ಕೇಸರಿ ಶಾಲು ಬಿಟ್ಟು ಮುಸ್ಲಿಮರ ಟೋಪಿ ಧರಿಸಿದ ಬಿಜೆಪಿ ಶಾಸಕ ರಾಜುಗೌಡ

Date:

  • ಕೊಡೇಕಲ್‌ ಬಸವಣ್ಣನ ಜಾತ್ರೆ ಉಲ್ಲೇಖಿಸಿದ ಶಾಸಕ
  • ಮುಸ್ಲಿಂ ಸೌಹಾರ್ದತೆ ಸಂದೇಶ ಸಾರಿದ ರಾಜುಗೌಡ

ವಿಧಾನಸಭಾ ಚುನಾವಣೆ ಸಮೀಪಿಸುತ್ತಿರುವ ಹಿನ್ನೆಲೆಯಲ್ಲಿ ರಾಜ್ಯ ರಾಜಕಾರಣ ಅನೇಕ ಹೈಡ್ರಾಮಗಳಿಗೆ ಸಾಕ್ಷಿಯಾಗುತ್ತಿದೆ. ಸುರುಪುರ ಕ್ಷೇತ್ರದ ಬಿಜೆಪಿ ಶಾಸಕ ರಾಜುಗೌಡ ಅವರು ಕೇಸರಿ ಶಾಲು ಬಿಟ್ಟು ಮುಸ್ಲಿಮರ ಟೋಪಿ ಧರಿಸಿ ಅಲ್ಪಸಂಖ್ಯಾತರ ಮತಬೇಟೆಗೆ ಇಳಿದಿದ್ದಾರೆ.

ಸ್ವಗ್ರಾಮ ಕೊಡೇಕಲ್‌ನಲ್ಲಿ ರಾಜುಗೌಡ ಅವರು ಬಿಲಾಲ್ ಮಸೀದಿ ನಿರ್ಮಾಣಕ್ಕೆ ಭೂಮಿ ಪೂಜೆ ಸಲ್ಲಿಸಿದ್ದಾರೆ. ಜೊತೆಗೆ ಹಿಂದೂ – ಮುಸ್ಲಿಂ ಸೌಹಾರ್ದತೆಗೆ ಸಂದೇಶ ಸಾರಿದ್ದಾರೆ. ಸದಾ ಮುಸ್ಲಿಮರ ವಿರುದ್ಧ ಕತ್ತಿ ಮಸೆಯುವ ಬಿಜೆಪಿ ನಾಯಕರು ಏಕಾಏಕಿ ಮುಸ್ಲಿಮರ ಓಲೈಕೆಗೆ ಮುಂದಾಗಿದ್ದಾರೆ.

ಮಸೀದಿಯ ನಿರ್ಮಾಣದ ಭೂಮಿ ಪೂಜೆ ಬಳಿಕ ಮಾತನಾಡಿದ ರಾಜುಗೌಡ, “ನಾನು ಹಿಂದೂ ಆಗಿದ್ದರೂ ಮುಸ್ಲಿಮನಾಗಿ ಟೋಪಿ ಧರಿಸಿದ್ದೇನೆ. ಇವರು ಮುಸ್ಲಿಮರಾಗಿದ್ದರೂ ಹಿಂದೂವಾಗಿ ಕೇಸರಿ ಶಾಲು ಹಾಕಿಕೊಂಡಿದ್ದಾರೆ. ನಮ್ಮ ಬಳಿ ಯಾವುದೇ ಜಾತಿ-ಧರ್ಮ, ಭೇದ-ಭಾವ ಇಲ್ಲ. ನಮ್ಮ ಮುಂದಿನ ಪೀಳಿಗೆ ಇದೇ ಸಂಪ್ರದಾಯ ಮುಂದುವರಿಸಬೇಕು” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕೊಡೇಕಲ್ ಗ್ರಾಮದ ಬಸವಣ್ಣನವರ ಜಾತ್ರೆಯ ಕುರಿತು ಮಾತನಾಡಿದ ಅವರು, “ನಾವೆಲ್ಲಾ ಬಸವಣ್ಣನ ಮಕ್ಕಳು. ನಮ್ಮ ಹಿಂದಿನಿಂದಲೂ ನಾವೆಲ್ಲ ಒಟ್ಟಾಗಿ ಬದುಕುತ್ತಿದ್ದೇವೆ. ಮುಂದಿನ ತಲೆಮಾರು ಸಹ ಇದನ್ನೆ ಮುಂದುವರಿಸಲಿ. ಇನ್ನು ಸ್ವಲ್ಪ ದಿನಗಳಲ್ಲಿ ಬಸವಣ್ಣನ ಜಾತ್ರೆ ನಡೆಯುತ್ತದೆ. ಎಲ್ಲ ಸಮಾಜದವರು ಸೇರಿ ಇಲ್ಲಿ ಜಾತ್ರೆ ನಡೆಸುತ್ತಾರೆ” ಎಂದು ಹೇಳಿದ್ದಾರೆ.

ಈ ಬಾರಿಯ ವಿಧಾನಸಭಾ ಚುನಾವಣೆಯಲ್ಲಿ ಅಧಿಕಾರದ ಗದ್ದುಗೆ ಏರಲು ಯತ್ನಿಸುತ್ತಿರುವ ಬಿಜೆಪಿ ಇನ್ನಿಲ್ಲದ ಕಸರತ್ತು ನಡೆಸುತ್ತಿದೆ.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದಲ್ಲಿ ʼಎಸ್‌ಐಆರ್ʼ ಪ್ರಕ್ರಿಯೆಯನ್ನು ತರಾತುರಿಯಲ್ಲಿ ನಡೆಸಬೇಡಿ- ಪ್ರಗತಿಪರ ಸಂಘಟನೆ, ಜಾತ್ಯತೀತ ಪಕ್ಷಗಳ ಆಗ್ರಹ

ಕೇಂದ್ರ ಚುನಾವಣಾ ಆಯೋಗ ನಡೆಸುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಎಂಬುದು...

ಒಂದು ಕಡೆ ಖಾದ್ಯತೈಲ ಬೆಲೆ ಏರಿಕೆ; ಮತ್ತೊಂದು ಕಡೆ ಕುಸುಬೆ ಬೆಲೆ ಕುಸಿತದಿಂದ ರೈತರಿಗೆ ಹೊರೆ

ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...