ಕೇರಳ ಅಧಿವೇಶನ | ಮೀನು, ತರಕಾರಿ ಬೆಲೆ ಏರಿಕೆಗೆ ಖಂಡನೆ; ಪ್ರತಿಪಕ್ಷಗಳಿಂದ ಸಭಾತ್ಯಾಗ

Date:

ಕೇರಳದಲ್ಲಿ ವಿಧಾನಭಾ ಅಧಿಕವೇಶ ನಡೆಯುತ್ತಿದ್ದು, ಬೆಲೆ ಏರಿಕೆ ತಡೆಯುವಲ್ಲಿ ರಾಜ್ಯ ಸರ್ಕಾರದ ವೈಫಲ್ಯವನ್ನು ಖಂಡಿಸಿ ಪ್ರತಿಪಕ್ಷಗಳು ಸಭಾತ್ಯಾಗ ಮಾಡಿವೆ. ಹಣದುಬ್ಬರವು ರಾಷ್ಟ್ರೀಯ ಸಮಸ್ಯೆಯಾಗಿದ್ದು, ಮಾರುಕಟ್ಟೆಯ ಮಧ್ಯಪ್ರವೇಶದಿಂದಾಗಿ ಹಣದುಬ್ಬರವನ್ನು ಕಡಿಮೆ ಮಾಡಬಹುದು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಜಿ.ಆರ್ ಅನಿಲ್ ಬೆಲೆ ಏರಿಕೆಯನ್ನು ಸಮರ್ಥಿಸಿಕೊಂಡಿದ್ದಾರೆ.

ಆಹಾರ ಉತ್ಪನ್ನಗಳ ಬೆಲೆಯೇರಿಕೆ ತನ್ನ ಗಮನಕ್ಕೆ ಬಂದಿಲ್ಲ ಎಂದು ಸಚಿವ ಅನಿಲ್ ವಿಧಾನಸಭೆಯಲ್ಲಿ ಹೇಳಿದ್ದು ಪ್ರತಿಪಕ್ಷಗಳನ್ನು ಕೆರಳಿಸಿತು. ಕಾಂಗ್ರೆಸ್ ಮುಖಂಡ, ವಿಪಕ್ಷ ನಾಯಕ ವಿ.ಡಿ ಸತೀಶನ್ ಅವರು ಎಲ್‌ಡಿಎಫ್‌ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದ್ದಾರೆ. ಎಲ್‌ಡಿಎಫ್ ಸರ್ಕಾರವು ಬೆಲೆ ಏರಿಕೆ ಸಮಸ್ಯೆಯ ಗಂಭೀರತೆಯನ್ನು ಯಾಕೆ ಅರ್ಥಮಾಡಿಕೊಳ್ಳುತ್ತಿಲ್ಲ ಎಂದು ಆಶ್ಚರ್ಯ ವ್ಯಕ್ತಪಡಿಸಿದರು.

“ಇತ್ತೀಚಿನ ದಿನಗಳಲ್ಲಿ ತರಕಾರಿಗಳ ಬೆಲೆ ಗಗನಕ್ಕೇರಿರುವುದರಿಂದ ಮಲಯಾಳಿಗಳು ಬೆಂಡೆಕಾಯಿ, ನುಗ್ಗೆ ಕಾಯಿ ಮತ್ತು ಟೊಮೇಟೊ ಖರೀದಿಸುವುದು ಕಷ್ಟವಾಗಿದೆ” ಎಂದು ಕಾಂಗ್ರೆಸ್‌ ಶಾಸಕ ರೋಜಿ ಎಂ ಜಾನ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

”ತರಕಾರಿ, ಮೀನು, ಮಾಂಸ, ಮೊಟ್ಟೆ ಬೆಲೆ ದುಪ್ಪಟ್ಟಾಗಿದೆ. ಜನ ಮಾರುಕಟ್ಟೆಗೆ ಹೋಗುವುದೇ ಕಷ್ಟವಾಗಿದೆ. ಎಲ್‌ಡಿಎಫ್ ಸರ್ಕಾರ ಕೋಳಿ ಮಾಂಸವನ್ನು ಪ್ರತಿ ಕಿ.ಲೋ.ಗೆ 85 ರೂ.ನಂತೆ ನೀಡುವುದಾಗಿ ಭರವಸೆ ನೀಡಿತ್ತು. ಆದರೆ, ಆ ಭರವಸೆಯನ್ನು ಸರ್ಕಾರ ಪೂರೈಸಿಲ್ಲ. ವಾಸ್ತವವಾಗಿ, ಜನರು ಈ ಬೆಲೆಯಲ್ಲಿ ಕೋಳಿ ಕಾಲನ್ನೂ ಪಡೆಯಲು ಸಾಧ್ಯವಾಗುತ್ತಿಲ್ಲ. ಬೆಲೆ ಏರಿಕೆ ನಿಯಂತ್ರಿಸಲು ಮಾರುಕಟ್ಟೆ ಮಧ್ಯಸ್ಥಿಕೆಗಾಗಿ ರಾಜ್ಯ ಸರ್ಕಾರವು ಯಾವುದಾರರೂ ರೀತಿಯಲ್ಲಿ ಹಣಕಾಸಿನ ಪ್ರಯೋಜನಗಳನ್ನು ಒದಗಿಸುತ್ತಿದೆಯೇ ಎಂದು ತಿಳಿದುಕೊಳ್ಳಲು ನಾನು ಉತ್ಸುಕನಾಗಿದ್ದೇನೆ” ಎಂದು ಕಿಡಿಕಾರಿದ್ದಾರೆ.

“ಎಲ್‌ಡಿಎಫ್ ಆಡಳಿತದಲ್ಲಿ ಹಣದುಬ್ಬರವು 50% ರಿಂದ 200%ವರೆಗೆ ಏರಿಕೆಯಾಗಿದೆ. ಹಣದುಬ್ಬರ ಕುರಿತು ಪ್ರತಿಪಕ್ಷಗಳ ಪ್ರಸ್ತಾಪವಾದಾಗ ಆಹಾರ ಮತ್ತು ನಾಗರಿಕ ಸರಬರಾಜು ಸಚಿವರು ಪಡಿತರ ಅಂಗಡಿಗಳಿಂದ ಅಕ್ಕಿ ವಿತರಿಸುವ ಬಗ್ಗೆ ಉತ್ತರ ನೀಡಿರುವುದು ದುರದೃಷ್ಟಕರ. ನಾವು ತರಕಾರಿಗಳು ಮತ್ತು ಇತರ ಅಗತ್ಯ ವಸ್ತುಗಳ ಬೆಲೆಗಳ ಏರುತ್ತಿರುವ ಬಗ್ಗೆ ವಿವಿಧ ಮಾರುಕಟ್ಟೆಗಳಿಂದ ಮಾಹಿತಿ ಸಂಗ್ರಹಿಸಿದ್ದೇವೆ,” ಎಂದು ವಿಪಕ್ಷ ನಾಯಕ ಸತೀಶನ್ ಹೇಳಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...