17 ಸಂಸದರಿಗೆ ಸಂಸದ ರತ್ನ ಪ್ರಶಸ್ತಿ; ಕರ್ನಾಟಕದ ಯಾವೊಬ್ಬ ಸಂಸದರೂ ಆಯ್ಕೆಯಾಗಿಲ್ಲ!

Date:

ತಮ್ಮ ಲೋಕಸಭಾ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ಕೊಡಗಿಸಿಕೊಂಡಿರುವ, ಕೆಲಸ ಮಾಡುತ್ತಿರುವ ಹಾಗೂ ಸಂಸತ್‌ ಕಲಾಪಗಳಲ್ಲಿ ನಿಯಮಿತವಾಗಿ ಭಾಗಿಯಾಗುತ್ತಿರುವ ಮಾನದಂಡಗಳ ಮೇಲೆ 17 ಸಂಸದರನ್ನು 2015ರ ‘ಸಂಸದ ರತ್ನ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅವರಲ್ಲಿ ಪಂಜಾಬ್‌ನ ಮಾಜಿ ಮುಖ್ಯಮಂತ್ರಿ, ಹಾಲಿ ಸಂಸದ ಚರಣ್‌ಜಿತ್ ಸಿಂಗ್ ಚನ್ನಿ ಕೂಡ ಒಬ್ಬರಾಗಿದ್ದಾರೆ. ದುರದೃಷ್ಟವಶಾತ್ ಕರ್ನಾಟಕದಿಂದ ಯಾವೊಬ್ಬ ಸಂಸದರೂ ಈ ಪ್ರಶಸ್ತಿಗೆ ಆಯ್ಕೆಯಾಗಿಲ್ಲ.

ಭಾರತದ ಪ್ರಜಾಪ್ರಭುತ್ವ ಪ್ರಕ್ರಿಯೆಗಳನ್ನು ಬಲಪಡಿಸುವಲ್ಲಿ ಮಹತ್ವದ ಪಾತ್ರ ವಹಿಸಿದ ಸಂಸದರಿಗೆ ಸಂಸದ ರತ್ನ ಪ್ರಶಸ್ತಿಯನ್ನು ‘ಪ್ರೈಮ್ ಪಾಯಿಂಟ್ ಫೌಂಡೇಶನ್’ ಕೊಡುಮಾಡುತ್ತದೆ. ಸಂಸದರ ಸಂಸದೀಯ ಕಾರ್ಯಕ್ಷಮತೆಯ ದತ್ತಾಂಶಗಳ ಆಧಾರದ ಮೇಲೆ ರಾಷ್ಟ್ರೀಯ ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಹಂಸರಾಜ್ ಅಹಿರ್ ಅವರ ಅಧ್ಯಕ್ಷತೆಯಲ್ಲಿ ಆಯ್ಕೆ ಸಮಿತಿಯು ವಿಜೇತರನ್ನು ಪಟ್ಟಿ ಮಾಡಿದೆ.

ನಾಲ್ವರು ಸಂಸದರಿಗೆ ವಿಶೇಷ ಮನ್ನಣೆ;
16ನೇ ಮತ್ತು 17ನೇ ಲೋಕಸಭೆಯಲ್ಲಿ ಸ್ಥಿರ ಮತ್ತು ಅಸಾಧಾರಣ ಸೇವೆ ಸಲ್ಲಿಸಿದ, ತಮ್ಮ ಕ್ಷೇತ್ರಗಳಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಕೆಲಸ ಮಾಡಿ ಉತ್ತಮ ಪ್ರದರ್ಶನ ನೀಡಿದ ನಾಲ್ವರು ಸಂಸದರಿಗೆ ವಿಶೇಷ ಗೌರವ ನೀಡಲಾಗುತ್ತಿದೆ. ಅವರಲ್ಲಿ;
ಭರ್ತೃಹರಿ ಮಹ್ತಾಬ್ (ಬಿಜೆಪಿ)
ಸುಪ್ರಿಯಾ ಸುಳೆ (NCP-SPA)
ಎನ್.ಕೆ. ಪ್ರೇಮಚಂದ್ರನ್ (ಆರ್‌ಎಸ್‌ಪಿ)
ಶ್ರೀರಂಗ್ ಅಪ್ಪಾ ಬಾರ್ನೆ (ಶಿವಸೇನೆ) ಸೇರಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಸಂಸತ್ತಿನಲ್ಲಿ ಸಕ್ರಿಯ ಭಾಗವಹಿಸುವಿಕೆಗಾಗಿ ಪ್ರಶಸ್ತಿ ಪಡೆದವರು;
ಸಂಸತ್ತಿನ ಕಲಾಪಗಳಲ್ಲಿ ಸಕ್ರಿಯವಾಗಿ ಭಾಗವಹಿಸಿ, ಗಮನಾರ್ಹ ಚರ್ಚೆಗಳಲ್ಲಿ ಭಾಗಿಯಾದ ಹದಿಮೂರು ಸಂಸದರನ್ನು ಕೂಡ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ಸ್ಮಿತಾ ವಾಘ್ (ಬಿಜೆಪಿ)
ಮೇಧಾ ಕುಲಕರ್ಣಿ (ಬಿಜೆಪಿ)
ಪ್ರವೀಣ್ ಪಟೇಲ್ (ಬಿಜೆಪಿ)
ರವಿ ಕಿಶನ್ (ಬಿಜೆಪಿ)
ನಿಶಿಕಾಂತ್ ದುಬೆ (ಬಿಜೆಪಿ)
ವಿದುತ್ ಬರನ್ ಮಹ್ತೊ (ಬಿಜೆಪಿ)
ಪಿ.ಪಿ. ಚೌಧರಿ (ಬಿಜೆಪಿ)
ಮದನ್ ರಾಥೋಡ್ (ಬಿಜೆಪಿ)
ದಿಲೀಪ್ ಸೈಕಿಯಾ (ಬಿಜೆಪಿ)
ಅರವಿಂದ್ ಸಾವಂತ್ (ಶಿವಸೇನೆ – ಉದ್ಧವ್ ಬಣ)
ನರೇಶ್ ಗಣಪತ್ ಮ್ಹಾಸ್ಕೆ (ಶಿವಸೇನೆ)
ವರ್ಷಾ ಗಾಯಕ್ವಾಡ್ (ಕಾಂಗ್ರೆಸ್)
ಸಿ.ಎನ್. ಅಣ್ಣಾದೊರೈ (ಡಿಎಂಕೆ)

ಸಂಸದರು ಮಾತ್ರವಲ್ಲೆ, ಎರಡು ಸಂಸದೀಯ ಸ್ಥಾಯಿ ಸಮಿತಿಗಳನ್ನು ಕೂಡ 2025ರ ‘ಸಂಸದ ರತ್ನ’ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ. ಅವುಗಳು; ಹಣಕಾಸು ಸ್ಥಾಯಿ ಸಮಿತಿ ಮತ್ತು ಕೃಷಿ ಸ್ಥಾಯಿ ಸಮಿತಿ. ಕೃಷಿ ಸ್ಥಾಪಿ ಸಮಿತಿಯ ಅಧ್ಯಕ್ಷತೆ ವಹಿಸಿದ್ದ ಕಾಂಗ್ರೆಸ್‌ ಸಂಸದ, ಪಂಜಾಬ್ ಮಾಜಿ ಮುಖ್ಯಮಂತ್ರಿ ಚರಣ್‌ಜಿತ್ ಚೆನ್ನಿ ಅವರು ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...