ಚಂಡೀಗಢ ಮೇಯರ್ | ಬಿಜೆಪಿಗೆ ಮತ್ತೆ ಠಕ್ಕರ್ ನೀಡಿದ ಆಪ್: ಪಕ್ಷ ಬಿಟ್ಟಿದ್ದ ಮೂವರ ಪೈಕಿ ಇಬ್ಬರಿಂದ ‘ಘರ್ ವಾಪ್ಸಿ’

Date:

ಸುಪ್ರೀಂ ಕೋರ್ಟ್‌ನಿಂದ ಹಿಡಿದು ದೇಶಾದ್ಯಂತ ಸುದ್ದಿಯಾಗಿದ್ದ ಚಂಡೀಗಢ ಮೇಯರ್ ಚುನಾವಣೆಯ ವಿಚಾರ ಮತ್ತೆ ಮುನ್ನೆಲೆಗೆ ಬಂದಿದ್ದು, ಬಿಜೆಪಿಗೆ ಮತ್ತೆ ಠಕ್ಕರ್ ನೀಡಿರುವ ಆಮ್ ಆದ್ಮಿ ಪಕ್ಷ, ಪಕ್ಷ ತೊರೆದು ಬಿಜೆಪಿಗೆ ಸೇರ್ಪಡೆಗೊಂಡಿದ್ದ ಮೂವರು ಕೌನ್ಸಿಲರ್‌ಗಳ ಪೈಕಿ ಇಬ್ಬರನ್ನು ಇಂದು ಘರ್ ವಾಪ್ಸಿ ಮಾಡಿದೆ.

ಚಂಡೀಗಢದ ಆಪ್ ಕೌನ್ಸಿಲರ್‌ಗಳಾಗಿದ್ದ ಪೂನಂ ದೇವಿ, ನೇಹಾ ಮುಸಾವತ್ ಮತ್ತು ಗುರುಚರಣ್ ಕಲಾ ಅವರು ಮೇಯರ್ ಚುನಾವಣೆಯ ಅಕ್ರಮದ ನಡುವೆಯೇ ಬಿಜೆಪಿ ಸೇರಿದ್ದರು. ಆ ಬಳಿಕ ಇಂದು ದಿಡೀರ್ ಬೆಳವಣಿಗೆಯಲ್ಲಿ ಕೌನ್ಸಿಲರ್‌ಗಳಾಗಿದ್ದ ಪೂನಂ ದೇವಿ, ನೇಹಾ ಮುಸಾವತ್ ಅವರನ್ನು ಮತ್ತೆ ಪಕ್ಷಕ್ಕೆ ಸೇರ್ಪಡೆಗೊಳಿಸುವ ಮೂಲಕ ಬಿಜೆಪಿಗೆ ಠಕ್ಕರ್ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮತ್ತೆ ಪಕ್ಷಕ್ಕೆ ಸೇರ್ಪಡೆಗೊಂಡ ಬಳಿಕ ಹೇಳಿಕೆ ನೀಡಿರುವ ನೇಹಾ ಮುಸಾವತ್, “ಮತ್ತೆ ಆಮ್ ಆದ್ಮಿ ಪಕ್ಷಕ್ಕೆ ಸೇರುವ ಮೂಲಕ ಘರ್ ವಾಪ್ಸಿ ಆಗಿದ್ದೇನೆ. ಮನೆ ಎಂದ ಮೇಲೆ ಜಗಳ ಇದ್ದೇ ಇರುತ್ತದೆ. ಈಗ ಅದು ಶಮನಗೊಂಡಿದೆ. ಹಾಗಾಗಿ, ಮತ್ತೆ ಪಕ್ಷಕ್ಕೆ ಸೇರ್ಪಡೆಗೊಂಡಿದ್ದೇವೆ” ಎಂದು ತಿಳಿಸಿದ್ದಾರೆ.

ಕಳೆದ ಸೋಮವಾರ(ಮಾ.4) ಚಂಡೀಗಢ ಮಹಾನಗರ ಪಾಲಿಕೆಯ ಹಿರಿಯ ಉಪ ಮೇಯರ್ ಹಾಗೂ ಉಪಮೇಯರ್ ಸ್ಥಾನಕ್ಕೆ ನಡೆದಿದ್ದ ಚುನಾವಣೆಯಲ್ಲಿ ಬಿಜೆಪಿ ಗೆಲುವು ಸಾಧಿಸಿತ್ತು. ಈ ಬೆಳವಣಿಗೆ ಬಳಿಕ ಬಿಜೆಪಿ ಸೇರಿದ್ದ ಮೂವರ ಪೈಕಿ ಇಬ್ಬರು ಪಕ್ಷ ಸೇರ್ಪಡೆಗೊಂಡಿದ್ದಾರೆ.

35 ಮಂದಿ ಸದಸ್ಯ ಬಲದ ಮಹಾನಗರ ಪಾಲಿಕೆಯಲ್ಲಿ ಬಿಜೆಪಿ 17 ಕೌನ್ಸಿಲರ್ ಗಳನ್ನು ಹೊಂದಿತ್ತು. ಇದಕ್ಕೂ ಮುನ್ನ ಕೇವಲ 14 ಸದಸ್ಯರನ್ನು ಹೊಂದಿದ್ದ ಬಿಜೆಪಿಯ ಸಂಖ್ಯಾಬಲವು ಆಪ್ ಪಕ್ಷದ ಮೂವರು ಸಸದಸ್ಯರು ಬಿಜೆಪಿಗೆ ಪಕ್ಷಾಂತರ ಮಾಡುವ ಮೂಲಕ 17ಕ್ಕೆ ಏರಿಕೆಯಾಗಿತ್ತು. ಅವರೆಲ್ಲ ಫೆಬ್ರವರಿ 19ರಂದು ಬಿಜೆಪಿಗೆ ಸೇರ್ಪಡೆಯಾಗಿದ್ದರು.

WhatsApp Image 2025 11 17 at 3.21.38 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...