ಚುನಾವಣೆ 2023 | ಯಡಿಯೂರಪ್ಪ ಈ ಚುನಾವಣೆ ನಂತರ ಬಳಸಿ ಬಿಸಾಡುವ ಟಿಶ್ಯೂ ಪೇಪರ್ ಆಗುವರೆ?

Date:

ಕಣ್ಣೀರಿಡುತ್ತಲೇ ಮುಖ್ಯಮಂತ್ರಿ ಗಾದಿಯಿಂದ ಕೆಳಗೆ ಇಳಿದಿದ್ದು, ಅದಾದ ಬಳಿಕ ಎಷ್ಟೇ ಪ್ರಯತ್ನಿಸಿದರೂ ಮಗ ಬಿ.ವೈ ವಿಜಯೇಂದ್ರನನ್ನು ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರಿಸಬೇಕೆಂಬ ಅವರ ಆಸೆ ಈಡೇರದಿದ್ದದು ಯಡಿಯೂರಪ್ಪ ಮರೆಯಲು ಮತ್ತು ಇಷ್ಟು ಬೇಗ ಆ ನೋವು ಮಾಸಲು ಹೇಗೆ ಸಾಧ್ಯ?

ಜಗದೀಶ್ ಶೆಟ್ಟರ್ ಬಿಜೆಪಿ ಜೊತೆಗಿನ ತನ್ನ ಮೂವತ್ತು ವರ್ಷದ ನಂಟು ಕಳಚಿಕೊಂಡು ಕಾಂಗ್ರೆಸ್ ಅಂಗಳಕ್ಕೆ ಕಾಲಿಟ್ಟಿದ್ದಾರೆ. ‘ಹುಬ್ಬಳಿ ಸೆಂಟ್ರಲ್ ಕ್ಷೇತ್ರದಿಂದ ನಿಮ್ಮ ಕುಟುಂಬದವರೊಬ್ಬರಿಗೆ ಟಿಕೆಟ್ ನೀಡುತ್ತೇವೆ ಹಾಗೂ ನಿಮ್ಮನ್ನು ರಾಜ್ಯಸಭಾ ಸದಸ್ಯನಾಗಿ ಮಾಡುತ್ತೇವೆಂದು ಪಕ್ಷ ಅವರಿಗೆ ನೀಡಿದ ಎರಡು ಬಿಗ್ ಆಫರ್ ನಿರಾಕರಿಸಿ, ತಮ್ಮ ಸ್ವಾಭಿಮಾನಕ್ಕೆ ಧಕ್ಕೆಯಾಗಿದೆ ಎಂದೇಳಿ ಬಿಜೆಪಿಗೆ ಗುಡ್ ಬೈ ಹೇಳಿ, ತಮ್ಮ ಈ ಸ್ಥಿತಿಗೆ ಬಿ.ಎಲ್ ಸಂತೋಷ್ ಕಾರಣವೆಂದು ನೇರವಾಗಿ ಆರೋಪಿಸುತ್ತಿದ್ದಾರೆ.

ಬಿಜೆಪಿಯ ಎರಡೂ ಆಫರ್ ತಿರಸ್ಕರಿಸಿ ಕಾಂಗ್ರೆಸ್ ಸೇರಿದ್ದು ಅಧಿಕಾರದ ಆಸೆಯಿಂದಲೋ ಅಥವಾ ಸ್ವಾಭಿಮಾನಕಾಗಿಯೋ ಎನ್ನುವುದು ಕಾಲವೇ ನಿರ್ಧರಿಸುತ್ತದೆ. ಅವರಿಗೆ ಅಧಿಕಾರದ ಆಸೆ ಇದ್ದಿದ್ದರೆ ಆಫರ್‌ಗಳು ಒಪ್ಪಿಕೊಂಡು ಬಿಜೆಪಿಯಲ್ಲೇ ತೆಪ್ಪಗೆ ಇರುತ್ತಿದ್ದರೇನೋ?

ಒಂದಂತೂ ಸ್ಪಷ್ಟ, ಒಂದು ಹಿಡನ್ ಅಜೆಂಡಾ ಇಟ್ಟುಕೊಂಡೆ ಬಿಜೆಪಿಯೆಂದರೆ ಲಿಂಗಾಯತರ ಪಕ್ಷ ಎಂಬ ನಂಬುಗೆಯ ಜಾಗದಲ್ಲಿ ಪ್ರಖರ ಹಿಂದುತ್ವವಾದಿ ಪಕ್ಷವೆಂದು ಬಿಂಬಿಸುವ ಕೆಲಸವನ್ನು ಮಾಡಿ ಮುಗಿಸಿದ್ದಾರೆ. ಬಿಜೆಪಿ ಲಿಂಗಾಯತರದಲ್ಲ, ಇದು ಹಿಂದುತ್ವವಾದಿಗಳ ಪಕ್ಷ ಎಂಬುದನ್ನು ಸಾರುತ್ತಿರುವ ಯತ್ನದ ಹಿಂದೆ ಬಿ.ಎಲ್ ಸಂತೋಷ್, ಮತ್ತವರಿಗೆ ಊರುಗೋಲಾಗಿ ಪ್ರಲ್ಹಾದ ಜೋಶಿ ಇರುವುದು ರಹಸ್ಯವೇನಲ್ಲ.

ಈ ಸುಡು ಸತ್ಯ ಪಕ್ಷದಲ್ಲಿರುವ ಯಡಿಯೂರಪ್ಪ ಆದಿಯಾಗಿ ಎಲ್ಲರಿಗೂ ಗೊತ್ತಿದೆ. ಹೀಗಿದ್ದರೂ ಯಡಿಯೂರಪ್ಪ ‘ಶೆಟ್ಟರ್ – ಸವದಿ ಎಲ್ಲಾ ಅಧಿಕಾರ ಅನುಭವಿಸಿಯೂ ಮಾತೃ ಪಕ್ಷಕ್ಕೆ ದ್ರೋಹ ಎಸಗಿದ್ದಾರೆ. ಅವರನ್ನು ಸೋಲಿಸುತ್ತೇವೆ’ ಎಂದು ಠೇಂಕರಿಸುತ್ತಿದ್ದಾರೆ. ಇದೇ ಯಡಿಯೂರಪ್ಪನವರು 2013 ರ ಚುನಾವಣೆಯ ಸಂದರ್ಭದಲ್ಲಿ ಬಿಜೆಪಿ ವಿರುದ್ಧ ಆಡಿದ ಮಾತುಗಳನ್ನೆ, ತೋಡಿಕೊಂಡ ನೋವುಗಳನ್ನೆ ಇಂದು ಜಗದೀಶ್ ಶೆಟ್ಟರ್ ಆಡುತ್ತಿದ್ದಾರೆ, ನೋವು ತೋಡಿಕೊಳ್ಳುತ್ತಿದ್ದಾರೆ ಅಷ್ಟೇ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನೂ ಓದಿ ಚುನಾವಣಾ ಕಣದಲ್ಲಿ ಕಾಣಿಸಿಕೊಂಡ ಸಿದ್ದರಾಮಯ್ಯ ಮೊಮ್ಮಗ : ಮೈಸೂರಿನ ಜನ ಹೇಳಿದ್ದೇನು ಗೊತ್ತೇ?

ಕಣ್ಣೀರಿಡುತ್ತಲೇ ಮುಖ್ಯಮಂತ್ರಿ ಗಾದಿಯಿಂದ ಕೆಳಗೆ ಇಳಿದಿದ್ದು, ಅದಾದ ಬಳಿಕ ಎಷ್ಟೇ ಪ್ರಯತ್ನಿಸಿದರೂ ಮಗ ಬಿ.ವೈ ವಿಜಯೇಂದ್ರನನ್ನು ಬಸವರಾಜ ಬೊಮ್ಮಾಯಿ ಸಂಪುಟಕ್ಕೆ ಸೇರಿಸಬೇಕೆಂಬ ಅವರ ಆಸೆ ಈಡೇರದಿದ್ದದು ಯಡಿಯೂರಪ್ಪ ಮರೆಯಲು ಮತ್ತು ಇಷ್ಟು ಬೇಗ ಆ ನೋವು ಮಾಸಲು ಹೇಗೆ ಸಾಧ್ಯ?

ಈ ಬಾರಿ ಟಿಕೆಟ್ ಕೊಡುವುದರಲ್ಲಿ ಬಿ.ಎಲ್ ಸಂತೋಷ್ ನಿರ್ಣಾಯಕ ಪಾತ್ರ ವಹಿಸಿದ್ದು ಢಾಳಾಗಿ ಎದ್ದು ಕಾಣುತ್ತಿದೆ. ದೆಹಲಿಯಲ್ಲಿ ಯಡಿಯೂರಪ್ಪನವರಿಗೆ ಹೊರಗಿಟ್ಟು ಟಿಕೆಟ್ ಫೈನಲ್ ಮಾಡಿರುವುದು ಸ್ವತಃ ಅವರೇ ಕಂಡು ಕೋಪಿಸಿಕೊಂಡು ದೆಹಲಿಯಿಂದ ಬೆಂಗಳೂರಿಗೆ ಧಾವಿಸಿದರು. ಬಂದ ಮರುದಿನವೇ ಅವರ ಮನೆಯ ಮೇಲೆ ‘ಐಟಿ’ ದಾಳಿ ನಡೆದಿತ್ತು ಎಂದು ಬಲ್ಲ ಸುದ್ದಿ ಮೂಲಗಳು ಹೇಳುತ್ತಿವೆ. ಇದು ನಿಜವೋ, ಸುಳ್ಳೋ ಎಂಬುದು ಖಚಿತವಾಗಬೇಕಷ್ಟೆ!

ಇದನ್ನೂ ಓದಿ ಚುನಾವಣೆ 2023 | ಶೆಟ್ಟರ್ ಕ್ಷೇತ್ರದಲ್ಲಿ ಪಕ್ಷ ಬಲಪಡಿಸುತ್ತೇವೆ: ಪ್ರಲ್ಹಾದ್ ಜೋಶಿ

ಒಂದಂತೂ ಸತ್ಯ, ಯಡಿಯೂರಪ್ಪನವರು ಐಟಿ – ಇಡಿ ಭಯದಿಂದಲೋ ಅಥವಾ ಮಕ್ಕಳ ರಾಜಕೀಯ ಭವಿಷ್ಯಕ್ಕಾಗಿಯೋ ಆಗುತ್ತಿರುವ ಅವಮಾನವೆಲ್ಲ ಸಹಿಸಿ, ನೋವುಗಳನ್ನೆಲ್ಲಾ ನುಂಗಿ ಬಿಜೆಪಿಯಲ್ಲೇ ಕಾಲ ದೂಡುತ್ತಿದ್ದಾರೆ. ರೇಡ್‌ನ ಭಯ ಅಥವಾ ಪುತ್ರ ವಾತ್ಸಲ್ಯದಿಂದಲ್ಲದೇ ಬೇರೆ ಇನ್ನೇನು ಕಾರಣವಿರಲು ಸಾಧ್ಯ? ಅವರಿಗೆ ಬಿಜೆಪಿ ಮೇಲೆ ನಿಷ್ಠೆ ಹಾಗೂ ಹಿಂದೂತ್ವದ ಮೇಲೆ ನಂಬಿಕೆ ಎಷ್ಟಿದೆ ಎಂದು 2013 ರಲ್ಲಿ ಅವರೆ ಇಡೀ ರಾಜ್ಯಕ್ಕೆ ತೋರಿಸಿಕೊಟ್ಟಿದ್ದಾರೆ.

ಯಡಿಯೂರಪ್ಪನವರನ್ನೂ ಸಹ ವಿಧಾನಸಭೆ ಮತ್ತು ಬರುವ ಲೋಕಸಭಾ ಚುನಾವಣೆಯ ನಂತರ ಬಳಸಿ ಟಿಶ್ಯೂ ಪೇಪರ್‌ನಂತೆ ಬಿಸಾಡುತ್ತಾರೆಂದು ರಾಜ್ಯಾದ್ಯಂತ ಜನರು ಮಾತನಾಡುತ್ತಿದ್ದಾರೆ. ಜನರಾಡುತ್ತಿರುವ ಮಾತು ‘ಸಂತೋಷ’ ನಿಜ ಮಾಡಿದರೆ ಮುಂದೆ ಅವರಿಗೂ, ಅವರ ಮಕ್ಕಳಿಗೂ ಮತ್ತು ಅವರ ಪಕ್ಷಕ್ಕೂ ಕೇಡುಗಾಲ ತಪ್ಪಿದ್ದಲ್ಲ. ಹೀಗಾಗಲ್ಲ ಎಂಬ ವಿಶ್ವಾಸದ ಮೇಲೆ ಯಡಿಯೂರಪ್ಪನವರಿಗೂ ವಿಶ್ವಾಸವಿಲ್ಲ

49661542 294235811438250 5384525710729674752 n
ಸಿದ್ದಪ್ಪ ಮೂಲಗೆ
+ posts

ಪತ್ರಕರ್ತರು

ಪೋಸ್ಟ್ ಹಂಚಿಕೊಳ್ಳಿ:

ಸಿದ್ದಪ್ಪ ಮೂಲಗೆ
ಸಿದ್ದಪ್ಪ ಮೂಲಗೆ
ಪತ್ರಕರ್ತರು

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಐಷಾರಾಮಿ ಕ್ರೂಸ್‌ಗಳ ಮಾಂಸಕ್ಕಿಲ್ಲದ ಪಾಪ, ಕಾರ್ಮಿಕರ ‘ಇಫ್ತಾರ್’ ಬಿರಿಯಾನಿಗೇಕೆ?

ಗಂಗಾ ನದಿಯ ಪವಿತ್ರತೆಯ ಬಗ್ಗೆ ಮಾತನಾಡುವವರು, ನದಿಯ ನೈಜ ಮಾಲಿನ್ಯದ ಮೂಲಗಳನ್ನು...

ಸುಳ್ಳೇ ಬಂಡವಾಳ, ಯುದ್ಧವೇ ವ್ಯಾಪಾರ: ಸೋತು ಸುಣ್ಣವಾದರೂ ತೀರದ ಅಮೆರಿಕದ ಅಹಂಕಾರ

​ಈ ಯುದ್ಧದಾಹದ ಕುರಿತು ಜಗತ್ತಿಗೇ ಗೊತ್ತಿದೆ, ಇಡೀ ವಿಶ್ವವೇ ಅಮೆರಿಕದ ದ್ವಂದ್ವ...

ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ದೇಶದಲ್ಲಿ ಪ್ರಸ್ತುತ 33.21 ಕೋಟಿ ಸಕ್ರಿಯ ಗೃಹಬಳಕೆಯ ಎಲ್‌ಪಿಜಿ ಸಂಪರ್ಕಗಳಿದ್ದರೂ, ಇಡೀ...

ಮಣಿಪುರ | ಕರಾಳ ಘಟನೆಗೆ 3 ವರ್ಷ; ಕಾಗದದಲ್ಲೇ ಉಳಿದ ಕೇಂದ್ರ ಸರ್ಕಾರದ ‘ನಾರೀ ಸಮ್ಮಾನ’

ನ್ಯಾಯದ ವಿಳಂಬವು ಅನ್ಯಾಯಕ್ಕೆ ಸಮಾನ ಎಂಬ ಮಾತಿದೆ. ಮಣಿಪುರದ ಈ ಪ್ರಕರಣವು...