ಅಲ್ಪಸಂಖ್ಯಾತರಿಗೆ 10,000 ಕೋಟಿ ರೂ., ರೈತರಿಗೆ ಖಾಲಿ ಕೈ; ಸರ್ಕಾರದ ವಿರುದ್ಧ ವಿಜಯೇಂದ್ರ ಟೀಕೆ

Date:

ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಕೊಡುತ್ತೇವೆ ಎನ್ನುವಾಗ ಕೇಂದ್ರದ ಕಡೆಗೆ ಸಿದ್ದರಾಮಯ್ಯ ಕೈ ತೋರಿಸುವುದಿಲ್ಲ. ಬರದ ಬಗ್ಗೆ ಸಂಕಷ್ಟಕ್ಕೆ ತುತ್ತಾದ ರೈತರಿಗೆ ಬೆಳೆ ಹಾನಿ ಪರಿಹಾರದ ಬಗ್ಗೆ ಕೇಳಿದಾಗ ಮಾತ್ರ ತಪ್ಪದೇ ಕೇಂದ್ರದತ್ತ ಬೊಟ್ಟು ಮಾಡುತ್ತಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಟೀಕಿಸಿದರು.

ದಾವಣಗೆರೆ ಜಿಲ್ಲೆಯ ಜಮ್ಮಾಪುರ ಗ್ರಾಮದ ರೈತ ಕುಟುಂಬ ಮರುಳಪ್ಪ, ಸಿದ್ದಮ್ಮನವರ ಜಮೀನಿಗೆ ಭೇಟಿ ನೀಡಿ ಅವರು ಮಾತನಾಡಿದರು, “ಸಿದ್ದರಾಮಯ್ಯನವರಿಗೆ ಒಂದು ಮಾತು ಹೇಳಲಿಚ್ಛಿಸುತ್ತೇನೆ. ಮುಖ್ಯಮಂತ್ರಿಗಳೇ ನೀವು ಚುನಾವಣಾ ರಾಜಕಾರಣವನ್ನು ನಂತರ ಮಾಡಿಕೊಳ್ಳಿ. ಸದ್ಯಕ್ಕೆ ಆರ್ಥಿಕ ಸಂಕಷ್ಟಕ್ಕೆ ಸಿಲುಕಿರುವ, ಬರ ಹೊಡೆತದಿಂದ ತತ್ತರಿಸಿರುವ ರೈತರಿಗೆ ಮೊದಲು ಪರಿಹಾರ ನೀಡುವ ಕೆಲಸ ಮಾಡಿ” ಎಂದರು.

“ಹೊಸ ವರ್ಷದ ಹಿನ್ನೆಲೆಯಲ್ಲಿ ಬೂಟಾಟಿಕೆ ಮಾಡಲು ನಾನು ಬರ ಅಧ್ಯಯನ ಪ್ರವಾಸ ಕೈಗೊಂಡಿಲ್ಲ. ರೈತರ ಬಗ್ಗೆ ಕಾಳಜಿಯಿಂದ ಬರ ಅಧ್ಯಯನ ಮಾಡುತ್ತಿದ್ದೇನೆ. ರೈತರು ಎದುರಿಸುತ್ತಿರುವ ಸಂಕಷ್ಟದ ಬಗ್ಗೆ ಸರ್ಕಾರದ ಗಮನ ಸೆಳೆದು, ನ್ಯಾಯ ಕೊಡಿಸುವ ಕೆಲಸ ಮಾಡುತ್ತಿದ್ದೇನೆ. ರೈತರು ಅಂದರೆ ಲಿಂಗಾಯತರಷ್ಟೇ ಇಲ್ಲ. ದಲಿತರು, ಹಿಂದುಳಿದವರು ಸೇರಿದಂತೆ ಎಲ್ಲ ಜಾತಿ, ಧರ್ಮಿಯರೂ ಇದ್ದಾರೆ ಎಂದರು. ದಲಿತ ಕುಟುಂಬದ ರೈತರ ಜಮೀನಿಗೆ ಇಲ್ಲಿ ಭೇಟಿ ನೀಡಿದ್ದೇನೆ. ಬಡ ರೈತ ದಂಪತಿಗಳ ಕಣ್ಣೀರು ನಮ್ಮ ಮನಸ್ಸಿಗೂ ನೋವುಂಟು ಮಾಡುತ್ತಿದೆ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಮುಖ್ಯಮಂತ್ರಿ ಸಿದ್ದರಾಮಯ್ಯನವರು ಅಲ್ಪಸಂಖ್ಯಾತರ ಓಲೈಕೆ ಶುರು ಮಾಡಿದ್ದಾರೆ. ಅಲ್ಪಸಂಖ್ಯಾತರಿಗೆ 10 ಸಾವಿರ ಕೋಟಿ ರೂ. ಅನುದಾನ ನೀಡುವ ಘೋಷಣೆ ಮಾಡಿದ್ದಾರೆ. ಹೀಗೆ ಸಾವಿರಾರು ಕೋಟಿ ಅನುದಾನ ನೀಡುತ್ತಿರುವ ಸಿದ್ದರಾಮಯ್ಯ ರೈತರ ಬಗ್ಗೆಯೂ ಗಮನ ಹರಿಸಲಿ, ಅನ್ನದಾತರ ಸಂಕಷ್ಟಕ್ಕೂ ಸ್ಪಂದಿಸಲಿ” ಎಂದು ಒತ್ತಾಯಿಸಿದರು.

“ಲಕ್ಷಾಂತರ ರೈತ ಕುಟುಂಬಗಳು ರಾಜ್ಯದಲ್ಲಿ ಸಂಕಷ್ಟಕ್ಕೆ ಸಿಲುಕಿದ್ದು, ಆ ರೈತರ ಬಗ್ಗೆಯೂ ಗಮನ ಹರಿಸಿ. ಮುಖ್ಯಮಂತ್ರಿ ಸಿದ್ದರಾಮಯ್ಯ ಆದ್ಯತೆ ಕೇವಲ ಅಲ್ಪಸಂಖ್ಯಾತರ ಕಡೆಗೆ ಮಾತ್ರ ಇದೆ. ಹಿಂದುಗಳ ಬಗ್ಗೆ ಯಾವುದೇ ಆದ್ಯತೆ ನೀಡುತ್ತಿಲ್ಲ. ಹಿಂದುಗಳೆಂದರೆ ಕೇವಲ ಲಿಂಗಾಯತ, ಬ್ರಾಹ್ಮಣರಷ್ಟೇ ಅಲ್ಲ, ಎಲ್ಲಾ ಪರಿಶಿಷ್ಟರು, ಹಿಂದುಳಿದವರೂ ಸೇರುತ್ತಾರೆ” ಎಂದು ಆಗ್ರಹಿಸಿದರು.

ಈ ವೇಳೆ, ಸಂಸದ ಡಾ.ಜಿ.ಎಂ.ಸಿದ್ದೇಶ್ವರ್, ಮಾಜಿ ಸಚಿವರಾದ ಎಂ.ಪಿ.ರೇಣುಕಾಚಾರ್ಯ, ಹರಿಹರ ಶಾಸಕ ಬಿ.ಪಿ.ಹರೀಶ, ಜಿಲ್ಲಾಧ್ಯಕ್ಷ ಎಸ್.ಎಂ.ವೀರೇಶ ಹನಗವಾಡಿ, ಉಪಾಧ್ಯಕ್ಷರಾದ ಟಿ.ಶ್ರೀನಿವಾಸ ದಾಸಕರಿಯಪ್ಪ, ಮಂಜಾನಾಯ್ಕ, ಪ್ರಧಾನ ಕಾರ್ಯದರ್ಶಿ ಬಿ.ಎಸ್.ಜಗದೀಶ, ಯಶವಂತರಾವ್ ಜಾಧವ್, ಜಿ.ಎಸ್.ಅನಿತ್ ಕುಮಾರ, ಪಿ.ಸಿ.ಶ್ರೀನಿವಾಸ ಭಟ್, ಜಿ.ಎಸ್.ಶ್ಯಾಮ ಮಾಯಕೊಂಡ, ಬಿ.ಎಂ.ಸತೀಶ ಕೊಳೇನಹಳ್ಳಿ, ಲೋಕಿಕೆರೆ ನಾಗರಾಜ, ಬಿ.ಟಿ.ಸಿದ್ದಪ್ಪ, ಕೆ.ಪ್ರಸನ್ನಕುಮಾರ, ಶಿವನಗೌಡ ಪಾಟೀಲ, ಹೆಬ್ಬಾಳ್ ಮಹೇಂದ್ರ, ಶ್ಯಾಗಲೆ ದೇವೇಂದ್ರಪ್ಪ ಇತರರು ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ರಾಯಚೂರು | ಟ್ರಾಕ್ಟರ್ ಗೆ ಬೈಕ್ ಡಿಕ್ಕಿ; ಇಬ್ಬರು ಯುವಕರು ಸಾವು

ರಸ್ತೆ ಬದಿ ನಿಲ್ಲಿಸಿದ್ದ ಟ್ರಾಕ್ಟರ್‌ಗೆ ಬೈಕ್ ಡಿಕ್ಕಿ ಹೊಡೆದ ಪರಿಣಾಮ ಇಬ್ಬರು...

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...