಲೆಗಳಿಗೆ ಒತ್ತು ನೀಡುತ್ತಿರುವುದಷ್ಟೇ ಅಲ್ಲದೆ, ಮೂಲಭೂತ ಸೌಕರ್ಯಗಳು, ಉತ್ತಮ ಶಿಕ್ಷಣವನ್ನು ನೀಡುವುದರ ಮೂಲಕ ಹಣದ ಲೂಟಿಯಲ್ಲಿ ಆಸಕ್ತರಾಗಿದ್ದಾರೆ. ವೈಯಕ್ತಿಕ ಬೆಳವಣಿಗೆಯತ್ತ ಮುಖ ಮಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸರ್ಕಾರಿ ಶಾಲೆಗಳ ಅಭಿವೃದ್ದಿ ಕುರಿತು ಮಾತನಾಡುವ ಇಂತಹವರು ತಮ್ಮ ಮಕ್ಕಳನ್ನು ಅದೇ ಸರ್ಕಾರಿ ಶಾಲೆಗಳಲ್ಲಿ ಓದಿಸುವ ಮನಸ್ಸು ಮಾಡಬೇಕು. ಖಾಲಿ ಮಾತುಗಳನ್ನಾಡುವ ಹಣವಂತರು ಸರ್ಕಾರಿ ಶಾಲೆಗಳನ್ನು ದತ್ತು ತೆಗೆದುಕೊಳ್ಳುವ ಮೂಲಕ ದುಸ್ಥಿತಿಯಲ್ಲಿರುವ ಶಾಲೆಗಳ ದುರಸ್ತಿಗೊಳಿಸುವತ್ತ ಗಮನಹರಿಸಿ ಮೂಲಭೂತ ಸೌಕರ್ಯಗಳು, ಉತ್ತಮ ಕುರ್ಚಿಗಳು, ಬೆಂಚುಗಳ ವ್ಯವಸ್ಥೆ, ಆಧುನಿಕ ಶಿಕ್ಷಣ ವ್ಯವಸ್ಥೆ, ಉತ್ತಮ ರೀತಿಯಲ್ಲಿ ಶಿಕ್ಷಕರಿಗೆ ತರಬೇತಿ ವ್ಯವಸ್ಥೆಯನ್ನು ಕಲ್ಪಿಸುವ ಮೂಲಕ ಸರ್ಕಾರಿ ಶಾಲೆಗಳನ್ನು ಮಾದರಿ ಶಾಲೆಗಳನ್ನಾಗಿ ಮಾರ್ಪಾಡು ಮಾಡಬಹುದಲ್ಲವೇ?.

ಇತ್ತೀಚೆಗೆ ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಮುಂದಾಗಿರುವ ರಾಜಕಾರಣಿಯೊಬ್ಬರು ತಮಗೆ ಬರುವ ವೇತನವನ್ನು ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ದಾನ ಮಾಡುತ್ತಿದ್ದಾರೆ. ಹುಟ್ಟೂರಲ್ಲಿ ಸುಸಜ್ಜಿತ ಸರ್ಕಾರಿ ಶಾಲೆಯನ್ನು ಕಟ್ಟಿಸುವ ಮೂಲಕ ರಾಜ್ಯಕ್ಕೆ ಮಾದರಿಯಾಗಿದ್ದಾರೆ. ತಮ್ಮ ಹುಟ್ಟು ಹಬ್ಬಕ್ಕೊಂದು ಸರ್ಕಾರಿ ಶಾಲೆಗೆ ಮರುಹುಟ್ಟು ನೀಡುವ, ಗ್ರಾಮೀಣ ಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವಂತ ಕೆಲಸಕ್ಕೆ ಮುಂದಾಗಿರುವುದು ನಿಜಕ್ಕೂ ಶ್ಲಾಘನೀಯ. ಇವರ ಮಾದರಿಯಲ್ಲಿ ಪ್ರತಿಯೊಬ್ಬರೂ ನಡೆದಾಗ ಸರ್ಕಾರಿ ಶಾಲೆ, ಮಾದರಿ ಶಾಲೆ ಆಗುವುದರಲ್ಲಿ ಯಾವ ಸಂಶಯವೂ ಇಲ್ಲ.

ಇದರ ಜತೆಗೆ ನಮ್ಮ ರಾಜ್ಯದಲ್ಲಿ ಮೊದಲು ರಾಜಕಾರಣಿಗಳು ಹಾಗೂ ಸರ್ಕಾರಿ ನೌಕರರ ಮಕ್ಕಳಿಗೆ ಕಡ್ಡಾಯವಾಗಿ ಸರ್ಕಾರಿ ಶಾಲೆಗಳಲ್ಲಿಯೇ ಶಿಕ್ಷಣ ಕೊಡಿಸಬೇಕೆಂಬ ಕಾನೂನು ಜಾರಿಯಾಗಬೇಕು. ಆಳುವ ವರ್ಗದವರಿಂದ ಬದಲಾವಣೆಗಳು ಮೊದಲು ಆರಂಭವಾದರೆ ಪ್ರಜೆಗಳು ಇದನ್ನು ಅನುಕರಣೆ ಮಾಡುವುದು ನಿಸ್ಸಂದೇಹ.

ಬರಹ : ಮೇಘನಾ ಯು ಶಂಕರಘಟ್ಟ, ಪತ್ರಿಕೋದ್ಯಮ ವಿದ್ಯಾರ್ಥಿನಿ, ಕುವೆಂಪು ವಿವಿ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...