ಸದನಕ್ಕೆ ಅಡ್ಡಿ | ಬಿಜೆಪಿಯ 18 ಸದಸ್ಯರು 6 ತಿಂಗಳು ಅವಧಿಗೆ ಅಮಾನತು, ಸಭಾಧ್ಯಕ್ಷರಿಂದ ರೂಲಿಂಗ್‌

Date:

ವಿಧಾನಸಭೆಯ ಅಧಿವೇಶನದ ಕಾರ್ಯಕಲಾಪಕ್ಕೆ ಅಡ್ಡಿಪಡಿಸಿದ ವಿಪಕ್ಷ ಬಿಜೆಪಿಯ 18 ಸದಸ್ಯರನ್ನು ಆರು ತಿಂಗಳ ಕಾಲ ಅಮಾನತುಗೊಳಿಸಿ ಸಭಾಧ್ಯಕ್ಷ ಯು.ಟಿ ಖಾದರ್‌ ರೂಲಿಂಗ್‌ ಹೊರಡಿಸಿದ್ದಾರೆ.

ವಿಧಾನಸಭೆಯಲ್ಲಿ ಸಭಾಧ್ಯಕ್ಷರ ಪೀಠಕ್ಕೆ ಮುತ್ತಿಗೆ ಹಾಕಿ, ಕಲಾಪಕ್ಕೆ ಅಡ್ಡಿಪಡಿಸಿದ ಹಿನ್ನೆಲೆಯಲ್ಲಿ 18 ಶಾಸಕರನ್ನು ಅಮಾನತು ಮಾಡಲಾಗಿದ್ದು, ಈ ಶಾಸಕರು ಅರು ತಿಂಗಳೊಳಗೆ ನಡೆಯುವ ಯಾವುದೇ ಅಧಿವೇಶನದಲ್ಲಿ ಭಾಗಿಯಾಗುವಂತಿಲ್ಲ.

“ಸ್ಪೀಕರ್ ಸ್ಥಾನದಲ್ಲಿ ಕುಳಿತ ಖಾದರ್ ನಿಮ್ಮನ್ನು ಕ್ಷಮಿಸಬಹುದು. ಆದರೆ ಸ್ಪೀಕರ್ ಪೀಠಕ್ಕೆ ಅಗೌರವ ತೋರಿದವರನ್ನು ಕ್ಷಮಿಸಲಾಗದು. ಪೀಠಕ್ಕೆ ಅಗೌರವ ತೋರಿದ್ದೀರಿ. ನಿಮ್ಮನ್ನು ಅಮಾನತುಗೊಳಿಸಿ ಆದೇಶಿಸಲಾಗಿದೆ” ಎಂದು ಸ್ಪೀಕರ್​ ಯುಟಿ ಖಾದರ್ ಅವರು ಒಬ್ಬೊಬ್ಬರ ಹೆಸರು ಹೇಳುತ್ತಿದ್ದಂತೆಯೇ ಮಾರ್ಷಲ್ಸ್ ಅವರು ಅವರನ್ನು ಎತ್ತಿಕೊಂಡು ಹೊರಹಾಕಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶುಕ್ರವಾರ ಬೆಳಿಗ್ಗೆ ಕಲಾಪ ಆರಂಭವಾಗುತ್ತಿದ್ದಂತೆಯೇ ಹನಿಟ್ರ್ಯಾಪ್ ಆರೋಪ ಮತ್ತೆ ಸದನದಲ್ಲಿ ಪ್ರತಿಧ್ವನಿಸಿತು. ಪ್ರತಿಪಕ್ಷದವರು ನ್ಯಾಯಾಂಗ ತನಿಖೆಗೆ ಒಪ್ಪಿಸಬೇಕು ಎಂದು ಒತ್ತಾಯಿಸಿದರು. ಕಲಾಪ ನಡೆಸಲು ಅವಕಾಶ ಕೊಡಿ ಎಂದು ಖಾದರ್ ಅವರು ಮನವಿ ಮಾಡಿಕೊಂಡರೂ ಪಟ್ಟು ಬಿಡಲಿಲ್ಲ. ಗದ್ದಲ ನಿಯಂತ್ರಣಕ್ಕೆ ಬಾರದ ಹಿನ್ನೆಲೆಯಲ್ಲಿ ಕಲಾಪ ಮುಂದೂಡಲಾಗಿತ್ತು. ಮತ್ತೆ ಸಂಜೆ 4.10ಕ್ಕೆ ಕಲಾಪ ಆರಂಭವಾಯಿತು.

ಸಭಾಧ್ಯಕ್ಷರ ಪೀಠದ ಗೌರವಕ್ಕೆ 18 ಶಾಸಕರನ್ನು ಆರು ತಿಂಗಳ ಅವಧಿಗೆ ಸದನದಿಂದ ಅಮಾನತು ಮಾಡುವಂತೆ ಸಂಸದೀಯ ವ್ಯವಹಾರಗಳ ಸಚಿವ ಎಚ್.ಕೆ. ಪಾಟೀಲ ಅವರು ಪ್ರಸ್ತಾವ ಮಂಡಿಸಿದರು. ಅದನ್ನು ಸ್ಪೀಕರ್ ಧ್ವನಿಮತಕ್ಕೆ ಹಾಕಿದರು. ಗದ್ದಲದ ಮಧ್ಯೆಯೇ ಧ್ವನಿಮತದ ಮೂಲಕ ನಿರ್ಣಯ ಅಂಗೀರಿಸಲಾಯಿತು.

ಅಮಾನತುಗೊಂಡ ಸದಸ್ಯರು

  1. ಡಾ. ಸಿ.ಎನ್. ಅಶ್ವಥನಾರಾಯಣ
  2. ಎಸ್.ಆರ್. ವಿಶ್ವನಾಥ್
  3. ದೊಡ್ಡನಗೌಡ ಪಾಟೀಲ
  4. ಶರಣು ಸರಲಗರ
  5. ಡಾ. ಚಂದ್ರು ಲಮಾಣಿ
  6. ಮುನಿರತ್ನ
  7. ಧೀರಜ್ ಮುನಿರಾಜು
  8. ಬಿ.ಎ. ಬಸವರಾಜ್
  9. ಎಂ. ಆರ್. ಪಾಟೀಲ್
  10. ಚನ್ನಬಸಪ್ಪ
  11. ಬಿ. ಸುರೇಶಗೌಡ
  12. ಉಮಾನಾಥ ಎ. ಕೋಟ್ಯಾನ್
  13. ಸಿ.ಕೆ. ರಾಮಮೂರ್ತಿ
  14. ಬಿ.ಬಿ ಹರೀಶ್
  15. ಡಾ. ವೈ. ಭರತ್ ಶೆಟ್ಟಿ
  16. ಬಸವರಾಜ ಮತ್ತಿಮೂಡ್
  17. ಡಾ. ಶೈಲೇಂದ್ರ ಬೆಲ್ದಾಳೆ
  18. ಯಶಪಾಲ್ ಎ. ಸುವರ್ಣ
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ದಕ್ಷಿಣ ಕ್ಷೇತ್ರದ ಉಪಚುನಾವಣೆಗೆ ಎಸ್‌ಡಿಪಿಐ ಅಭ್ಯರ್ಥಿ ಅಫ್ಸರ್ ಕೊಡ್ಲಿಪೇಟೆ ಕಣಕ್ಕೆ

ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಗೆ ಸೋಶಿಯಲ್ ಡೆಮಾಕ್ರಟಿಕ್ ಪಾರ್ಟಿ ಆಫ್...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...