150ರಷ್ಟು ಸಂಸದರನ್ನು ಹೊರಹಾಕಿದ್ದರೂ, ಮಾಧ್ಯಮಗಳು ಚರ್ಚೆಯೇ ನಡೆಸುತ್ತಿಲ್ಲ: ರಾಹುಲ್ ಗಾಂಧಿ ಕಿಡಿ

Date:

ಸಂಸತ್‌ನಿಂದ ಅಮಾನತು ಮಾಡಿರುವುದನ್ನು ಖಂಡಿಸಿ ಪ್ರತಿಭಟಿಸುವ ವೇಳೆ ತೃಣಮೂಲ ಕಾಂಗ್ರೆಸ್ ಪಕ್ಷ(ಟಿಎಂಸಿ)ದ ಸಂಸದರೊಬ್ಬರು ಉಪ ರಾಷ್ಟ್ರಪತಿ ಹಾಗೂ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಅಣಕಿಸಿದ ಆರೋಪ ಕೇಳಿ ಬಂದಿದೆ.

ಸಂಸತ್‌ನಿಂದ ಅಮಾನತುಗೊಂಡಿರುವ ಸಂಸದರು ಹೊಸ ಸಂಸತ್‌ ಕಟ್ಟಡದ ‘ಮಕರ ದ್ವಾರ’ದ ಬಳಿ ಕುಳಿತು ಪ್ರತಿಭಟಿಸುತ್ತಿದ್ದರು. ಈ ವೇಳೆ ಟಿಎಂಸಿ ಸಂಸದ ಕಲ್ಯಾಣ್ ಬ್ಯಾನರ್ಜಿ ರಾಜ್ಯಸಭೆ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಅಣಕಿಸಿದ್ದಾರೆ ಎನ್ನಲಾಗಿದೆ. ಕಲ್ಯಾಣ್ ಬ್ಯಾನರ್ಜಿ ಮಿಮಿಕ್ರಿ ಮಾಡುವಾಗ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅದನ್ನು ಮೊಬೈಲ್ ಮೂಲಕ ಚಿತ್ರೀಕರಿಸಿದ್ದರು. ಇದನ್ನು ಹಲವಾರು ಮಾಧ್ಯಮಗಳು ಪ್ರಸಾರ ಮಾಡಿದ ನಂತರ ವಿವಾದವಾಗಿ ಪರಿಣಮಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, “ಸಂಸದರು ಅಲ್ಲಿ ಕುಳಿತಿದ್ದರು, ನಾನು ಅವರ ವಿಡಿಯೋವನ್ನು ಶೂಟ್ ಮಾಡಿದ್ದೇನೆ. ನನ್ನ ವೀಡಿಯೊ ನನ್ನ ಫೋನ್‌ನಲ್ಲಿದೆ. ಮಾಧ್ಯಮಗಳು ಅದನ್ನು ತೋರಿಸುತ್ತಿವಾ? ಅಲ್ಲಿ ಯಾರ ಬಗ್ಗೆಯೂ, ಏನನ್ನೂ ಹೇಳಿಲ್ಲ. ಸುಮಾರು 150ರಷ್ಟು ಸಂಸದರನ್ನು ಸದನದಿಂದ ಹೊರಹಾಕಲಾಗಿದೆ. ಆದರೆ, ಮಾಧ್ಯಮಗಳಲ್ಲಿ ಅದರ ಬಗ್ಗೆ ಯಾವುದೇ ಚರ್ಚೆ ಇಲ್ಲ” ಎಂದು ಮಾಧ್ಯಮಗಳ ನಡೆಯ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ.

“ಮಾಧ್ಯಮಗಳಲ್ಲಿ ಅದಾನಿ ಹಗರಣ ಬಗ್ಗೆ ಯಾವುದೇ ಚರ್ಚೆ ಇಲ್ಲ, ರಫೇಲ್ ಬಗ್ಗೆ ಯಾವುದೇ ಚರ್ಚೆ ಇಲ್ಲ, ನಿರುದ್ಯೋಗದ ಬಗ್ಗೆ ಯಾವುದೇ ಚರ್ಚೆ ಇಲ್ಲ. ನಮ್ಮ ಸಂಸದರು ನಿರಾಶೆಗೊಂಡು ಹೊರಗೆ ಪ್ರತಿಭಟನೆ ಮಾಡುತ್ತಾ ಕುಳಿತಿದ್ದಾರೆ. ಆದರೆ ನೀವು ಮಿಮಿಕ್ರಿ ಮಾಡಿದ್ದಾರೆ ಎಂದು ಚರ್ಚಿಸುತ್ತಿದ್ದೀರಿ. ಸ್ವಲ್ಪವಾದರೂ ಇಂತಹ ಸುದ್ದಿಗಳ ಬಗ್ಗೆ ಗಮನಹರಿಸಿ. ಕೇವಲ ಒಂದನ್ನೇ ಇಟ್ಟುಕೊಂಡು ನೀವು ಅದನ್ನೇ ಚರ್ಚೆ ಮಾಡುವುದಾದರೆ ನಾವೇನು ಮಾಡೋಣ?” ಎನ್ನುವ ಮೂಲಕ ರಾಜ್ಯಸಭಾ ಅಧ್ಯಕ್ಷ ಜಗದೀಪ್ ಧನ್ಕರ್ ಅವರನ್ನು ಅಣಕಿಸಿದ ಆರೋಪವನ್ನು ತಳ್ಳಿ ಹಾಕಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...