ಅಲ್ಪಸಂಖ್ಯಾತರಿಗೆ ಶೇ.15 ಮೀಸಲಾತಿ | ಕೇಂದ್ರ ಸರ್ಕಾರದ ಮಾರ್ಗಸೂಚಿ ಪ್ರಕಾರ ತೀರ್ಮಾನ: ಸಿದ್ದರಾಮಯ್ಯ

Date:

  • ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನ
  • ಬಿಜೆಪಿಯವರ ಟೀಕೆಗಳು ಕೇವಲ ದುರುದ್ದೇಶದ ಹಾಗೂ ರಾಜಕೀಯ ಪ್ರೇರಿತ: ಸಿದ್ದರಾಮಯ್ಯ

ರಾಜ್ಯ ಸರ್ಕಾರದ ವಸತಿ ಯೋಜನೆಗಳಿಗೆ ಸಂಬಂಧಿಸಿದಂತೆ ಕ್ರಿಶ್ಚಿಯನ್‌, ಮುಸ್ಲಿಂ, ಜೈನರು ಸೇರಿದಂತೆ ಅಲ್ಪಸಂಖ್ಯಾತ ಸಮುದಾಯಗಳ ಫಲಾನುಭವಿಗಳ ಪ್ರಮಾಣವನ್ನು ಹೆಚ್ಚಿಸುವ ಸಲುವಾಗಿ ಕೇಂದ್ರ ಸರ್ಕಾರದ ಮಾರ್ಗಸೂಚಿಗಳ ಪ್ರಕಾರ ಸಚಿವ ಸಂಪುಟವು ಒಂದು ನಿರ್ಣಯವನ್ನು ಕೈಗೊಂಡಿದೆ. ಇದು ಅಲ್ಪಸಂಖ್ಯಾತರ ಕಲ್ಯಾಣಕ್ಕಾಗಿರುವ ಪ್ರಧಾನ ಮಂತ್ರಿಗಳ 15 ಅಂಶಗಳ ಕಾರ್ಯಕ್ರಮ (2019)ರ ಆಧಾರದ ಮೇಲೆ ತೆಗೆದುಕೊಂಡ ತೀರ್ಮಾನವಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

ವಸತಿ ಯೋಜನೆಗಳಿಗೆ ಶೇ.10 ರಿಂದ ಶೇ.15ಕ್ಕೆ ಅಲ್ಪಸಂಖ್ಯಾತರ ಮೀಸಲಾತಿ ಪ್ರಮಾಣ ಹೆಚ್ಚಳ ಕುರಿತ ಪ್ರತಿಪಕ್ಷಗಳ ಟೀಕೆಗೆ ಉತ್ತರಿಸಿರುವ ಸಿಎಂ, “ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಂಸ್ಥೆಗಳಲ್ಲಿ ಸಾಧ್ಯವಿರುವ ಎಲ್ಲ ಅವಕಾಶಗಳನ್ನು ಬಳಕೆ ಮಾಡಿಕೊಂಡು ಅಲ್ಪಸಂಖ್ಯಾತ ಸಮುದಾಯಗಳಿಗೆ ಶೇ.15 ಭೌತಿಕ ಹಾಗೂ ಆರ್ಥಿಕ ಗುರಿಯನ್ನು ಸಾಧಿಸಬೇಕೆಂದು ಈ ಕಾರ್ಯಕ್ರಮ ಸ್ಪಷ್ಟವಾಗಿ ನಿರ್ದೇಶಿಸುತ್ತದೆ” ಎಂದಿದ್ದಾರೆ.

“ಇದು ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರದಿಂದಲೇ ನೀಡಲಾದ ಮಾರ್ಗಸೂಚಿಗಳಾಗಿದ್ದು, ಹಲವು ವರ್ಷಗಳಿಂದ ಜಾರಿಯಲ್ಲಿದೆ. ಇದೊಂದು ಅಸಂವಿಧಾನಿಕ ಅಥವಾ ತುಷ್ಟೀಕರಣ ನೀತಿಯಾಗಿದ್ದರೆ, ಈ ನಿಯಮವನ್ನು ಪಾಲನೆ ಮಾಡುವಂತೆ ಕೇಂದ್ರ ಸರ್ಕಾರ ಯಾಕೆ ಎಲ್ಲ ರಾಜ್ಯಗಳಿಗೆ ತಿಳಿಸಿದೆ? ಪ್ರಧಾನ ಮಂತ್ರಿ ಆವಾಸ್‌ ಯೋಜನೆಯಂತಹ ಕೇಂದ್ರ ಸರ್ಕಾರದ ಕಾರ್ಯಕ್ರಮದಲ್ಲಿ ಯಾಕೆ ಇದನ್ನು ಅನುಷ್ಠಾನ ಮಾಡಲಾಗುತ್ತಿದೆ” ಎಂದು ಪ್ರಶ್ನಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ನಮ್ಮ ನಿರ್ಣಯವು ವಸತಿ ಹಂಚಿಕೆಯಲ್ಲಿ ಹೆಚ್ಚುವರಿ ಮೀಸಲಾತಿಯನ್ನು ಇಡೀ ರಾಜ್ಯಕ್ಕೆ ಅನ್ವಯಿಸುವಂತದ್ದಲ್ಲ, ಕೇವಲ ನಿರ್ದಿಷ್ಟ ಸವಾಲುಗಳಿಗೆ ಮಾತ್ರ ಸೀಮಿತವಾಗಿದೆ. ಅಲ್ಪಸಂಖ್ಯಾತ ಜನಸಂಖ್ಯೆಯು ಶೇ.10 ಗಿಂತ ಕಡಿಮೆಯಿರುವ ಹಲವು ಪಂಚಾಯತಿಗಳಲ್ಲಿ ನಿಗದಿಪಡಿಸಲಾದ ಶೇ.10 ಮೀಸಲಾತಿಯ ಅವಕಾಶವು ಸದ್ಬಳಕೆಯಾಗುತ್ತಿರಲಿಲ್ಲ, ಹೀಗಾಗಿ ನಿಗದಿಪಡಿಸಲಾದ ಗುರಿಯನ್ನು ತಲುಪಲು ಮತ್ತು ಲೋಪದೋಷಗಳನ್ನು ತಡೆಯಲು ಇಂತಹ ಪಂಚಾಯತಿಗಳಿಂದ ಅಲ್ಪಸಂಖ್ಯಾತರ ಜನಸಂಖ್ಯೆ ಹೆಚ್ಚಿರುವ ಕಡೆಗೆ ಗರಿಷ್ಠ ಶೇ.15 ಮಿತಿಗೆ ಒಳಪಟ್ಟು ಮರುಹಂಚಿಕೆ ಮಾಡಲಾಗಿದೆ” ಎಂದು ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಿಜೆಪಿಗರೇ ಹೇಳಿ- ಅಘೋಷಿತ ತುರ್ತುಪರಿಸ್ಥಿತಿ ಮುಗಿಯುವುದು ಯಾವಾಗ?

“ಇದು ಕೇವಲ ಆಡಳಿತಾತ್ಮಕ ದೃಷ್ಟಿಯಿಂದ ಸಾಮಾನ್ಯ ವರ್ಗದಲ್ಲಿ ಮಾಡಿಕೊಂಡ ಹೊಂದಾಣಿಕೆಯಾಗಿದ್ದು, ಇದರಿಂದ ಎಸ್.ಸಿ, ಎಸ್‌,ಟಿ ಅಥವಾ ಒಬಿಸಿ ವರ್ಗಗಳಿಗೆ ಯಾವುದೇ ರೀತಿಯ ತೊಂದರೆಯಾಗುವುದಿಲ್ಲ. ಇದು ಕಾನೂನು ಇಲಾಖೆಯ ವಿಸ್ತೃತ ಪರಾಮರ್ಷೆಯ ನಂತರ ಕೈಗೊಂಡ ತೀರ್ಮಾನವಾಗಿದ್ದು, ಇದು ಕಾನೂನಾತ್ಮಕವಾಗಿಯೂ ಸಮರ್ಪಕವಾಗಿದೆ” ಎಂದು ತಿಳಿಸಿದ್ದಾರೆ.

ಬಿಜೆಪಿಯವರ ಟೀಕೆ ರಾಜಕೀಯ ಪ್ರೇರಿತ

“ಬಿಜೆಪಿಯವರ ಟೀಕೆಗಳು ಕೇವಲ ದುರುದ್ದೇಶದ ಹಾಗೂ ರಾಜಕೀಯ ಪ್ರೇರಿತವಾಗಿದೆ. ರಾಷ್ಟ್ರ ಮಟ್ಟದಲ್ಲಿ ಶೇ.15 ಮೀಸಲಾತಿಯನ್ನು ಜಾರಿಗೊಳಿಸಿರುವ ಅದೇ ಪಕ್ಷವು ಇಂದು ಕರ್ನಾಟಕದಲ್ಲಿ ತೆಗೆದುಕೊಂಡಿರುವ ಅದೇ ಕೇಂದ್ರದ ನೀತಿಯ ಮೂಲ ತತ್ವಗಳನ್ನೊಳಗೊಂಡ ನಿರ್ಣಯವನ್ನು ಟೀಕಿಸುತ್ತಿದೆ. ರಾಜ್ಯದ ಬಿಜೆಪಿ ನಾಯಕರಿಗೆ ವಿರೋಧವಿದ್ದರೆ ಅವರದೇ ಕೇಂದ್ರ ಸರ್ಕಾರವು ಈ ಮಾರ್ಗಸೂಚಿಗಳನ್ನು ಯಾಕೆ ಮುಂದುವರೆಸಿಕೊಂಡು ಹೋಗುತ್ತಿದೆ ಎಂಬುದನ್ನು ಮೊದಲು ವಿವರಿಸಲಿ. ಬೇರೆ ರಾಜ್ಯಗಳೂ ಅದನ್ನೇ ಪಾಲಿಸಬೇಕು ಎಂದೇಕೆ ಕೇಂದ್ರವು ಬಯಸುತ್ತಿದೆ ಎಂಬುದನ್ನು ವಿವರಿಸಲಿ” ಎಂದು ಆಗ್ರಹಿಸಿದ್ದಾರೆ.

“ಈ ರೀತಿಯ ವ್ಯವಸ್ಥಿತ ಅಪಪ್ರಚಾರದ ಹಿಂದೆ ಕೋಮು ವಿವಾದವನ್ನು ಸೃಷ್ಟಿಸುವ ಹುನ್ನಾರವಲ್ಲದೆ ಬೇರೇನು ಇಲ್ಲ. ಇದು ರಾಜ್ಯದ ಬಡವರು ಮತ್ತು ಬಡತನ ರೇಖೆಗಿಂತ ಕೆಳಗಿರುವವರನ್ನು ಮೇಲೆತ್ತುವ ಪ್ರಯತ್ನದ ದಿಕ್ಕು ತಪ್ಪಿಸುವ ಕುತಂತ್ರವಾಗಿದೆ. ನಮ್ಮ ಈ ನಿರ್ಧಾರದಿಂದ ಪ್ರಸಕ್ತ ವರ್ಷ ಒಂದರಲ್ಲೇ ಸುಮಾರು 34,000 ಅಲ್ಪಸಂಖ್ಯಾತ ಕುಟುಂಬಗಳಿಗೆ ಲಾಭವಾಗಲಿದೆ. ಆ ಪೈಕಿ ಹೆಚ್ಚಿನವರು ಭೂರಹಿತರು ಮತ್ತು ಮನೆಗಳ ತುರ್ತು ಅಗತ್ಯತೆ ಇರುವವರಾಗಿದ್ದಾರೆ. ಅಲ್ಪಸಂಖ್ಯಾತ ಅರ್ಜಿದಾರರು ಇಲ್ಲದ ಪಂಚಾಯತಿಗಳಲ್ಲಿನ ಉಪಯೋಗವಾಗದೆ ಉಳಿದ ವಸತಿ ಹಂಚಿಕೆಗಳನ್ನು ಅತಿ ಅಗತ್ಯವಿರುವೆಡೆಗೆ ಮರುಹಂಚಿಕೆ ಮಾಡುವ ಕ್ರಮವಾಗಿದೆ” ಎಂದು ವಿವರಿಸಿದ್ದಾರೆ.

“ಯಾವುದೇ ತಾಂತ್ರಿಕ ಕಾರಣಗಳಿಂದ ಯಾವೊಂದು ಮನೆಯು ನಿರ್ಮಾಣಗೊಳ್ಳದೆ ಬಾಕಿ ಉಳಿಯಬಾರದು ಎಂಬುದನ್ನು ಇದು ಖಚಿತಪಡಿಸುತ್ತದೆ. ಸಾಂವಿಧಾನಿಕ ಅವಕಾಶಗಳ ಮಿತಿಗೆ ಒಳಪಟ್ಟ ಈ ಪ್ರಯತ್ನವು ಸಮಾನತೆ, ದಕ್ಷತೆ ಮತ್ತು ಸಂಪನ್ಮೂಲದ ಸದ್ಭಳಕೆಯ ಉಪಯುಕ್ತ ಮಾದರಿಯಾಗಿದೆ. ಕರ್ನಾಟಕದಲ್ಲಿ ಸರ್ವರನ್ನು ಒಳಗೊಂಡ ಅಭಿವೃದ್ಧಿಗೆ ಕಾಂಗ್ರೆಸ್‌ ಸರ್ಕಾರ ಒತ್ತುಕೊಡುತ್ತಿದೆ. ಬಿಜೆಪಿಯು ಹರಡುತ್ತಿರುವ ದ್ವೇಷಪೂರಿತ ಮತ್ತು ವಿಭಜನಕಾರಿ ರಾಜಕಾರಣವನ್ನು ನಾವು ತಿರಸ್ಕರಿಸುತ್ತೇವೆ. ನಮ್ಮ ಆಡಳಿತ ಮಾದರಿಯು ನ್ಯಾಯ, ಸಮಾನತೆ ಮತ್ತು ಸಹಾನುಭೂತಿಯ ಆಶಯಗಳನ್ನು ಹೊಂದಿದೆ. ಜಾತಿ ಅಥವಾ ಧರ್ಮದ ಭೇದವಿಲ್ಲದೆ ಪ್ರತಿಯೊಂದು ಬಡ ಕುಟುಂಬಕ್ಕೆ ತಲುಪುವಂತಹ ಯೋಜನೆಗಳನ್ನು ಜಾರಿ ಮಾಡುವುದನ್ನು ನಾವು ಮುಂದುವರಿಸುತ್ತೇವೆ” ಎಂದು ತಿಳಿಸಿದ್ದಾರೆ.

“ಬಿಜೆಪಿ ನಾಯಕರು ತಿರುಚಿದ ಮಾಹಿತಿ ಹರಡಿ ಕೋಮು ಬಣ್ಣ ಬಳಿಯುವ ಮೂಲಕ ಬಡವರ ಉದ್ಧಾರದ ಕಾರ್ಯಗಳಿಗೆ ಅಡ್ಡಿಯಾಗದೆ, ಬಡತನ ರೇಖೆಗಿಂತ ಕೆಳಗಿರುವ ಜನರನ್ನು ಮೇಲೆತ್ತುವ ನಿಟ್ಟಿನಲ್ಲಿ ತಮ್ಮ ಸಂಕುಚಿತ ರಾಜಕೀಯವನ್ನು ಬದಿಗೊತ್ತಿ ನಮ್ಮ ಬೆಂಬಲಕ್ಕೆ ನಿಲ್ಲಲಿ ಎಂದು ನಾವು ಒತ್ತಾಯಿಸುತ್ತಿದ್ದೇವೆ” ಎಂದು ಸಿಎಂ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...