ಇಂಡಿಯಾ ಹಾಗೂ ಎನ್‌ಡಿಎ ಒಕ್ಕೂಟಕ್ಕೆ ಸೇರದ 11 ಪಕ್ಷಗಳ 91 ಸಂಸದರು

Date:

ಮುಂಬರುವ 2024ರ ಲೋಕಸಭಾ ಚುನಾವಣೆಗೆ ಮುಂಚಿತವಾಗಿ 65 ಪಕ್ಷಗಳು ಬಿಜೆಪಿ ಹಾಗೂ ಕಾಂಗ್ರೆಸ್ ನೇತೃತ್ವದ ಇಂಡಿಯಾ ಒಕ್ಕೂಟಕ್ಕೆ ಸೇರ್ಪಡೆಗೊಂಡಿವೆ. ‘ಇಂಡಿಯಾ’ ಒಕ್ಕೂಟದಲ್ಲಿ 26 ಪಕ್ಷಗಳೊಂದಿಗೆ 116 ಲೋಕಸಭಾ ಸದಸ್ಯರು ಹಾಗೂ 64 ರಾಜ್ಯಸಭೆ ಸದಸ್ಯರಿದ್ದರೆ, ಎನ್‌ಡಿಎದ 38 ಪಕ್ಷಗಳಲ್ಲಿ 332 ಲೋಕಸಭಾ ಸದಸ್ಯರು ಹಾಗೂ 110 ರಾಜ್ಯಸಭಾ ಸದಸ್ಯರಿದ್ದಾರೆ.

ಆದರೆ ಇವೆರಡು ಒಕ್ಕೂಟಕ್ಕೆ ಸೇರದ ವಿವಿಧ ರಾಜ್ಯದ ಕನಿಷ್ಠ 11 ಪ್ರಮುಖ ಪಕ್ಷಗಳಿದ್ದು, ಇವುಗಳಿಂದ ಒಟ್ಟು 91 ಲೋಕಸಭೆ ಸದಸ್ಯರಾಗಿದ್ದಾರೆ. ಸದ್ಯಕ್ಕೆ ಈ ಪಕ್ಷಗಳು ತಟಸ್ಥವಾಗಿರಲು ನಿರ್ಧರಿಸಿದ್ದಾರೆ.

ಈ ಹನ್ನೊಂದು ಪಕ್ಷಗಳಲ್ಲಿ ಆಂಧ್ರಪ್ರದೇಶದ ವೈಎಸ್‌ಆರ್ ಕಾಂಗ್ರೆಸ್ ಪಕ್ಷ, ತೆಲಂಗಾಣದ ಭಾರತ ರಾಷ್ಟ್ರೀಯ ಸಮಿತಿ ಮತ್ತು ಒಡಿಶಾದ ಬಿಜು ಜನತಾ ದಳ ಒಟ್ಟು 63 ಸದಸ್ಯರನ್ನು ಹೊಂದಿವೆ. ಈ ಮೂರು ಪಕ್ಷಗಳು ತಮ್ಮ ರಾಜ್ಯಗಳಲ್ಲಿ ಕಾಂಗ್ರೆಸ್ ಅಥವಾ ಬಿಜೆಪಿಯಂಥ ರಾಷ್ಟ್ರೀಯ ಪಕ್ಷಗಳಿಗಿಂತ ಮೇಲುಗೈ ಸಾಧಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಮೂರನ್ನು ಹೊರತುಪಡಿಸಿ ಇನ್ನುಳಿದ ಪಕ್ಷಗಳೆಂದರೆ ಬಹುಜನ ಸಮಾಜ ಪಕ್ಷ, ಎಐಎಂಐಎಂ, ತೆಲುಗು ದೇಶಂ ಪಕ್ಷ ( ಟಿಡಿಪಿ), ಶಿರೋಮಣಿ ಅಕಾಲಿದಳ, ಎಐಯುಡಿಎಫ್, ಜೆಡಿಎಸ್, ರಾಷ್ಟ್ರೀಯ ಲೋಕತಾಂತ್ರಿಕ ಪಕ್ಷ (ಆರ್‌ಎಲ್‌ಪಿ) ಮತ್ತು ಎಸ್ಎಡಿ(ಮಾನ್).

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹುಲಿಕುಂಟೆ ಮೂರ್ತಿ ಪ್ರಕರಣ : ಟ್ರೋಲರ್‌ಗಳ ವಿರುದ್ಧ ಕ್ರಮ ಅಗತ್ಯ

2019 ರಲ್ಲಿ ಆಂಧ್ರಪ್ರದೇಶದಲ್ಲಿ ನಡೆದ ವಿಧಾನಸಭಾ ಚುನಾವಣೆಯಲ್ಲಿ ವೈಎಸ್ಆರ್ ಕಾಂಗ್ರೆಸ್ ಪಕ್ಷ ಮತ್ತು 2000 ರಿಂದ ಒಡಿಶಾದಲ್ಲಿ ಆಡಳಿತ ನಡೆಸುತ್ತಿರುವ ಬಿಜೆಡಿ ಸಂಸತ್ತಿನಲ್ಲಿ ಬಿಜೆಪಿ ನೇತೃತ್ವದ ಸರ್ಕಾರದ ಪರವಾಗಿ ಹೆಚ್ಚಾಗಿ ಮತ ಚಲಾಯಿಸಿವೆ.

2014 ರಲ್ಲಿ ತೆಲಂಗಾಣವನ್ನು ಆಂಧ್ರಪ್ರದೇಶದಿಂದ ಬೇರ್ಪಡಿಸಿದಾಗಿನಿಂದ ಆಡಳಿತ ನಡೆಸುತ್ತಿರುವ ಭಾರತ್ ರಾಷ್ಟ್ರ ಸಮಿತಿ ಈ ವರ್ಷದ ಆರಂಭದಲ್ಲಿ ವಿರೋಧ ಪಕ್ಷದ ಮೈತ್ರಿಯ ಮುಂದಾಳತ್ವ ವಹಿಸಲು ಹೆಚ್ಚು ಸಕ್ರಿಯವಾಗಿತ್ತು. ಆದರೆ ಹೊಸದಾಗಿ ರಚನೆಯಾದ ಒಕ್ಕೂಟದಿಂದ ದೂರ ಉಳಿದಿದೆ.

ಇನ್ನು ಒಂದು ಸ್ಥಾನ ಹೊಂದಿರುವ ಕರ್ನಾಟಕದ ಜೆಡಿಎಸ್‌ ಯಾವ ಲೆಕ್ಕಾಚಾರ ಹಾಕುತ್ತಿದೆ ಎಂಬುದು ಮಾಜಿ ಪ್ರಧಾನಿ ಹೆಚ್‌ ಡಿ ದೇವೇಗೌಡ ಹಾಗೂ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಅವರ ನಿರ್ಧಾರದಿಂದ ಮುಂದಿನ ದಿನಗಳಲ್ಲಿ ಗೊತ್ತಾಗಲಿದೆ.

ಮಾಯಾವತಿ ನೇತೃತ್ವದ ಬಿಎಸ್‌ಪಿ ಲೋಕಸಭೆಯಲ್ಲಿ 9 ಸಂಸದರನ್ನು ಹೊಂದಿದೆ. ಉತ್ತರ ಪ್ರದೇಶದಲ್ಲಿ ನಾಲ್ಕು ಬಾರಿ ಆಳ್ವಿಕೆ ನಡೆಸಿದ್ದ ಬಿಎಸ್‌ಪಿ, ಮುಂಬರುವ ಲೋಕಸಭಾ ಚುನಾವಣೆ ಮಾತ್ರವಲ್ಲ,ವಿಧಾನಸಭಾ ಚುನಾವಣೆಯಲ್ಲೂ ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ತಿಳಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ದಾವಣಗೆರೆ | ಸಮರ್ಥ್‌ ನಾಮಪತ್ರ ಸಲ್ಲಿಕೆ; ದೂರ ಉಳಿದ ರಾಜ್ಯ ಮುಸ್ಲಿಂ ಮುಖಂಡರು

ಡಿ.ಕೆ ಶಿವಕುಮಾರ್ ಮತ್ತು ಸಿದ್ದರಾಮಯ್ಯ ಅವರು ದಾವಣಗೆರೆ ಮುಸ್ಲಿಂ ಕಾಂಗ್ರೆಸ್‌ ಟಿಕೆಟ್...

ಕೇಂದ್ರವನ್ನು ಟೀಕಿಸಿದ ಸಾಮಾಜಿಕ ಮಾಧ್ಯಮ ಖಾತೆಗಳು ಮಂಗಮಾಯ: ಉಳಿಯುವುದು ಬರೀ ಮೋದಿಮಯ!

ಹೀಗೆ ಮೋದಿ ಸರ್ಕಾರವನ್ನು ವಿರೋಧಿಸಿದವರ ಖಾತೆಗಳು ಸಾಮಾಜಿಕ ಮಾಧ್ಯಮಗಳಿಂದ ಅಳಿಸಿ ಕೊನೆಗೆ...