ರಾಮಮಂದಿರಕ್ಕೆ ಮುಸ್ಲಿಮರ ಹೆಸರಲ್ಲಿ ಬಾಂಬ್ ಬೆದರಿಕೆ: ಇಬ್ಬರು ಹಿಂದೂ ಯುವಕರ ಬಂಧನ

Date:

ಕೆಲವು ದಿನಗಳ ಹಿಂದೆ ಉತ್ತರ ಪ್ರದೇಶದ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಅಯೋಧ್ಯೆಯ ರಾಮ ಮಂದಿರಕ್ಕೆ ಮುಸ್ಲಿಮರ ಹೆಸರಿನಲ್ಲಿ ಬಂದಿದ್ದ ಬಾಂಬ್ ಬೆದರಿಕೆ ಪ್ರಕರಣವನ್ನು ಭೇದಿಸಿರುವ ಪೊಲೀಸರು, ಇಬ್ಬರು ಹಿಂದೂ ಯುವಕರನ್ನು ಬಂಧಿಸಿದ್ದಾರೆ. ಸಂಚು ರೂಪಿಸಿದ್ದ ಸಂಘಪರಿವಾರದ ಮುಖಂಡ ದೇವೇಂದ್ರ ತಿವಾರಿ ಎಂಬಾತ ತಲೆಮರೆಸಿಕೊಂಡಿದ್ದಾನೆ.

ಭಾರತೀಯ ಕಿಸಾನ್ ಮಂಚ್ ಮತ್ತು ಭಾರತೀಯ ಗೌ ಸೇವಾ ಪರಿಷತ್ ಅಧ್ಯಕ್ಷ ದೇವೇಂದ್ರ ತಿವಾರಿ ಅವರಿಗೆ ಅಯೋಧ್ಯೆಯ ಶ್ರೀರಾಮ ಮಂದಿರವನ್ನು ಸ್ಫೋಟಿಸುವ ಬೆದರಿಕೆಯ ಇ-ಮೇಲ್ ಕಳುಹಿಸಲಾಗಿತ್ತು. ಇದರಲ್ಲಿ ಸಿಎಂ ಯೋಗಿ ಆದಿತ್ಯನಾಥ್, ರಾಮಮಂದಿರ ಮತ್ತು ಎಸ್‌ಟಿಎಫ್ ಮುಖ್ಯಸ್ಥ ಅಮಿತಾಭ್ ಯಶ್​ರನ್ನು ಸ್ಫೋಟಿಸಿ ಹತ್ಯೆಗೈಯುವುದಾಗಿಯೂ ತಿಳಿಸಲಾಗಿತ್ತು.

ಆತ ಪಾಕಿಸ್ತಾನಿ ಗುಪ್ತಚರ ಸಂಸ್ಥೆ ಐಎಸ್‌ಐನ ಏಜೆಂಟ್ ಎಂದು ಇಮೇಲ್‌ನಲ್ಲಿ ಹೇಳಲಾಗಿತ್ತು. ಇದರ ನಂತರ ಪೊಲೀಸರು ಮತ್ತು ಇತರ ತನಿಖಾ ಸಂಸ್ಥೆಗಳು ತನಿಖೆ ಆರಂಭಿಸಿತ್ತು. ಸದ್ಯ ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳನ್ನು ಎಸ್‌ಟಿಎಫ್ ಬಂಧಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ತಹರ್ ಸಿಂಗ್ ಹಾಗೂ ಓಂ ಪ್ರಕಾಶ್ ಮಿಶ್ರಾ ಎಂಬುವವರನ್ನು ಲಕ್ನೋದ ಗೋಮ್ತಿ ನಗರ್‍‌ನ ವಿಭೂತಿ ಖಂಡ್ ನಲ್ಲಿ ಬಂಧಿಸಲಾಗಿದೆ.

ಎಸ್‌ಟಿಎಫ್ ಪ್ರಕಾರ, ದೂರು ಕೊಟ್ಟಿದ್ದ ಭಾರತೀಯ ಕಿಸಾನ್ ಮಂಚ್ ಮತ್ತು ಭಾರತೀಯ ಗೌ ಸೇವಾ ಪರಿಷತ್ ಅಧ್ಯಕ್ಷ ದೇವೇಂದ್ರ ತಿವಾರಿ ಅವರೇ ಈ ಸಂಚು ರೂಪಿಸಿದ್ದರು. ದೇವೇಂದ್ರ ತಿವಾರಿ ಅವರು ಭದ್ರತೆ ಪಡೆದು ದೊಡ್ಡ ನಾಯಕರಾಗಲು ತಮ್ಮದೇ ಉದ್ಯೋಗಿಗಳಿಂದ ಬೆದರಿಕೆ ಇ-ಮೇಲ್‌ಗಳನ್ನು ಕಳುಹಿಸಿದ್ದರು. ಈ ಪ್ರಕರಣದಲ್ಲಿ ಇಬ್ಬರು ಆರೋಪಿಗಳಾದ ತಹರ್ ಸಿಂಗ್ ಮತ್ತು ಓಂ ಪ್ರಕಾಶ್ ಮಿಶ್ರಾ ಅವರನ್ನು ಎಸ್‌ಟಿಎಫ್ ಬಂಧಿಸಿದೆ. ಅಲ್ಲದೆ, ಸಂಚು ರೂಪಿಸಿದ್ದ ದೇವೇಂದ್ರ ತಿವಾರಿಗಾಗಿ ಶೋಧ ನಡೆಸುತ್ತಿದೆ.

ಇಬ್ಬರು ಆರೋಪಿಗಳಾದ ಓಂಪ್ರಕಾಶ್ ಮಿಶ್ರಾ ಮತ್ತು ತಹರ್ ಸಿಂಗ್ ಅವರು ಜುಬೈರ್ ಖಾನ್ (zubairkhanisi199@gmail.com) ಮತ್ತು ಆಲಂ ಅನ್ಸಾರಿ (alamansarikhan608@gmail.com) ಎಂಬ ನಕಲಿ ಐಡಿಗಳನ್ನು ಸೃಷ್ಟಿಸುವ ಮೂಲಕ ಐಎಸ್‌ಐ ಅನ್ನು ಉಲ್ಲೇಖಿಸಿ ರಾಮಮಂದಿರ, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತು ಎಸ್‌ಟಿಎಫ್ ಮುಖ್ಯಸ್ಥ ಅಮಿತಾಬ್ ಯಶ್ ಅವರಿಗೆ ಬಾಂಬ್ ಬೆದರಿಕೆ ಹಾಕುವ ಇಮೇಲ್ ಕಳುಹಿಸಿದ್ದರು.

devendra
ಪ್ರಕರಣದ ಸೂತ್ರಧಾರ ದೇವೇಂದ್ರ ತಿವಾರಿ ಸಿಎಂ ಯೋಗಿ ಆದಿತ್ಯನಾಥ್ ಜೊತೆಗೆ(ಹಳೆಯ ಫೋಟೋ) ಕೃಪೆ: @zoo_bear Twitter

ಇಮೇಲ್ ಐಡಿಗಳ ತಾಂತ್ರಿಕ ವಿಶ್ಲೇಷಣೆಯ ನಂತರ, ತಹರ್ ಸಿಂಗ್ ಇಮೇಲ್ ಖಾತೆಗಳನ್ನು ರಚಿಸಿದ್ದಾರೆ ಮತ್ತು ಓಂಪ್ರಕಾಶ್ ಮಿಶ್ರಾ ಬೆದರಿಕೆ ಸಂದೇಶಗಳನ್ನು ಕಳುಹಿಸಿದ್ದಾರೆ ಎಂಬುದನ್ನು ಎಸ್‌ಟಿಎಫ್ ಪತ್ತೆ ಮಾಡಿ, ಬಂಧಿಸಿದೆ.

ಇದನ್ನು ಓದಿದ್ದೀರಾ? ರಾಮ ಮಾಂಸಾಹಾರಿಯಾಗಿದ್ದ: ಮಹಾರಾಷ್ಟ್ರದಲ್ಲಿ ವಿವಾದ ಸೃಷ್ಟಿಸಿದ ಎನ್‌ಸಿಪಿ ಶಾಸಕನ ಹೇಳಿಕೆ

ಸಿಂಗ್ ಮತ್ತು ಮಿಶ್ರಾ ಇಬ್ಬರೂ ಗೊಂಡಾ ನಿವಾಸಿಗಳಾಗಿದ್ದು, ಅರೆವೈದ್ಯಕೀಯ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದಾರೆ ಎಂದು ಹೇಳಿಕೆ ತಿಳಿಸಿದೆ. ಎಸ್‌ಟಿಎಫ್ ಈ ಬಗ್ಗೆ ಹೆಚ್ಚಿನ ತನಿಖೆ ನಡೆಸುತ್ತಿದ್ದು, ಸೂತ್ರಧಾರ ದೇವೇಂದ್ರ ತಿವಾರಿಯ ಚಲನವಲನಗಳ ಮೇಲೆ ನಿಗಾ ಇರಿಸಿದ್ದು, ಶೀಘ್ರವೇ ಪತ್ತೆ ಹಚ್ಚಿ, ಬಂಧಿಸುವುದಾಗಿ ಹೇಳಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...