ಹಾಲಿನ ದರ ಏರಿಕೆ ಸೇರಿದಂತೆ ಪ್ರಮುಖ 13 ಪ್ರಸ್ತಾವಗಳಿಗೆ ಸಚಿವ ಸಂಪುಟ ಅನುಮೋದನೆ

Date:

  • ಹಲವು ಬಂಧೀಖಾನೆಗಳಿಂದ ಸನ್ನಡತೆಯ 67 ಕೈದಿಗಳ ಬಿಡುಗಡೆಗೆ ಸಂಪುಟ ಒಪ್ಪಿಗೆ
  • ತಹಶೀಲ್ದಾರ್ ಹುದ್ದೆಗೆ ಕಾನೂನು ಹೋರಾಟ ನಡೆಸಿದ್ದ ಡಾ. ಮೈತ್ರಿ ಕೆ ಎಎಸ್ ಹುದ್ದೆಗೆ ಪರಿಗಣನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ನಡೆದ ಮಹತ್ವದ ಸಚಿವ ಸಂಪುಟ ಸಭೆಯಲ್ಲಿ ಹಾಲಿನ ದರ ಏರಿಕೆ ಸಹಿತ 13 ಪ್ರಸ್ತಾವಗಳಿಗೆ ಅನುಮೋದನೆ ನೀಡಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್ ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

ಸಚಿವ ಸಂಪುಟ ಸಭೆಯ ನಂತರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಿರ್ಣಯಗಳಿಗೆ ಸಂಬಂಧಿಸಿದಂತೆ ಪತ್ರಿಕಾಗೋಷ್ಠಿ ನಡೆಸಿ ಮಾಹಿತಿ ನೀಡಿದ ಅವರು, “ಒಟ್ಟು ಹದಿನೈದು ವಿಚಾರಗಳ ಬಗ್ಗೆ ಇಂದಿನ ಕ್ಯಾಬಿನೆಟ್ ಚರ್ಚೆ ನಡೆಸಿದೆ. ಹಾಲಿನ ದರ ಏರಿಕೆಗೆ ಸಚಿವ ಸಂಪುಟ ಸಭೆ ಒಪ್ಪಿಗೆ ನೀಡಿದೆ. ಅದರಂತೆ ಪ್ರತಿ ಲೀಟರ್‌ಗೆ ₹3 ರೂಪಾಯಿ ಹೆಚ್ಚಳ ಆಗಲಿದೆ. ಆಗಸ್ಟ್ 1 ರಿಂದ ಪರಿಷ್ಕೃತ ದರ ಜಾರಿಗೆ ಬರಲಿದೆ” ಎಂದು ತಿಳಿಸಿದರು.

ಸಹಕಾರ ಇಲಾಖೆಯಲ್ಲಿ ಆರ್‌ಐಡಿಎಫ್‌-28 ಯೋಜನೆಯಡಿ ಎಪಿಎಂಸಿಗಳಿಗೆ ರಸ್ತೆ ಮಾಡಲು, ಇತರೆ ಮೂಲಭೂತ ಸೌಲಭ್ಯ ಕಲ್ಪಿಸಲು 130. 40 ಕೋಟಿ ಮಂಜೂರು ಮಾಡಲು ಒಪ್ಪಿಗೆ ನೀಡಲಾಗಿದೆ. ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯಿಂದ ನೀಡಲಾಗುವ ಮೊಟ್ಟೆ ವಿತರಣೆಯನ್ನು ವಿಭಾಗವಾರು ಖರೀದಿಸಿ, ವಿತರಿಸಲು ಒಪ್ಪಿಗೆ ನೀಡಲಾಗಿದೆ. ಇದನ್ನು KTTP ACT ಮಾದರಿಯಲ್ಲಿ ಜಾರಿ ಮಾಡಲಾಗುವುದು. ಈ ಹಿಂದೆ ತಾಲೂಕು ಹಾಗೂ ಸೆಂಟ್ರಲ್ ಮಟ್ಟದಲ್ಲಿ ಮೊಟ್ಟೆ ಖರೀದಿ ಮಾಡಲಾಗುತ್ತಿತ್ತು” ಎಂದು ತಿಳಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಕಿರಿಯ ಶ್ರೇಣಿ ತಹಶೀಲ್ದಾರ್ ಹುದ್ದೆಗೆ ಕಾನೂನು ಹೋರಾಟ ನಡೆಸಿದ್ದ ಡಾ. ಮೈತ್ರಿ ಅವರ ಮನವಿಯನ್ನು ಸರ್ಕಾರ ಪುರಸ್ಕಾರ ಮಾಡಿದೆ. 2011ರಿಂದ ಕಾನೂನು ಹೋರಾಟ ನಡೆಸಿದ್ದ ಮೈತ್ರಿಯವರನ್ನು ಕೆ ಎ ಎಸ್ ಹುದ್ದೆಗೆ ಪರಿಗಣನೆ ಮಾಡಲಾಗಿದೆ ಎಂದು ಕಾನೂನು ಸಚಿವರು ತಿಳಿಸಿದರು.

ಕೊಡಗರು ಎಂದಿದ್ದ ಕೊಡವ ಸಮುದಾಯದ ಹೆಸರನ್ನು ಕೊಡವರು ಎಂದು ಮಾಡಲು ಸಂಪುಟ ಒಪ್ಪಿಗೆ ನೀಡಿದೆ. ದ್ವಾರಕಾನಾಥ್ ಸಮಿತಿ ನೀಡಿದ್ದ ವರದಿಯಂತೆ, ಹಿಂದುಳಿದ ವರ್ಗದ ಆಯೋಗದ ಶಿಫಾರಸ್ಸಿನಂತೆ ಈ ತಿದ್ದುಪಡಿ ಆದೇಶ ಮಾಡಲಾಗಿದೆ. ಇಂದಿನಿಂದ ಕೊಡಗರು ಎನ್ನುತ್ತಿದ್ದ ಕೊಡವ ಸಮುದಾಯ ಕೊಡವರೆಂದೇ ಕರೆಸಿಕೊಳ್ಳುತ್ತದೆ ಎಂದು ಎಚ್‌ ಕೆ ಪಾಟೀಲ್ ತಿಳಿಸಿದರು.

ಲೋಕಾಯುಕ್ತ ವಿಚಾರಣಾ ನಿಬಂಧಕರಾಗಿ ನಿವೃತ್ತ ನ್ಯಾಯಾಧೀಶ ಸಿ. ರಾಜಶೇಖರ್ ಅವರನ್ನು ನೇಮಕ ಮಾಡಲು ಸಂಪುಟ ಒಪ್ಪಿಗೆ ನೀಡಿದೆ.

ಉಳಿದಂತೆ ಅರಣ್ಯ ಮತ್ತು ಜೀವ ಪರಿಸರ ಇಲಾಖೆಯ ರಾಷ್ಟ್ರೀಯ ಹಾಗೂ ವನ್ಯಜೀವಿ ತಾಣವನ್ನು ಪರಿಸರ ಸೂಕ್ಷ್ಮ ವಲಯ ಎಂದು ಘೋಷಿಸಲು ನಿರ್ಧಾರ ತೆಗೆದುಕೊಳ್ಳಲು ಅಗತ್ಯ ಇರುವ ಉಪ ಸಮಿತಿ ರಚಿಸಲು ಮುಖ್ಯಮಂತ್ರಿಯವರಿಗೆ ಸಂಪುಟ ಅಧಿಕಾರ ನೀಡಿದೆ ಎಂದರು.

ಸನ್ನಡತೆಯ ಆಧಾರದ ಮೇಲೆ ರಾಜ್ಯದ ಹಲವು ಬಂಧಿಖಾನೆಗಳಿಂದ 67 ಕೈದಿಗಳ ಬಿಡುಗಡೆಗೆ ಸಂಪುಟ ಒಪ್ಪಿಗೆ ಸೂಚಿಸಿದೆ. ಆಗಸ್ಟ್ 15ಕ್ಕೆ ಬಿಡುಗಡೆ ಭಾಗ್ಯ ಸಿಗಲಿದೆ. ಬೆಂಗಳೂರಿನ ಪರಪ್ಪನ ಅಗ್ರಹಾರದಿಂದ 24, ಮೈಸೂರಿನಿಂದ 8, ಬೆಳಗಾವಿಯಿಂದ 2, ಕಲಬುರಗಿಯಿಂದ 5, ಶಿವಮೊಗ್ಗದಿಂದ 12, ಬಳ್ಳಾರಿಯಿಂದ 8, ಧಾರವಾಡ ಸೆಂಟ್ರಲ್ ಜೈಲಿನಿಂದ 2 ಕೈದಿಗಳು ಬಿಡುಗಡೆಗೊಳ್ಳಲಿದ್ದಾರೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಎಚ್‌ ಕೆ ಪಾಟೀಲ್ ಮಾಹಿತಿ ನೀಡಿದ್ದಾರೆ.

ಕಲ್ಲು ಗಣಿಗಾರಿಕೆ ಪ್ರದೇಶದಲ್ಲಿನ ಒತ್ತುವರಿ ಪ್ರದೇಶಗಳ ಆಡಿಟ್ ಗೆ ನಿರ್ದೇಶನ ನೀಡಲಾಗಿದೆ ಎಂದ ಸಚಿವರು, ಒತ್ತುವರಿಯಲ್ಲಿ ಖನಿಜ ತೆಗೆದು ಬಳಕೆ ಮಾಡಿದ್ದಿದ್ದರೆ ಅಂತಹವರಿಗೆ ದಂಡ ಹಾಕಲಾಗುತ್ತದೆ. ಈ ಬಾರಿ ಅಂತಹ ದಂಡಕ್ಕೆ ಒನ್ ಟೈಂ ಸೆಟ್ಲಮೆಂಟ್ ಗೆ ಅವಕಾಶ ನೀಡಲಾಗಿದೆ. ಇದರಲ್ಲಿ 6105 ಕೋಟಿ ದಂಡ ವಸೂಲಿ ಆಗಬೇಕಿದೆ. ಇದನ್ನು ಹೇಗೆ ಮಾಡಬೇಕು ಅನ್ನುವುದಕ್ಕೆ ಕ್ಯಾಬಿನೆಟ್ ಸಬ್ ಕಮಿಟಿ ಮಾಡಿ ತೀರ್ಮಾನ ಮಾಡಿಕೊಳ್ಳಲಾಗುತ್ತದೆ. ಸರಿ ಸುಮಾರು ಎಂಟು ವರ್ಷಗಳಿಗೂ ಅಧಿಕ ಕಾಲದ ಬಾಕಿ ಇದಾಗಿದೆ ಎಂದು ಮಾಹಿತಿ ನೀಡಿದರು.

ವಿಕ್ಟೋರಿಯಾ ಆಸ್ಪತ್ರೆಯಲ್ಲಿ ನೆಫ್ರೋಲಜಿ ಕಟ್ಟಡ ಕಟ್ಟಲು ಹೆಚ್ಚುವರಿ ಪರಿಷ್ಕೃತ ಮೊತ್ತ ಬಿಡುಗಡೆಗೆ ಸಂಪುಟ ಒಪ್ಪಿಗೆ ನೀಡಿದೆ. ಚರಕ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯನ್ನು ಬೆಂಗಳೂರಿನ ವಾಜಪೇಯಿ ಆರೋಗ್ಯ ಕೇಂದ್ರದಲ್ಲಿ ತೆರೆಯಲು ಹಾಗೂ ಸಾರ್ವಜನಿಕ ಖಾಸಗಿ ಸಹಭಾಗಿತ್ವದ (PPP) ಲೋಕೋಪಯೋಗಿ ಯೋಜನೆಗಳ ಅನುಷ್ಠಾನ ಹಾಗೂ ಪರಿವೀಕ್ಷಣೆಗೆ ಕರ್ನಾಟಕ ರಾಜ್ಯ ರಸ್ತೆ ನಿಯಂತ್ರಣ ಮತ್ತು ಅಭಿವೃದ್ಧಿ ಪ್ರಾಧಿಕಾರ ರಚನೆ ಮಾಡಲಾಗುವುದು ಎಂದು ಸಚಿವರು ಮಾಹಿತಿ ನೀಡಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗದಗ | ದಲಿತ ಯುವಕರ ಮೇಲೆ ಹಲ್ಲೆ, ಜಾತಿ ನಿಂದನೆ ಆರೋಪ ಖಂಡಿಸಿ ದಲಿತ ಮುಖಂಡರ ಪ್ರತಿಭಟನೆ 

ದಲಿತ ಸಮುದಾಯದ ಜಕ್ಕಲಿ ಗ್ರಾಮದ ಅಂದಪ್ಪ ಮಾದರ ಮತ್ತು ಅವರ ಸ್ನೇಹಿತರ...

ಉತ್ತರ ಕನ್ನಡ | ಪಡಿತರ ಚೀಟಿದಾರರಿಗೆ ಗುಡ್ ನ್ಯೂಸ್: ಮಾರ್ಚ್‌ನಲ್ಲಿ ಹೆಚ್ಚುವರಿ ಸೀಮೆಎಣ್ಣೆ ವಿತರಣೆ

ಉತ್ತರ ಕನ್ನಡ ಜಿಲ್ಲೆಯ ಗ್ರಾಮಾಂತರ ಪ್ರದೇಶದ ಪಡಿತರ ಚೀಟಿದಾರರಿಗೆ ಕೇಂದ್ರ ಸರ್ಕಾರದಿಂದ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಸಿಂಧನೂರು | ರೀಲ್ಸ್ ಮಾಡಲು ಹೋದ ಯುವಕ ನೀರು ಪಾಲು

ರೀಲ್ಸ್ ಮಾಡುವ ಉದ್ದೇಶದಿಂದ ಸ್ನೇಹಿತರಿಗೆ ವಿಡಿಯೋ ಮಾಡಲು ಹೇಳಿ ಈಜಲು ನದಿಗೆ...